Homeಮುಖಪುಟನಿಝಾಮುದ್ದೀನ್ ಮರ್ಕಝ್‌ಗೆ ಭೇಟಿ ನೀಡಿದ್ದ ಅಜಿತ್ ದೋವಲ್

ನಿಝಾಮುದ್ದೀನ್ ಮರ್ಕಝ್‌ಗೆ ಭೇಟಿ ನೀಡಿದ್ದ ಅಜಿತ್ ದೋವಲ್

- Advertisement -
- Advertisement -

ದೆಹಲಿ ಪೊಲೀಸರು ಮತ್ತು ಭದ್ರತಾ ಸಂಸ್ಥೆಗಳಿಂದ ಬಂಗಲೆವಾಲಿ ಮಸೀದಿಯನ್ನು ಖಾಲಿ ಮಾಡುವಂತೆ ಮಾಡಿದ ಮನವಿಗೆ ಮಣಿಯಲು ನಿಜಾಮುದ್ದೀನ್ ಮರ್ಕಝ್ ಮುಖ್ಯಸ್ಥ ಮೌಲಾನಾ ಸಾದ್ ಅವರು ನಿರಾಕರಿಸಿದಾಗ, ಗೃಹ ಸಚಿವ ಅಮಿತ್ ಶಾ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್‌ಗೆ ಈ ಕೆಲಸವನ್ನು ಪೂರ್ಣಗೊಳಿಸುವಂತೆ ಮನವಿ ಮಾಡಿದರು.

ಗೃಹ ಸಚಿವಾಲಯದ ಉನ್ನತ ಅಧಿಕಾರಿಗಳ ಪ್ರಕಾರ, ಮಾರ್ಚ್ 28-29ರ ರಾತ್ರಿ ಅಜಿತ್ ದೋವಲ್‌ ಮರ್ಕಝ್‌ಗೆ ಮುಂಜಾನೆ 2.00 ಕ್ಕೆ ತಲುಪಿದರು ಮತ್ತು ಕೊರೊನ ಸೋಂಕಿಗೆ ಸಂಬಂಧಿಸಿದಂತೆ ನಿವಾಸಿಗಳನ್ನು ಪರೀಕ್ಷೆಗೆ ಒಳಪಡಿಸುವಂತೆ ಮೌಲಾನಾ ಸಾದ್ ಅವರಿಗೆ ಮನವರಿಕೆ ಮಾಡಿಕೊಟ್ಟರು. ಮಾರ್ಚ್ 18 ರಂದು ತೆಲಂಗಾಣದ ಕರೀಂನಗರದಲ್ಲಿ ಒಂಬತ್ತು ಕೊರೊನ ಪಾಸಿಟಿವ್ ಇರುವ ಇಂಡೋನೇಷಿಯನ್ನರನ್ನು ಭದ್ರತಾ ಸಂಸ್ಥೆಗಳು ಪತ್ತೆ ಹಚ್ಚಿದ್ದರಿಂದ ಶಾ ಮತ್ತು ದೋವಲ್ ಅವರು ಪರಿಸ್ಥಿತಿಯ ಬೆಳವಣಿಗೆಯನ್ನು ಗಮನಿಸುತ್ತಿದ್ದರು ಎನ್ನಲಾಗಿದೆ.

ಭದ್ರತಾ ಏಜೆನ್ಸಿಯೂ ಮರುದಿನವೇ ಎಲ್ಲಾ ರಾಜ್ಯ ಪೊಲೀಸ್ ಮತ್ತು ಅಂಗಸಂಸ್ಥೆ ಕಚೇರಿಗಳಿಗೆ ಮರ್ಕಝ್‌ ಸೋಂಕಿನ ಬಗ್ಗೆ ಎಚ್ಚರಿಕೆಯನ್ನು ಕಳುಹಿಸಿದ್ದಾರೆ.

ಮರ್ಕಝ್‌ ಮಾರ್ಚ್ 27, 28 ಮತ್ತು 29 ರಂದು 167 ತಬ್ಲಿಗಿ ಜನರನ್ನು ಆಸ್ಪತ್ರೆಗೆ ದಾಖಲಿಸಲು ಅವಕಾಶ ಮಾಡಿಕೊಟ್ಟರೆ, ದೋವಲ್ ಅವರ ಹಸ್ತಕ್ಷೇಪದ ನಂತರವೇ ಜಮಾಅತ್ ನಾಯಕತ್ವವು ಮಸೀದಿಯನ್ನು ಸ್ವಚ್ಛಗೊಳಿಸಲು ಮುಂದಾಯಿತು ಎನ್ನಲಾಗಿದೆ.

ದೋವಲ್ ಕಳೆದ ದಶಕಗಳಿಂದ, ಭಾರತ ಮತ್ತು ವಿದೇಶಗಳಲ್ಲಿನ ವಿವಿಧ ಮುಸ್ಲಿಂ ಚಳುವಳಿಗಳೊಂದಿಗೆ ಬಹಳ ನಿಕಟ ಸಂಪರ್ಕವನ್ನು ಹೊಂದಿದ್ದಾರೆ ಎನ್ನಲಾಗಿದೆ. ಅವರು ಎಲ್ಲಾ ಮುಸ್ಲಿಂ ಉಲೆಮಾಗಳೊಂದಿಗೆ ಮೊದಲ ಹೆಸರಿನ ಆಧಾರದ ಮೇಲೆ ಮತ್ತು ಭಾರತಕ್ಕಾಗಿ ರಾಷ್ಟ್ರೀಯ ಕಾರ್ಯತಂತ್ರವನ್ನು ರೂಪಿಸಲು ಅವರೊಂದಿಗೆ ಕೆಲಸ ಮಾಡುತ್ತಿದ್ದಾರೆ.

