Homeಕರ್ನಾಟಕಮೈತ್ರಿಗಾಗಿ ರಾಷ್ಟ್ರೀಯ ಪಕ್ಷದ ದೂತರು ನನ್ನ ಬಳಿ ಬಂದಿದ್ದರು: ಎಚ್‌ಡಿ ದೇವೇಗೌಡರ ಹೇಳಿಕೆ

ಮೈತ್ರಿಗಾಗಿ ರಾಷ್ಟ್ರೀಯ ಪಕ್ಷದ ದೂತರು ನನ್ನ ಬಳಿ ಬಂದಿದ್ದರು: ಎಚ್‌ಡಿ ದೇವೇಗೌಡರ ಹೇಳಿಕೆ

- Advertisement -
- Advertisement -

”ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಮಾತನಾಡಿದ್ದಾರೆ. ಜೆಡಿಎಸ್‌ಗೆ ವೋಟ್ ಹಾಕಿದ್ರೂ ಬಿಜೆಪಿಗೆ ವೋಟ್ ಹಾಕಿದಂತೆ” ಎಂದು ಹಾಸನ ಬಿಜೆಪಿ ಶಾಸಕ ಪ್ರೀತಂಗೌಡ ಅವರು ಹೇಳಿಕೆ ನೀಡಿದ್ದರು, ಈ ಬೆನ್ನಲ್ಲೇ ಇದೀಗ ಜೆಡಿಎಸ್ ರಾಷ್ಟೀಯ ಅಧ್ಯಕ್ಷ ಎಚ್‌ಡಿ ದೇವೇಗೌಡ ಅವರು ಪ್ರತಿಕ್ರಿಯಿಸಿದ್ದಾರೆ.

”ಚುನಾವಣೋತ್ತರ ಮೈತ್ರಿಗಾಗಿ ರಾಷ್ಟ್ರೀಯ ಪಕ್ಷಗಳ ದೂತರು ನನ್ನ ಬಳಿಯೇ ಬಂದಿದ್ದರು. ಅವರನ್ನು ಎಚ್‌.ಡಿ. ಕುಮಾರಸ್ವಾಮಿ ಬಳಿ ಕಳಿಸಿದ್ದೇನೆ” ಎಂದು ಶನಿವಾರ ಪ್ರಜಾವಾಣಿ ನಡೆಸಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಇದಕ್ಕೂ ಮುನ್ನ ಕುಮಾರಸ್ವಾಮಿ ಅವರು ಬಿಜೆಪಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ಧೂತರು ಈಗಾಗಲೇ ನನ್ನ ಜೊತೆಗೆ ಸಂಪರ್ಕದಲ್ಲಿ ಇದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಈ ಮೂಲಕ ಅತಂತ್ರ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಯ ಬಗ್ಗೆ ಭವಿಷ್ಯ ನುಡಿದಿದ್ದರು.

ಕುಮಾರಸ್ವಾಮಿ ಹೇಳಿಕೆಗೆ ಇದೀಗ ದೇವೆಗೌಡರು ಒಪ್ಪಿದ್ದು, ಹೌದು ”ಚುನಾವಣೋತ್ತರ ಮೈತ್ರಿಗಾಗಿ ರಾಷ್ಟ್ರೀಯ ಪಕ್ಷಗಳ ದೂತರು ನನ್ನ ಬಳಿಯೇ ಬಂದಿದ್ದರು. ಅವರನ್ನು ಎಚ್‌.ಡಿ. ಕುಮಾರಸ್ವಾಮಿ ಬಳಿ ಕಳಿಸಿದ್ದೇನೆ” ಎಂದು ಹೇಳಿದ್ದಾರೆ.

”ನನಗೆ ವಯಸ್ಸಾಗಿರುವ ಕಾರಣದಿಂದ ಆ ಹೊಣೆಗಾರಿಕೆ ಹೊರುವುದು ಕಷ್ಟ. ಆ ಜವಾಬ್ದಾರಿಯನ್ನು ಕುಮಾರಸ್ವಾಮಿ ಅವರಿಗೆ ನೀಡಿರುವೆ. ಕೆ. ಚಂದ್ರಶೇಖರ್ ರಾವ್‌, ಮಮತಾ ಬ್ಯಾನರ್ಜಿ ಸೇರಿದಂತೆ ಅನೇಕರು ಈ ವಿಚಾರದಲ್ಲಿ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ” ಎಂದು ದೇವೇಗೌಡ ಅವರು ತಿಳಿಸಿದರು.

