Homeಮುಖಪುಟಬಡ - ಮಧ್ಯಮ ವರ್ಗವನ್ನು ಮತ್ತಷ್ಟು ಹಿಂಡಲಿರುವ ನ್ಯಾಷನಲ್ ಮಾನಿಟೈಸೇಶನ್ ಪೈಪ್‌ಲೈನ್ - NMP ಯೋಜನೆ

ಬಡ – ಮಧ್ಯಮ ವರ್ಗವನ್ನು ಮತ್ತಷ್ಟು ಹಿಂಡಲಿರುವ ನ್ಯಾಷನಲ್ ಮಾನಿಟೈಸೇಶನ್ ಪೈಪ್‌ಲೈನ್ – NMP ಯೋಜನೆ

- Advertisement -
- Advertisement -

ಎರಡು ಮೂರು ಶತಮಾನಗಳ ಹಿಂದೆ ರಾಜಮಹಾರಾಜರು ನಮ್ಮ ದೇಶವನ್ನು ಆಳುತ್ತಿದ್ದರು. ರಾಜನೊಬ್ಬ ನೇರವಾಗಿ ಆಳಲಾಗದ ದೂರದ ಪ್ರದೇಶಗಳಲ್ಲಿ ಪಾಳೇಗಾರರನ್ನು ನೇಮಿಸುತ್ತಿದ್ದ. ಭೂ ಉಳುಮೆ ಮಾಡುತ್ತಿದ್ದ ಪ್ರತಿ ರೈತರಿಂದ 100 ರೂ ಸಂಗ್ರಹಿಸಿಕೊಡು ಎಂದು ರಾಜ ಆದೇಶಿಸಿದರೆ, ಪಾಳೇಗಾರ 200 ರೂ ಸಂಗ್ರಹಿಸಿ ತಾನು 100 ಇಟ್ಟುಕೊಂಡು ಉಳಿದ 100 ರೂಗಳನ್ನು ರಾಜನಿಗೆ ಸಲ್ಲಿಸುತ್ತಿದ್ದ. ಸ್ವಾತಂತ್ರ್ಯ ಲಭಿಸಿ ಪ್ರಜಾಪ್ರಭುತ್ವ ಬಂದನಂತರವೂ ಈ ಪದ್ಧತಿ ಜಾರಿಯಲ್ಲಿದೆ. ಇದಕ್ಕೆ ಪ್ರಸಕ್ತ ಕೇಂದ್ರ ಸರ್ಕಾರ ನೀಡಿರುವ ಹೊಸ ಹೆಸರು ನ್ಯಾಷನಲ್ ಮಾನಿಟೈಸೆಶನ್ ಪೈಪ್‌ಲೈನ್ ಆಗಿದೆ ಮತ್ತು ಇದರಿಂದ ಜನರಿಗೆ ಒಳ್ಳೆಯದು ಆಗುತ್ತದೆ ಎಂದು ಅದು ವಾದಿಸುತ್ತಿದೆ!

’ನಷ್ಟದಲ್ಲಿರುವ ಸಂಸ್ಥೆಗಳನ್ನು ಸರ್ಕಾರ ಏಕೆ ನಡೆಸಬೇಕು? ಇದು ತೆರಿಗೆದಾರರ ಜೇಬಿಗೆ ಕತ್ತರಿ’ ಎಂಬ ನೆಪದಲ್ಲಿ ಲಾಭದಾಯಕವಾಗಿ ನಡೆಯುತ್ತಿದ್ದ ಹಲವಾರು ಬೃಹತ್ ಸಾರ್ವಜನಿಕ ಸಂಸ್ಥೆಗಳನ್ನು ಕೂಡ ಮೋದಿ ಸರ್ಕಾರವು ಖಾಸಗಿಯವರಿಗೆ ಈಗಾಗಲೇ ಮಾರಿಬಿಟ್ಟಿದೆ. (ಹಿಂದಿನ ಹಲವು ಸರ್ಕಾರಗಳ ಕೊಡುಗೆ ಇದಕ್ಕೆ ಇದ್ದರೂ, ಈಗಿನ ಸರ್ಕಾರದ ಏಕಪಕ್ಷೀಯ ನಿರ್ಧಾರಗಳು ಬೆಚ್ಚಿಬೀಳಿಸುವಂತಿವೆ) ಸಾರ್ವಜನಿಕ ಸಂಸ್ಥೆಗಳು ಅಂದರೆ, ಈ ದೇಶದ ಜನರು ಕಟ್ಟಿದ ತೆರಿಗೆ ದುಡ್ಡು ಬಳಸಿ ನಿರ್ಮಿಸಿದ ಸಂಸ್ಥೆಗಳು ಸುಲಭವಾಗಿ ಖಾಸಗಿಯವರ ಪಾಲಾಗಿವೆ ಮತ್ತು ಅವರು ಲಾಭ ಮಾಡುತ್ತಿದ್ದಾರೆ ಎಂಬುದನ್ನು ನಾವು ಮರೆಯಬಾರದು.

