Homeಮುಖಪುಟಎಎಪಿಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ; ಸ್ಥಾನಮಾನ ಕಳೆದುಕೊಂಡ ಎನ್‌ಸಿಪಿ, ಟಿಎಂಸಿ, ಸಿಪಿಐ ಪಕ್ಷಗಳು

ಎಎಪಿಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ; ಸ್ಥಾನಮಾನ ಕಳೆದುಕೊಂಡ ಎನ್‌ಸಿಪಿ, ಟಿಎಂಸಿ, ಸಿಪಿಐ ಪಕ್ಷಗಳು

- Advertisement -
- Advertisement -

ಸೋಮವಾರ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಚುನಾವಣಾ ಆಯೋಗವು ರಾಷ್ಟ್ರೀಯ ಪಕ್ಷ ಎಂದು ಮಾನ್ಯತೆ ನೀಡಿದೆ. ಆದರೆ ತೃಣಮೂಲ ಕಾಂಗ್ರೆಸ್ (ಟಿಎಂಸಿ), ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ತಮ್ಮ ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಕಳೆದುಕೊಂಡಿವೆ.

ಚುನಾವಣಾ ಆಯೋಗವು, 2014 ಮತ್ತು 2019ರ ಲೋಕಸಭಾ ಚುನಾವಣೆಗಳು ಮತ್ತು 2014 ರಿಂದ 21 ರಾಜ್ಯ ವಿಧಾನಸಭಾ ಚುನಾವಣೆಗಳು – ಪಕ್ಷಗಳ ಸಮೀಕ್ಷೆಯ ಕಾರ್ಯಕ್ಷಮತೆಯ ವಿಮರ್ಶೆಯನ್ನು ಆಧರಿಸಿ ನಿರ್ಧಾರವನ್ನು ತಗೆದುಕೊಂಡಿದೆ. ಇತರ ಪ್ರಯೋಜನಗಳ ಜೊತೆಗೆ, ರಾಷ್ಟ್ರೀಯ ಪಕ್ಷದ ಸ್ಥಾನಮಾನವು ಪಕ್ಷದ ಚಿಹ್ನೆಯನ್ನು ಅದರ ಅಭ್ಯರ್ಥಿಗಳಿಗೆ ಕಾಯ್ದಿರಿಸಲಾಗುತ್ತದೆ.

ದೇಶವು ಈಗ ಆರು ರಾಷ್ಟ್ರೀಯ ಪಕ್ಷಗಳನ್ನು ಹೊಂದಿದೆ – ಬಿಜೆಪಿ, ಕಾಂಗ್ರೆಸ್, ಬಹುಜನ ಸಮಾಜ ಪಕ್ಷ (ಬಿಎಸ್ಪಿ), ಸಿಪಿಐ(ಎಂ), ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್ಪಿಪಿ) ಮತ್ತು ಎಎಪಿ.

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ: ”ಇಷ್ಟು ಕಡಿಮೆ ಸಮಯದಲ್ಲಿ ರಾಷ್ಟ್ರೀಯ ಪಕ್ಷವೇ? ಇದು ಪವಾಡಕ್ಕಿಂತ ಕಡಿಮೆಯೇನಲ್ಲ. ಎಲ್ಲರಿಗೂ ಅಭಿನಂದನೆಗಳು. ದೇಶದ ಕೋಟಿ ಕೋಟಿ ಜನ ನಮ್ಮನ್ನು ಇಲ್ಲಿಗೆ ಕರೆತಂದಿದ್ದಾರೆ. ಜನ ನಮ್ಮಿಂದ ಬಹಳಷ್ಟು ನಿರೀಕ್ಷಿಸುತ್ತಾರೆ. ಇಂದು, ಜನರು ನಮಗೆ ಈ ದೊಡ್ಡ ಜವಾಬ್ದಾರಿಯನ್ನು ನೀಡಿದ್ದಾರೆ. ಸ್ವಾಮಿ, ಈ ಜವಾಬ್ದಾರಿಯನ್ನು ಚೆನ್ನಾಗಿ ಪೂರೈಸಲು ನಮಗೆ ಅನುಗ್ರಹಿಸು” ಎಂದು ಹೇಳಿದ್ದಾರೆ.

