Homeಮುಖಪುಟ#NationalUnemploymentDay: ಮೋದಿ ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ- ಕಾಂಗ್ರೆಸ್

#NationalUnemploymentDay: ಮೋದಿ ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ- ಕಾಂಗ್ರೆಸ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ 71 ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಆದರೆ ಹುಟ್ಟಿದ ದಿನದ ಶುಭ ಕೋರಿದವರಿಗಿಂತ ಉದ್ಯೋಗ ಕೇಳಿದವರೆ ಹೆಚ್ಚಾಗಿದ್ದಾರೆ. ಕರ್ನಾಟಕ ಕಾಂಗ್ರೆಸ್ ಕೂಡ
ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇನೆ ಎಂದು ಅಧಿಕಾರ ಹಿಡಿದ ಪ್ರಧಾನಿ ಮೋದಿಯವರು ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ” ಎಂದು ಟೀಕೆ ಮಾಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಬೆಳಗ್ಗೆಯಿಂದ  ರಾಷ್ಟ್ರೀಯ ನಿರುದ್ಯೋಗ ದಿನ (#NationalUnemploymentDay, #राष्ट्रीय_बेरोजगार_दिवस), ಮೋದಿ ನಮಗೆ ಉದ್ಯೋಗ ನೀಡಿ(#मोदी_रोजगार_दो), ಅಖಂಡ ಗ್ರಹಚಾರ ದಿವಸ (#अखंड_पनौती_दिवस) ಹ್ಯಾಶ್‌ಟ್ಯಾಗ್‌ಗಳು ಕ್ರಮವಾಗಿ ಟ್ವಿಟರ್‌ ಟ್ರೆಂಡ್‌‌‌ನಲ್ಲಿದೆ. ಇದರ ಜೊತೆಗೆ ‘ವಿಶ್ವ ಫೇಕು ದಿನ’ #WorldFekuDay ಮತ್ತು ಜುಮ್ಲಾ ದಿವಸ್ #JumlaDiwas ಹ್ಯಾಶ್‌ಟ್ಯಾಗ್‌ಗಳು ಕೂಡಾ ಟ್ರೆಂಡ್‌ ಆಗಿವೆ.

“ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇನೆ ಎಂದು ಅಧಿಕಾರ ಹಿಡಿದ ಪ್ರಧಾನಿ ಮೋದಿಯವರು ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ. ತಾವೇನೋ ದುಡಿಯಲಾರದ ಸೋಂಬೇರಿತನದಲ್ಲಿ ಸ್ವಾಭಿಮಾನ ಮರೆತು ಭಿಕ್ಷೆ ಬೇಡಿರಬಹುದು, ಆದರೆ ದೇಶದ ಸ್ವಾಭಿಮಾನಿ ಯುವಜನತೆ ಭಿಕ್ಷೆ ಬೇಡಲಾರರು! ಬದುಕಲು ಜನತೆಗೆ ಉದ್ಯೋಗ ಬೇಕಿದೆ” ಎಂದು ಟೀಕಿಸಿದೆ.

ಇದನ್ನೂ ಓದಿ: #NationalUnemploymentDay | ಪ್ರಧಾನಿ ಜನ್ಮದಿನದಂದೆ ಉದ್ಯೋಗ ಕೇಳಿದ ದೇಶದ ಜನತೆ

“ಉದ್ಯೋಗ ಸೃಷ್ಟಿಯ ಪ್ರಶ್ನೆಗೆ ಯುವಕರು ಪಕೋಡಾ ಮಾರುತ್ತಿಲ್ಲವೇ ಎಂದು ಕೇಳಿದ ಜಗತ್ತಿನ ಏಕೈಕ ಪ್ರಧಾನಿ
ನರೇಂದ್ರ ಮೋದಿ!. ಇದು ಬೇಜವಾಬ್ದಾರಿತನ ಹಾಗೂ ಮೂರ್ಖತನದ ಪರಮಾವಧಿ. ಗ್ಯಾಸ್, ಅಡುಗೆ ಎಣ್ಣೆಯಂತಹ ಅಗತ್ಯ ವಸ್ತುಗಳ ಬೆಲೆ ದುಬಾರಿಯಾಗಿದೆ, ದೇಶವನ್ನು ಪಕೋಡಾ ಮಾಡಲೂ ಆಗದ ಸ್ಥಿತಿಗೆ ತಂದಿಟ್ಟಿದ್ದಾರೆ” ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಇತ್ತ, ಪ್ರಧಾನಿ ಮೋದಿಯ ಜನ್ಮದಿನವನ್ನು ‘ರಾಷ್ಟ್ರೀಯ ನಿರುದ್ಯೋಗ ದಿನ’ ಎಂದು ಆಚರಿಸುವುದಾಗಿ ಕಾಂಗ್ರೆಸ್‌ ಸೇರಿದಂತೆ ಹಲವಾರು ವಿಪಕ್ಷಗಳು, ಜನಪರ ಸಂಘಟನೆಗಳು ಈ ಹಿಂದೆಯೆ ಹೇಳಿದ್ದವು. ಯುವ ಕಾಂಗ್ರೆಸ್‌ ಇಂದು ದೇಶದಾದ್ಯಂತ ಪ್ರತಿಭಟನೆಯನ್ನೂ ನಡೆಸುತ್ತಿದೆ.

