Homeಮುಖಪುಟ#NationalUnemploymentDay: ಮೋದಿ ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ- ಕಾಂಗ್ರೆಸ್

#NationalUnemploymentDay: ಮೋದಿ ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ- ಕಾಂಗ್ರೆಸ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ 71 ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಆದರೆ ಹುಟ್ಟಿದ ದಿನದ ಶುಭ ಕೋರಿದವರಿಗಿಂತ ಉದ್ಯೋಗ ಕೇಳಿದವರೆ ಹೆಚ್ಚಾಗಿದ್ದಾರೆ. ಕರ್ನಾಟಕ ಕಾಂಗ್ರೆಸ್ ಕೂಡ
ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇನೆ ಎಂದು ಅಧಿಕಾರ ಹಿಡಿದ ಪ್ರಧಾನಿ ಮೋದಿಯವರು ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ” ಎಂದು ಟೀಕೆ ಮಾಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಬೆಳಗ್ಗೆಯಿಂದ  ರಾಷ್ಟ್ರೀಯ ನಿರುದ್ಯೋಗ ದಿನ (#NationalUnemploymentDay, #राष्ट्रीय_बेरोजगार_दिवस), ಮೋದಿ ನಮಗೆ ಉದ್ಯೋಗ ನೀಡಿ(#मोदी_रोजगार_दो), ಅಖಂಡ ಗ್ರಹಚಾರ ದಿವಸ (#अखंड_पनौती_दिवस) ಹ್ಯಾಶ್‌ಟ್ಯಾಗ್‌ಗಳು ಕ್ರಮವಾಗಿ ಟ್ವಿಟರ್‌ ಟ್ರೆಂಡ್‌‌‌ನಲ್ಲಿದೆ. ಇದರ ಜೊತೆಗೆ ‘ವಿಶ್ವ ಫೇಕು ದಿನ’ #WorldFekuDay ಮತ್ತು ಜುಮ್ಲಾ ದಿವಸ್ #JumlaDiwas ಹ್ಯಾಶ್‌ಟ್ಯಾಗ್‌ಗಳು ಕೂಡಾ ಟ್ರೆಂಡ್‌ ಆಗಿವೆ.

“ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇನೆ ಎಂದು ಅಧಿಕಾರ ಹಿಡಿದ ಪ್ರಧಾನಿ ಮೋದಿಯವರು ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ. ತಾವೇನೋ ದುಡಿಯಲಾರದ ಸೋಂಬೇರಿತನದಲ್ಲಿ ಸ್ವಾಭಿಮಾನ ಮರೆತು ಭಿಕ್ಷೆ ಬೇಡಿರಬಹುದು, ಆದರೆ ದೇಶದ ಸ್ವಾಭಿಮಾನಿ ಯುವಜನತೆ ಭಿಕ್ಷೆ ಬೇಡಲಾರರು! ಬದುಕಲು ಜನತೆಗೆ ಉದ್ಯೋಗ ಬೇಕಿದೆ” ಎಂದು ಟೀಕಿಸಿದೆ.

ಇದನ್ನೂ ಓದಿ: #NationalUnemploymentDay | ಪ್ರಧಾನಿ ಜನ್ಮದಿನದಂದೆ ಉದ್ಯೋಗ ಕೇಳಿದ ದೇಶದ ಜನತೆ

“ಉದ್ಯೋಗ ಸೃಷ್ಟಿಯ ಪ್ರಶ್ನೆಗೆ ಯುವಕರು ಪಕೋಡಾ ಮಾರುತ್ತಿಲ್ಲವೇ ಎಂದು ಕೇಳಿದ ಜಗತ್ತಿನ ಏಕೈಕ ಪ್ರಧಾನಿ
ನರೇಂದ್ರ ಮೋದಿ!. ಇದು ಬೇಜವಾಬ್ದಾರಿತನ ಹಾಗೂ ಮೂರ್ಖತನದ ಪರಮಾವಧಿ. ಗ್ಯಾಸ್, ಅಡುಗೆ ಎಣ್ಣೆಯಂತಹ ಅಗತ್ಯ ವಸ್ತುಗಳ ಬೆಲೆ ದುಬಾರಿಯಾಗಿದೆ, ದೇಶವನ್ನು ಪಕೋಡಾ ಮಾಡಲೂ ಆಗದ ಸ್ಥಿತಿಗೆ ತಂದಿಟ್ಟಿದ್ದಾರೆ” ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಇತ್ತ, ಪ್ರಧಾನಿ ಮೋದಿಯ ಜನ್ಮದಿನವನ್ನು ‘ರಾಷ್ಟ್ರೀಯ ನಿರುದ್ಯೋಗ ದಿನ’ ಎಂದು ಆಚರಿಸುವುದಾಗಿ ಕಾಂಗ್ರೆಸ್‌ ಸೇರಿದಂತೆ ಹಲವಾರು ವಿಪಕ್ಷಗಳು, ಜನಪರ ಸಂಘಟನೆಗಳು ಈ ಹಿಂದೆಯೆ ಹೇಳಿದ್ದವು. ಯುವ ಕಾಂಗ್ರೆಸ್‌ ಇಂದು ದೇಶದಾದ್ಯಂತ ಪ್ರತಿಭಟನೆಯನ್ನೂ ನಡೆಸುತ್ತಿದೆ.

