Homeಕರ್ನಾಟಕಮೈತ್ರಿಗಾಗಿ ರಾಷ್ಟ್ರೀಯ ಪಕ್ಷದ ದೂತರು ನನ್ನ ಬಳಿ ಬಂದಿದ್ದರು: ಎಚ್‌ಡಿ ದೇವೇಗೌಡರ ಹೇಳಿಕೆ

ಮೈತ್ರಿಗಾಗಿ ರಾಷ್ಟ್ರೀಯ ಪಕ್ಷದ ದೂತರು ನನ್ನ ಬಳಿ ಬಂದಿದ್ದರು: ಎಚ್‌ಡಿ ದೇವೇಗೌಡರ ಹೇಳಿಕೆ

- Advertisement -
- Advertisement -

”ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಮಾತನಾಡಿದ್ದಾರೆ. ಜೆಡಿಎಸ್‌ಗೆ ವೋಟ್ ಹಾಕಿದ್ರೂ ಬಿಜೆಪಿಗೆ ವೋಟ್ ಹಾಕಿದಂತೆ” ಎಂದು ಹಾಸನ ಬಿಜೆಪಿ ಶಾಸಕ ಪ್ರೀತಂಗೌಡ ಅವರು ಹೇಳಿಕೆ ನೀಡಿದ್ದರು, ಈ ಬೆನ್ನಲ್ಲೇ ಇದೀಗ ಜೆಡಿಎಸ್ ರಾಷ್ಟೀಯ ಅಧ್ಯಕ್ಷ ಎಚ್‌ಡಿ ದೇವೇಗೌಡ ಅವರು ಪ್ರತಿಕ್ರಿಯಿಸಿದ್ದಾರೆ.

”ಚುನಾವಣೋತ್ತರ ಮೈತ್ರಿಗಾಗಿ ರಾಷ್ಟ್ರೀಯ ಪಕ್ಷಗಳ ದೂತರು ನನ್ನ ಬಳಿಯೇ ಬಂದಿದ್ದರು. ಅವರನ್ನು ಎಚ್‌.ಡಿ. ಕುಮಾರಸ್ವಾಮಿ ಬಳಿ ಕಳಿಸಿದ್ದೇನೆ” ಎಂದು ಶನಿವಾರ ಪ್ರಜಾವಾಣಿ ನಡೆಸಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಇದಕ್ಕೂ ಮುನ್ನ ಕುಮಾರಸ್ವಾಮಿ ಅವರು ಬಿಜೆಪಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ಧೂತರು ಈಗಾಗಲೇ ನನ್ನ ಜೊತೆಗೆ ಸಂಪರ್ಕದಲ್ಲಿ ಇದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಈ ಮೂಲಕ ಅತಂತ್ರ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಯ ಬಗ್ಗೆ ಭವಿಷ್ಯ ನುಡಿದಿದ್ದರು.

ಕುಮಾರಸ್ವಾಮಿ ಹೇಳಿಕೆಗೆ ಇದೀಗ ದೇವೆಗೌಡರು ಒಪ್ಪಿದ್ದು, ಹೌದು ”ಚುನಾವಣೋತ್ತರ ಮೈತ್ರಿಗಾಗಿ ರಾಷ್ಟ್ರೀಯ ಪಕ್ಷಗಳ ದೂತರು ನನ್ನ ಬಳಿಯೇ ಬಂದಿದ್ದರು. ಅವರನ್ನು ಎಚ್‌.ಡಿ. ಕುಮಾರಸ್ವಾಮಿ ಬಳಿ ಕಳಿಸಿದ್ದೇನೆ” ಎಂದು ಹೇಳಿದ್ದಾರೆ.

”ನನಗೆ ವಯಸ್ಸಾಗಿರುವ ಕಾರಣದಿಂದ ಆ ಹೊಣೆಗಾರಿಕೆ ಹೊರುವುದು ಕಷ್ಟ. ಆ ಜವಾಬ್ದಾರಿಯನ್ನು ಕುಮಾರಸ್ವಾಮಿ ಅವರಿಗೆ ನೀಡಿರುವೆ. ಕೆ. ಚಂದ್ರಶೇಖರ್ ರಾವ್‌, ಮಮತಾ ಬ್ಯಾನರ್ಜಿ ಸೇರಿದಂತೆ ಅನೇಕರು ಈ ವಿಚಾರದಲ್ಲಿ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ” ಎಂದು ದೇವೇಗೌಡ ಅವರು ತಿಳಿಸಿದರು.