ಮೈತ್ರಿಗಾಗಿ ಯಾರೆಲ್ಲ ಪ್ರಯತ್ನಿಸಿದರು ಎನ್ನುವುದನ್ನು ಅವರು ಬಿಟ್ಟುಕೊಟ್ಟಿಲ್ಲ. ಆದರೆ ಜೆಡಿಎಸ್ ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬರುತ್ತದೆ ಎಂದು ಪದೇ ಪದೇ ಒತ್ತಿ ಹೇಳಿದರು.

ಇದನ್ನೂ ಓದಿ: ಬಿಜೆಪಿ ಬಹುಮತ ಪಡೆಯುವುದಿಲ್ಲ ಎಂಬುದನ್ನು ಧ್ವನಿಸಿತೇ ಪ್ರೀತಂಗೌಡರ ಭಾಷಣ?

ಹಾಸನದ ಶಾಸಕ ಪ್ರೀತಂ ಗೌಡ ಅವರು ಜೆಡಿಎಸ್‌ನೊಂದಿಗಿನ ಮಾತುಕತೆ ಬಗ್ಗೆ ಎರಡು ದಿನಗಳ ಹಿಂದಷ್ಟೇ ಬಹಿರಂಗವಾಗಿ ಹೇಳಿಕೆ ನೀಡಿದ್ದರು.

ಪ್ರೀತಂ ಗೌಡ ಹೇಳಿದ್ದೇನು?

ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಮಾತನಾಡಿದ್ದಾರೆ. ಜೆಡಿಎಸ್‌ಗೆ ವೋಟ್ ಹಾಕಿದ್ರೂ ಬಿಜೆಪಿಗೆ ವೋಟ್ ಹಾಕಿದಂತೆ” ಎಂದು ಪ್ರೀತಂಗೌಡ ಅವರು ಹೇಳಿಕೆ ನೀಡಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಮಾತನಾಡಿರುವ ಅವರು, ”ನಿಮಗೆ ಅರ್ಥವಾಗಲಿ ಎಂದು ಬಿಡಿಸಿ, ಬಿಡಿಸಿ ಹೇಳುತ್ತಿದ್ದೇನೆ. ಜನತಾ ದಳಕ್ಕೆ ವೋಟ್ ಹಾಕಿದ್ರೂ ಬಿಜೆಪಿಗೆ ವೋಟ್ ಹಾಕಿದಂತೆ ಲೆಕ್ಕ. ದೇವೇಗೌಡ್ರು- ಮೋದಿ ಸಾಹೇಬ್ರು ಮಾತನಾಡಿಕೊಂಡಿದ್ದಾರೆ. ಯಾಕೆಂದರೆ ಅವರಿಗೆ ಬರೋದು 20-25 ಸೀಟ್‌. ನೀವು ಬೆಂಗಳೂರಿಗೆ ಹೋಗಬೇಕೆಂದರೆ ಮೈಸೂರು ಮೇಲೆ ಬೆಂಗಳೂರಿಗೆ ಹೋಗಬೇಡಿ. ಹಾಸನದಿಂದ ಬೆಳ್ಳೂರು ಕ್ರಾಸ್ ಮಾರ್ಗದಲ್ಲಿ ಹೋಗಿ ಅಂತ ಮಾತ್ರ ಹೇಳ್ತೀನಿ. ಮೈಸೂರಿಗೆ ಹೋಗಿ, ಬೆಂಗಳೂರಿಗೆ ಹೋಗ್ತೀನಿ ಅಂದ್ರೆ ನಿಮ್ಮಿಷ್ಟ. ಎಲ್ಲ ನದಿ ನೀರು ಹರಿಯೋದು ಸಮುದ್ರಕ್ಕೇನೆ. ನೀವು ಅವರಿಗೆ ವೋಟ್ ಹಾಕಿದ್ರೂ ಮತ್ತೆ ನಮ್ಮ ಹತ್ತಿರಕ್ಕೆ ಬರಬೇಕು. ಯೋಚನೆ ಮಾಡಿ” ಎಂದು ಮತದಾರರಿಗೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...