Homeಮುಖಪುಟವಿರೋಧದ ನಡುವೆಯೂ ಎನ್‌ಪಿಆರ್ ಪ್ರಶ್ನಾವಳಿ ಅಂತಿಮಗೊಳಿಸಲಾಗುತ್ತಿದೆ: ಮಾಹಿತಿ ನೀಡಿದ ಆರ್‌ಜಿಐ!

ವಿರೋಧದ ನಡುವೆಯೂ ಎನ್‌ಪಿಆರ್ ಪ್ರಶ್ನಾವಳಿ ಅಂತಿಮಗೊಳಿಸಲಾಗುತ್ತಿದೆ: ಮಾಹಿತಿ ನೀಡಿದ ಆರ್‌ಜಿಐ!

ಕಳೆದ ವರ್ಷ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ದೇಶಾದ್ಯಂತ ಬೃಹತ್ ಹೋರಾಟಗಳು ನಡೆದರೂ, ಸರ್ಕಾರ ಜಾರಿಗೊಳಿಸುವುದಾಗಿ ನಿಶ್ಚಯಿಸಿತ್ತು. ಆದರೆ ಕೊರೊನಾ ಅವೆಲ್ಲವೂಗಳಿಗೂ ವಿರಾಮ ನೀಡಿತ್ತು.

- Advertisement -
- Advertisement -

ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ (ಆರ್‌ಜಿಐ) ಕಚೇರಿಯು ರಾಷ್ಟ್ರೀಯ ಜನಸಂಖ್ಯಾ ನೋಂದಣಿಯ (ಎನ್‌ಪಿಆರ್) ವೇಳಾಪಟ್ಟಿ ಅಥವಾ ಪ್ರಶ್ನಾವಳಿಯನ್ನು ಅಂತಿಮಗೊಳಿಸಲಾಗುತ್ತಿದೆ ಎಂದು ಹೇಳಿದೆ. 2021 ರ ಜನಗಣತಿಯ ಮೊದಲ ಹಂತದ ನಿರೀಕ್ಷಿತ ದಿನಾಂಕದ ಬಗ್ಗೆ ಮಾಹಿತಿ ’ಲಭ್ಯವಿಲ್ಲ’ ಎಂದು ತಿಳಿಸಿದೆ.

ಜನಗಣತಿ 2021 ರ ಮೊದಲ ಹಂತದ ನಿರೀಕ್ಷಿತ ದಿನಾಂಕ ಮತ್ತು ಎನ್‌ಪಿಆರ್ ನವೀಕರಣದ ಬಗ್ಗೆ ಮಾಹಿತಿ ಕೋರಿ ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ದಿ ಹಿಂದೂ ಸಲ್ಲಿಸಿದ ಅರ್ಜಿಗೆ ಆರ್‌ಜಿಐ ಪ್ರತಿಕ್ರಿಯೆ ನೀಡಿದೆ. ಈ ಮೊದಲು 2020 ಏಪ್ರಿಲ್ 1ರಿಂದ ಜನಗಣತಿ ಪ್ರಾರಂಭವಾಗಬೇಕಿತ್ತು. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಮಾರ್ಚ್ 25 ರಂದು ಮುಂದಿನ ಆದೇಶದವರೆಗೆ ಅನಿರ್ದಿಷ್ಟವಾಗಿ ಮುಂದೂಡಲಾಗಿತ್ತು.

ಎನ್‌ಪಿಆರ್ ನವೀಕರಣ ಮತ್ತು ಮೊದಲ ಹಂತದ ಜನಗಣತಿಯ ಮನೆ ಪಟ್ಟಿ ಮತ್ತು ವಸತಿ ಗಣತಿಯನ್ನು ಏಪ್ರಿಲ್-ಸೆಪ್ಟೆಂಬರ್‌ನಿಂದ ಏಕಕಾಲದಲ್ಲಿ ನಡೆಸಬೇಕಾಗಿತ್ತು. ಆದರೆ, ಏಪ್ರಿಲ್ 1ರಂದು ಮೊದಲ ಹಂತದಲ್ಲಿ ಮೇಘಾಲಯ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ ಮತ್ತು ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಪ್ರದೇಶದಲ್ಲಿ ಗಣತಿ ನಡೆಯಬೇಕಿತ್ತು. ಆದರೂ ಹಿಂದೂ ಸಲ್ಲಿಸಿದ್ದ ಆರ್‌ಟಿಐಗೆ ನವೆಂಬರ್ 17 ರಂದು ಉತ್ತರಿಸಿರುವ ಆರ್‌ಜಿಐ ಇನ್ನೂ “ಎನ್‌ಪಿಆರ್ ವೇಳಾಪಟ್ಟಿ ಅಂತಿಮಗೊಳಿಸಲಾಗುತ್ತಿದೆ” ಎಂದು ಉತ್ತರಿಸಿದೆ.