PC : The Economic Times

ಈಗ ಮತ್ತೊಮ್ಮೆ ಸರ್ಕಾರ, ಇದುವರೆಗೂ ಉಪಯೋಗವಾಗಿಲ್ಲದ ಅಥವಾ ಹೆಚ್ಚು ಉಪಯೋಗಕ್ಕೆ ಬಂದಿಲ್ಲದ ಸರ್ಕಾರದ ಆಸ್ತಿಗಳ ನಿರ್ವಹಣೆಯನ್ನು ಖಾಸಗಿಯವರಿಗೆ ಕೊಟ್ಟು, ಅವರಿಂದ ಮುಂದಿನ ನಾಲ್ಕು ವರ್ಷಗಳಲ್ಲಿ 6 ಲಕ್ಷ ಕೋಟಿ ರೂ ಶುಲ್ಕ ಸಂಗ್ರಹಿಸುತ್ತೇವೆ ಎನ್ನುತ್ತಾ ’ಸರ್ಕಾರಿ ಆಸ್ತಿ ನಗದೀಕರಣ’ (ನ್ಯಾಷನಲ್ ಮಾನಿಟೈಸೆಶನ್ ಪೈಪ್‌ಲೈನ್ – NMP) ಎಂಬ ಯೋಜನೆಯನ್ನು ಘೋಷಿಸಿದೆ. ಆದರೆ ಅದು ಖಾಸಗಿಯವರಿಗೆ ನೀಡಲು ಮುಂದಾಗುತ್ತಿರುವುದು ನಷ್ಟದಲ್ಲಿರುವ ಸಂಸ್ಥೆಗಳಲ್ಲ ಬದಲಿಗೆ ಅತಿ ಹೆಚ್ಚು ಲಾಭದಲ್ಲಿರುವ ಸಂಸ್ಥೆಗಳಾಗಿರುವುದು ನಮ್ಮೆಲ್ಲರ ದುರಂತ.

ಖಾಸಗೀಕರಣ ಮತ್ತು NMP ಇವೆರೆಡೂ ಸಹ ಖಾಸಗಿ ಬಂಡವಾಳಶಾಹಿಗಳಿಗೆ ಲಾಭ ಮಾಡಿಕೊಡುವುದಕ್ಕಾಗಿ ಮಾಡಿರುವ ಯೋಜನೆಗಳು ಮತ್ತು ಇದರ ಹೊರೆ ಈ ದೇಶದ ಜನಸಾಮಾನ್ಯರ ಮೇಲೆ ಬೀಳುತ್ತದೆ ಎಂಬುದು ಯಾರಿಗಾದರೂ ಮೇಲ್ನೋಟಕ್ಕೇ ಅರ್ಥವಾಗುವಂತದ್ದು. ಆದರೆ ಈ ಯೋಜನೆ ಘೋಷಿಸುವ ವೇಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ’ಇದರಿಂದ ಖಾಸಗಿಯವರಿಗೆ ಲಾಭವಾಗಲಿದೆ ಜೊತೆಗೆ ಸರ್ಕಾರಕ್ಕೂ ಲಾಭವಾಗಲಿದೆ’ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇಲ್ಲಿ ಖಾಸಗಿಯವರಿಗೆ ಕೊಡುವುದರ ಬದಲು ಸರ್ಕಾರವೇ ನಿರ್ವಹಣೆ ಮಾಡಿದರೆ ಹೆಚ್ಚು ಲಾಭವಾಗುತ್ತದೆ ಅಲ್ಲವೇ ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ. ಆದರೆ ಸರ್ಕಾರ ’ಹಿಂದೆ ಕಾಂಗ್ರೆಸ್ ಸಹ ಸರ್ಕಾರಿ ಆಸ್ತಿ ನಗದೀಕರಣ ಮಾಡಿತ್ತು’ ಎಂದು ಹೇಳುವ ಮೂಲಕ ನುಣುಚಿಕೊಳ್ಳುತ್ತಿದೆ.

