Homeಮುಖಪುಟನಿಝಾಮುದ್ದೀನ್ ಮರ್ಕಝ್‌ಗೆ ಭೇಟಿ ನೀಡಿದ್ದ ಅಜಿತ್ ದೋವಲ್

ನಿಝಾಮುದ್ದೀನ್ ಮರ್ಕಝ್‌ಗೆ ಭೇಟಿ ನೀಡಿದ್ದ ಅಜಿತ್ ದೋವಲ್

- Advertisement -
- Advertisement -

ದೆಹಲಿ ಪೊಲೀಸರು ಮತ್ತು ಭದ್ರತಾ ಸಂಸ್ಥೆಗಳಿಂದ ಬಂಗಲೆವಾಲಿ ಮಸೀದಿಯನ್ನು ಖಾಲಿ ಮಾಡುವಂತೆ ಮಾಡಿದ ಮನವಿಗೆ ಮಣಿಯಲು ನಿಜಾಮುದ್ದೀನ್ ಮರ್ಕಝ್ ಮುಖ್ಯಸ್ಥ ಮೌಲಾನಾ ಸಾದ್ ಅವರು ನಿರಾಕರಿಸಿದಾಗ, ಗೃಹ ಸಚಿವ ಅಮಿತ್ ಶಾ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್‌ಗೆ ಈ ಕೆಲಸವನ್ನು ಪೂರ್ಣಗೊಳಿಸುವಂತೆ ಮನವಿ ಮಾಡಿದರು.

ಗೃಹ ಸಚಿವಾಲಯದ ಉನ್ನತ ಅಧಿಕಾರಿಗಳ ಪ್ರಕಾರ, ಮಾರ್ಚ್ 28-29ರ ರಾತ್ರಿ ಅಜಿತ್ ದೋವಲ್‌ ಮರ್ಕಝ್‌ಗೆ ಮುಂಜಾನೆ 2.00 ಕ್ಕೆ ತಲುಪಿದರು ಮತ್ತು ಕೊರೊನ ಸೋಂಕಿಗೆ ಸಂಬಂಧಿಸಿದಂತೆ ನಿವಾಸಿಗಳನ್ನು ಪರೀಕ್ಷೆಗೆ ಒಳಪಡಿಸುವಂತೆ ಮೌಲಾನಾ ಸಾದ್ ಅವರಿಗೆ ಮನವರಿಕೆ ಮಾಡಿಕೊಟ್ಟರು. ಮಾರ್ಚ್ 18 ರಂದು ತೆಲಂಗಾಣದ ಕರೀಂನಗರದಲ್ಲಿ ಒಂಬತ್ತು ಕೊರೊನ ಪಾಸಿಟಿವ್ ಇರುವ ಇಂಡೋನೇಷಿಯನ್ನರನ್ನು ಭದ್ರತಾ ಸಂಸ್ಥೆಗಳು ಪತ್ತೆ ಹಚ್ಚಿದ್ದರಿಂದ ಶಾ ಮತ್ತು ದೋವಲ್ ಅವರು ಪರಿಸ್ಥಿತಿಯ ಬೆಳವಣಿಗೆಯನ್ನು ಗಮನಿಸುತ್ತಿದ್ದರು ಎನ್ನಲಾಗಿದೆ.

ಭದ್ರತಾ ಏಜೆನ್ಸಿಯೂ ಮರುದಿನವೇ ಎಲ್ಲಾ ರಾಜ್ಯ ಪೊಲೀಸ್ ಮತ್ತು ಅಂಗಸಂಸ್ಥೆ ಕಚೇರಿಗಳಿಗೆ ಮರ್ಕಝ್‌ ಸೋಂಕಿನ ಬಗ್ಗೆ ಎಚ್ಚರಿಕೆಯನ್ನು ಕಳುಹಿಸಿದ್ದಾರೆ.

ಮರ್ಕಝ್‌ ಮಾರ್ಚ್ 27, 28 ಮತ್ತು 29 ರಂದು 167 ತಬ್ಲಿಗಿ ಜನರನ್ನು ಆಸ್ಪತ್ರೆಗೆ ದಾಖಲಿಸಲು ಅವಕಾಶ ಮಾಡಿಕೊಟ್ಟರೆ, ದೋವಲ್ ಅವರ ಹಸ್ತಕ್ಷೇಪದ ನಂತರವೇ ಜಮಾಅತ್ ನಾಯಕತ್ವವು ಮಸೀದಿಯನ್ನು ಸ್ವಚ್ಛಗೊಳಿಸಲು ಮುಂದಾಯಿತು ಎನ್ನಲಾಗಿದೆ.

ದೋವಲ್ ಕಳೆದ ದಶಕಗಳಿಂದ, ಭಾರತ ಮತ್ತು ವಿದೇಶಗಳಲ್ಲಿನ ವಿವಿಧ ಮುಸ್ಲಿಂ ಚಳುವಳಿಗಳೊಂದಿಗೆ ಬಹಳ ನಿಕಟ ಸಂಪರ್ಕವನ್ನು ಹೊಂದಿದ್ದಾರೆ ಎನ್ನಲಾಗಿದೆ. ಅವರು ಎಲ್ಲಾ ಮುಸ್ಲಿಂ ಉಲೆಮಾಗಳೊಂದಿಗೆ ಮೊದಲ ಹೆಸರಿನ ಆಧಾರದ ಮೇಲೆ ಮತ್ತು ಭಾರತಕ್ಕಾಗಿ ರಾಷ್ಟ್ರೀಯ ಕಾರ್ಯತಂತ್ರವನ್ನು ರೂಪಿಸಲು ಅವರೊಂದಿಗೆ ಕೆಲಸ ಮಾಡುತ್ತಿದ್ದಾರೆ.