ಇದನ್ನೂ ಓದಿ: ಜನಗಣತಿ ಮತ್ತು NPR ಪ್ರತ್ಯೇಕವಾಗಿರಲಿ: ಕೇಂದ್ರಕ್ಕೆ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳಿಂದ ಪತ್ರ

ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯಿಂದಾಗಿ ಎನ್‌ಪಿಆರ್ ನವೀಕರಣವನ್ನು 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿರೋಧಿಸಿವೆ. 2003ರಲ್ಲಿ ರೂಪಿಸಲಾದ ಪೌರತ್ವ ನಿಯಮಗಳ ಪ್ರಕಾರ, ಭಾರತೀಯ ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಐಸಿ) ಅಥವಾ ಎನ್‌ಆರ್‌ಸಿಗೆ ಎನ್‌ಪಿಆರ್ ಮೊದಲ ಹೆಜ್ಜೆಯಾಗಿದೆ.

2010ರಲ್ಲಿ ಎನ್‌ಪಿಆರ್ ಮೊದಲ ಬಾರಿಗೆ ಸಂಗ್ರಹಿಸಲಾಯಿತು, ನಂತರ 2015 ರಲ್ಲಿ ಎನ್‌ಪಿಆರ್ ನವೀಕರಿಸಲಾಯಿತು. ಪಶ್ಚಿಮ ಬಂಗಾಳ ಮತ್ತು ರಾಜಸ್ಥಾನದಂತಹ ಕೆಲವು ರಾಜ್ಯಗಳು ಹೊಸ ಎನ್‌ಪಿಆರ್‌ನಲ್ಲಿ ಕೇಳಲಾದ ಹೆಚ್ಚುವರಿ ಪ್ರಶ್ನೆಗಳಿಗೆ ಆಕ್ಷೇಪ ವ್ಯಕ್ತಪಡಿಸಿವೆ. ಉದಾಹರಣೆಗೆ “ತಂದೆ ಮತ್ತು ತಾಯಿಯ ಹುಟ್ಟಿದ ದಿನಾಂಕ ಮತ್ತು ಹುಟ್ಟಿದ ಸ್ಥಳ, ಕೊನೆಯ ವಾಸಸ್ಥಳ ಮತ್ತು ಮಾತೃಭಾಷೆ” ಈ ಪ್ರಶ್ನೆಗಳಿಗೆ ಹಲವು ರಾಜ್ಯಗಳು ಆಕ್ಷೇಪಿಸಿವೆ.

2019 ರಲ್ಲಿ, ಟ್ರಯಲ್ ಎನ್‌ಪಿಆರ್ ಫಾರ್ಮ್ 21 ಮಾನದಂಡಗಳಲ್ಲಿ 30 ಲಕ್ಷ ಜನರಿಂದ “ತಂದೆ ಮತ್ತು ತಾಯಿಯ ಹುಟ್ಟಿದ ಸ್ಥಳ, ಕೊನೆಯ ವಾಸಸ್ಥಳ” ಕುರಿತು ನಿರ್ದಿಷ್ಟ ವಿವರಗಳನ್ನು ಕೋರಿ ಆಧಾರ್ (ಐಚ್ಛಿಕ) , ಮತದಾರರ ಗುರುತಿನ ಚೀಟಿ, ಮೊಬೈಲ್ ಫೋನ್ ಮತ್ತು ಚಾಲನಾ ಪರವಾನಗಿ ಸಂಖ್ಯೆಗಳ ವಿವರಗಳನ್ನು ಸಂಗ್ರಹಿಸಿದೆ. 2010 ಮತ್ತು 2015 ರಲ್ಲಿ, ಎನ್‌ಪಿಆರ್ 14 ಮಾನದಂಡಗಳಲ್ಲಿ ವಿವರಗಳನ್ನು ಸಂಗ್ರಹಿಸಿತ್ತು.

