Homeಮುಖಪುಟವಿರೋಧದ ನಡುವೆಯೂ ಎನ್‌ಪಿಆರ್ ಪ್ರಶ್ನಾವಳಿ ಅಂತಿಮಗೊಳಿಸಲಾಗುತ್ತಿದೆ: ಮಾಹಿತಿ ನೀಡಿದ ಆರ್‌ಜಿಐ!

ವಿರೋಧದ ನಡುವೆಯೂ ಎನ್‌ಪಿಆರ್ ಪ್ರಶ್ನಾವಳಿ ಅಂತಿಮಗೊಳಿಸಲಾಗುತ್ತಿದೆ: ಮಾಹಿತಿ ನೀಡಿದ ಆರ್‌ಜಿಐ!

ಕಳೆದ ವರ್ಷ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ದೇಶಾದ್ಯಂತ ಬೃಹತ್ ಹೋರಾಟಗಳು ನಡೆದರೂ, ಸರ್ಕಾರ ಜಾರಿಗೊಳಿಸುವುದಾಗಿ ನಿಶ್ಚಯಿಸಿತ್ತು. ಆದರೆ ಕೊರೊನಾ ಅವೆಲ್ಲವೂಗಳಿಗೂ ವಿರಾಮ ನೀಡಿತ್ತು.

- Advertisement -
- Advertisement -

ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ (ಆರ್‌ಜಿಐ) ಕಚೇರಿಯು ರಾಷ್ಟ್ರೀಯ ಜನಸಂಖ್ಯಾ ನೋಂದಣಿಯ (ಎನ್‌ಪಿಆರ್) ವೇಳಾಪಟ್ಟಿ ಅಥವಾ ಪ್ರಶ್ನಾವಳಿಯನ್ನು ಅಂತಿಮಗೊಳಿಸಲಾಗುತ್ತಿದೆ ಎಂದು ಹೇಳಿದೆ. 2021 ರ ಜನಗಣತಿಯ ಮೊದಲ ಹಂತದ ನಿರೀಕ್ಷಿತ ದಿನಾಂಕದ ಬಗ್ಗೆ ಮಾಹಿತಿ ’ಲಭ್ಯವಿಲ್ಲ’ ಎಂದು ತಿಳಿಸಿದೆ.

ಜನಗಣತಿ 2021 ರ ಮೊದಲ ಹಂತದ ನಿರೀಕ್ಷಿತ ದಿನಾಂಕ ಮತ್ತು ಎನ್‌ಪಿಆರ್ ನವೀಕರಣದ ಬಗ್ಗೆ ಮಾಹಿತಿ ಕೋರಿ ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ದಿ ಹಿಂದೂ ಸಲ್ಲಿಸಿದ ಅರ್ಜಿಗೆ ಆರ್‌ಜಿಐ ಪ್ರತಿಕ್ರಿಯೆ ನೀಡಿದೆ. ಈ ಮೊದಲು 2020 ಏಪ್ರಿಲ್ 1ರಿಂದ ಜನಗಣತಿ ಪ್ರಾರಂಭವಾಗಬೇಕಿತ್ತು. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಮಾರ್ಚ್ 25 ರಂದು ಮುಂದಿನ ಆದೇಶದವರೆಗೆ ಅನಿರ್ದಿಷ್ಟವಾಗಿ ಮುಂದೂಡಲಾಗಿತ್ತು.

ಎನ್‌ಪಿಆರ್ ನವೀಕರಣ ಮತ್ತು ಮೊದಲ ಹಂತದ ಜನಗಣತಿಯ ಮನೆ ಪಟ್ಟಿ ಮತ್ತು ವಸತಿ ಗಣತಿಯನ್ನು ಏಪ್ರಿಲ್-ಸೆಪ್ಟೆಂಬರ್‌ನಿಂದ ಏಕಕಾಲದಲ್ಲಿ ನಡೆಸಬೇಕಾಗಿತ್ತು. ಆದರೆ, ಏಪ್ರಿಲ್ 1ರಂದು ಮೊದಲ ಹಂತದಲ್ಲಿ ಮೇಘಾಲಯ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ ಮತ್ತು ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಪ್ರದೇಶದಲ್ಲಿ ಗಣತಿ ನಡೆಯಬೇಕಿತ್ತು. ಆದರೂ ಹಿಂದೂ ಸಲ್ಲಿಸಿದ್ದ ಆರ್‌ಟಿಐಗೆ ನವೆಂಬರ್ 17 ರಂದು ಉತ್ತರಿಸಿರುವ ಆರ್‌ಜಿಐ ಇನ್ನೂ “ಎನ್‌ಪಿಆರ್ ವೇಳಾಪಟ್ಟಿ ಅಂತಿಮಗೊಳಿಸಲಾಗುತ್ತಿದೆ” ಎಂದು ಉತ್ತರಿಸಿದೆ.

