Homeಮುಖಪುಟನಿಝಾಮುದ್ದೀನ್ ಮರ್ಕಝ್‌ಗೆ ಭೇಟಿ ನೀಡಿದ್ದ ಅಜಿತ್ ದೋವಲ್

ನಿಝಾಮುದ್ದೀನ್ ಮರ್ಕಝ್‌ಗೆ ಭೇಟಿ ನೀಡಿದ್ದ ಅಜಿತ್ ದೋವಲ್

- Advertisement -
- Advertisement -

ದೆಹಲಿ ಪೊಲೀಸರು ಮತ್ತು ಭದ್ರತಾ ಸಂಸ್ಥೆಗಳಿಂದ ಬಂಗಲೆವಾಲಿ ಮಸೀದಿಯನ್ನು ಖಾಲಿ ಮಾಡುವಂತೆ ಮಾಡಿದ ಮನವಿಗೆ ಮಣಿಯಲು ನಿಜಾಮುದ್ದೀನ್ ಮರ್ಕಝ್ ಮುಖ್ಯಸ್ಥ ಮೌಲಾನಾ ಸಾದ್ ಅವರು ನಿರಾಕರಿಸಿದಾಗ, ಗೃಹ ಸಚಿವ ಅಮಿತ್ ಶಾ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್‌ಗೆ ಈ ಕೆಲಸವನ್ನು ಪೂರ್ಣಗೊಳಿಸುವಂತೆ ಮನವಿ ಮಾಡಿದರು.

ಗೃಹ ಸಚಿವಾಲಯದ ಉನ್ನತ ಅಧಿಕಾರಿಗಳ ಪ್ರಕಾರ, ಮಾರ್ಚ್ 28-29ರ ರಾತ್ರಿ ಅಜಿತ್ ದೋವಲ್‌ ಮರ್ಕಝ್‌ಗೆ ಮುಂಜಾನೆ 2.00 ಕ್ಕೆ ತಲುಪಿದರು ಮತ್ತು ಕೊರೊನ ಸೋಂಕಿಗೆ ಸಂಬಂಧಿಸಿದಂತೆ ನಿವಾಸಿಗಳನ್ನು ಪರೀಕ್ಷೆಗೆ ಒಳಪಡಿಸುವಂತೆ ಮೌಲಾನಾ ಸಾದ್ ಅವರಿಗೆ ಮನವರಿಕೆ ಮಾಡಿಕೊಟ್ಟರು. ಮಾರ್ಚ್ 18 ರಂದು ತೆಲಂಗಾಣದ ಕರೀಂನಗರದಲ್ಲಿ ಒಂಬತ್ತು ಕೊರೊನ ಪಾಸಿಟಿವ್ ಇರುವ ಇಂಡೋನೇಷಿಯನ್ನರನ್ನು ಭದ್ರತಾ ಸಂಸ್ಥೆಗಳು ಪತ್ತೆ ಹಚ್ಚಿದ್ದರಿಂದ ಶಾ ಮತ್ತು ದೋವಲ್ ಅವರು ಪರಿಸ್ಥಿತಿಯ ಬೆಳವಣಿಗೆಯನ್ನು ಗಮನಿಸುತ್ತಿದ್ದರು ಎನ್ನಲಾಗಿದೆ.

ಭದ್ರತಾ ಏಜೆನ್ಸಿಯೂ ಮರುದಿನವೇ ಎಲ್ಲಾ ರಾಜ್ಯ ಪೊಲೀಸ್ ಮತ್ತು ಅಂಗಸಂಸ್ಥೆ ಕಚೇರಿಗಳಿಗೆ ಮರ್ಕಝ್‌ ಸೋಂಕಿನ ಬಗ್ಗೆ ಎಚ್ಚರಿಕೆಯನ್ನು ಕಳುಹಿಸಿದ್ದಾರೆ.

ಮರ್ಕಝ್‌ ಮಾರ್ಚ್ 27, 28 ಮತ್ತು 29 ರಂದು 167 ತಬ್ಲಿಗಿ ಜನರನ್ನು ಆಸ್ಪತ್ರೆಗೆ ದಾಖಲಿಸಲು ಅವಕಾಶ ಮಾಡಿಕೊಟ್ಟರೆ, ದೋವಲ್ ಅವರ ಹಸ್ತಕ್ಷೇಪದ ನಂತರವೇ ಜಮಾಅತ್ ನಾಯಕತ್ವವು ಮಸೀದಿಯನ್ನು ಸ್ವಚ್ಛಗೊಳಿಸಲು ಮುಂದಾಯಿತು ಎನ್ನಲಾಗಿದೆ.

ದೋವಲ್ ಕಳೆದ ದಶಕಗಳಿಂದ, ಭಾರತ ಮತ್ತು ವಿದೇಶಗಳಲ್ಲಿನ ವಿವಿಧ ಮುಸ್ಲಿಂ ಚಳುವಳಿಗಳೊಂದಿಗೆ ಬಹಳ ನಿಕಟ ಸಂಪರ್ಕವನ್ನು ಹೊಂದಿದ್ದಾರೆ ಎನ್ನಲಾಗಿದೆ. ಅವರು ಎಲ್ಲಾ ಮುಸ್ಲಿಂ ಉಲೆಮಾಗಳೊಂದಿಗೆ ಮೊದಲ ಹೆಸರಿನ ಆಧಾರದ ಮೇಲೆ ಮತ್ತು ಭಾರತಕ್ಕಾಗಿ ರಾಷ್ಟ್ರೀಯ ಕಾರ್ಯತಂತ್ರವನ್ನು ರೂಪಿಸಲು ಅವರೊಂದಿಗೆ ಕೆಲಸ ಮಾಡುತ್ತಿದ್ದಾರೆ.

