Homeಮುಖಪುಟಮದುವೆ ಮನೆಯಲ್ಲಿ ಮಹಿಳೆಯರೊಂದಿಗೆ ಅನುಚಿತ ವರ್ತನೆ ಪ್ರಶ್ನಿಸಿದ್ದಕ್ಕೆ, ರಾಷ್ಟ್ರ ಮಟ್ಟದ ಬಾಡಿ ಬಿಲ್ಡರ್ ಹತ್ಯೆ

ಮದುವೆ ಮನೆಯಲ್ಲಿ ಮಹಿಳೆಯರೊಂದಿಗೆ ಅನುಚಿತ ವರ್ತನೆ ಪ್ರಶ್ನಿಸಿದ್ದಕ್ಕೆ, ರಾಷ್ಟ್ರ ಮಟ್ಟದ ಬಾಡಿ ಬಿಲ್ಡರ್ ಹತ್ಯೆ

- Advertisement -
- Advertisement -

ಮದುವೆ ಸಮಾರಂಭದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಪುರುಷರ ಗುಂಪನ್ನು ಪ್ರಶ್ನಿಸಿದ್ದಕ್ಕಾಗಿ 20 ಜನ ದುಷ್ಕರ್ಮಿಗಳ ಗುಂಪು ಹೊಂಚುಹಾಕಿ, 26 ವರ್ಷದ ರಾಷ್ಟ್ರ ಮಟ್ಟದ ಬಾಡಿ ಬಿಲ್ಡರ್ ಅನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಂದಿರುವ ಘಟನೆ ಹರಿಯಾಣದ ರೋಹ್ಟಕ್ ಜಿಲ್ಲೆಯಲ್ಲಿ ನಡೆದಿದೆ.  

ಹುಮಾಯೂನ್‌ಪುರ ಗ್ರಾಮದ ನಿವಾಸಿ ರೋಹಿತ್ ಧಂಖರ್ ದುಷ್ಕರ್ಮಿಗಳ ಹಲ್ಲೆಯಿಂದ ಸಾವನ್ನಪ್ಪಿದ್ದಾರೆ. ರೋಹ್ಟಕ್‌ನ ಜಿಮ್ಖಾನಾ ಕ್ಲಬ್‌ನಲ್ಲಿ ಸದಸ್ಯರಿಗೆ ತರಬೇತಿ ನೀಡಿದ ವೃತ್ತಿಪರ ಬಾಡಿಬಿಲ್ಡರ್ ಆಗಿದ್ದ, ರೋಹಿತ್ 2018 ರಲ್ಲಿ, ಭಾರತದ ಪ್ಯಾರಾ ಒಲಿಂಪಿಕ್ ಸಮಿತಿ ಆಯೋಜಿಸಿದ್ದ ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕವನ್ನು ಗೆದ್ದಿದ್ದರು.

ಬಲಗಾಲಿನಲ್ಲಿ ಅಂಗವೈಕಲ್ಯದಿಂದ ಬಳಲುತ್ತಿದ್ದ ರೋಹಿತ್ 2018 ರಲ್ಲಿ ಎರಡು ಚಿನ್ನದ ಪದಕಗಳನ್ನು ಗೆದ್ದ ಅಂತರರಾಷ್ಟ್ರೀಯ ಪದಕ ವಿಜೇತರಾಗಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಆಗಿನ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಆ ವರ್ಷದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ರೋಹಿತ್ ಅವರನ್ನು ಸನ್ಮಾನಿಸಿದ್ದರು. 

