Homeಮುಖಪುಟ2024 ರ ಲೋಕಸಭೆ ಚುನಾವಣೆಯ ನಂತರ ರಾಷ್ಟ್ರೀಯ ಮಟ್ಟದ ರಾಜಕೀಯ ರಂಗ ರಚನೆ: ಸಿಪಿಐಎಂ

2024 ರ ಲೋಕಸಭೆ ಚುನಾವಣೆಯ ನಂತರ ರಾಷ್ಟ್ರೀಯ ಮಟ್ಟದ ರಾಜಕೀಯ ರಂಗ ರಚನೆ: ಸಿಪಿಐಎಂ

ಚುನಾವಣೆಯ ಮೊದಲು, ರಾಜ್ಯ ಮಟ್ಟದ ರಾಜಕೀಯ ರಂಗಗಳು ಪ್ರಾಯೋಗಿಕ ಅರ್ಥದಲ್ಲಿ ಅತ್ಯುತ್ತಮ ಆಯ್ಕೆಯಾಗಿದೆ ಎಂದು ಪಕ್ಷವು ಹೇಳಿದೆ

- Advertisement -
- Advertisement -

ಭಾರತೀಯ ಪರಿಸ್ಥಿತಿಯಲ್ಲಿನ ವೈವಿಧ್ಯತೆಗಳನ್ನು ಪರಿಗಣಿಸಿ, 2024 ರ ಲೋಕಸಭೆ ಚುನಾವಣೆಯ ನಂತರವೇ ರಾಷ್ಟ್ರೀಯ ಮಟ್ಟದ ರಾಜಕೀಯ ರಂಗವನ್ನು ರಚಿಸಲಾಗುವುದು ಎಂದು ಸಿಪಿಐ-ಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಹೇಳಿದ್ದಾರೆ. ಅವರು ಗುರುವಾರ ಕೇರಳದ ಕಣ್ಣೂರಿನಲ್ಲಿ ನಡೆಯುತ್ತಿರುವ ಸಿಪಿಐ(ಎಂ)ನ 23 ನೇ ರಾಷ್ಟ್ರೀಯ ಅಧಿವೇಶನದ ನಡಾವಳಿಗಳನ್ನು ವಿವರಿಸುತ್ತಿದ್ದರು.

ಚುನಾವಣೆಯ ಮೊದಲು, ರಾಜ್ಯ ಮಟ್ಟದ ರಾಜಕೀಯ ರಂಗಗಳು ಪ್ರಾಯೋಗಿಕ ಅರ್ಥದಲ್ಲಿ ಅತ್ಯುತ್ತಮ ಆಯ್ಕೆಯಾಗಿದೆ ಎಂದು ಹೇಳಿದ ಅವರು, “ಪ್ರತಿ ರಾಜ್ಯದಲ್ಲಿ ವಿವಿಧ ರಾಜಕೀಯ ಪಕ್ಷಗಳು ಪ್ರಬಲವಾಗಿವೆ. 1977 ರಿಂದ, ರಾಷ್ಟ್ರೀಯ ಮಟ್ಟದ ಮೈತ್ರಿಗಳು ಚುನಾವಣೆಯ ನಂತರವೇ ರಚನೆಯಾಗುತ್ತಿವೆ. 1989, 1996, 1998 ಮತ್ತು 2004 ರ ಬೆಳವಣಿಗೆಗಳನ್ನು ನೆನಪಿಸಿಕೊಳ್ಳಿ. ಈ ಎಲ್ಲಾ ವರ್ಷಗಳಲ್ಲಿ, ಚುನಾವಣೆಯ ನಂತರ ಸರ್ಕಾರ ರಚನೆಗೆ ರಾಜಕೀಯ ರಂಗಗಳು ಅಸ್ತಿತ್ವಕ್ಕೆ ಬಂದವು” ಎಂದು ಯೆಚೂರಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಿಜೆಪಿ ವಿರೋಧಿ ಮತಗಳನ್ನು ಕ್ರೋಢೀಕರಿಸಲು ಸಿಪಿಐ-ಎಂ ಪ್ರಯತ್ನಿಸುತ್ತಿದೆ. ಬಿಜೆಪಿಯನ್ನು ಪ್ರತ್ಯೇಕಿಸುವುದು ಮತ್ತು ಸೋಲಿಸುವುದು ಭಾರತೀಯ ಸಂವಿಧಾನ ಮತ್ತು ಗಣರಾಜ್ಯವನ್ನು ರಕ್ಷಿಸುವ ಪ್ರಮುಖ ಕಾರ್ಯವಾಗಿದೆ. ಅದಕ್ಕಾಗಿ ಬಿಜೆಪಿ ವಿರೋಧಿ ಶಕ್ತಿಗಳ ವಿಶಾಲವಾದ ಮೈತ್ರಿ ಇರುತ್ತದೆ.

ಇಂತಹ ಮೈತ್ರಿಗಳು ಕೆಲವು ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಜಾತ್ಯತೀತ ಶಕ್ತಿಗಳ ಗರಿಷ್ಠ ಸಜ್ಜುಗೊಳಿಸುವಿಕೆಯನ್ನು ನಾವು ಬಯಸುತ್ತೇವೆ. ಎಡ ಮತ್ತು ಪ್ರಜಾಸತ್ತಾತ್ಮಕ ಶಕ್ತಿಗಳ ಜೊತೆಗೆ ಸಾಮಾಜಿಕ ಮತ್ತು ಜನಾಂದೋಲನಗಳ ಏಕತೆಯನ್ನು ಬಲಪಡಿಸುವುದು ಮುಖ್ಯವಾಗಿದೆ” ಎಂದು ಯೆಚೂರಿ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಬಿಜೆಪಿಯನ್ನು ಸೋಲಿಸುವ ಪ್ರಕ್ರಿಯೆಗೆ ಅವರ ಕೊಡುಗೆ ಏನು ಎಂಬುದನ್ನು ನಿರ್ಧರಿಸುವುದು ಅವರಿಗೆ ಬಿಟ್ಟದ್ದು. ಕಾಂಗ್ರೆಸ್ ಪಕ್ಷದಿಂದ ನಾಯಕರು ನಿರಂತರವಾಗಿ ಬಿಜೆಪಿಗೆ ಹರಿದು ಹೋಗುತ್ತಿದ್ದಾರೆ. ಈ ಪರಿಸ್ಥಿತಿಯ ಬಗ್ಗೆ ಕಾಂಗ್ರೆಸ್ ಯೋಚಿಸಬೇಕು” ಎಂದು ಪ್ರತಿಕ್ರಿಯಿಸಿದರು.

ಇದನ್ನೂ ಓದಿ: ಮೈಸೂರಿನ ಶಕ್ತಿಧಾಮಕ್ಕೆ 5 ಕೋಟಿ ರೂ. ಅನುದಾನ: ಸಿಎಂ ಬೊಮ್ಮಾಯಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...