ಇದನ್ನೂ ಓದಿ: ಗಾಂಧಿ ನೆನಪಿನಲ್ಲಿ ರಾಜ್ಯದ್ಯಂತ ಉಪವಾಸ ಸತ್ಯಾಗ್ರಹ : NPR ಜಾರಿಗೊಳಿಸದಂತೆ ತಡೆಯುವ ಪ್ರತಿಜ್ಞೆ

“ಜನನ, ಮರಣ ಮತ್ತು ವಲಸೆಯ ಕಾರಣದಿಂದಾಗಿ ಆಗುವ ಬದಲಾವಣೆಗಳನ್ನು ಸಂಯೋಜಿಸಲು” ಮತ್ತು “ಆಧಾರ್ ವೈಯಕ್ತಿಕ ದತ್ತಾಂಶ ಆದರೆ ಎನ್‌ಪಿಆರ್ ಕುಟುಂಬವಾರು ದತ್ತಾಂಶವನ್ನು ಒಳಗೊಂಡಿರುತ್ತದೆ” ಎಂದು ಗೃಹ ಸಚಿವಾಲಯ ಎನ್‌ಪಿಆರ್ ಅನ್ನು ನವೀಕರಿಸುವ ಅವಶ್ಯಕತೆಯಿದೆ ಎಂದು ಈ ವರ್ಷದ ಆರಂಭದಲ್ಲಿ ಸಂಸದೀಯ ಸಮಿತಿಗೆ ತಿಳಿಸಿತು.

ಕೇಂದ್ರ ಸರ್ಕಾರ 2021ರ ಜನಗಣತಿ ಮತ್ತು ರಾಷ್ಟ್ರೀಯ ಜನಗಣತಿ ನೊಂದಣಿ (ಎನ್‌ಪಿಆರ್) ಪಕ್ರಿಯೆಗಳನ್ನು ಒಟ್ಟಿಗೆ ನಡೆಸಲು ನಿಶ್ಚಯಿಸಿರುವುದು ಹಲವು ವಲಯಗಳಿಂದ ಟೀಕೆಗೆ ಗುರಿಯಾಗಿದೆ. ಎನ್‌ಪಿಆರ್ ಪ್ರಕ್ರಿಯೆಯು ಎನ್‌ಆರ್‌ಸಿ (ರಾಷ್ಟ್ರೀಯ ನಾಗರಿಕರ ನೋಂದಣಿ) ಪ್ರಕ್ರಿಯೆಗೆ ಪೂರ್ವಭಾವಿ ಅಭ್ಯಾಸ ಎಂದು ಹಲವು ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆಗಳು ದಾಖಲಾಗಿದ್ದವು. ಬೃಹತ್ ಹೋರಾಟಗಳು ಭುಗಿಲೆದ್ದರು ಸರ್ಕಾರ ಜಾರಿಗೊಳಿಸುವುದಾಗಿ ನಿಶ್ಚಯಿಸಿತ್ತು. ಆದರೆ ಕೊರೊನಾ ಅವೆಲ್ಲವೂಗಳಿಗೂ ವಿರಾಮ ನೀಡಿದೆ.

ಮಹಾತ್ಮ ಗಾಂಧೀಜಿಯವರು ನಡೆಸಿದ ದಂಡಿ (ಉಪ್ಪಿನ) ಸತ್ಯಾಗ್ರಹದ 90ನೇ ವರ್ಷಾಚರಣೆಯ ಸ್ಫೂರ್ತಿಯಲ್ಲಿ ಸಂವಿಧಾನ ಹಾಗೂ ಪೌರತ್ವದ ಹಕ್ಕುಗಳನ್ನು ಉಳಿಸಿಕೊಳ್ಳಲು ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಉಪವಾಸ ಸತ್ಯಾಗ್ರಹ ನಡೆಸಿ, NPR ಜಾರಿಗೊಳಿಸದಂತೆ ಸರ್ಕಾರಕ್ಕೆ ಹಕ್ಕೊತ್ತಾಯ ಪತ್ರಗಳನ್ನು ಸಲ್ಲಿಸಲಾಗಿತ್ತು.


ಇದನ್ನೂ ಓದಿ: ನಿರ್ಣಾಯಕ ಹಂತದತ್ತ ಎನ್‌ಪಿಆರ್ ಹೋರಾಟ: ಮುಂದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...