Homeಮುಖಪುಟ#NationalUnemploymentDay: ಮೋದಿ ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ- ಕಾಂಗ್ರೆಸ್

#NationalUnemploymentDay: ಮೋದಿ ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ- ಕಾಂಗ್ರೆಸ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ 71 ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಆದರೆ ಹುಟ್ಟಿದ ದಿನದ ಶುಭ ಕೋರಿದವರಿಗಿಂತ ಉದ್ಯೋಗ ಕೇಳಿದವರೆ ಹೆಚ್ಚಾಗಿದ್ದಾರೆ. ಕರ್ನಾಟಕ ಕಾಂಗ್ರೆಸ್ ಕೂಡ
ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇನೆ ಎಂದು ಅಧಿಕಾರ ಹಿಡಿದ ಪ್ರಧಾನಿ ಮೋದಿಯವರು ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ” ಎಂದು ಟೀಕೆ ಮಾಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಬೆಳಗ್ಗೆಯಿಂದ  ರಾಷ್ಟ್ರೀಯ ನಿರುದ್ಯೋಗ ದಿನ (#NationalUnemploymentDay, #राष्ट्रीय_बेरोजगार_दिवस), ಮೋದಿ ನಮಗೆ ಉದ್ಯೋಗ ನೀಡಿ(#मोदी_रोजगार_दो), ಅಖಂಡ ಗ್ರಹಚಾರ ದಿವಸ (#अखंड_पनौती_दिवस) ಹ್ಯಾಶ್‌ಟ್ಯಾಗ್‌ಗಳು ಕ್ರಮವಾಗಿ ಟ್ವಿಟರ್‌ ಟ್ರೆಂಡ್‌‌‌ನಲ್ಲಿದೆ. ಇದರ ಜೊತೆಗೆ ‘ವಿಶ್ವ ಫೇಕು ದಿನ’ #WorldFekuDay ಮತ್ತು ಜುಮ್ಲಾ ದಿವಸ್ #JumlaDiwas ಹ್ಯಾಶ್‌ಟ್ಯಾಗ್‌ಗಳು ಕೂಡಾ ಟ್ರೆಂಡ್‌ ಆಗಿವೆ.

“ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇನೆ ಎಂದು ಅಧಿಕಾರ ಹಿಡಿದ ಪ್ರಧಾನಿ ಮೋದಿಯವರು ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ. ತಾವೇನೋ ದುಡಿಯಲಾರದ ಸೋಂಬೇರಿತನದಲ್ಲಿ ಸ್ವಾಭಿಮಾನ ಮರೆತು ಭಿಕ್ಷೆ ಬೇಡಿರಬಹುದು, ಆದರೆ ದೇಶದ ಸ್ವಾಭಿಮಾನಿ ಯುವಜನತೆ ಭಿಕ್ಷೆ ಬೇಡಲಾರರು! ಬದುಕಲು ಜನತೆಗೆ ಉದ್ಯೋಗ ಬೇಕಿದೆ” ಎಂದು ಟೀಕಿಸಿದೆ.

ಇದನ್ನೂ ಓದಿ: #NationalUnemploymentDay | ಪ್ರಧಾನಿ ಜನ್ಮದಿನದಂದೆ ಉದ್ಯೋಗ ಕೇಳಿದ ದೇಶದ ಜನತೆ

“ಉದ್ಯೋಗ ಸೃಷ್ಟಿಯ ಪ್ರಶ್ನೆಗೆ ಯುವಕರು ಪಕೋಡಾ ಮಾರುತ್ತಿಲ್ಲವೇ ಎಂದು ಕೇಳಿದ ಜಗತ್ತಿನ ಏಕೈಕ ಪ್ರಧಾನಿ
ನರೇಂದ್ರ ಮೋದಿ!. ಇದು ಬೇಜವಾಬ್ದಾರಿತನ ಹಾಗೂ ಮೂರ್ಖತನದ ಪರಮಾವಧಿ. ಗ್ಯಾಸ್, ಅಡುಗೆ ಎಣ್ಣೆಯಂತಹ ಅಗತ್ಯ ವಸ್ತುಗಳ ಬೆಲೆ ದುಬಾರಿಯಾಗಿದೆ, ದೇಶವನ್ನು ಪಕೋಡಾ ಮಾಡಲೂ ಆಗದ ಸ್ಥಿತಿಗೆ ತಂದಿಟ್ಟಿದ್ದಾರೆ” ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಇತ್ತ, ಪ್ರಧಾನಿ ಮೋದಿಯ ಜನ್ಮದಿನವನ್ನು ‘ರಾಷ್ಟ್ರೀಯ ನಿರುದ್ಯೋಗ ದಿನ’ ಎಂದು ಆಚರಿಸುವುದಾಗಿ ಕಾಂಗ್ರೆಸ್‌ ಸೇರಿದಂತೆ ಹಲವಾರು ವಿಪಕ್ಷಗಳು, ಜನಪರ ಸಂಘಟನೆಗಳು ಈ ಹಿಂದೆಯೆ ಹೇಳಿದ್ದವು. ಯುವ ಕಾಂಗ್ರೆಸ್‌ ಇಂದು ದೇಶದಾದ್ಯಂತ ಪ್ರತಿಭಟನೆಯನ್ನೂ ನಡೆಸುತ್ತಿದೆ.

