Homeಮುಖಪುಟವಿರೋಧದ ನಡುವೆಯೂ ಎನ್‌ಪಿಆರ್ ಪ್ರಶ್ನಾವಳಿ ಅಂತಿಮಗೊಳಿಸಲಾಗುತ್ತಿದೆ: ಮಾಹಿತಿ ನೀಡಿದ ಆರ್‌ಜಿಐ!

ವಿರೋಧದ ನಡುವೆಯೂ ಎನ್‌ಪಿಆರ್ ಪ್ರಶ್ನಾವಳಿ ಅಂತಿಮಗೊಳಿಸಲಾಗುತ್ತಿದೆ: ಮಾಹಿತಿ ನೀಡಿದ ಆರ್‌ಜಿಐ!

ಕಳೆದ ವರ್ಷ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ದೇಶಾದ್ಯಂತ ಬೃಹತ್ ಹೋರಾಟಗಳು ನಡೆದರೂ, ಸರ್ಕಾರ ಜಾರಿಗೊಳಿಸುವುದಾಗಿ ನಿಶ್ಚಯಿಸಿತ್ತು. ಆದರೆ ಕೊರೊನಾ ಅವೆಲ್ಲವೂಗಳಿಗೂ ವಿರಾಮ ನೀಡಿತ್ತು.

- Advertisement -
- Advertisement -

ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ (ಆರ್‌ಜಿಐ) ಕಚೇರಿಯು ರಾಷ್ಟ್ರೀಯ ಜನಸಂಖ್ಯಾ ನೋಂದಣಿಯ (ಎನ್‌ಪಿಆರ್) ವೇಳಾಪಟ್ಟಿ ಅಥವಾ ಪ್ರಶ್ನಾವಳಿಯನ್ನು ಅಂತಿಮಗೊಳಿಸಲಾಗುತ್ತಿದೆ ಎಂದು ಹೇಳಿದೆ. 2021 ರ ಜನಗಣತಿಯ ಮೊದಲ ಹಂತದ ನಿರೀಕ್ಷಿತ ದಿನಾಂಕದ ಬಗ್ಗೆ ಮಾಹಿತಿ ’ಲಭ್ಯವಿಲ್ಲ’ ಎಂದು ತಿಳಿಸಿದೆ.

ಜನಗಣತಿ 2021 ರ ಮೊದಲ ಹಂತದ ನಿರೀಕ್ಷಿತ ದಿನಾಂಕ ಮತ್ತು ಎನ್‌ಪಿಆರ್ ನವೀಕರಣದ ಬಗ್ಗೆ ಮಾಹಿತಿ ಕೋರಿ ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ದಿ ಹಿಂದೂ ಸಲ್ಲಿಸಿದ ಅರ್ಜಿಗೆ ಆರ್‌ಜಿಐ ಪ್ರತಿಕ್ರಿಯೆ ನೀಡಿದೆ. ಈ ಮೊದಲು 2020 ಏಪ್ರಿಲ್ 1ರಿಂದ ಜನಗಣತಿ ಪ್ರಾರಂಭವಾಗಬೇಕಿತ್ತು. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಮಾರ್ಚ್ 25 ರಂದು ಮುಂದಿನ ಆದೇಶದವರೆಗೆ ಅನಿರ್ದಿಷ್ಟವಾಗಿ ಮುಂದೂಡಲಾಗಿತ್ತು.

ಎನ್‌ಪಿಆರ್ ನವೀಕರಣ ಮತ್ತು ಮೊದಲ ಹಂತದ ಜನಗಣತಿಯ ಮನೆ ಪಟ್ಟಿ ಮತ್ತು ವಸತಿ ಗಣತಿಯನ್ನು ಏಪ್ರಿಲ್-ಸೆಪ್ಟೆಂಬರ್‌ನಿಂದ ಏಕಕಾಲದಲ್ಲಿ ನಡೆಸಬೇಕಾಗಿತ್ತು. ಆದರೆ, ಏಪ್ರಿಲ್ 1ರಂದು ಮೊದಲ ಹಂತದಲ್ಲಿ ಮೇಘಾಲಯ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ ಮತ್ತು ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಪ್ರದೇಶದಲ್ಲಿ ಗಣತಿ ನಡೆಯಬೇಕಿತ್ತು. ಆದರೂ ಹಿಂದೂ ಸಲ್ಲಿಸಿದ್ದ ಆರ್‌ಟಿಐಗೆ ನವೆಂಬರ್ 17 ರಂದು ಉತ್ತರಿಸಿರುವ ಆರ್‌ಜಿಐ ಇನ್ನೂ “ಎನ್‌ಪಿಆರ್ ವೇಳಾಪಟ್ಟಿ ಅಂತಿಮಗೊಳಿಸಲಾಗುತ್ತಿದೆ” ಎಂದು ಉತ್ತರಿಸಿದೆ.