ಯೂತ್ ಕಾಂಗ್ರೆಸ್  ಘಟಕಗಳು ದೇಶಾಸ್ಯಂತ ಪ್ರತಿಭಟನೆ ನಡಸಿವೆ. ಜೊತೆಗೆ ತಮ್ಮ ಸಾಮಾಜಿಕ ಜಾಲತಾಣಗಳ ಪ್ರೋಫೈಲ್ ಪೋಟೋಗಳನ್ನು ರಾಷ್ಟ್ರೀಯ ನಿರುದ್ಯೋಗ ದಿವಸ ಎಂಬ ಪೋಸ್ಟರ್‌‌‌ ಬಳಸಿ ಬದಲಿಸಿವೆ. ರಾಜ್ಯದಲ್ಲಿಯೂ ಯುವ ಕಾಂಗ್ರೆಸ್ ಪ್ರತಿಭಟನೆ ಜೊತೆಗೆ ಉದ್ಯೋಗ ನೀಡಿ ಅಭಿಯಾನ ನಡೆಸಿದೆ.

ರೈತ ಹೋರಾಟದ ಟ್ವಿಟರ್‌ನ ಮುಖವಾದ ಕಿಸಾನ್ ಏಕ್ತಾ ಮೋರ್ಚಾ, “ಅನಿರೀಕ್ಷಿತವಾಗಿ, ಪ್ರಧಾನಿ ಮೋದಿಯವರ ಜನ್ಮವು ರಾಷ್ಟ್ರವನ್ನು ಮತ್ತು ಪ್ರಜಾಪ್ರಭುತ್ವವನ್ನು ಸಂಪೂರ್ಣವಾಗಿ ಹಾಳುಮಾಡಿದೆ. ಮೋದಿ ಸರ್ಕಾರ, ತನ್ನ ಜನರನ್ನು ಕೊಲ್ಲುವುದು, ಆಹಾರ ಉತ್ಪಾದಿಸುವವರನ್ನು ಅವಮಾನಿಸುವುದು, ಕೀಳುಮಟ್ಟದ ಮತ್ತು ಕ್ರೂರ ವಿಧಾನಗಳನ್ನು ಅಳವಡಿಸಿ ಸಾಮಾನ್ಯ ಮನುಷ್ಯನ ಹಕ್ಕುಗಳನ್ನು ದಮನಿಸುತ್ತಿದೆ. ನಾಚಿಕೆಗೇಡು, ಎಷ್ಟು ನಿರ್ದಯ ಪ್ರಧಾನಿ ಆಗಿರಬಹುದು ಅವರು. ಮೋದಿ ಹುಟ್ಟಿದ್ದೇ ಪ್ರಜಾಪ್ರಭುತ್ವವನ್ನು ನಾಶ ಮಾಡಲು” ಎಂದು ಅದು ಆಕ್ರೋಶ ವ್ಯಕ್ತಪಡಿಸಿದೆ.


ಇದನ್ನೂ ಓದಿ: ಆಗಸ್ಟ್‌ನಲ್ಲಿ 15 ಲಕ್ಷ ಭಾರತೀಯರ ಉದ್ಯೋಗ ನಷ್ಟ; ಶೇ. 8.32ಕ್ಕೇರಿದ ನಿರುದ್ಯೋಗ ಪ್ರಮಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...