ಯೂತ್ ಕಾಂಗ್ರೆಸ್  ಘಟಕಗಳು ದೇಶಾಸ್ಯಂತ ಪ್ರತಿಭಟನೆ ನಡಸಿವೆ. ಜೊತೆಗೆ ತಮ್ಮ ಸಾಮಾಜಿಕ ಜಾಲತಾಣಗಳ ಪ್ರೋಫೈಲ್ ಪೋಟೋಗಳನ್ನು ರಾಷ್ಟ್ರೀಯ ನಿರುದ್ಯೋಗ ದಿವಸ ಎಂಬ ಪೋಸ್ಟರ್‌‌‌ ಬಳಸಿ ಬದಲಿಸಿವೆ. ರಾಜ್ಯದಲ್ಲಿಯೂ ಯುವ ಕಾಂಗ್ರೆಸ್ ಪ್ರತಿಭಟನೆ ಜೊತೆಗೆ ಉದ್ಯೋಗ ನೀಡಿ ಅಭಿಯಾನ ನಡೆಸಿದೆ.

ರೈತ ಹೋರಾಟದ ಟ್ವಿಟರ್‌ನ ಮುಖವಾದ ಕಿಸಾನ್ ಏಕ್ತಾ ಮೋರ್ಚಾ, “ಅನಿರೀಕ್ಷಿತವಾಗಿ, ಪ್ರಧಾನಿ ಮೋದಿಯವರ ಜನ್ಮವು ರಾಷ್ಟ್ರವನ್ನು ಮತ್ತು ಪ್ರಜಾಪ್ರಭುತ್ವವನ್ನು ಸಂಪೂರ್ಣವಾಗಿ ಹಾಳುಮಾಡಿದೆ. ಮೋದಿ ಸರ್ಕಾರ, ತನ್ನ ಜನರನ್ನು ಕೊಲ್ಲುವುದು, ಆಹಾರ ಉತ್ಪಾದಿಸುವವರನ್ನು ಅವಮಾನಿಸುವುದು, ಕೀಳುಮಟ್ಟದ ಮತ್ತು ಕ್ರೂರ ವಿಧಾನಗಳನ್ನು ಅಳವಡಿಸಿ ಸಾಮಾನ್ಯ ಮನುಷ್ಯನ ಹಕ್ಕುಗಳನ್ನು ದಮನಿಸುತ್ತಿದೆ. ನಾಚಿಕೆಗೇಡು, ಎಷ್ಟು ನಿರ್ದಯ ಪ್ರಧಾನಿ ಆಗಿರಬಹುದು ಅವರು. ಮೋದಿ ಹುಟ್ಟಿದ್ದೇ ಪ್ರಜಾಪ್ರಭುತ್ವವನ್ನು ನಾಶ ಮಾಡಲು” ಎಂದು ಅದು ಆಕ್ರೋಶ ವ್ಯಕ್ತಪಡಿಸಿದೆ.


ಇದನ್ನೂ ಓದಿ: ಆಗಸ್ಟ್‌ನಲ್ಲಿ 15 ಲಕ್ಷ ಭಾರತೀಯರ ಉದ್ಯೋಗ ನಷ್ಟ; ಶೇ. 8.32ಕ್ಕೇರಿದ ನಿರುದ್ಯೋಗ ಪ್ರಮಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...