Homeಮುಖಪುಟ#NationalUnemploymentDay | ಪ್ರಧಾನಿ ಜನ್ಮದಿನದಂದೆ ಉದ್ಯೋಗ ಕೇಳಿದ ದೇಶದ ಜನತೆ

#NationalUnemploymentDay | ಪ್ರಧಾನಿ ಜನ್ಮದಿನದಂದೆ ಉದ್ಯೋಗ ಕೇಳಿದ ದೇಶದ ಜನತೆ

ಗ್ರಹಚಾರ ದಿವಸ - #अखंड_पनौती_दिवस - ಎಂಬ ಹ್ಯಾಶ್‌ಟ್ಯಾಗ್‌‌ ಕೂಡಾ ಟ್ರೆಂಡ್ ಆಗಿದೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ 71 ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಆದರೆ ದೇಶದ ಜನತೆ ಸಾಮಾಜಿಕ ಜಾಲತಾಣಗಳಲ್ಲಿ, ನಿರುದ್ಯೋಗದ ಬಗ್ಗೆ ಟ್ವೀಟ್ ಮಾಡಿ ಧ್ವನಿ ಎತ್ತಿದ್ದು, ರಾಷ್ಟ್ರೀಯ ನಿರುದ್ಯೋಗ ದಿನ(#NationalUnemploymentDay, #राष्ट्रीय_बेरोजगार_दिवस), ಮೋದಿ ನಮಗೆ ಉದ್ಯೋಗ ನೀಡಿ(#मोदी_रोजगार_दो), ಅಖಂಡ ಗ್ರಹಚಾರ ದಿವಸ (#अखंड_पनौती_दिवस) ಹ್ಯಾಶ್‌ಟ್ಯಾಗ್‌ಗಳು ಕ್ರಮವಾಗಿ ಟ್ವಿಟರ್‌ ಟ್ರೆಂಡ್‌‌‌ನಲ್ಲಿದೆ. ಇದರ ಜೊತೆಗೆ ‘ವಿಶ್ವ ಫೇಕು ದಿನ’ #WorldFekuDay ಮತ್ತು ಜುಮ್ಲಾ ದಿವಸ್ #JumlaDiwas ಹ್ಯಾಶ್‌ಟ್ಯಾಗ್‌ಗಳು ಕೂಡಾ ಟ್ರೆಂಡ್‌ ಆಗಿವೆ.

ಬಿಜೆಪಿ ಅವರ ಹುಟ್ಟುಹಬ್ಬವನ್ನು ಒಂದು ವಾರಗಳ ಕಾಲ ಆಚರಿಸುವುದಾಗಿ ಹೇಳಿದೆ. ಜೊತೆಗೆ ಬಿಜೆಪಿಯ ನಾಯಕರು, ಬೆಂಬಲಿಗರು ಸಾಮಾಜಿಕ ಜಾಲತಾಣಲ್ಲಿ ಪ್ರಧಾನಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಹೇಳುತ್ತಿದ್ದು, ಈ ಹ್ಯಾಶ್‌ಟ್ಯಾಗ್‌ಗಳು 4 ಲಕ್ಷ ಟ್ವೀಟ್‌ಗಳಿದ್ದರೆ, ರಾಷ್ಟ್ರೀಯ ನಿರುದ್ಯೋಗ ದಿನ ಎಂಬ ಹಿಂದಿ ಹ್ಯಾಶ್‌ಟ್ಯಾಗ್‌ ಇದುವರೆಗೂ 11 ಲಕ್ಷ ಟ್ವೀಟ್‌ಗಳಾಗಿದೆ. ಉಳಿದ ಟ್ವೀಟ್‌ಗಳು ಕೂಡಾ ಕ್ರಮವಾಗಿ ಐದರಿಂದ ಎಂಟು ಲಕ್ಷಗಳವರೆಗೂ ಟ್ವೀಟ್‌ ಆಗಿದೆ.

ಇದನ್ನೂ ಓದಿ: #WorldFekuDay | ಪ್ರಧಾನಿ ಮೋದಿ ಜನ್ಮದಿನ – ‘ವಿಶ್ವ ಫೇಕು ದಿನ’ ಟ್ವಿಟರ್‌ ಟ್ರೆಂಡ್‌!

ಪ್ರಧಾನಿ ಮೋದಿಯ ಜನ್ಮದಿನವನ್ನು ‘ರಾಷ್ಟ್ರೀಯ ನಿರುದ್ಯೋಗ ದಿನ’ ಎಂದು ಆಚರಿಸುವುದಾಗಿ ಕಾಂಗ್ರೆಸ್‌ ಸೇರಿದಂತೆ ಹಲವಾರು ವಿಪಕ್ಷಗಳು, ಜನಪರ ಸಂಘಟನೆಗಳು ಈ ಹಿಂದೆಯೆ ಹೇಳಿದ್ದವು. ಯುವ ಕಾಂಗ್ರೆಸ್‌ ಇಂದು ದೇಶದಾದ್ಯಂತ ಪ್ರತಿಭಟನೆಯನ್ನೂ ನಡೆಸುತ್ತಿದೆ.