ಇದನ್ನೂ ಓದಿ: ಜನಗಣತಿ ಮತ್ತು NPR ಪ್ರತ್ಯೇಕವಾಗಿರಲಿ: ಕೇಂದ್ರಕ್ಕೆ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳಿಂದ ಪತ್ರ

ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯಿಂದಾಗಿ ಎನ್‌ಪಿಆರ್ ನವೀಕರಣವನ್ನು 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿರೋಧಿಸಿವೆ. 2003ರಲ್ಲಿ ರೂಪಿಸಲಾದ ಪೌರತ್ವ ನಿಯಮಗಳ ಪ್ರಕಾರ, ಭಾರತೀಯ ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಐಸಿ) ಅಥವಾ ಎನ್‌ಆರ್‌ಸಿಗೆ ಎನ್‌ಪಿಆರ್ ಮೊದಲ ಹೆಜ್ಜೆಯಾಗಿದೆ.

2010ರಲ್ಲಿ ಎನ್‌ಪಿಆರ್ ಮೊದಲ ಬಾರಿಗೆ ಸಂಗ್ರಹಿಸಲಾಯಿತು, ನಂತರ 2015 ರಲ್ಲಿ ಎನ್‌ಪಿಆರ್ ನವೀಕರಿಸಲಾಯಿತು. ಪಶ್ಚಿಮ ಬಂಗಾಳ ಮತ್ತು ರಾಜಸ್ಥಾನದಂತಹ ಕೆಲವು ರಾಜ್ಯಗಳು ಹೊಸ ಎನ್‌ಪಿಆರ್‌ನಲ್ಲಿ ಕೇಳಲಾದ ಹೆಚ್ಚುವರಿ ಪ್ರಶ್ನೆಗಳಿಗೆ ಆಕ್ಷೇಪ ವ್ಯಕ್ತಪಡಿಸಿವೆ. ಉದಾಹರಣೆಗೆ “ತಂದೆ ಮತ್ತು ತಾಯಿಯ ಹುಟ್ಟಿದ ದಿನಾಂಕ ಮತ್ತು ಹುಟ್ಟಿದ ಸ್ಥಳ, ಕೊನೆಯ ವಾಸಸ್ಥಳ ಮತ್ತು ಮಾತೃಭಾಷೆ” ಈ ಪ್ರಶ್ನೆಗಳಿಗೆ ಹಲವು ರಾಜ್ಯಗಳು ಆಕ್ಷೇಪಿಸಿವೆ.

2019 ರಲ್ಲಿ, ಟ್ರಯಲ್ ಎನ್‌ಪಿಆರ್ ಫಾರ್ಮ್ 21 ಮಾನದಂಡಗಳಲ್ಲಿ 30 ಲಕ್ಷ ಜನರಿಂದ “ತಂದೆ ಮತ್ತು ತಾಯಿಯ ಹುಟ್ಟಿದ ಸ್ಥಳ, ಕೊನೆಯ ವಾಸಸ್ಥಳ” ಕುರಿತು ನಿರ್ದಿಷ್ಟ ವಿವರಗಳನ್ನು ಕೋರಿ ಆಧಾರ್ (ಐಚ್ಛಿಕ) , ಮತದಾರರ ಗುರುತಿನ ಚೀಟಿ, ಮೊಬೈಲ್ ಫೋನ್ ಮತ್ತು ಚಾಲನಾ ಪರವಾನಗಿ ಸಂಖ್ಯೆಗಳ ವಿವರಗಳನ್ನು ಸಂಗ್ರಹಿಸಿದೆ. 2010 ಮತ್ತು 2015 ರಲ್ಲಿ, ಎನ್‌ಪಿಆರ್ 14 ಮಾನದಂಡಗಳಲ್ಲಿ ವಿವರಗಳನ್ನು ಸಂಗ್ರಹಿಸಿತ್ತು.