ಲಾಭದಲ್ಲಿರುವ ಸಂಸ್ಥೆಗಳ ಮಾರಾಟ – ಜನರಿಗಾಗಲಿದೆ ನಷ್ಟ

NMP ಯೋಜನೆಯ ಭಾಗವಾಗಿ, ಸರ್ಕಾರ ಸುಸಜ್ಜಿತವಾಗಿ ನಿರ್ಮಿಸಿ, ಬಳಕೆಯಲ್ಲಿರುವ 26,700 ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾರಿಯನ್ನು ಬಿಟ್ಟುಕೊಡಲು ಹೊರಟಿದೆ. ಇದರಿಂದ 1.6 ಲಕ್ಷಕೋಟಿ ರೂಗಳ ಆದಾಯವನ್ನು ಸರ್ಕಾರ ನಿರೀಕ್ಷಿಸಿದೆ. ಆದರೆ ಈಗಾಗಲೇ ಈ ಹೆದ್ದಾರಿಗಳಿಂದ 2016ರಿಂದ 2019ರವರೆಗಿನ ನಾಲ್ಕು ವರ್ಷಗಳಲ್ಲಿ ಕೇಂದ್ರ ಸರ್ಕಾರವು ಟೋಲ್ ರೂಪದಲ್ಲಿ 91,137 ಕೋಟಿ ರೂಗಳನ್ನು ಸಂಗ್ರಹಿಸಿದೆ. ಈಗ ಹೇಳಿ ಇದನ್ನು ನಷ್ಟದಲ್ಲಿದೆ ಎನ್ನಲು ಸಾಧ್ಯವೇ? ಒಂದು ವೇಳೆ ಖಾಸಗಿ ಕಂಪನಿ ಇನ್ನು ಹೆಚ್ಚಿನ ಲಾಭ ಮಾಡಲು ಹೊರಟರೆ ಅದು ಭಾರ ಟೋಲ್ ರೂಪದಲ್ಲಿ ಪ್ರತಿಯೊಬ್ಬ ಜನಸಾಮಾನ್ಯರ ಮೇಲೆ ಬೀಳುತ್ತದೆ. ಅಂದರೆ ಈಗಾಗಲೇ ಕಟ್ಟುತ್ತಿರುವ ಟೋಲ್ ಬಹಳ ಹೆಚ್ಚಾಗಿದೆ. ಅದರ ಮೂರು ಪಟ್ಟು ಟೋಲ್ ಕಟ್ಟಬೇಕಾದ ಪರಿಸ್ಥಿತಿಯನ್ನು ಊಹಿಸಿಕೊಳ್ಳಿ!