ಇದನ್ನೂ ಓದಿ: ಜನಗಣತಿ ಮತ್ತು NPR ಪ್ರತ್ಯೇಕವಾಗಿರಲಿ: ಕೇಂದ್ರಕ್ಕೆ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳಿಂದ ಪತ್ರ

ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯಿಂದಾಗಿ ಎನ್‌ಪಿಆರ್ ನವೀಕರಣವನ್ನು 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿರೋಧಿಸಿವೆ. 2003ರಲ್ಲಿ ರೂಪಿಸಲಾದ ಪೌರತ್ವ ನಿಯಮಗಳ ಪ್ರಕಾರ, ಭಾರತೀಯ ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಐಸಿ) ಅಥವಾ ಎನ್‌ಆರ್‌ಸಿಗೆ ಎನ್‌ಪಿಆರ್ ಮೊದಲ ಹೆಜ್ಜೆಯಾಗಿದೆ.

2010ರಲ್ಲಿ ಎನ್‌ಪಿಆರ್ ಮೊದಲ ಬಾರಿಗೆ ಸಂಗ್ರಹಿಸಲಾಯಿತು, ನಂತರ 2015 ರಲ್ಲಿ ಎನ್‌ಪಿಆರ್ ನವೀಕರಿಸಲಾಯಿತು. ಪಶ್ಚಿಮ ಬಂಗಾಳ ಮತ್ತು ರಾಜಸ್ಥಾನದಂತಹ ಕೆಲವು ರಾಜ್ಯಗಳು ಹೊಸ ಎನ್‌ಪಿಆರ್‌ನಲ್ಲಿ ಕೇಳಲಾದ ಹೆಚ್ಚುವರಿ ಪ್ರಶ್ನೆಗಳಿಗೆ ಆಕ್ಷೇಪ ವ್ಯಕ್ತಪಡಿಸಿವೆ. ಉದಾಹರಣೆಗೆ “ತಂದೆ ಮತ್ತು ತಾಯಿಯ ಹುಟ್ಟಿದ ದಿನಾಂಕ ಮತ್ತು ಹುಟ್ಟಿದ ಸ್ಥಳ, ಕೊನೆಯ ವಾಸಸ್ಥಳ ಮತ್ತು ಮಾತೃಭಾಷೆ” ಈ ಪ್ರಶ್ನೆಗಳಿಗೆ ಹಲವು ರಾಜ್ಯಗಳು ಆಕ್ಷೇಪಿಸಿವೆ.

2019 ರಲ್ಲಿ, ಟ್ರಯಲ್ ಎನ್‌ಪಿಆರ್ ಫಾರ್ಮ್ 21 ಮಾನದಂಡಗಳಲ್ಲಿ 30 ಲಕ್ಷ ಜನರಿಂದ “ತಂದೆ ಮತ್ತು ತಾಯಿಯ ಹುಟ್ಟಿದ ಸ್ಥಳ, ಕೊನೆಯ ವಾಸಸ್ಥಳ” ಕುರಿತು ನಿರ್ದಿಷ್ಟ ವಿವರಗಳನ್ನು ಕೋರಿ ಆಧಾರ್ (ಐಚ್ಛಿಕ) , ಮತದಾರರ ಗುರುತಿನ ಚೀಟಿ, ಮೊಬೈಲ್ ಫೋನ್ ಮತ್ತು ಚಾಲನಾ ಪರವಾನಗಿ ಸಂಖ್ಯೆಗಳ ವಿವರಗಳನ್ನು ಸಂಗ್ರಹಿಸಿದೆ. 2010 ಮತ್ತು 2015 ರಲ್ಲಿ, ಎನ್‌ಪಿಆರ್ 14 ಮಾನದಂಡಗಳಲ್ಲಿ ವಿವರಗಳನ್ನು ಸಂಗ್ರಹಿಸಿತ್ತು.