ಚುನಾವಣಾ ಚಿಹ್ನೆಗಳು (ಮೀಸಲಾತಿ ಮತ್ತು ಹಂಚಿಕೆ) ಆದೇಶ, 1968 ರ ಅಡಿಯಲ್ಲಿ ರಾಷ್ಟ್ರೀಯ ಅಥವಾ ರಾಜ್ಯ ಪಕ್ಷವೆಂದು ಗುರುತಿಸುವ ಮಾನದಂಡವನ್ನು ನಿಗದಿಪಡಿಸುತ್ತದೆ. ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಮಾನ್ಯತೆ ಪಡೆದು ರಾಜ್ಯ ಪಕ್ಷವಾಗಿದೆ. ಹಾಗಾಗಿ ರಾಷ್ಟ್ರೀಯ ಪಕ್ಷವಾಗಲು ಸಮರ್ಥವಾಗಿದೆ ಎಂದು ಚುನಾವಣಾ ಆಯೋಗ ಆದೇಶದಲ್ಲಿ ಹೇಳಿದೆ.

ಜನವರಿ 1, 2014 ರಿಂದ ಜಾರಿಗೆ ಬರುವಂತೆ ತಿದ್ದುಪಡಿ ಮಾಡಲಾದ ಆದೇಶದ ಪ್ಯಾರಾಗ್ರಾಫ್ 6C ಪ್ರಕಾರ, ಒಂದು ಪಕ್ಷವು “ಮುಂದಿನ ಚುನಾವಣೆಯಲ್ಲಿ” ಪ್ಯಾರಾಗ್ರಾಫ್ 6A ಮತ್ತು 6B ಯಲ್ಲಿ ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸಿದರೆ ಅದು ರಾಷ್ಟ್ರೀಯ ಅಥವಾ ರಾಜ್ಯ ಪಕ್ಷವಾಗಿ ಮುಂದುವರಿಯುತ್ತದೆ. ಆ ಮಾನದಂಡದಲ್ಲಿ ಎಎಪಿ “ಮನ್ನಣೆ ಪಡೆದಿದೆ”.

ಇತರ ಷರತ್ತುಗಳ ಜೊತೆಗೆ, ಪ್ಯಾರಾಗ್ರಾಫ್ 6A ಹೇಳುವಂತೆ ರಾಜ್ಯ ಪಕ್ಷವು ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಪಡೆದ ಮತಗಳಲ್ಲಿ ಕನಿಷ್ಠ 6% ಮತ್ತು ಕನಿಷ್ಠ ಇಬ್ಬರು ಶಾಸಕರನ್ನು ಪಡೆಯಬೇಕು; ಅಥವಾ ಕಳೆದ ಲೋಕಸಭಾ ಚುನಾವಣೆಯಲ್ಲಿ 6% ಮತ ಹಂಚಿಕೆ ಮತ್ತು ಆ ರಾಜ್ಯದಿಂದ ಒಬ್ಬ ಸಂಸದ; ಅಥವಾ ವಿಧಾನಸಭೆಯ ಒಟ್ಟು ಸ್ಥಾನಗಳ 3% ಅಥವಾ ಮೂರು ಸ್ಥಾನಗಳನ್ನು ಪಡೆಯಬೇಕು.

ಅದೇ ರೀತಿ, ಕಳೆದ ಲೋಕಸಭೆ ಅಥವಾ ಅಸೆಂಬ್ಲಿ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷವು ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಕನಿಷ್ಠ 6% ಮತಗಳನ್ನು ಪಡೆಯಬೇಕು ಮತ್ತು ಕನಿಷ್ಠ ನಾಲ್ಕು ಸಂಸದರನ್ನು ಹೊಂದಿರಬೇಕು ಎಂದು ಪ್ಯಾರಾಗ್ರಾಫ್ 6B ಹೇಳುತ್ತದೆ; ಅಥವಾ ಲೋಕಸಭೆಯಲ್ಲಿ ಕನಿಷ್ಠ 2% ಸ್ಥಾನಗಳು, ಅದರ ಅಭ್ಯರ್ಥಿಗಳು ಕನಿಷ್ಠ ಮೂರು ರಾಜ್ಯಗಳಿಂದ ಚುನಾಯಿತರಾಗಿರುತ್ತಾರೆ.