ಇನ್ನು BSNL ಕಂಪನಿ ಹಲವು ವರ್ಷಗಳಿಂದ ನಷ್ಟದಲ್ಲಿದೆ. ಅದಕ್ಕೆ ಕೇಂದ್ರ ಸರ್ಕಾರವೇ ಕಾರಣ ಹೊರತು ಮತ್ಯಾರಲ್ಲ. ಈಗ NMP ಯೋಜನೆಯ ಭಾಗವಾಗಿ ನಷ್ಟದಲ್ಲಿರುವ BSNLಅನ್ನು ಇಡಿಯಾಗಿ ಖಾಸಗಿಯವರಿಗೆ ನೀಡುತ್ತಿಲ್ಲ. ಬದಲಿಗೆ 16,700 ಕಿ,ಮೀ ಉದ್ದದ ಆಪ್ಟಿಕಲ್ ಫೈಬರ್ ಕೇಬಲ್ ವೈರ್‌ಗಳನ್ನು ಮತ್ತು ಸುಮಾರು 17,000 BSNL, MTNL ಟವರ್‌ಗಳನ್ನು ಖಾಸಗಿಯವರಿಗೆ ಬಿಟ್ಟುಕೊಡಲಾಗುತ್ತಿದೆ. ನಷ್ಟದಲ್ಲಿರುವ ಬಿಎಸ್‌ಎನ್‌ಎಲ್‌ಅನ್ನು ಮತ್ತೆ ಸುಸಜ್ಜಿತಗೊಳಿಸಲು ಯಾವ ಖಾಸಗಿಯವರು ಮುಂದೆ ಬರುತ್ತಿಲ್ಲ. ಆದರೆ ಅದರ ಟವರ್‌ಗಳನ್ನು ಮತ್ತು ಅದರ ವ್ಯಾಪಕ ನೆಟ್‌ವರ್ಕ್‌ಅನ್ನು ಬಳಸಿಕೊಳ್ಳಲು ನಾ ಮುಂದು ತಾ ಮುಂದು ಎನ್ನುತ್ತಿವೆ. ಅಂದರೆ ಇನ್ನು ಮುಂದೆ ನಮ್ಮೆಲ್ಲರ ಮೊಬೈಲ್ ಬಿಲ್ ಹೆಚ್ಚಾಗಲಿದೆ ಎಂಬುದನ್ನು ನಾವು ಊಹಿಸಿಕೊಳ್ಳುವುದಕ್ಕೆ ಕಷ್ಟವೇನಲ್ಲ.

150 ರೈಲುಗಳು, 400 ರೈಲು ನಿಲ್ದಾಣಗಳು ಖಾಸಗಿಯವರ ಕೈಗೆ ಹೋದಲ್ಲಿ ಪ್ರಯಾಣ ದರಗಳು ಗಗನಕ್ಕೇರುವುದಿಲ್ಲ ಎಂದು ನಿಮಗೆ ಅನಿಸುತ್ತದೆಯೇ? ವಿದ್ಯುತ್ ಟ್ರಾನ್ಸ್‌ಮಿಷನ್ ಲೈನ್‌ಗಳು, ಗ್ಯಾಸ್ ಪೈಪ್‌ಲೈನ್‌ಗಳು, ಪವರ್ ಗ್ರಿಡ್‌ಗಳು ನಗದೀಕರಣ ವ್ಯಾಪ್ತಿಗೆ ಬರಲಿವೆ. ಅಲ್ಲಿಗೆ ನಮ್ಮ ಕರೆಂಟ್ ಬಿಲ್, ಗ್ಯಾಸ್ ಬಿಲ್ ತುಟ್ಟಿಯಾಗುವುದು ಖಚಿತ. ಈಗ ಹೇಳಿ ಈ ಖಾಸಗಿಕರಣ ಯೋಜನೆಗಳು ಬೇಕೆ?

253ಕ್ಕೂ ಹೆಚ್ಚಿನ ಕೇಂದ್ರದ ಸ್ವತ್ತಿನಲ್ಲಿರುವ ಸರ್ಕಾರಿ ಸಂಸ್ಥೆಗಳಲ್ಲಿ ಸುಮಾರು 171 ಸಂಸ್ಥೆಗಳು ಲಾಭದಲ್ಲಿವೆ. ಅದರಲ್ಲಿ ಕೆಲವಂತೂ ವರ್ಷಕ್ಕೆ 10,000 ಕೋಟಿಗೂ ಹೆಚ್ಚಿನ ಲಾಭ ತರುತ್ತಿವೆ. ಸುಮಾರು 13 ಲಕ್ಷ ಜನರಿಗೆ ಉದ್ಯೋಗ ಕೊಟ್ಟಿವೆ. ವರ್ಷಕ್ಕೆ 18-20 ಲಕ್ಷ ಕೋಟಿ ವಹಿವಾಟು ನಡೆಸಿ 3 ಲಕ್ಷ ಕೋಟಿಗೂ ಅಧಿಕ ಆದಾಯ ತರುತ್ತಿವೆ. ಆದರೆ ಇವನ್ನು ಉಳಿಸಿ, ಬೆಳೆಸಬೇಕಾದ ಮೋದಿ ಸರ್ಕಾರ ತನ್ನ ಅದಕ್ಷತೆಯ ಕಾರಣಕ್ಕೆ, ಅವುಗಳನ್ನು ಮಾರಾಟ ಮಾಡಲು ಹೊರಟು ದೇಶದ ಪ್ರತಿಯೊಬ್ಬ ಪ್ರಜೆಯನ್ನು ಮತ್ತಷ್ಟು ಬಡತನಕ್ಕೆ ನೂಕುತ್ತಿದೆ.

