Homeಮುಖಪುಟಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

- Advertisement -
- Advertisement -

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, “ಯಾವುದೇ ಸಂದರ್ಭದಲ್ಲೂ ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಜಾರಿಗೆ ತರಲಾಗುವುದಿಲ್ಲ ಎಂದು ಎಲ್‌ಡಿಎಫ್‌ ಸರ್ಕಾರ ಪುನರುಚ್ಚರಿಸುತ್ತದೆ. 2027ರ ರಾಷ್ಟ್ರವ್ಯಾಪಿ ಜನಗಣತಿ ಸಮೀಪಿಸುತ್ತಿದ್ದಂತೆ, ‘ಎನ್‌ಪಿಆರ್‌’ಗಾಗಿ ಯಾವುದೇ ಡೇಟಾ ಸಂಗ್ರಹಿಸದಂತೆ ನಾವು ಹೊಸ ಅಧಿಸೂಚನೆಯನ್ನು ಹೊರಡಿಸಿದ್ದೇವೆ. ಇದು 2019 ರಿಂದ ನಮ್ಮ ದೃಢವಾದ ನಿಲುವನ್ನು ಎತ್ತಿಹಿಡಿಯುತ್ತದೆ. ಸುಪ್ರೀಂ ಕೋರ್ಟ್‌ನಲ್ಲಿ ಅಸಂವಿಧಾನಿಕ ಸಿಎಎ ಪ್ರಶ್ನಿಸಿದ ಮತ್ತು ಅದರ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಿದ ಮೊದಲ ರಾಜ್ಯ ಕೇರಳ. ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸಲು ನಾವು ಬದ್ಧರಾಗಿದ್ದೇವೆ ಮತ್ತು ಎನ್‌ಪಿಆರ್/ಎನ್‌ಆರ್‌ಸಿಯಂತಹ ತಾರತಮ್ಯದ ಪ್ರಕ್ರಿಯೆಗಳು ನಮ್ಮ ಜನರಿಗೆ ಬೆದರಿಕೆ ಹಾಕಲು ನಾವು ಅನುಮತಿಸುವುದಿಲ್ಲ” ಎಂದು ಬರೆದುಕೊಂಡಿದ್ದಾರೆ.

ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಎಂಬುವುದು ಭಾರತದಲ್ಲಿ ಸಾಮಾನ್ಯವಾಗಿ ವಾಸಿಸುವ ಎಲ್ಲಾ ನಿವಾಸಿಗಳ ಪಟ್ಟಿಯಾಗಿದೆ. ಇದನ್ನು ಮೊದಲ ಬಾರಿಗೆ 2010 ರಲ್ಲಿ ಸಿದ್ಧಪಡಿಸಲಾಯಿತು. ನಂತರ 2015ರಲ್ಲಿ ಹೆಸರು, ಲಿಂಗ, ಹುಟ್ಟಿದ ದಿನಾಂಕ ಮತ್ತು ಹುಟ್ಟಿದ ಸ್ಥಳದಂತಹ ಕೆಲವು ಪ್ರಮುಖ ವಿವರಗಳನ್ನು ನವೀಕರಿಸಲಾಯಿತು. ದೇಶದ ಪ್ರತಿಯೊಬ್ಬ ನಿವಾಸಿಯ ಸಮಗ್ರ ಗುರುತಿನ ಡೇಟಾಬೇಸ್ ಅನ್ನು ರಚಿಸುವುದು ಇದರ ಮುಖ್ಯ ಗುರಿಯಾಗಿದೆ ಎಂದು ಕೇಂದ್ರದ ಬಿಜೆಪಿ ಸರ್ಕಾರ ಹೇಳಿಕೊಂಡಿದೆ.