ದೆಹಲಿ, ಗೋವಾ ಮತ್ತು ಪಂಜಾಬ್ ಜೊತೆಗೆ, ಎಎಪಿ 2022ರ ಅಸೆಂಬ್ಲಿ ಚುನಾವಣೆಯ ನಂತರ ಗುಜರಾತ್‌ನಲ್ಲಿ ರಾಜ್ಯ ಪಕ್ಷವಾಯಿತು, ಅಲ್ಲಿ ಅದು 12.92% ಮತಗಳನ್ನು ಪಡೆದುಕೊಂಡಿತು.

ಟಿಎಂಸಿ: ಮಣಿಪುರ ಮತ್ತು ಅರುಣಾಚಲ ಪ್ರದೇಶದಲ್ಲಿ ಟಿಎಂಸಿ ರಾಜ್ಯ ಪಕ್ಷವಾಗುವುದನ್ನು ಕಳೆದುಕೊಂಡಿದೆ ಎಂದು ಚುನಾವಣಾ ಆಯೋಗ ಹೇಳಿದೆ, ಆದರೂ ಅದು ಪಶ್ಚಿಮ ಬಂಗಾಳ ಮತ್ತು ತ್ರಿಪುರದಲ್ಲಿ ರಾಜ್ಯ ಪಕ್ಷವಾಗಿ ಮುಂದುವರೆದಿದೆ ಮತ್ತು 2023ರ ಚುನಾವಣೆಯ ಆಧಾರದ ಮೇಲೆ ಮೇಘಾಲಯದಲ್ಲಿ ರಾಜ್ಯ ಪಕ್ಷದ ಸ್ಥಾನಮಾನವನ್ನು ನೀಡಲಾಗಿದೆ.

ಇದನ್ನೂ ಓದಿ: ”ಪ್ರಧಾನಿ ಪದವಿ ನಕಲಿಯೇ?”: ಮೋದಿ ಶೈಕ್ಷಣಿಕ ದಾಖಲೆ ಕುರಿತು ಮತ್ತೆ ಪ್ರಶ್ನಿಸಿದ ಕೇಜ್ರಿವಾಲ್

2019ರ ಲೋಕಸಭಾ ಚುನಾವಣೆಯಲ್ಲಿ ಅರುಣಾಚಲ ಪ್ರದೇಶ ಮತ್ತು ಮಣಿಪುರದಿಂದ ಟಿಎಂಸಿ ಸ್ಪರ್ಧಿಸಿಲ್ಲ ಮತ್ತು ತ್ರಿಪುರಾ ಮತ್ತು ಪಶ್ಚಿಮ ಬಂಗಾಳದಲ್ಲಿ ಕ್ರಮವಾಗಿ 0.40% ಮತ್ತು 43.28% ಮತಗಳನ್ನು ಪಡೆದಿದೆ ಎಂದು ಚುನಾವಣಾ ಆಯೋಗ ಹೇಳಿದೆ. 2016ರಿಂದ 2018 ರ ವಿಧಾನಸಭಾ ಚುನಾವಣೆಯಲ್ಲಿ, ಪಕ್ಷದ ಮತ ಹಂಚಿಕೆಯು ಪಶ್ಚಿಮ ಬಂಗಾಳದಲ್ಲಿ 44.91%, ಮಣಿಪುರದಲ್ಲಿ 1.41% ಮತ್ತು ತ್ರಿಪುರಾದಲ್ಲಿ 0.30% ಆಗಿತ್ತು. ಇತ್ತೀಚಿನ ಸಮೀಕ್ಷೆಗಳಲ್ಲಿ, ಪಕ್ಷವು ಪಶ್ಚಿಮ ಬಂಗಾಳದಲ್ಲಿ (2021) 48.02% ಮತಗಳನ್ನು ಪಡೆದುಕೊಂಡಿತು ಮತ್ತು ಮಣಿಪುರದಲ್ಲಿ (2022) ಸ್ಪರ್ಧಿಸಲಿಲ್ಲ ಎಂದು ವಿವರಿಸಿದೆ.

ಹೆಸರು ಹೇಳಲಿಚ್ಛಿಸದ ಟಿಎಂಸಿಯ ಹಿರಿಯ ನಾಯಕರೊಬ್ಬರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ”ನಾವು ಈ ನಿರ್ಧಾರವನ್ನು ಕಾನೂನಿನ ಮೂಲಕ ಪ್ರಶ್ನಿಸುತ್ತೇವೆ” ಎಂದು ಹೇಳಿದ್ದಾರೆ.

