Homeಕರ್ನಾಟಕಮೈತ್ರಿಗಾಗಿ ರಾಷ್ಟ್ರೀಯ ಪಕ್ಷದ ದೂತರು ನನ್ನ ಬಳಿ ಬಂದಿದ್ದರು: ಎಚ್‌ಡಿ ದೇವೇಗೌಡರ ಹೇಳಿಕೆ

ಮೈತ್ರಿಗಾಗಿ ರಾಷ್ಟ್ರೀಯ ಪಕ್ಷದ ದೂತರು ನನ್ನ ಬಳಿ ಬಂದಿದ್ದರು: ಎಚ್‌ಡಿ ದೇವೇಗೌಡರ ಹೇಳಿಕೆ

- Advertisement -
- Advertisement -

”ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಮಾತನಾಡಿದ್ದಾರೆ. ಜೆಡಿಎಸ್‌ಗೆ ವೋಟ್ ಹಾಕಿದ್ರೂ ಬಿಜೆಪಿಗೆ ವೋಟ್ ಹಾಕಿದಂತೆ” ಎಂದು ಹಾಸನ ಬಿಜೆಪಿ ಶಾಸಕ ಪ್ರೀತಂಗೌಡ ಅವರು ಹೇಳಿಕೆ ನೀಡಿದ್ದರು, ಈ ಬೆನ್ನಲ್ಲೇ ಇದೀಗ ಜೆಡಿಎಸ್ ರಾಷ್ಟೀಯ ಅಧ್ಯಕ್ಷ ಎಚ್‌ಡಿ ದೇವೇಗೌಡ ಅವರು ಪ್ರತಿಕ್ರಿಯಿಸಿದ್ದಾರೆ.

”ಚುನಾವಣೋತ್ತರ ಮೈತ್ರಿಗಾಗಿ ರಾಷ್ಟ್ರೀಯ ಪಕ್ಷಗಳ ದೂತರು ನನ್ನ ಬಳಿಯೇ ಬಂದಿದ್ದರು. ಅವರನ್ನು ಎಚ್‌.ಡಿ. ಕುಮಾರಸ್ವಾಮಿ ಬಳಿ ಕಳಿಸಿದ್ದೇನೆ” ಎಂದು ಶನಿವಾರ ಪ್ರಜಾವಾಣಿ ನಡೆಸಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಇದಕ್ಕೂ ಮುನ್ನ ಕುಮಾರಸ್ವಾಮಿ ಅವರು ಬಿಜೆಪಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ಧೂತರು ಈಗಾಗಲೇ ನನ್ನ ಜೊತೆಗೆ ಸಂಪರ್ಕದಲ್ಲಿ ಇದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಈ ಮೂಲಕ ಅತಂತ್ರ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಯ ಬಗ್ಗೆ ಭವಿಷ್ಯ ನುಡಿದಿದ್ದರು.

ಕುಮಾರಸ್ವಾಮಿ ಹೇಳಿಕೆಗೆ ಇದೀಗ ದೇವೆಗೌಡರು ಒಪ್ಪಿದ್ದು, ಹೌದು ”ಚುನಾವಣೋತ್ತರ ಮೈತ್ರಿಗಾಗಿ ರಾಷ್ಟ್ರೀಯ ಪಕ್ಷಗಳ ದೂತರು ನನ್ನ ಬಳಿಯೇ ಬಂದಿದ್ದರು. ಅವರನ್ನು ಎಚ್‌.ಡಿ. ಕುಮಾರಸ್ವಾಮಿ ಬಳಿ ಕಳಿಸಿದ್ದೇನೆ” ಎಂದು ಹೇಳಿದ್ದಾರೆ.

”ನನಗೆ ವಯಸ್ಸಾಗಿರುವ ಕಾರಣದಿಂದ ಆ ಹೊಣೆಗಾರಿಕೆ ಹೊರುವುದು ಕಷ್ಟ. ಆ ಜವಾಬ್ದಾರಿಯನ್ನು ಕುಮಾರಸ್ವಾಮಿ ಅವರಿಗೆ ನೀಡಿರುವೆ. ಕೆ. ಚಂದ್ರಶೇಖರ್ ರಾವ್‌, ಮಮತಾ ಬ್ಯಾನರ್ಜಿ ಸೇರಿದಂತೆ ಅನೇಕರು ಈ ವಿಚಾರದಲ್ಲಿ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ” ಎಂದು ದೇವೇಗೌಡ ಅವರು ತಿಳಿಸಿದರು.

