Homeಸಿನಿಮಾಕ್ರೀಡೆಜಾರ್ಖಂಡ್: ಬಡತನದಿಂದ ಮದ್ಯ ಮಾರುವ ಸ್ಥಿತಿಗೆ ಬಂದ ನ್ಯಾಷನಲ್ ಕರಾಟೆ ಚಾಂಪಿಯನ್!

ಜಾರ್ಖಂಡ್: ಬಡತನದಿಂದ ಮದ್ಯ ಮಾರುವ ಸ್ಥಿತಿಗೆ ಬಂದ ನ್ಯಾಷನಲ್ ಕರಾಟೆ ಚಾಂಪಿಯನ್!

ಕ್ರೀಡಾಪಟು ಬಗ್ಗೆ ಸ್ಥಳೀಯ ಪತ್ರಕರ್ತರ ಟ್ವೀಟ್ ಗಮನಿಸಿದ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿಮಲಾ ಮುಂಡಾಗೆ ಸಹಾಯ ಮಾಡಲು ರಾಂಚಿ ಜಿಲ್ಲಾಧಿಕಾರಿಗೆ ಆದೇಶಿಸಿದ್ದಾರೆ. 

- Advertisement -
- Advertisement -

ದೇಶದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಕ್ರೀಡೆ ಎಂದರೇ ಕ್ರಿಕೆಟ್ ಎನ್ನುವಂತಾಗಿದೆ. ಬೇರೆ ಕ್ರೀಡೆಗಳಿಗೆ, ಕ್ರೀಡಾಪಟುಗಳಿಗೆ ಸಿಗುತ್ತಿರುವ ಮಾನ್ಯತೆ ಕೂಡ ಅಷ್ಟಕ್ಕಷ್ಟೇ. ಇದಕ್ಕೆ ಸ್ಪಷ್ಟ ಉದಾಹರಣೆ ಎಂಬಂತೆ ಜಾರ್ಖಾಂಡ್‌ನ ಈ ಕರಾಟೆ ಚಾಂಪಿಯನ್ ಬಡತನದಿಂದಾಗಿ ಮದ್ಯ ಮಾರಬೇಕಾದ ಪರಿಸ್ಥಿತಿ ತಲುಪಿದ್ದಾರೆ.

34ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಸೇರಿದಂತೆ, ಜಾರ್ಖಂಡ್ ರಾಜ್ಯಕ್ಕಾಗಿ ಡಜನ್‌ಗಟ್ಟಲೇ ಪದಕಗಳನ್ನು ಬಾಚಿಕೊಂಡಿದ್ದ ರಾಷ್ಟ್ರೀಯ ಕರಾಟೆ ಚಾಂಪಿಯನ್ ವಿಮಲಾ ಮುಂಡಾ, ಜೀವನೋಪಾಯಕ್ಕಾಗಿ ‘ಹಾಂಡಿಯಾ’ (ಅಕ್ಕಿಯಿಂದ ತಯಾರಿಸುವ ಮದ್ಯ) ಮಾರಾಟ ಮಾಡುವ ಸ್ಥಿತಿಗೆ ಬಂದಿದ್ದಾರೆ.

“ಕೆಟ್ಟ ಆರ್ಥಿಕ ಪರಿಸ್ಥಿತಿಗಳಿಂದಾಗಿ, ನನ್ನ ಕುಟುಂಬದ ತೀವ್ರ ಬಡತನಕ್ಕೆ ದೂಡಿದೆ. ಕುಟುಂಬದ ಜೀವನೋಪಾಯಕ್ಕಾಗಿ ಜೊತೆಗೆ ನನ್ನ ಕರಾಟೆ ಅಭ್ಯಾಸವನ್ನು ಮುಂದುವರೆಸಲು ಲಾಕ್‌ಡೌನ್ ಸಮಯದಲ್ಲಿ ಈ ವ್ಯವಹಾರವನ್ನು ಪ್ರಾರಂಭಿಸಬೇಕಾಯಿತು” ಎಂದು 26 ವರ್ಷದ ಕ್ರೀಡಾಪಟು ಹೇಳಿದ್ದಾರೆ.