ಮೈತ್ರಿಗಾಗಿ ಯಾರೆಲ್ಲ ಪ್ರಯತ್ನಿಸಿದರು ಎನ್ನುವುದನ್ನು ಅವರು ಬಿಟ್ಟುಕೊಟ್ಟಿಲ್ಲ. ಆದರೆ ಜೆಡಿಎಸ್ ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬರುತ್ತದೆ ಎಂದು ಪದೇ ಪದೇ ಒತ್ತಿ ಹೇಳಿದರು.

ಇದನ್ನೂ ಓದಿ: ಬಿಜೆಪಿ ಬಹುಮತ ಪಡೆಯುವುದಿಲ್ಲ ಎಂಬುದನ್ನು ಧ್ವನಿಸಿತೇ ಪ್ರೀತಂಗೌಡರ ಭಾಷಣ?

ಹಾಸನದ ಶಾಸಕ ಪ್ರೀತಂ ಗೌಡ ಅವರು ಜೆಡಿಎಸ್‌ನೊಂದಿಗಿನ ಮಾತುಕತೆ ಬಗ್ಗೆ ಎರಡು ದಿನಗಳ ಹಿಂದಷ್ಟೇ ಬಹಿರಂಗವಾಗಿ ಹೇಳಿಕೆ ನೀಡಿದ್ದರು.

ಪ್ರೀತಂ ಗೌಡ ಹೇಳಿದ್ದೇನು?

ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಮಾತನಾಡಿದ್ದಾರೆ. ಜೆಡಿಎಸ್‌ಗೆ ವೋಟ್ ಹಾಕಿದ್ರೂ ಬಿಜೆಪಿಗೆ ವೋಟ್ ಹಾಕಿದಂತೆ” ಎಂದು ಪ್ರೀತಂಗೌಡ ಅವರು ಹೇಳಿಕೆ ನೀಡಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಮಾತನಾಡಿರುವ ಅವರು, ”ನಿಮಗೆ ಅರ್ಥವಾಗಲಿ ಎಂದು ಬಿಡಿಸಿ, ಬಿಡಿಸಿ ಹೇಳುತ್ತಿದ್ದೇನೆ. ಜನತಾ ದಳಕ್ಕೆ ವೋಟ್ ಹಾಕಿದ್ರೂ ಬಿಜೆಪಿಗೆ ವೋಟ್ ಹಾಕಿದಂತೆ ಲೆಕ್ಕ. ದೇವೇಗೌಡ್ರು- ಮೋದಿ ಸಾಹೇಬ್ರು ಮಾತನಾಡಿಕೊಂಡಿದ್ದಾರೆ. ಯಾಕೆಂದರೆ ಅವರಿಗೆ ಬರೋದು 20-25 ಸೀಟ್‌. ನೀವು ಬೆಂಗಳೂರಿಗೆ ಹೋಗಬೇಕೆಂದರೆ ಮೈಸೂರು ಮೇಲೆ ಬೆಂಗಳೂರಿಗೆ ಹೋಗಬೇಡಿ. ಹಾಸನದಿಂದ ಬೆಳ್ಳೂರು ಕ್ರಾಸ್ ಮಾರ್ಗದಲ್ಲಿ ಹೋಗಿ ಅಂತ ಮಾತ್ರ ಹೇಳ್ತೀನಿ. ಮೈಸೂರಿಗೆ ಹೋಗಿ, ಬೆಂಗಳೂರಿಗೆ ಹೋಗ್ತೀನಿ ಅಂದ್ರೆ ನಿಮ್ಮಿಷ್ಟ. ಎಲ್ಲ ನದಿ ನೀರು ಹರಿಯೋದು ಸಮುದ್ರಕ್ಕೇನೆ. ನೀವು ಅವರಿಗೆ ವೋಟ್ ಹಾಕಿದ್ರೂ ಮತ್ತೆ ನಮ್ಮ ಹತ್ತಿರಕ್ಕೆ ಬರಬೇಕು. ಯೋಚನೆ ಮಾಡಿ” ಎಂದು ಮತದಾರರಿಗೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...