PC : Gizbot

ನಮ್ಮ ದೇಶದ ಆರೋಗ್ಯ ವ್ಯವಸ್ಥೆ ಶೇ.70 ರಷ್ಟು ಖಾಸಗೀಯವರ ಹಿಡಿತದಲ್ಲಿದೆ. ಈ ಕಾರಣಕ್ಕಾಗಿಯೂ ಕೊರೊನಾ ಮೊದಲ ಅಲೆ ಮತ್ತು ಎರಡನೇ ಅಲೆ ಸಂದರ್ಭದಲ್ಲಿ ಲಕ್ಷಾಂತರ ಜನರಿಗೆ ಸರಿಯಾದ ಚಿಕಿತ್ಸೆ ದೊರೆಯದೆ ಪರದಾಡುವಂತಾಯ್ತು. ಹಲವು ಆಸ್ಪತ್ರೆಗಳು ಲಕ್ಷಗಳ ಲೆಕ್ಕದಲ್ಲಿ ಬಿಲ್ ಮಾಡಿ ಜನರ ಜೀವ ಹಿಂಡಿದವು. ಈಗ ಸರ್ಕಾರ ತರಲೊರಟಿರುವ ಈ ಯೋಜನೆಯಿಂದ ಜನಸಾಮಾನ್ಯರ ಅಗತ್ಯ ಸೇವೆಗಳ ಬೆಲೆ ಮೂರ್ನಾಲ್ಕು ಪಟ್ಟು ಹೆಚ್ಚಲಿದ್ದು ಬಡಜನರು, ಮಧ್ಯಮವರ್ಗದವರನ್ನು ಈ ಖಾಸಗಿಯವರು ಹಿಂಡಿ ಹಿಪ್ಪೆ ಮಾಡುವುದರಲ್ಲಿ ಅನುಮಾನವೇ ಇಲ್ಲ.