ಇದನ್ನೂ ಓದಿ: ”ಬೇಟಿ ಬಚಾವೋ ಈಗ ಅಪರಾಧಿ ಬಚಾವೋ ಆಗಿದೆ”: ರಾಹುಲ್, ಪ್ರಿಯಾಂಕಾ ಕಿಡಿ

“ಈ ಆಟದಲ್ಲಿ, ಕ್ರೀಡಾಪಟುಗಳೇ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಮತ್ತು ಪ್ರತಿ ಪಂದ್ಯಾವಳಿಗಾಗಿ ಪ್ರಯಾಣ ವೆಚ್ಚ ತಾವೇ ಭರಿಸಬೇಕಾಗುತ್ತದೆ, ಇದಕ್ಕೆ ಸಾಕಷ್ಟು ಹಣ ಬೇಕಾಗುತ್ತದೆ” ಎಂದು ಅವರು ಹೇಳಿದ್ದಾರೆ.

5ನೇ ತರಗತಿಯಿಂದಲೇ ಕರಾಟೆ ಕಲಿಯಲು ಪ್ರಾರಂಭಿಸಿ, ರಾಜ್ಯಕ್ಕಾಗಿ ಹಲವಾರು ಪದಕಗಳನ್ನು ತಂದಿರುವ ಈ  ಜಾರ್ಖಂಡ್ ಯುವತಿ, ತನ್ನ ಬಳಿ ಹಲವಾರು ಪದಕಗಳು ಇವೆ. ಆದರೆ ಅವುಗಳನ್ನು ಸುರಕ್ಷಿತವಾಗಿಡಲು ಮನೆಯಲ್ಲಿ ಸರಿಯಾದ ಸ್ಥಳವಿಲ್ಲ ಹಾಗಾಗಿ ಅವುಗಳಲ್ಲಿ ಹೆಚ್ಚಿನವು ಮುರಿದುಹೋಗಿವೆ. ಕೆಲವೊಂದು ಬಣ್ಣ ಕಳೆದುಕೊಳ್ಳುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿಮಲಾ ಮುಂಡಾ ಅವರ ತಾಯಿ  ದಿನಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಆದರೆ ವೃದ್ಧಾಪ್ಯ ಮತ್ತು ಅನಾರೋಗ್ಯದ ಸಮಸ್ಯೆಯಿಂದಾಗಿ ಕೆಲಸಕ್ಕೆ ಹೋಗುವುದನ್ನು ನಿಲ್ಲಿಸಿದರು.

“2011 ರಲ್ಲಿ ಜಾರ್ಖಂಡ್‌ನಲ್ಲಿ ಆಯೋಜಿಸಿದ್ದ 34 ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ನಾನು ಬೆಳ್ಳಿ ಪದಕ ಗೆದ್ದಿದ್ದೇನೆ. 2014 ರಲ್ಲಿ ಅಕ್ಷಯ್ ಕುಮಾರ್ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ನಾನು ಎರಡು ಚಿನ್ನದ ಪದಕಗಳನ್ನು ಕೂಡ ಪಡೆದಿದ್ದೇನೆ” ಎಂದು ವಿಮಲಾ ಮುಂಡಾ ತಿಳಿಸಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗೆ ವಿರೋಧ: ಪಂಜಾಬ್ BJP ಪ್ರಧಾನ ಕಾರ್ಯದರ್ಶಿ ರಾಜೀನಾಮೆ!

ರಾಜ್ಯ ಸರ್ಕಾರದಿಂದ ಸ್ವಲ್ಪ ವಿದ್ಯಾರ್ಥಿವೇತನ ಅಥವಾ ಉದ್ಯೋಗ ಸಿಗುವ ಮುಂಡಾ ಅವರ ನಿರೀಕ್ಷೆ ಹುಸಿಯಾಗಿದೆ. ಬೇರೆ ದಾರಿಯಿಲ್ಲದ ಕಾರಣ, ಆಕೆ ತನ್ನ ತಾಯಿಯೊಂದಿಗೆ ಮದ್ಯ ಮಾರಾಟ ಮಾಡಲು ಪ್ರಾರಂಭಿಸಿದ್ದಾರೆ.