ಈ ಬಾರಿ ಎನ್‌ಪಿಆರ್ ಪ್ರಕ್ರಿಯೆಯಲ್ಲಿ ಕೆಲವು ಹೆಚ್ಚುವರಿ ಪ್ರಶ್ನೆಗಳನ್ನು ಕೇಳಲಾಗುತ್ತಿದೆ, ಇದು ಮುಂದೆ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರಲು ದಾರಿಯಾಗಬಹುದು ಎಂಬುವುದು ಕೇರಳ ಸರ್ಕಾರದ ಆತಂಕ. ಆದ್ದರಿಂದಲೇ ಕೇರಳ ಸರ್ಕಾರ ಜನಗಣತಿಯನ್ನು ಮಾತ್ರ ಬೆಂಬಲಿಸಿ, ಎನ್‌ಪಿಆರ್ ದತ್ತಾಂಶ ಸಂಗ್ರಹಣೆಯನ್ನು ವಿರೋಧಿಸಿದೆ.

ಫೆಬ್ರವರಿ 4, 2026 ರಂದು ಕೇರಳ ಸರ್ಕಾರವು ಹೊಸ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದ್ದು, ರಾಜ್ಯದಲ್ಲಿ ಎನ್‌ಪಿಆರ್‌ ನವೀಕರಣಕ್ಕೆ ಸಂಬಂಧಿಸಿದ ಎಲ್ಲಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಿರುವುದನ್ನು ಪುನರುಚ್ಚರಿಸಿದೆ. ಈ ಸ್ಥಗಿತ ಆದೇಶವು ಡಿಸೆಂಬರ್ 20, 2019 ರಿಂದಲೇ ಜಾರಿಯಲ್ಲಿದ್ದು, ಈಗ ಅದನ್ನು ಮತ್ತೊಮ್ಮೆ ದೃಢೀಕರಿಸಲಾಗಿದೆ.

ಕೇಂದ್ರ ಸರ್ಕಾರ ಫೆಬ್ರವರಿ 1 ರಂದು ಮಂಡಿಸಿದ ಬಜೆಟ್‌ನಲ್ಲಿ “ಜನಗಣತಿ, ಸಮೀಕ್ಷೆ ಮತ್ತು ಅಂಕಿಅಂಶಗಳು/ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ” ಚಟುವಟಿಕೆಗಳಿಗಾಗಿ 6,000 ಕೋಟಿ ರೂಪಾಯಿ ಹಣವನ್ನು ಮೀಸಲಿಟ್ಟಿದೆ. ಈ ಘೋಷಣೆ ಹೊರಬಿದ್ದ ಕೇವಲ ಮೂರೇ ದಿನಗಳಲ್ಲಿ ಕೇರಳ ಸರ್ಕಾರ ತನ್ನ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ.

ಕೇಂದ್ರ ಹಣಕಾಸು ಸಚಿವರು ಮಂಡಿಸಿದ ಬಜೆಟ್ ದಾಖಲೆಗಳಲ್ಲಿ, ಮೀಸಲಿಟ್ಟ 6,000 ಕೋಟಿ ರೂಪಾಯಿ ಹಣ ಕೇವಲ ಜನಗಣತಿಗೆ ಮಾತ್ರವಲ್ಲದೆ, ರಾಷ್ಟ್ರೀಯ ಯೋಜನೆಗೂ ಸೇರಿದೆ ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಈ ಹಣವನ್ನು ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರ ಕಚೇರಿ, 2027ರ ಜನಗಣತಿ ವೆಚ್ಚಗಳು ಮತ್ತು ಎನ್‌ಪಿಆರ್ ಸೇರಿದಂತೆ ಆರ್‌ಜಿಐನ ವಿವಿಧ ಯೋಜನೆಗಳಿಗಾಗಿ ಬಳಸಲಾಗುವುದು ಎಂದು ತಿಳಿಸಲಾಗಿದೆ.

ಬಜೆಟ್‌ನಲ್ಲಿ ಎನ್‌ಪಿಆರ್ ಹೆಸರನ್ನು ಸೇರಿಸಿರುವುದು ಕೇರಳ ಸರ್ಕಾರದ ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ. ಜನಗಣತಿಯ ನೆಪದಲ್ಲಿ ಎನ್‌ಪಿಆರ್ ಅಂಕಿಅಂಶಗಳನ್ನು ಸಂಗ್ರಹಿಸಲು ಕೇಂದ್ರವು ಸಿದ್ಧತೆ ನಡೆಸುತ್ತಿದೆ ಎಂದು ಕೇರಳವು ತನ್ನ ಹೊಸ ಅಧಿಸೂಚನೆಯನ್ನು ಹೊರಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...