– ಮುತ್ತುರಾಜು

ಇದೊಂದು ಅದಕ್ಷ, ಅಸಮರ್ಥ, ಅನನುಭವಿ ಸರ್ಕಾರ

ನಾವು ಮಾರಾಟ ಮಾಡುತ್ತಿಲ್ಲ, ಗುತ್ತಿಗೆಗೆ ಕೊಡುತ್ತಿದ್ದೇವೆ ಎಂದು ಸರ್ಕಾರ ಹೇಳುತ್ತಿದೆ. 60-90 ವರ್ಷಗಳಿಗೆ ಗುತ್ತಿಗೆ ಎಂದರೆ ಅದು ಖಾಸಗೀಕರಣ ಎಂತಲೇ ಅರ್ಥ. ಈಗಾಗಲೇ ಆದಾಯದಲ್ಲಿರುವ ಕಂಪನಿಗಳನ್ನು ಖಾಸಗಿಯವರಿಗೆ ಕೊಡುತ್ತಿರುವ ಸರ್ಕಾರ ಇದರಿಂದ ಆದಾಯ ಹೆಚ್ಚಾಗುತ್ತದೆ ಎಂದು ಹೇಳುತ್ತಿದೆ. ಉದಾಹರಣೆಗೆ ಈಗ 100 ರೂ ಆದಾಯ ಬರುತ್ತಿರುವ ಕಂಪನಿಯನ್ನು ಖಾಸಗಿಯವರಿಗೆ ಕೊಟ್ಟ ನಂತರ 200ರೂ ಆದಾಯ ಬಂದರೆ ಅದರಿಂದ ಸರ್ಕಾರಕ್ಕೆ ಸಿಗುವುದು ಕೇವಲ 100 ರೂ ಮಾತ್ರ ತಾನೇ? ಇನ್ನುಳಿದ 100 ರೂ ಖಾಸಗಿ ಕಂಪನಿ ಪಾಲಾಗುತ್ತದೆ. ನಂತರ ಖಾಸಗಿ ಕಂಪನಿಗಳು ಏಕಸ್ವಾಮ್ಯ ಸ್ಥಾಪಿಸಿ ದಿಢೀರ್ ಬೆಲೆ ಹೆಚ್ಚಳ ಮಾಡುತ್ತವೆ. ಸರ್ಕಾರ ಗುತ್ತಿಗೆ ನೀಡುತ್ತಿರುವ ಸಂಸ್ಥೆಗಳೆಲ್ಲವೂ ಅಗತ್ಯ ಸೇವೆಗಳಾಗ ಕಾರಣ ಸಾರ್ವಜನಿಕರು ದುಬಾರಿ ಬೆಲೆ ತೆರಲೇಬೇಕಾಗುತ್ತದೆ. ಈಗ ಹೇಳಿ ಇದು ಅಗತ್ಯವೇ?

ಈಗಿನ ಕೇಂದ್ರ ಸರ್ಕಾರಕ್ಕೆ ಯಾವ ಸಂಸ್ಥೆಯನ್ನು ಸಹ ಸಮರ್ಪಕವಾಗಿ ನಿರ್ವಹಿಸಲು ಬರುತ್ತಿಲ್ಲ. ಶಿಕ್ಷಣ, ಆರೋಗ್ಯ, ರಕ್ಷಣೆ, ಆರ್ಥಿಕತೆ ನೀವು ಯಾವುದೇ ವಿಷಯ ತೆಗೆದುಕೊಂಡರು ಅತ್ಯಂತ ಅದಕ್ಷ, ಅಸಮರ್ಥ ಸರ್ಕಾರ ಇದಾಗಿದೆ. ತಮ್ಮ ಅದಕ್ಷತೆ, ಅನನುಭವವನ್ನು ಮುಚ್ಚಿಕೊಳ್ಳಲು ಈ ಸರ್ಕಾರ ಅಹಂಕಾರ ತೋರಿಸುತ್ತಿದ್ದಾರೆ. ಇವರಿಗೆ ಮೇಲ್ಜಾತಿ ಮತ್ತು ಮೇಲ್ವರ್ಗದ ಭಾರೀ ಬೆಂಬಲ ಬಿಟ್ಟರೆ ನಮ್ಮ ದೇಶದ ಆಡಳಿತ ನಡೆಸಲು ಯಾವುದೇ ಯೋಗ್ಯತೆಯಿಲ್ಲ.

ತಾವು ನೈಜ ದಾರಿಯಲ್ಲಿ ನಡೆದು ಅಧಿಕಾರಕ್ಕೆ ಬಂದಿಲ್ಲ ಎಂಬುದು ಅವರಿಗೆ ಚೆನ್ನಾಗಿ ಗೊತ್ತಿದೆ. ಆದುದರಿಂದಲೇ, ಉತ್ತಮ ಆಡಳಿತ ನಡೆಸಲು ಬರದೆ ಕೇವಲ ಸುಳ್ಳು, ಅಹಂಕಾರ, ಜಾಹೀರಾತುಗಳು, ಅಂಕಿ ಅಂಶಗಳ ತಿರುಚುವಿಕೆ, ಜನರನ್ನು ಧರ್ಮದ ಹೆಸರಿನಲ್ಲಿ ಎತ್ತಿಕಟ್ಟಿ ಅಧಿಕಾರ ನಡೆಸುತ್ತಿದ್ದಾರೆ. ಮಂದಿರ, ಮಸೀದಿ, ದನದ ಮಾಂಸ, ಲವ್ ಜಿಹಾದ್ ಇಂತದ್ದು ಮಾಡುವುದರಲ್ಲಿ ಪ್ರವೀಣರೇ ಹೊರತು ಉತ್ತಮ ಆಡಳಿತ ನಡೆಸಿದ ಅನುಭವ ಅವರಿಗಿಲ್ಲ. ಅದಕ್ಕಾಗಿ ಪ್ರಶ್ನಿಸಿದವರನ್ನೆಲ್ಲ ದೇಶದ್ರೋಹಿಗಳು ಎನ್ನುತ್ತಾರೆ. ಒಟ್ಟಿನಲ್ಲಿ ಇಡೀ ಆಡಳಿತ ವ್ಯವಸ್ಥೆಯನ್ನೇ ಇವರು ಕೊಳೆಸಿಬಿಟ್ಟಿದ್ದಾರೆ.