ಕಾರ್ಯಾಚರಣೆಯು ಈಗ 2 ನೇ ಹಂತಕ್ಕೆ ಸಾಗಿದೆ. ಭಾರತದಲ್ಲಿರುವ ಎಲ್ಲ ವಿದೇಶಿಯರನ್ನು ಪತ್ತೆಹಚ್ಚಿ ಅವರನ್ನು ವೈದ್ಯಕೀಯವಾಗಿ ಪರೀಕ್ಷಿಸಲು ಮತ್ತು ವೀಸಾ ಮಾನದಂಡಗಳ ಉಲ್ಲಂಘನೆಗೆ ಕಠಿಣವಾಗಿ ನೋಡುವ ಪ್ರಯತ್ನ ನಡೆದಿದೆ ಎಂದು ಭದ್ರತಾ ಅಧಿಕಾರಿಗಳು ಹೇಳುತ್ತಾರೆ. ದೆಹಲಿಯ ಮರ್ಕಝ್‌ನಲ್ಲಿ 216 ವಿದೇಶಿ ಪ್ರಜೆಗಳು ಇದ್ದಾರಲ್ಲದೆ, ದೇಶದ ವಿವಿಧ ಭಾಗಗಳಲ್ಲಿ 800 ಕ್ಕೂ ಹೆಚ್ಚು ಜನರಿದ್ದಾರೆ. ವಿದೇಶಿ ಪ್ರಜೆಗಳಲ್ಲಿ ಹೆಚ್ಚಿನವರು ಇಂಡೋನೇಷ್ಯಾ, ಮಲೇಷ್ಯಾ ಮತ್ತು ಬಾಂಗ್ಲಾದೇಶದ ಪ್ರಜೆಗಳು.

ಗೃಹ ಸಚಿವಾಲಯವು ಸುಮಾರು 2,000 ವಿದೇಶಿಯರು ಜನವರಿಯಿಂದ ಮರ್ಕಝ್‌ ಸಭೆಗೆ ಹಾಜರಾಗಿದ್ದಾರೆ ಎಂದು ಹೇಳಿದೆ. ಆರಂಭಿಕ ವರದಿಗಳು ಪ್ರವಾಸಿಗರ ವೀಸಾಗಳಲ್ಲಿ ಮಿಷನರಿ ಚಟುವಟಿಕೆಗೆ ಭಾರತವನ್ನು ಪ್ರವೇಶಿಸುವ ಮೂಲಕ ಬಹುತೇಕ ಎಲ್ಲರೂ ತಮ್ಮ ವೀಸಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಸೂಚಿಸುತ್ತದೆ.

ಮಿಷನರಿ ವರ್ಗದ ಅಡಿಯಲ್ಲಿ ವೀಸಾ ವಿನಂತಿಗಳನ್ನು ಸಲ್ಲಿಸಲು ಸರ್ಕಾರವು ಪುನರಾವರ್ತಿತ ಜ್ಞಾಪನೆಗಳನ್ನು ನೀಡಿದ್ದರೂ ಇದು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರನ್ನು ಮತ್ತೆ ದೇಶಕ್ಕೆ ಪ್ರವೇಶಿಸದಂತೆ ಕಪ್ಪುಪಟ್ಟಿಗೆ ಸೇರಿಸಲಾಗುವುದು ಎನ್ನಲಾಗಿದೆ.

ವಿದೇಶಿಯರಲ್ಲದೆ, ದೆಹಲಿಯ ಸಭೆಗಳಿಗೆ ಹಾಜರಾದ ಜನರೊಂದಿಗೆ ನಿಕಟ ಸಂಪರ್ಕಕ್ಕೆ ಬಂದ ಎಲ್ಲ ಭಾರತೀಯರನ್ನು ಗುರುತಿಸುವ ಪ್ರಯತ್ನವೂ ನಡೆಯುತ್ತಿದೆ. ಅವರಲ್ಲಿ ಕೊರೊನ ವೈರಸ್ ಇರುವಿಕೆಯ ಬಗ್ಗೆ ಪರೀಕ್ಷಿಸಲಾಗುತ್ತಿದೆ ಹಾಗೂ ಸಂಪರ್ಕತಡೆಯಲ್ಲಿ ಇರಿಸಲಾಗಿದೆ.

ತಬ್ಲೀಗ್ ಜಮಾಅತ್ ಅನ್ನು ಮೇವಾಟಿ ಪ್ರದೇಶದಲ್ಲಿ ಮೌಲಾನಾ ಸಾದ್ ಅವರ ಮುತ್ತಜ್ಜ ಮೌಲಾನಾ ಇಲ್ಯಾಸ್ ಕಂಧ್ಲಾವಿ ಸ್ಥಾಪಿಸಿದರು. ಮೇವಾಟಿ ಗ್ರಾಮದ ಜನರು ಮುಸ್ಲಿಮರಾಗಿ ಮತಾಂತರವಾಗಿ, ಮೇವರ್‌ನ ರಾಣಾ ಸಂಘನೊಂದಿಗೆ ಭಬರ್ಪುರದ ಬಳಿಯ ಖಾನ್ವಾ ಕದನದಲ್ಲಿ 1527 ರಲ್ಲಿ ಮೊಘಲ್ ದೊರೆ ಬಾಬರ್ ವಿರುದ್ಧ ಹೋರಾಡಿದ್ದರು. ಸಂಪೂರ್ಣವಾಗಿ ಕುರಾನ್ ಮೇಲೆ ಕೇಂದ್ರೀಕರಿಸಿ ಉತ್ತಮ ಮುಸ್ಲಿಂ ಆಗುವುದು ಹೇಗೆ ಎಂದು ಜಮಾಅತ್ ಬೋಧಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...