ಎನ್‌ಸಿಪಿ: 2017 ಮತ್ತು 2018ರ ನಡುವಿನ ವಿಧಾನಸಭಾ ಚುನಾವಣೆಯಲ್ಲಿ ಗೋವಾ, ಮಣಿಪುರ ಮತ್ತು ಮೇಘಾಲಯದಲ್ಲಿ ಎನ್‌ಸಿಪಿ ತನ್ನ ರಾಜ್ಯ ಪಕ್ಷದ ಸ್ಥಾನಮಾನವನ್ನು ಕಳೆದುಕೊಂಡಿತು, ಏಕೆಂದರೆ ಅದರ ಮತ ಹಂಚಿಕೆ ಅನುಕ್ರಮವಾಗಿ 2.28%, 0.95% ಮತ್ತು 1.61% ಆಗಿದೆ. ಮಹಾರಾಷ್ಟ್ರದಲ್ಲಿ ರಾಜ್ಯ ಪಕ್ಷವಾಗಿ ಉಳಿದಿದೆ. 2019ರ ಅಸೆಂಬ್ಲಿ ಚುನಾವಣೆಯಲ್ಲಿ 16.71% ಮತಗಳನ್ನು ಪಡೆದಿದೆ. ಈ ವರ್ಷದ ಆರಂಭದಲ್ಲಿ ನಡೆದ ವಿಧಾನಸಭಾ ಚುನಾವಣೆಯ ಆಧಾರದ ಮೇಲೆ ನಾಗಾಲ್ಯಾಂಡ್‌ನಲ್ಲಿ ಪಕ್ಷಕ್ಕೆ ರಾಜ್ಯ ಪಕ್ಷದ ಸ್ಥಾನಮಾನವನ್ನು ನೀಡಲಾಗಿದೆ.

ಈ ಬಗ್ಗೆ ಎನ್‌ಸಿಪಿ ವಕ್ತಾರು, ”ಆದೇಶವನ್ನು ಅಧ್ಯಯನ ಮಾಡಿದ ನಂತರ ನಾವು ಪ್ರತಿಕ್ರಿಯಿಸುತ್ತೇವೆ” ಎಂದು ಹೇಳಿದ್ದಾರೆ.

ಸಿಪಿಐ: ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ರಾಜ್ಯ ಪಕ್ಷವಾಗಿ ತನ್ನ ಸ್ಥಾನಮಾನವನ್ನು ಕಳೆದುಕೊಂಡಿದೆ, ಆದರೆ ಅದು ಕೇರಳ, ಮಣಿಪುರ ಮತ್ತು ತಮಿಳುನಾಡಿನಲ್ಲಿ ರಾಜ್ಯ ಪಕ್ಷವಾಗಿ ಉಳಿದಿದೆ. 2016 ರಿಂದ 2019 ರವರೆಗೆ ನಡೆದ ಅಸೆಂಬ್ಲಿ ಚುನಾವಣೆಯಲ್ಲಿ, ಪಕ್ಷದ ಮತ ಹಂಚಿಕೆಯು ತಮಿಳುನಾಡಿನಲ್ಲಿ 0.79% (ರಾಜ್ಯದಿಂದ ಇಬ್ಬರು ಸಂಸದರನ್ನು ಹೊಂದಿದೆ), ಪಶ್ಚಿಮ ಬಂಗಾಳದಲ್ಲಿ 1.45%, ಮಣಿಪುರದಲ್ಲಿ 0.74% (2019 ರ ಲೋಕಸಭೆ ಚುನಾವಣೆಯಲ್ಲಿ ಮತ ಹಂಚಿಕೆ 8.27%), ಮತ್ತು ಒಡಿಶಾದಲ್ಲಿ 0.12%.

”ಸಿಪಿಐ ಪಕ್ಷವು 1952ರಿಂದ ಪ್ರತಿ ಚುನಾವಣೆಯಲ್ಲಿ ಸ್ಪರ್ಧಿಸಿದೆ ಮತ್ತು ಸಂಸತ್ತಿನಲ್ಲಿ ಅಸ್ತಿತ್ವವನ್ನು ಉಳಿಸಿಕೊಂಡಿದೆ” ಎಂದು ಅದು ವಾದಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...