Homeಮುಖಪುಟಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

- Advertisement -
- Advertisement -

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, “ಯಾವುದೇ ಸಂದರ್ಭದಲ್ಲೂ ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಜಾರಿಗೆ ತರಲಾಗುವುದಿಲ್ಲ ಎಂದು ಎಲ್‌ಡಿಎಫ್‌ ಸರ್ಕಾರ ಪುನರುಚ್ಚರಿಸುತ್ತದೆ. 2027ರ ರಾಷ್ಟ್ರವ್ಯಾಪಿ ಜನಗಣತಿ ಸಮೀಪಿಸುತ್ತಿದ್ದಂತೆ, ‘ಎನ್‌ಪಿಆರ್‌’ಗಾಗಿ ಯಾವುದೇ ಡೇಟಾ ಸಂಗ್ರಹಿಸದಂತೆ ನಾವು ಹೊಸ ಅಧಿಸೂಚನೆಯನ್ನು ಹೊರಡಿಸಿದ್ದೇವೆ. ಇದು 2019 ರಿಂದ ನಮ್ಮ ದೃಢವಾದ ನಿಲುವನ್ನು ಎತ್ತಿಹಿಡಿಯುತ್ತದೆ. ಸುಪ್ರೀಂ ಕೋರ್ಟ್‌ನಲ್ಲಿ ಅಸಂವಿಧಾನಿಕ ಸಿಎಎ ಪ್ರಶ್ನಿಸಿದ ಮತ್ತು ಅದರ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಿದ ಮೊದಲ ರಾಜ್ಯ ಕೇರಳ. ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸಲು ನಾವು ಬದ್ಧರಾಗಿದ್ದೇವೆ ಮತ್ತು ಎನ್‌ಪಿಆರ್/ಎನ್‌ಆರ್‌ಸಿಯಂತಹ ತಾರತಮ್ಯದ ಪ್ರಕ್ರಿಯೆಗಳು ನಮ್ಮ ಜನರಿಗೆ ಬೆದರಿಕೆ ಹಾಕಲು ನಾವು ಅನುಮತಿಸುವುದಿಲ್ಲ” ಎಂದು ಬರೆದುಕೊಂಡಿದ್ದಾರೆ.

ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಎಂಬುವುದು ಭಾರತದಲ್ಲಿ ಸಾಮಾನ್ಯವಾಗಿ ವಾಸಿಸುವ ಎಲ್ಲಾ ನಿವಾಸಿಗಳ ಪಟ್ಟಿಯಾಗಿದೆ. ಇದನ್ನು ಮೊದಲ ಬಾರಿಗೆ 2010 ರಲ್ಲಿ ಸಿದ್ಧಪಡಿಸಲಾಯಿತು. ನಂತರ 2015ರಲ್ಲಿ ಹೆಸರು, ಲಿಂಗ, ಹುಟ್ಟಿದ ದಿನಾಂಕ ಮತ್ತು ಹುಟ್ಟಿದ ಸ್ಥಳದಂತಹ ಕೆಲವು ಪ್ರಮುಖ ವಿವರಗಳನ್ನು ನವೀಕರಿಸಲಾಯಿತು. ದೇಶದ ಪ್ರತಿಯೊಬ್ಬ ನಿವಾಸಿಯ ಸಮಗ್ರ ಗುರುತಿನ ಡೇಟಾಬೇಸ್ ಅನ್ನು ರಚಿಸುವುದು ಇದರ ಮುಖ್ಯ ಗುರಿಯಾಗಿದೆ ಎಂದು ಕೇಂದ್ರದ ಬಿಜೆಪಿ ಸರ್ಕಾರ ಹೇಳಿಕೊಂಡಿದೆ.