ಶಿಕ್ಷಣ, ಆರೋಗ್ಯವನ್ನು ಮುಂದುವರಿದ ದೇಶಗಳು ಮೂಲಭೂತ ಹಕ್ಕಾಗಿಸಿವೆ. ಇದನ್ನು ಬಿಟ್ಟು ಸಂಪೂರ್ಣ ಖಾಸಗಿಯವರಿಗೆ ವಹಿಸಿದ ಯಾವ ದೇಶವೂ ಉದ್ದಾರವಾಗಿಲ್ಲ ಎಂಬುದನ್ನು ನಾವು ಮರೆಯಬಾರದು. ಅಮೆರಿಕಾದಂತಹ ದೇಶದಲ್ಲಿ ಜನರು ಆರೋಗ್ಯದ ಮೇಲೆ ತಮ್ಮ ಆದಾಯದ ಶೇ.10ರಷ್ಟನ್ನು ಮಾತ್ರ ಖರ್ಚು ಮಾಡಿದರೆ ನಮ್ಮ ಭಾರತದಲ್ಲಿ ಶೇ.65ರಷ್ಟನ್ನು ಖರ್ಚು ಮಾಡಬೇಕಾದ ದುಸ್ಥಿತಿ ಎದುರಾಗಿದೆ. ಇದಕ್ಕೆ ಖಾಸಗೀಕರಣವೇ ನೇರ ಕಾರಣ. ಇದು ಗೊತ್ತಿದ್ದರೂ ಸರ್ಕಾರ ತಮ್ಮ ಬಂಡವಾಳಶಾಹಿ ಸ್ನೇಹಿತರಿಗೆ ಮತ್ತು ಪಕ್ಷಕ್ಕೆ ದೇಣಿಗೆ ನೀಡುವವರಿಗೆ ಸಹಾಯ ಮಾಡಲು ಈ ರೀತಿಯ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ.

ಒಂದು ವೇಳೆ ಸರ್ಕಾರಕ್ಕೆ ಈ ಸಂಸ್ಥೆಗಳ ನಿರ್ವಹಣೆ ಅತಿ ಕಷ್ಟವಾದರೆ ಅಲ್ಲಿನ ಉದ್ಯೋಗಿಗಳಿಗೆ, ಕಾರ್ಮಿಕ ಸಂಘಗಳಿಗೆ ನಡೆಸಲು ಬಿಡಬಹುದಲ್ಲವೇ? ಅನುಭವವಿರುವ ಅವರು ನಡೆಸಿ ಲಾಭ ತಂದು ಸರ್ಕಾರದ ಬೊಕ್ಕಸ ತುಂಬಿಸುತ್ತಾರೆ. ಅದು ಬಿಟ್ಟು ಬಂಡವಾಳಶಾಹಿಗಳಿಗೆ ಏಕೆ ಕೊಡಬೇಕು? ಖಾಸಗಿಯವರು ಉತ್ಪಾದನಾ ವೆಚ್ಚ ಕಡಿತದ ಹೆಸರಿನಲ್ಲಿ ಮೊದಲು ಮಾಡುವುದು ಅಲ್ಲಿನ ಉದ್ಯೋಗಿಗಳ, ಕಾರ್ಮಿಕರ ಕಡಿತ ಅಲ್ಲವೇ? ಈಗಾಗಲೇ ನಿರುದ್ಯೋಗ ತಾಂಡವವಾಡುತ್ತಿರುವಾಗ ಇನ್ನಷ್ಟು ನಿರುದ್ಯೋಗಿಗಳನ್ನು ಪಡೆಯಬೇಕೆ?