ಕಾರ್ಯಾಚರಣೆಯು ಈಗ 2 ನೇ ಹಂತಕ್ಕೆ ಸಾಗಿದೆ. ಭಾರತದಲ್ಲಿರುವ ಎಲ್ಲ ವಿದೇಶಿಯರನ್ನು ಪತ್ತೆಹಚ್ಚಿ ಅವರನ್ನು ವೈದ್ಯಕೀಯವಾಗಿ ಪರೀಕ್ಷಿಸಲು ಮತ್ತು ವೀಸಾ ಮಾನದಂಡಗಳ ಉಲ್ಲಂಘನೆಗೆ ಕಠಿಣವಾಗಿ ನೋಡುವ ಪ್ರಯತ್ನ ನಡೆದಿದೆ ಎಂದು ಭದ್ರತಾ ಅಧಿಕಾರಿಗಳು ಹೇಳುತ್ತಾರೆ. ದೆಹಲಿಯ ಮರ್ಕಝ್‌ನಲ್ಲಿ 216 ವಿದೇಶಿ ಪ್ರಜೆಗಳು ಇದ್ದಾರಲ್ಲದೆ, ದೇಶದ ವಿವಿಧ ಭಾಗಗಳಲ್ಲಿ 800 ಕ್ಕೂ ಹೆಚ್ಚು ಜನರಿದ್ದಾರೆ. ವಿದೇಶಿ ಪ್ರಜೆಗಳಲ್ಲಿ ಹೆಚ್ಚಿನವರು ಇಂಡೋನೇಷ್ಯಾ, ಮಲೇಷ್ಯಾ ಮತ್ತು ಬಾಂಗ್ಲಾದೇಶದ ಪ್ರಜೆಗಳು.

ಗೃಹ ಸಚಿವಾಲಯವು ಸುಮಾರು 2,000 ವಿದೇಶಿಯರು ಜನವರಿಯಿಂದ ಮರ್ಕಝ್‌ ಸಭೆಗೆ ಹಾಜರಾಗಿದ್ದಾರೆ ಎಂದು ಹೇಳಿದೆ. ಆರಂಭಿಕ ವರದಿಗಳು ಪ್ರವಾಸಿಗರ ವೀಸಾಗಳಲ್ಲಿ ಮಿಷನರಿ ಚಟುವಟಿಕೆಗೆ ಭಾರತವನ್ನು ಪ್ರವೇಶಿಸುವ ಮೂಲಕ ಬಹುತೇಕ ಎಲ್ಲರೂ ತಮ್ಮ ವೀಸಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಸೂಚಿಸುತ್ತದೆ.

ಮಿಷನರಿ ವರ್ಗದ ಅಡಿಯಲ್ಲಿ ವೀಸಾ ವಿನಂತಿಗಳನ್ನು ಸಲ್ಲಿಸಲು ಸರ್ಕಾರವು ಪುನರಾವರ್ತಿತ ಜ್ಞಾಪನೆಗಳನ್ನು ನೀಡಿದ್ದರೂ ಇದು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರನ್ನು ಮತ್ತೆ ದೇಶಕ್ಕೆ ಪ್ರವೇಶಿಸದಂತೆ ಕಪ್ಪುಪಟ್ಟಿಗೆ ಸೇರಿಸಲಾಗುವುದು ಎನ್ನಲಾಗಿದೆ.

ವಿದೇಶಿಯರಲ್ಲದೆ, ದೆಹಲಿಯ ಸಭೆಗಳಿಗೆ ಹಾಜರಾದ ಜನರೊಂದಿಗೆ ನಿಕಟ ಸಂಪರ್ಕಕ್ಕೆ ಬಂದ ಎಲ್ಲ ಭಾರತೀಯರನ್ನು ಗುರುತಿಸುವ ಪ್ರಯತ್ನವೂ ನಡೆಯುತ್ತಿದೆ. ಅವರಲ್ಲಿ ಕೊರೊನ ವೈರಸ್ ಇರುವಿಕೆಯ ಬಗ್ಗೆ ಪರೀಕ್ಷಿಸಲಾಗುತ್ತಿದೆ ಹಾಗೂ ಸಂಪರ್ಕತಡೆಯಲ್ಲಿ ಇರಿಸಲಾಗಿದೆ.

ತಬ್ಲೀಗ್ ಜಮಾಅತ್ ಅನ್ನು ಮೇವಾಟಿ ಪ್ರದೇಶದಲ್ಲಿ ಮೌಲಾನಾ ಸಾದ್ ಅವರ ಮುತ್ತಜ್ಜ ಮೌಲಾನಾ ಇಲ್ಯಾಸ್ ಕಂಧ್ಲಾವಿ ಸ್ಥಾಪಿಸಿದರು. ಮೇವಾಟಿ ಗ್ರಾಮದ ಜನರು ಮುಸ್ಲಿಮರಾಗಿ ಮತಾಂತರವಾಗಿ, ಮೇವರ್‌ನ ರಾಣಾ ಸಂಘನೊಂದಿಗೆ ಭಬರ್ಪುರದ ಬಳಿಯ ಖಾನ್ವಾ ಕದನದಲ್ಲಿ 1527 ರಲ್ಲಿ ಮೊಘಲ್ ದೊರೆ ಬಾಬರ್ ವಿರುದ್ಧ ಹೋರಾಡಿದ್ದರು. ಸಂಪೂರ್ಣವಾಗಿ ಕುರಾನ್ ಮೇಲೆ ಕೇಂದ್ರೀಕರಿಸಿ ಉತ್ತಮ ಮುಸ್ಲಿಂ ಆಗುವುದು ಹೇಗೆ ಎಂದು ಜಮಾಅತ್ ಬೋಧಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...