ಈ ಬಾರಿ ಎನ್‌ಪಿಆರ್ ಪ್ರಕ್ರಿಯೆಯಲ್ಲಿ ಕೆಲವು ಹೆಚ್ಚುವರಿ ಪ್ರಶ್ನೆಗಳನ್ನು ಕೇಳಲಾಗುತ್ತಿದೆ, ಇದು ಮುಂದೆ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರಲು ದಾರಿಯಾಗಬಹುದು ಎಂಬುವುದು ಕೇರಳ ಸರ್ಕಾರದ ಆತಂಕ. ಆದ್ದರಿಂದಲೇ ಕೇರಳ ಸರ್ಕಾರ ಜನಗಣತಿಯನ್ನು ಮಾತ್ರ ಬೆಂಬಲಿಸಿ, ಎನ್‌ಪಿಆರ್ ದತ್ತಾಂಶ ಸಂಗ್ರಹಣೆಯನ್ನು ವಿರೋಧಿಸಿದೆ.

ಫೆಬ್ರವರಿ 4, 2026 ರಂದು ಕೇರಳ ಸರ್ಕಾರವು ಹೊಸ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದ್ದು, ರಾಜ್ಯದಲ್ಲಿ ಎನ್‌ಪಿಆರ್‌ ನವೀಕರಣಕ್ಕೆ ಸಂಬಂಧಿಸಿದ ಎಲ್ಲಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಿರುವುದನ್ನು ಪುನರುಚ್ಚರಿಸಿದೆ. ಈ ಸ್ಥಗಿತ ಆದೇಶವು ಡಿಸೆಂಬರ್ 20, 2019 ರಿಂದಲೇ ಜಾರಿಯಲ್ಲಿದ್ದು, ಈಗ ಅದನ್ನು ಮತ್ತೊಮ್ಮೆ ದೃಢೀಕರಿಸಲಾಗಿದೆ.

ಕೇಂದ್ರ ಸರ್ಕಾರ ಫೆಬ್ರವರಿ 1 ರಂದು ಮಂಡಿಸಿದ ಬಜೆಟ್‌ನಲ್ಲಿ “ಜನಗಣತಿ, ಸಮೀಕ್ಷೆ ಮತ್ತು ಅಂಕಿಅಂಶಗಳು/ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ” ಚಟುವಟಿಕೆಗಳಿಗಾಗಿ 6,000 ಕೋಟಿ ರೂಪಾಯಿ ಹಣವನ್ನು ಮೀಸಲಿಟ್ಟಿದೆ. ಈ ಘೋಷಣೆ ಹೊರಬಿದ್ದ ಕೇವಲ ಮೂರೇ ದಿನಗಳಲ್ಲಿ ಕೇರಳ ಸರ್ಕಾರ ತನ್ನ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ.

ಕೇಂದ್ರ ಹಣಕಾಸು ಸಚಿವರು ಮಂಡಿಸಿದ ಬಜೆಟ್ ದಾಖಲೆಗಳಲ್ಲಿ, ಮೀಸಲಿಟ್ಟ 6,000 ಕೋಟಿ ರೂಪಾಯಿ ಹಣ ಕೇವಲ ಜನಗಣತಿಗೆ ಮಾತ್ರವಲ್ಲದೆ, ರಾಷ್ಟ್ರೀಯ ಯೋಜನೆಗೂ ಸೇರಿದೆ ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಈ ಹಣವನ್ನು ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರ ಕಚೇರಿ, 2027ರ ಜನಗಣತಿ ವೆಚ್ಚಗಳು ಮತ್ತು ಎನ್‌ಪಿಆರ್ ಸೇರಿದಂತೆ ಆರ್‌ಜಿಐನ ವಿವಿಧ ಯೋಜನೆಗಳಿಗಾಗಿ ಬಳಸಲಾಗುವುದು ಎಂದು ತಿಳಿಸಲಾಗಿದೆ.

ಬಜೆಟ್‌ನಲ್ಲಿ ಎನ್‌ಪಿಆರ್ ಹೆಸರನ್ನು ಸೇರಿಸಿರುವುದು ಕೇರಳ ಸರ್ಕಾರದ ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ. ಜನಗಣತಿಯ ನೆಪದಲ್ಲಿ ಎನ್‌ಪಿಆರ್ ಅಂಕಿಅಂಶಗಳನ್ನು ಸಂಗ್ರಹಿಸಲು ಕೇಂದ್ರವು ಸಿದ್ಧತೆ ನಡೆಸುತ್ತಿದೆ ಎಂದು ಕೇರಳವು ತನ್ನ ಹೊಸ ಅಧಿಸೂಚನೆಯನ್ನು ಹೊರಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...