ಶುಕ್ರವಾರ, ರೋಹಿತ್ ತನ್ನ ಸ್ನೇಹಿತ ಜತಿನ್ ಜೊತೆ ಜತಿನ್ ಅವರ ಸಂಬಂಧಿಕರ ಮದುವೆಗೆ ‘ಉಡುಗೊರೆ’ ಅರ್ಪಿಸಲು ಭಿವಾನಿಗೆ ಪ್ರಯಾಣ ಬೆಳೆಸಿದ್ದರು. ಅವರ ಸಂಬಂಧಿಕರ ಪ್ರಕಾರ, ಗ್ರಾಮದ ಹುಡುಗನ ಕಡೆಯವರು ತಡರಾತ್ರಿ ಮದುವೆ ಸ್ಥಳಕ್ಕೆ ಬಂದರು, ಆ ಗುಂಪಿನಲ್ಲಿದ್ದ ಕೆಲವು ಪುರುಷರು ಮಹಿಳೆಯರೊಂದಿಗೆ ಕೆಟ್ಟದಾಗಿ ವರ್ತಿಸಲು ಪ್ರಾರಂಭಿಸಿದರು ಎಂದು ಆರೋಪಿಸಲಾಗಿದೆ. ರೋಹಿತ್ ಅವರನ್ನು ಎಚ್ಚರಿಸಿದರು, ಇದು ಸ್ವಲ್ಪ ಸಮಯದ ವಾಗ್ವಾದಕ್ಕೆ ಕಾರಣವಾಯಿತು. ಕಿರುಕುಳ ನೀಡಿದವರು ಅಲ್ಲಿಂದ ಹೊರಟುಹೋದರು, ಆದರೆ ನಂತರ ಪರಿಸ್ಥಿತಿ ಉಲ್ಬಣಗೊಂಡಿತು. ಸಮಾರಂಭದ ನಂತರ, ರೋಹಿತ್ ಮತ್ತು ಜತಿನ್ ಮನೆಗೆ ಮರಳಲು ತಮ್ಮ ವಾಹನದಲ್ಲಿ ಹೊರಟಾಗ, ಗೇಟ್ ಮುಚ್ಚಿದ್ದರಿಂದ ಅವರ ಕಾರು ರೈಲ್ವೆ ಕ್ರಾಸಿಂಗ್‌ನಲ್ಲಿ ನಿಲ್ಲಬೇಕಾಯಿತು.

ಈ ವೇಳೆ ಹೊಂಚು ಹಾಕಿದ್ದ ಸುಮಾರು 20 ದುಷ್ಕರ್ಮಿಗಳ ತಂಡ ದೊಣ್ಣೆ, ರಾಡ್ ಮತ್ತು ಇತರ ಆಯುಧಗಳಿಂದ ರೋಹಿತ್ ಮತ್ತು ಜನಿನ್ ಅವರನ್ನು ಸುತ್ತುವರೆದು ದಾಳಿ ನಡೆಸಿದ್ದಾರೆ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. 

ರೋಹಿತ್ ಜೊತೆಯಲ್ಲಿದ್ದ ಜತಿನ್ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು, ಆದರೆ ರೋಹಿತ್ ಅವರನ್ನು ಹಿಡಿದು ತೀವ್ರವಾಗಿ ಥಳಿಸಲಾಗಿದೆ. “ಗಾಯದ ಗುರುತುಗಳಿಲ್ಲದ ಅವನ ದೇಹದ ಒಂದು ಭಾಗವೂ ಇರಲಿಲ್ಲ” ಎಂದು ಕುಟುಂಬದ ಸದಸ್ಯರೊಬ್ಬರು ಹೇಳಿದ್ದಾರೆ. ದಾಳಿಕೋರರು ಓಡಿಹೋದ ನಂತರ, ಜತಿನ್ ಸಹಾಯದಿಂದ ಹಿಂತಿರುಗಿ ರೋಹಿತ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ರೋಹ್ಟಕ್‌ನ ಪಿಜಿಐಎಂಎಸ್‌ಗೆ ಕಳುಹಿಸಲಾಯಿತು. ವೈದ್ಯರ ರಾತ್ರಿಯಿಡೀ ಪ್ರಯತ್ನದ ಹೊರತಾಗಿಯೂ, ರೋಹಿತ್ ಶನಿವಾರ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಮಾಹಿತಿ ಪಡೆದ ಭಿವಾನಿ ಪೊಲೀಸರು ಪಿಜಿಐಎಂಎಸ್‌ಗೆ ತೆರಳಿದರು. ಕುಟುಂಬದ ದೂರಿನ ಆಧಾರದ ಮೇಲೆ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಹೆಚ್ಚಿನ ತನಿಖೆ ನಡೆಯುತ್ತಿದೆ. ರೋಹಿತ್ ಅವರ ಸೋದರ ಮಾವ ರವಿ ಖಾಸ್ಸಾ ಮತ್ತು ಚಿಕ್ಕಪ್ಪ ಸತೀಶ್ ಧನಖರ್, ಹಲ್ಲೆಕೋರರಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು. “ಇದು ಯೋಜಿತ ಕೊಲೆ. ರೋಹಿತ್ ಮಹಿಳೆಯರ ಘನತೆಯ ಪರವಾಗಿ ನಿಂತಿದ್ದಕ್ಕಾಗಿ ತಮ್ಮ ಜೀವವನ್ನು ತೆತ್ತರು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...