ಇದನ್ನೂ ಓದಿ: ಗಾಂಧಿ ನೆನಪಿನಲ್ಲಿ ರಾಜ್ಯದ್ಯಂತ ಉಪವಾಸ ಸತ್ಯಾಗ್ರಹ : NPR ಜಾರಿಗೊಳಿಸದಂತೆ ತಡೆಯುವ ಪ್ರತಿಜ್ಞೆ

“ಜನನ, ಮರಣ ಮತ್ತು ವಲಸೆಯ ಕಾರಣದಿಂದಾಗಿ ಆಗುವ ಬದಲಾವಣೆಗಳನ್ನು ಸಂಯೋಜಿಸಲು” ಮತ್ತು “ಆಧಾರ್ ವೈಯಕ್ತಿಕ ದತ್ತಾಂಶ ಆದರೆ ಎನ್‌ಪಿಆರ್ ಕುಟುಂಬವಾರು ದತ್ತಾಂಶವನ್ನು ಒಳಗೊಂಡಿರುತ್ತದೆ” ಎಂದು ಗೃಹ ಸಚಿವಾಲಯ ಎನ್‌ಪಿಆರ್ ಅನ್ನು ನವೀಕರಿಸುವ ಅವಶ್ಯಕತೆಯಿದೆ ಎಂದು ಈ ವರ್ಷದ ಆರಂಭದಲ್ಲಿ ಸಂಸದೀಯ ಸಮಿತಿಗೆ ತಿಳಿಸಿತು.

ಕೇಂದ್ರ ಸರ್ಕಾರ 2021ರ ಜನಗಣತಿ ಮತ್ತು ರಾಷ್ಟ್ರೀಯ ಜನಗಣತಿ ನೊಂದಣಿ (ಎನ್‌ಪಿಆರ್) ಪಕ್ರಿಯೆಗಳನ್ನು ಒಟ್ಟಿಗೆ ನಡೆಸಲು ನಿಶ್ಚಯಿಸಿರುವುದು ಹಲವು ವಲಯಗಳಿಂದ ಟೀಕೆಗೆ ಗುರಿಯಾಗಿದೆ. ಎನ್‌ಪಿಆರ್ ಪ್ರಕ್ರಿಯೆಯು ಎನ್‌ಆರ್‌ಸಿ (ರಾಷ್ಟ್ರೀಯ ನಾಗರಿಕರ ನೋಂದಣಿ) ಪ್ರಕ್ರಿಯೆಗೆ ಪೂರ್ವಭಾವಿ ಅಭ್ಯಾಸ ಎಂದು ಹಲವು ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆಗಳು ದಾಖಲಾಗಿದ್ದವು. ಬೃಹತ್ ಹೋರಾಟಗಳು ಭುಗಿಲೆದ್ದರು ಸರ್ಕಾರ ಜಾರಿಗೊಳಿಸುವುದಾಗಿ ನಿಶ್ಚಯಿಸಿತ್ತು. ಆದರೆ ಕೊರೊನಾ ಅವೆಲ್ಲವೂಗಳಿಗೂ ವಿರಾಮ ನೀಡಿದೆ.

ಮಹಾತ್ಮ ಗಾಂಧೀಜಿಯವರು ನಡೆಸಿದ ದಂಡಿ (ಉಪ್ಪಿನ) ಸತ್ಯಾಗ್ರಹದ 90ನೇ ವರ್ಷಾಚರಣೆಯ ಸ್ಫೂರ್ತಿಯಲ್ಲಿ ಸಂವಿಧಾನ ಹಾಗೂ ಪೌರತ್ವದ ಹಕ್ಕುಗಳನ್ನು ಉಳಿಸಿಕೊಳ್ಳಲು ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಉಪವಾಸ ಸತ್ಯಾಗ್ರಹ ನಡೆಸಿ, NPR ಜಾರಿಗೊಳಿಸದಂತೆ ಸರ್ಕಾರಕ್ಕೆ ಹಕ್ಕೊತ್ತಾಯ ಪತ್ರಗಳನ್ನು ಸಲ್ಲಿಸಲಾಗಿತ್ತು.


ಇದನ್ನೂ ಓದಿ: ನಿರ್ಣಾಯಕ ಹಂತದತ್ತ ಎನ್‌ಪಿಆರ್ ಹೋರಾಟ: ಮುಂದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...