ಮೈತ್ರಿಗಾಗಿ ಯಾರೆಲ್ಲ ಪ್ರಯತ್ನಿಸಿದರು ಎನ್ನುವುದನ್ನು ಅವರು ಬಿಟ್ಟುಕೊಟ್ಟಿಲ್ಲ. ಆದರೆ ಜೆಡಿಎಸ್ ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬರುತ್ತದೆ ಎಂದು ಪದೇ ಪದೇ ಒತ್ತಿ ಹೇಳಿದರು.

ಇದನ್ನೂ ಓದಿ: ಬಿಜೆಪಿ ಬಹುಮತ ಪಡೆಯುವುದಿಲ್ಲ ಎಂಬುದನ್ನು ಧ್ವನಿಸಿತೇ ಪ್ರೀತಂಗೌಡರ ಭಾಷಣ?

ಹಾಸನದ ಶಾಸಕ ಪ್ರೀತಂ ಗೌಡ ಅವರು ಜೆಡಿಎಸ್‌ನೊಂದಿಗಿನ ಮಾತುಕತೆ ಬಗ್ಗೆ ಎರಡು ದಿನಗಳ ಹಿಂದಷ್ಟೇ ಬಹಿರಂಗವಾಗಿ ಹೇಳಿಕೆ ನೀಡಿದ್ದರು.

ಪ್ರೀತಂ ಗೌಡ ಹೇಳಿದ್ದೇನು?

ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಮಾತನಾಡಿದ್ದಾರೆ. ಜೆಡಿಎಸ್‌ಗೆ ವೋಟ್ ಹಾಕಿದ್ರೂ ಬಿಜೆಪಿಗೆ ವೋಟ್ ಹಾಕಿದಂತೆ” ಎಂದು ಪ್ರೀತಂಗೌಡ ಅವರು ಹೇಳಿಕೆ ನೀಡಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಮಾತನಾಡಿರುವ ಅವರು, ”ನಿಮಗೆ ಅರ್ಥವಾಗಲಿ ಎಂದು ಬಿಡಿಸಿ, ಬಿಡಿಸಿ ಹೇಳುತ್ತಿದ್ದೇನೆ. ಜನತಾ ದಳಕ್ಕೆ ವೋಟ್ ಹಾಕಿದ್ರೂ ಬಿಜೆಪಿಗೆ ವೋಟ್ ಹಾಕಿದಂತೆ ಲೆಕ್ಕ. ದೇವೇಗೌಡ್ರು- ಮೋದಿ ಸಾಹೇಬ್ರು ಮಾತನಾಡಿಕೊಂಡಿದ್ದಾರೆ. ಯಾಕೆಂದರೆ ಅವರಿಗೆ ಬರೋದು 20-25 ಸೀಟ್‌. ನೀವು ಬೆಂಗಳೂರಿಗೆ ಹೋಗಬೇಕೆಂದರೆ ಮೈಸೂರು ಮೇಲೆ ಬೆಂಗಳೂರಿಗೆ ಹೋಗಬೇಡಿ. ಹಾಸನದಿಂದ ಬೆಳ್ಳೂರು ಕ್ರಾಸ್ ಮಾರ್ಗದಲ್ಲಿ ಹೋಗಿ ಅಂತ ಮಾತ್ರ ಹೇಳ್ತೀನಿ. ಮೈಸೂರಿಗೆ ಹೋಗಿ, ಬೆಂಗಳೂರಿಗೆ ಹೋಗ್ತೀನಿ ಅಂದ್ರೆ ನಿಮ್ಮಿಷ್ಟ. ಎಲ್ಲ ನದಿ ನೀರು ಹರಿಯೋದು ಸಮುದ್ರಕ್ಕೇನೆ. ನೀವು ಅವರಿಗೆ ವೋಟ್ ಹಾಕಿದ್ರೂ ಮತ್ತೆ ನಮ್ಮ ಹತ್ತಿರಕ್ಕೆ ಬರಬೇಕು. ಯೋಚನೆ ಮಾಡಿ” ಎಂದು ಮತದಾರರಿಗೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...