ಯೂತ್ ಕಾಂಗ್ರೆಸ್  ಘಟಕಗಳು ದೇಶಾಸ್ಯಂತ ಪ್ರತಿಭಟನೆ ನಡಸಿವೆ. ಜೊತೆಗೆ ತಮ್ಮ ಸಾಮಾಜಿಕ ಜಾಲತಾಣಗಳ ಪ್ರೋಫೈಲ್ ಪೋಟೋಗಳನ್ನು ರಾಷ್ಟ್ರೀಯ ನಿರುದ್ಯೋಗ ದಿವಸ ಎಂಬ ಪೋಸ್ಟರ್‌‌‌ ಬಳಸಿ ಬದಲಿಸಿವೆ. ರಾಜ್ಯದಲ್ಲಿಯೂ ಯುವ ಕಾಂಗ್ರೆಸ್ ಪ್ರತಿಭಟನೆ ಜೊತೆಗೆ ಉದ್ಯೋಗ ನೀಡಿ ಅಭಿಯಾನ ನಡೆಸಿದೆ.

ರೈತ ಹೋರಾಟದ ಟ್ವಿಟರ್‌ನ ಮುಖವಾದ ಕಿಸಾನ್ ಏಕ್ತಾ ಮೋರ್ಚಾ, “ಅನಿರೀಕ್ಷಿತವಾಗಿ, ಪ್ರಧಾನಿ ಮೋದಿಯವರ ಜನ್ಮವು ರಾಷ್ಟ್ರವನ್ನು ಮತ್ತು ಪ್ರಜಾಪ್ರಭುತ್ವವನ್ನು ಸಂಪೂರ್ಣವಾಗಿ ಹಾಳುಮಾಡಿದೆ. ಮೋದಿ ಸರ್ಕಾರ, ತನ್ನ ಜನರನ್ನು ಕೊಲ್ಲುವುದು, ಆಹಾರ ಉತ್ಪಾದಿಸುವವರನ್ನು ಅವಮಾನಿಸುವುದು, ಕೀಳುಮಟ್ಟದ ಮತ್ತು ಕ್ರೂರ ವಿಧಾನಗಳನ್ನು ಅಳವಡಿಸಿ ಸಾಮಾನ್ಯ ಮನುಷ್ಯನ ಹಕ್ಕುಗಳನ್ನು ದಮನಿಸುತ್ತಿದೆ. ನಾಚಿಕೆಗೇಡು, ಎಷ್ಟು ನಿರ್ದಯ ಪ್ರಧಾನಿ ಆಗಿರಬಹುದು ಅವರು. ಮೋದಿ ಹುಟ್ಟಿದ್ದೇ ಪ್ರಜಾಪ್ರಭುತ್ವವನ್ನು ನಾಶ ಮಾಡಲು” ಎಂದು ಅದು ಆಕ್ರೋಶ ವ್ಯಕ್ತಪಡಿಸಿದೆ.


ಇದನ್ನೂ ಓದಿ: ಆಗಸ್ಟ್‌ನಲ್ಲಿ 15 ಲಕ್ಷ ಭಾರತೀಯರ ಉದ್ಯೋಗ ನಷ್ಟ; ಶೇ. 8.32ಕ್ಕೇರಿದ ನಿರುದ್ಯೋಗ ಪ್ರಮಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...