Homeಮುಖಪುಟನಿಝಾಮುದ್ದೀನ್ ಮರ್ಕಝ್‌ಗೆ ಭೇಟಿ ನೀಡಿದ್ದ ಅಜಿತ್ ದೋವಲ್

ನಿಝಾಮುದ್ದೀನ್ ಮರ್ಕಝ್‌ಗೆ ಭೇಟಿ ನೀಡಿದ್ದ ಅಜಿತ್ ದೋವಲ್

- Advertisement -
- Advertisement -

ದೆಹಲಿ ಪೊಲೀಸರು ಮತ್ತು ಭದ್ರತಾ ಸಂಸ್ಥೆಗಳಿಂದ ಬಂಗಲೆವಾಲಿ ಮಸೀದಿಯನ್ನು ಖಾಲಿ ಮಾಡುವಂತೆ ಮಾಡಿದ ಮನವಿಗೆ ಮಣಿಯಲು ನಿಜಾಮುದ್ದೀನ್ ಮರ್ಕಝ್ ಮುಖ್ಯಸ್ಥ ಮೌಲಾನಾ ಸಾದ್ ಅವರು ನಿರಾಕರಿಸಿದಾಗ, ಗೃಹ ಸಚಿವ ಅಮಿತ್ ಶಾ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್‌ಗೆ ಈ ಕೆಲಸವನ್ನು ಪೂರ್ಣಗೊಳಿಸುವಂತೆ ಮನವಿ ಮಾಡಿದರು.

ಗೃಹ ಸಚಿವಾಲಯದ ಉನ್ನತ ಅಧಿಕಾರಿಗಳ ಪ್ರಕಾರ, ಮಾರ್ಚ್ 28-29ರ ರಾತ್ರಿ ಅಜಿತ್ ದೋವಲ್‌ ಮರ್ಕಝ್‌ಗೆ ಮುಂಜಾನೆ 2.00 ಕ್ಕೆ ತಲುಪಿದರು ಮತ್ತು ಕೊರೊನ ಸೋಂಕಿಗೆ ಸಂಬಂಧಿಸಿದಂತೆ ನಿವಾಸಿಗಳನ್ನು ಪರೀಕ್ಷೆಗೆ ಒಳಪಡಿಸುವಂತೆ ಮೌಲಾನಾ ಸಾದ್ ಅವರಿಗೆ ಮನವರಿಕೆ ಮಾಡಿಕೊಟ್ಟರು. ಮಾರ್ಚ್ 18 ರಂದು ತೆಲಂಗಾಣದ ಕರೀಂನಗರದಲ್ಲಿ ಒಂಬತ್ತು ಕೊರೊನ ಪಾಸಿಟಿವ್ ಇರುವ ಇಂಡೋನೇಷಿಯನ್ನರನ್ನು ಭದ್ರತಾ ಸಂಸ್ಥೆಗಳು ಪತ್ತೆ ಹಚ್ಚಿದ್ದರಿಂದ ಶಾ ಮತ್ತು ದೋವಲ್ ಅವರು ಪರಿಸ್ಥಿತಿಯ ಬೆಳವಣಿಗೆಯನ್ನು ಗಮನಿಸುತ್ತಿದ್ದರು ಎನ್ನಲಾಗಿದೆ.

ಭದ್ರತಾ ಏಜೆನ್ಸಿಯೂ ಮರುದಿನವೇ ಎಲ್ಲಾ ರಾಜ್ಯ ಪೊಲೀಸ್ ಮತ್ತು ಅಂಗಸಂಸ್ಥೆ ಕಚೇರಿಗಳಿಗೆ ಮರ್ಕಝ್‌ ಸೋಂಕಿನ ಬಗ್ಗೆ ಎಚ್ಚರಿಕೆಯನ್ನು ಕಳುಹಿಸಿದ್ದಾರೆ.

ಮರ್ಕಝ್‌ ಮಾರ್ಚ್ 27, 28 ಮತ್ತು 29 ರಂದು 167 ತಬ್ಲಿಗಿ ಜನರನ್ನು ಆಸ್ಪತ್ರೆಗೆ ದಾಖಲಿಸಲು ಅವಕಾಶ ಮಾಡಿಕೊಟ್ಟರೆ, ದೋವಲ್ ಅವರ ಹಸ್ತಕ್ಷೇಪದ ನಂತರವೇ ಜಮಾಅತ್ ನಾಯಕತ್ವವು ಮಸೀದಿಯನ್ನು ಸ್ವಚ್ಛಗೊಳಿಸಲು ಮುಂದಾಯಿತು ಎನ್ನಲಾಗಿದೆ.

ದೋವಲ್ ಕಳೆದ ದಶಕಗಳಿಂದ, ಭಾರತ ಮತ್ತು ವಿದೇಶಗಳಲ್ಲಿನ ವಿವಿಧ ಮುಸ್ಲಿಂ ಚಳುವಳಿಗಳೊಂದಿಗೆ ಬಹಳ ನಿಕಟ ಸಂಪರ್ಕವನ್ನು ಹೊಂದಿದ್ದಾರೆ ಎನ್ನಲಾಗಿದೆ. ಅವರು ಎಲ್ಲಾ ಮುಸ್ಲಿಂ ಉಲೆಮಾಗಳೊಂದಿಗೆ ಮೊದಲ ಹೆಸರಿನ ಆಧಾರದ ಮೇಲೆ ಮತ್ತು ಭಾರತಕ್ಕಾಗಿ ರಾಷ್ಟ್ರೀಯ ಕಾರ್ಯತಂತ್ರವನ್ನು ರೂಪಿಸಲು ಅವರೊಂದಿಗೆ ಕೆಲಸ ಮಾಡುತ್ತಿದ್ದಾರೆ.