ಡಾ. ಎಂ ಚಂದ್ರ ಪೂಜಾರಿ, ವಿಶ್ರಾಂತ ಅರ್ಥಶಾಸ್ತ್ರ ಪ್ರಾಧ್ಯಾಪಕರು, ಹಂಪಿ ವಿವಿ

NMP ಎಂಬುದು ಸಂವಿಧಾನ ವಿರೋಧಿ ಕ್ರಮವಾಗಿದೆ

NMP ಎಂಬುದನ್ನು ರೂಪಿಸಿರುವ ಒಕ್ಕೂಟ ಸರ್ಕಾರದ ಹಣಕಾಸು ಸಚಿವರು ಮತ್ತು ಇಲಾಖೆಯ ಅಧಿಕಾರಿಗಳನ್ನು ’ಸಾರ್ವಜನಿಕ ಹಣಕಾಸು ಅನಕ್ಷರಸ್ಥರು’ ಎಂದು ಕರೆಯುತ್ತೇನೆ. ಸರ್ಕಾರವೊಂದು ಮರ್ಯಾದೆಯಿಂದ, ಗೌರವದಿಂದ ಆರ್ಥಿಕತೆಯನ್ನು ನಿರ್ವಹಿಸಬೇಕಾದರೆ ಅದು ತೆರಿಗೆಗಳಿಂದ ಮತ್ತು ಸಾಲಗಳಿಂದ ಸಂಪನ್ಮೂಲಗಳನ್ನು ಕ್ರೂಢೀಕರಿಸಿಕೊಳ್ಳಬೇಕು. ಯಾರೂ ಕೂಡ ರಾಷ್ಟ್ರೀಯ ಆಸ್ತಿಯನ್ನು ಮಾರಾಟ ಮಾಡಿ, ಗುತ್ತಿಗೆ ನೀಡಿ ಸಂಪನ್ಮೂಲ ಸಂಗ್ರಹಿಸಿಕೊಳ್ಳುವುದಿಲ್ಲ.

NMP ಎಂಬುದು ಸಂವಿಧಾನ ವಿರೋಧಿ ಕ್ರಮವಾಗಿದೆ. ಏಕೆಂದರೆ ಇದರಲ್ಲಿ ಸಂಗ್ರಹವಾಗುವ ಹಣವನ್ನು ರಾಜ್ಯಗಳ ಜೊತೆ ಹಂಚಿಕೊಳ್ಳುವುದಿಲ್ಲ. ಒಕ್ಕೂಟ ಸರ್ಕಾರದಿಂದ ಹಣದೋಚುವ ಕಾರ್ಯಕ್ರಮ ಇದಾಗಿದೆ. ಇದು ಪ್ರಸ್ತುತ ಒಕ್ಕೂಟ ಸರ್ಕಾರದ ಖಾಸಗೀಕರಣ ಮತ್ತು ಕಾರ್ಪೊರೆಟೀಕರಣದ ಆರಾಧನೆಯ ಕ್ರಮವಾಗಿದೆ.

ಡಾ.ಟಿ.ಆರ್ ಚಂದ್ರಶೇಖರ್, ವಿಶ್ರಾಂತ ಅರ್ಥಶಾಸ್ತ್ರ ಪ್ರಾಧ್ಯಾಪಕರು, ಹಂಪಿ ವಿವಿ.


ಇದನ್ನೂ ಓದಿ: ಭಾರತ ಮಾರಾಟಕ್ಕಿದೆ: ಸಾರ್ವಜನಿಕ ಸಂಸ್ಥೆಗಳ ಖಾಸಗೀಕರಣದ ಕುರಿತು ಗಮನ ಸೆಳೆದ ಕಾರ್ಟೂನ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...