ಪದಕಗಳು ಮತ್ತು ಪ್ರಮಾಣಪತ್ರಗಳ ರಾಶಿಯನ್ನು ಕಂಡಾಗ ಮೊದಲು ತಮ್ಮ ಸಾಧನೆಗಳ ಬಗ್ಗೆ ಹೆಮ್ಮೆ ಪಡುತ್ತಿದ್ದ ಈಕೆ ಈಗ ಸಮಯ ಮತ್ತು ಕಠಿಣ ವಾಸ್ತವತೆ ತನ್ನನ್ನು ಬದಲಾಯಿಸಿದೆ ಎನ್ನುತ್ತಾರೆ.

ಮುಂಡಾ ಅವರು ರಾಜ್ಯ ಸರ್ಕಾರದಿಂದ ಯಾವುದೇ ಹಣಕಾಸಿನ ಸಹಾಯವನ್ನು ಬಯಸುವುದಿಲ್ಲ. ಆದರೆ 2019 ರಲ್ಲಿ ರಾಜ್ಯಕ್ಕೆ ಪದಕಗಳನ್ನು ಗೆದ್ದ 264 ಕ್ರೀಡಾಪಟುಗಳಲ್ಲಿ 33 ಜನರನ್ನು ಸರ್ಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿಗೆ ಆಯ್ಕೆ ಮಾಡಲಾಗಿದೆ . ಅದರ ನೇಮಕಾತಿ ಪ್ರಕ್ರಿಯೆಯನ್ನು ಸರ್ಕಾರ ತ್ವರಿತಗೊಳಿಸಬೇಕು ಎಂದು ಬಯಸುತ್ತಾರೆ.

“ಹಿಂದಿನ ಸರ್ಕಾರವು ಪದಕಗಳನ್ನು ಪಡೆದ ಕ್ರೀಡಾಪಟುಗಳ ನೇರ ನೇಮಕಾತಿಯನ್ನು ಘೋಷಿಸಿದ ನಂತರ ನಾವು ಭರವಸೆ ಹೊಂದಿದ್ದೇವು. ಆದರೆ ಇಂದಿನ ಸರ್ಕಾರವು ಈ ವಿಷಯದಲ್ಲಿ ಕ್ರಮಗಳನ್ನು ತೆಗೆದುಕೊಳ್ಳದ ಕಾರಣ ಆ ಭರವಸೆಯು ದಿನ ಕಳೆದಂತೆ ಕಡಿಮೆಯಾಯಿತು” ಎಂದರು.

ಕ್ರೀಡಾಪಟು ಬಗ್ಗೆ ಸ್ಥಳೀಯ ಪತ್ರಕರ್ತರ ಟ್ವೀಟ್ ಗಮನಿಸಿದ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿಮಲಾ ಮುಂಡಾಗೆ ಸಹಾಯ ಮಾಡಲು ಆದೇಶಿಸಿದ್ದಾರೆ.

ರಾಂಚಿ ಜಿಲ್ಲಾಧಿಕಾರಿಗಳಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸೊರೆನ್, ಇದನ್ನು ತಕ್ಷಣ ಗಮನಿಸಿ, ಕ್ರೀಡಾ ಕಾರ್ಯದರ್ಶಿಯೊಂದಿಗೆ ಮಾತಾನಾಡಿ ಸಹೋದರಿ ವಿಮಲಾಗೆ ಸಹಾಯ ಮಾಡಿ ಎಂದಿದ್ದಾರೆ. ಜೊತೆಗೆ ಮುಂಬರುವ ಕ್ರೀಡಾ ನೀತಿಯ ಅನುಷ್ಠಾನದ ನಂತರ ಆಟಗಾರರ ಭವಿಷ್ಯವು ಸುಧಾರಿಸುತ್ತದೆ ಎಂದು ನಾನು ಜನರಿಗೆ ಹೇಳಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...