ಇದನ್ನೂ ಓದಿ: ಗಾಂಧಿ ನೆನಪಿನಲ್ಲಿ ರಾಜ್ಯದ್ಯಂತ ಉಪವಾಸ ಸತ್ಯಾಗ್ರಹ : NPR ಜಾರಿಗೊಳಿಸದಂತೆ ತಡೆಯುವ ಪ್ರತಿಜ್ಞೆ

“ಜನನ, ಮರಣ ಮತ್ತು ವಲಸೆಯ ಕಾರಣದಿಂದಾಗಿ ಆಗುವ ಬದಲಾವಣೆಗಳನ್ನು ಸಂಯೋಜಿಸಲು” ಮತ್ತು “ಆಧಾರ್ ವೈಯಕ್ತಿಕ ದತ್ತಾಂಶ ಆದರೆ ಎನ್‌ಪಿಆರ್ ಕುಟುಂಬವಾರು ದತ್ತಾಂಶವನ್ನು ಒಳಗೊಂಡಿರುತ್ತದೆ” ಎಂದು ಗೃಹ ಸಚಿವಾಲಯ ಎನ್‌ಪಿಆರ್ ಅನ್ನು ನವೀಕರಿಸುವ ಅವಶ್ಯಕತೆಯಿದೆ ಎಂದು ಈ ವರ್ಷದ ಆರಂಭದಲ್ಲಿ ಸಂಸದೀಯ ಸಮಿತಿಗೆ ತಿಳಿಸಿತು.

ಕೇಂದ್ರ ಸರ್ಕಾರ 2021ರ ಜನಗಣತಿ ಮತ್ತು ರಾಷ್ಟ್ರೀಯ ಜನಗಣತಿ ನೊಂದಣಿ (ಎನ್‌ಪಿಆರ್) ಪಕ್ರಿಯೆಗಳನ್ನು ಒಟ್ಟಿಗೆ ನಡೆಸಲು ನಿಶ್ಚಯಿಸಿರುವುದು ಹಲವು ವಲಯಗಳಿಂದ ಟೀಕೆಗೆ ಗುರಿಯಾಗಿದೆ. ಎನ್‌ಪಿಆರ್ ಪ್ರಕ್ರಿಯೆಯು ಎನ್‌ಆರ್‌ಸಿ (ರಾಷ್ಟ್ರೀಯ ನಾಗರಿಕರ ನೋಂದಣಿ) ಪ್ರಕ್ರಿಯೆಗೆ ಪೂರ್ವಭಾವಿ ಅಭ್ಯಾಸ ಎಂದು ಹಲವು ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆಗಳು ದಾಖಲಾಗಿದ್ದವು. ಬೃಹತ್ ಹೋರಾಟಗಳು ಭುಗಿಲೆದ್ದರು ಸರ್ಕಾರ ಜಾರಿಗೊಳಿಸುವುದಾಗಿ ನಿಶ್ಚಯಿಸಿತ್ತು. ಆದರೆ ಕೊರೊನಾ ಅವೆಲ್ಲವೂಗಳಿಗೂ ವಿರಾಮ ನೀಡಿದೆ.

ಮಹಾತ್ಮ ಗಾಂಧೀಜಿಯವರು ನಡೆಸಿದ ದಂಡಿ (ಉಪ್ಪಿನ) ಸತ್ಯಾಗ್ರಹದ 90ನೇ ವರ್ಷಾಚರಣೆಯ ಸ್ಫೂರ್ತಿಯಲ್ಲಿ ಸಂವಿಧಾನ ಹಾಗೂ ಪೌರತ್ವದ ಹಕ್ಕುಗಳನ್ನು ಉಳಿಸಿಕೊಳ್ಳಲು ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಉಪವಾಸ ಸತ್ಯಾಗ್ರಹ ನಡೆಸಿ, NPR ಜಾರಿಗೊಳಿಸದಂತೆ ಸರ್ಕಾರಕ್ಕೆ ಹಕ್ಕೊತ್ತಾಯ ಪತ್ರಗಳನ್ನು ಸಲ್ಲಿಸಲಾಗಿತ್ತು.


ಇದನ್ನೂ ಓದಿ: ನಿರ್ಣಾಯಕ ಹಂತದತ್ತ ಎನ್‌ಪಿಆರ್ ಹೋರಾಟ: ಮುಂದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...