ಕಾರ್ಯಾಚರಣೆಯು ಈಗ 2 ನೇ ಹಂತಕ್ಕೆ ಸಾಗಿದೆ. ಭಾರತದಲ್ಲಿರುವ ಎಲ್ಲ ವಿದೇಶಿಯರನ್ನು ಪತ್ತೆಹಚ್ಚಿ ಅವರನ್ನು ವೈದ್ಯಕೀಯವಾಗಿ ಪರೀಕ್ಷಿಸಲು ಮತ್ತು ವೀಸಾ ಮಾನದಂಡಗಳ ಉಲ್ಲಂಘನೆಗೆ ಕಠಿಣವಾಗಿ ನೋಡುವ ಪ್ರಯತ್ನ ನಡೆದಿದೆ ಎಂದು ಭದ್ರತಾ ಅಧಿಕಾರಿಗಳು ಹೇಳುತ್ತಾರೆ. ದೆಹಲಿಯ ಮರ್ಕಝ್‌ನಲ್ಲಿ 216 ವಿದೇಶಿ ಪ್ರಜೆಗಳು ಇದ್ದಾರಲ್ಲದೆ, ದೇಶದ ವಿವಿಧ ಭಾಗಗಳಲ್ಲಿ 800 ಕ್ಕೂ ಹೆಚ್ಚು ಜನರಿದ್ದಾರೆ. ವಿದೇಶಿ ಪ್ರಜೆಗಳಲ್ಲಿ ಹೆಚ್ಚಿನವರು ಇಂಡೋನೇಷ್ಯಾ, ಮಲೇಷ್ಯಾ ಮತ್ತು ಬಾಂಗ್ಲಾದೇಶದ ಪ್ರಜೆಗಳು.

ಗೃಹ ಸಚಿವಾಲಯವು ಸುಮಾರು 2,000 ವಿದೇಶಿಯರು ಜನವರಿಯಿಂದ ಮರ್ಕಝ್‌ ಸಭೆಗೆ ಹಾಜರಾಗಿದ್ದಾರೆ ಎಂದು ಹೇಳಿದೆ. ಆರಂಭಿಕ ವರದಿಗಳು ಪ್ರವಾಸಿಗರ ವೀಸಾಗಳಲ್ಲಿ ಮಿಷನರಿ ಚಟುವಟಿಕೆಗೆ ಭಾರತವನ್ನು ಪ್ರವೇಶಿಸುವ ಮೂಲಕ ಬಹುತೇಕ ಎಲ್ಲರೂ ತಮ್ಮ ವೀಸಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಸೂಚಿಸುತ್ತದೆ.

ಮಿಷನರಿ ವರ್ಗದ ಅಡಿಯಲ್ಲಿ ವೀಸಾ ವಿನಂತಿಗಳನ್ನು ಸಲ್ಲಿಸಲು ಸರ್ಕಾರವು ಪುನರಾವರ್ತಿತ ಜ್ಞಾಪನೆಗಳನ್ನು ನೀಡಿದ್ದರೂ ಇದು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರನ್ನು ಮತ್ತೆ ದೇಶಕ್ಕೆ ಪ್ರವೇಶಿಸದಂತೆ ಕಪ್ಪುಪಟ್ಟಿಗೆ ಸೇರಿಸಲಾಗುವುದು ಎನ್ನಲಾಗಿದೆ.

ವಿದೇಶಿಯರಲ್ಲದೆ, ದೆಹಲಿಯ ಸಭೆಗಳಿಗೆ ಹಾಜರಾದ ಜನರೊಂದಿಗೆ ನಿಕಟ ಸಂಪರ್ಕಕ್ಕೆ ಬಂದ ಎಲ್ಲ ಭಾರತೀಯರನ್ನು ಗುರುತಿಸುವ ಪ್ರಯತ್ನವೂ ನಡೆಯುತ್ತಿದೆ. ಅವರಲ್ಲಿ ಕೊರೊನ ವೈರಸ್ ಇರುವಿಕೆಯ ಬಗ್ಗೆ ಪರೀಕ್ಷಿಸಲಾಗುತ್ತಿದೆ ಹಾಗೂ ಸಂಪರ್ಕತಡೆಯಲ್ಲಿ ಇರಿಸಲಾಗಿದೆ.

ತಬ್ಲೀಗ್ ಜಮಾಅತ್ ಅನ್ನು ಮೇವಾಟಿ ಪ್ರದೇಶದಲ್ಲಿ ಮೌಲಾನಾ ಸಾದ್ ಅವರ ಮುತ್ತಜ್ಜ ಮೌಲಾನಾ ಇಲ್ಯಾಸ್ ಕಂಧ್ಲಾವಿ ಸ್ಥಾಪಿಸಿದರು. ಮೇವಾಟಿ ಗ್ರಾಮದ ಜನರು ಮುಸ್ಲಿಮರಾಗಿ ಮತಾಂತರವಾಗಿ, ಮೇವರ್‌ನ ರಾಣಾ ಸಂಘನೊಂದಿಗೆ ಭಬರ್ಪುರದ ಬಳಿಯ ಖಾನ್ವಾ ಕದನದಲ್ಲಿ 1527 ರಲ್ಲಿ ಮೊಘಲ್ ದೊರೆ ಬಾಬರ್ ವಿರುದ್ಧ ಹೋರಾಡಿದ್ದರು. ಸಂಪೂರ್ಣವಾಗಿ ಕುರಾನ್ ಮೇಲೆ ಕೇಂದ್ರೀಕರಿಸಿ ಉತ್ತಮ ಮುಸ್ಲಿಂ ಆಗುವುದು ಹೇಗೆ ಎಂದು ಜಮಾಅತ್ ಬೋಧಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...