ಕಾರ್ಯಾಚರಣೆಯು ಈಗ 2 ನೇ ಹಂತಕ್ಕೆ ಸಾಗಿದೆ. ಭಾರತದಲ್ಲಿರುವ ಎಲ್ಲ ವಿದೇಶಿಯರನ್ನು ಪತ್ತೆಹಚ್ಚಿ ಅವರನ್ನು ವೈದ್ಯಕೀಯವಾಗಿ ಪರೀಕ್ಷಿಸಲು ಮತ್ತು ವೀಸಾ ಮಾನದಂಡಗಳ ಉಲ್ಲಂಘನೆಗೆ ಕಠಿಣವಾಗಿ ನೋಡುವ ಪ್ರಯತ್ನ ನಡೆದಿದೆ ಎಂದು ಭದ್ರತಾ ಅಧಿಕಾರಿಗಳು ಹೇಳುತ್ತಾರೆ. ದೆಹಲಿಯ ಮರ್ಕಝ್‌ನಲ್ಲಿ 216 ವಿದೇಶಿ ಪ್ರಜೆಗಳು ಇದ್ದಾರಲ್ಲದೆ, ದೇಶದ ವಿವಿಧ ಭಾಗಗಳಲ್ಲಿ 800 ಕ್ಕೂ ಹೆಚ್ಚು ಜನರಿದ್ದಾರೆ. ವಿದೇಶಿ ಪ್ರಜೆಗಳಲ್ಲಿ ಹೆಚ್ಚಿನವರು ಇಂಡೋನೇಷ್ಯಾ, ಮಲೇಷ್ಯಾ ಮತ್ತು ಬಾಂಗ್ಲಾದೇಶದ ಪ್ರಜೆಗಳು.

ಗೃಹ ಸಚಿವಾಲಯವು ಸುಮಾರು 2,000 ವಿದೇಶಿಯರು ಜನವರಿಯಿಂದ ಮರ್ಕಝ್‌ ಸಭೆಗೆ ಹಾಜರಾಗಿದ್ದಾರೆ ಎಂದು ಹೇಳಿದೆ. ಆರಂಭಿಕ ವರದಿಗಳು ಪ್ರವಾಸಿಗರ ವೀಸಾಗಳಲ್ಲಿ ಮಿಷನರಿ ಚಟುವಟಿಕೆಗೆ ಭಾರತವನ್ನು ಪ್ರವೇಶಿಸುವ ಮೂಲಕ ಬಹುತೇಕ ಎಲ್ಲರೂ ತಮ್ಮ ವೀಸಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಸೂಚಿಸುತ್ತದೆ.

ಮಿಷನರಿ ವರ್ಗದ ಅಡಿಯಲ್ಲಿ ವೀಸಾ ವಿನಂತಿಗಳನ್ನು ಸಲ್ಲಿಸಲು ಸರ್ಕಾರವು ಪುನರಾವರ್ತಿತ ಜ್ಞಾಪನೆಗಳನ್ನು ನೀಡಿದ್ದರೂ ಇದು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರನ್ನು ಮತ್ತೆ ದೇಶಕ್ಕೆ ಪ್ರವೇಶಿಸದಂತೆ ಕಪ್ಪುಪಟ್ಟಿಗೆ ಸೇರಿಸಲಾಗುವುದು ಎನ್ನಲಾಗಿದೆ.

ವಿದೇಶಿಯರಲ್ಲದೆ, ದೆಹಲಿಯ ಸಭೆಗಳಿಗೆ ಹಾಜರಾದ ಜನರೊಂದಿಗೆ ನಿಕಟ ಸಂಪರ್ಕಕ್ಕೆ ಬಂದ ಎಲ್ಲ ಭಾರತೀಯರನ್ನು ಗುರುತಿಸುವ ಪ್ರಯತ್ನವೂ ನಡೆಯುತ್ತಿದೆ. ಅವರಲ್ಲಿ ಕೊರೊನ ವೈರಸ್ ಇರುವಿಕೆಯ ಬಗ್ಗೆ ಪರೀಕ್ಷಿಸಲಾಗುತ್ತಿದೆ ಹಾಗೂ ಸಂಪರ್ಕತಡೆಯಲ್ಲಿ ಇರಿಸಲಾಗಿದೆ.

ತಬ್ಲೀಗ್ ಜಮಾಅತ್ ಅನ್ನು ಮೇವಾಟಿ ಪ್ರದೇಶದಲ್ಲಿ ಮೌಲಾನಾ ಸಾದ್ ಅವರ ಮುತ್ತಜ್ಜ ಮೌಲಾನಾ ಇಲ್ಯಾಸ್ ಕಂಧ್ಲಾವಿ ಸ್ಥಾಪಿಸಿದರು. ಮೇವಾಟಿ ಗ್ರಾಮದ ಜನರು ಮುಸ್ಲಿಮರಾಗಿ ಮತಾಂತರವಾಗಿ, ಮೇವರ್‌ನ ರಾಣಾ ಸಂಘನೊಂದಿಗೆ ಭಬರ್ಪುರದ ಬಳಿಯ ಖಾನ್ವಾ ಕದನದಲ್ಲಿ 1527 ರಲ್ಲಿ ಮೊಘಲ್ ದೊರೆ ಬಾಬರ್ ವಿರುದ್ಧ ಹೋರಾಡಿದ್ದರು. ಸಂಪೂರ್ಣವಾಗಿ ಕುರಾನ್ ಮೇಲೆ ಕೇಂದ್ರೀಕರಿಸಿ ಉತ್ತಮ ಮುಸ್ಲಿಂ ಆಗುವುದು ಹೇಗೆ ಎಂದು ಜಮಾಅತ್ ಬೋಧಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...