ಟ್ವಿಟರ್‌ ಬಳಕೆದಾರ ವಿವೇಕ್ ಕುಮಾರ್‌ ಅವರು, “ನಿರುದ್ಯೋಗದ ಬಗ್ಗೆ ಇತ್ತೀಚಿನ ಎನ್‌ಸಿಆರ್‌ಬಿ ವರದಿ ಭಯಾನಕವಾಗಿದೆ. ಈ ವಿಷಯದ ಕುರಿತು ತುರ್ತು ಚಿಂತನೆಯ ಅಗತ್ಯವಿದ್ದು, ರಾಜಕೀಯ ಪಕ್ಷಗಳು ಈ ವಿಷಯವನ್ನು ಜವಾಬ್ದಾರಿಯಿಂದ ತೆಗೆದುಕೊಳ್ಳಬೇಕು” ಎಂದು ಟ್ವೀಟ್ ಮಾಡಿದ್ದಾರೆ. ನಿರುದ್ಯೋಗ ಸಂಬಂಧಿ ಆತ್ಮಹತ್ಯೆಗಳು 2016 ರಿಂದ 2019 ರವರೆಗೆ 24% ಹೆಚ್ಚಾಗಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬಿಡುಗಡೆ ಮಾಡಿರುವ ವರದಿಯ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಮುಕ್ತಾರ್‌ ರಾವ್‌ ಅವರು, “ಆಗಸ್ಟ್ 2021 ರ ಸಾಂಕ್ರಾಮಿಕ ಸಮಯದಲ್ಲಿ ಸುಮಾರು 15 ಲಕ್ಷ ಜನರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಇದೇ ಸಮಯ ಗ್ರಾಮೀಣ ಭಾಗದ ಸುಮಾರು 13 ಲಕ್ಷ ಜನರು ಕೆಲಸ ಕಳೆದುಕೊಂಡಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಹುಟ್ಟುಹಬ್ಬವನ್ನು ‘ನಿರುದ್ಯೋಗ, ಜುಮ್ಲಾ ದಿನ’ವನ್ನಾಗಿ ಆಚರಿಸಲು ಸಜ್ಜು

ಹಂಸರಾಜ್ ಮೀನಾ ಅವರು, “ಹಲೋ ಪ್ರಧಾನಿ ನರೇಂದ್ರ ಮೋದಿ, ನೀವು ಪ್ರತಿ ವರ್ಷ 2 ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದೀರಿ. ಆದರೆ ನಿಮ್ಮ ಸರ್ಕಾರವು 7 ವರ್ಷಗಳಲ್ಲಿ 12.50 ಕೋಟಿ ಯುವಕರ ಉದ್ಯೋಗಗಳನ್ನು ಕಸಿದುಕೊಳ್ಳುವ ಕೆಲಸವನ್ನು ಮಾಡಿದೆ. ಇದು ನೇರವಾಗಿ ಯುವಕರ ಭವಿಷ್ಯದ ಜೊತೆ ಮಾಡುವ ವಂಚನೆಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮನೀಶ್ ಆನಂದ್ ಅವರು, “ಪ್ರಧಾನಿಗೆ ಒಂದೇ ಒಂದು ಪ್ರಶ್ನೆ, 14 ಕೋಟಿ ಉದ್ಯೋಗಗಳು ಎಲ್ಲಿ?” ಎಂದು ಪ್ರಶ್ನಿಸಿದ್ದಾರೆ. ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬರುವ ಮೊದಲು ಚುನಾವಣೆಯ ಪ್ರಣಾಳಿಕೆಯಲ್ಲಿ ಒಂದು ಕೋಟಿ ಉದ್ಯೋಗವನ್ನು ನೀಡುವುದಾಗಿ ಹೇಳಿದ್ದರು.

ಇದನ್ನೂ ಓದಿ: ಮುಂಬೈ ದಾಳಿಯ ಬಗ್ಗೆ ಮನಮೋಹನ್‌ ಸಿಂಗ್ ಅವರನ್ನು ಪ್ರಶ್ನಿಸಿದ ಮಾಧ್ಯಮ ಪುಲ್ವಾಮ ದಾಳಿ ಬಗ್ಗೆ ಮೋದಿಯನ್ನು ಪ್ರಶ್ನಿಸಲಿಲ್ಲ!

ಜಾನ್ ಅವರು, “ರೈಲ್ವೇ ಇಲಾಖೆಯ ಗ್ರೂಪ್ ಡಿ ನೇಮಕಾತಿ ಪರೀಕ್ಷೆಯ ದಿನಾಂಕಕ್ಕಾಗಿ ಕಾಯುತ್ತಿದ್ದೇವೆ. ಈ ವರ್ಷದಲ್ಲಿ ಮುಗಿಯಬೇಕಿರುವ ಅನೇಕ ಪರೀಕ್ಷೆಗಳು ಇದೆ. ಆದರೆ ನಾವು ಅಂತಿಮವಾಗಿ ಮಾಡುವುದು ಕಾಯುವುದು ಕಾಯುವುದು ಮತ್ತು ಕಾಯುವುದಾಗಿದೆ” ಎಂದು ಹೇಳಿದ್ದಾರೆ.

ರೈಲ್ವೇ ಇಲಾಖೆಯ ಡಿಗ್ರೂಪ್‌ ಹುದ್ದೆಗಳಿಗೆ ನಡೆಯಬೇಕಿದ್ದ ಪರೀಕ್ಷೆಯನ್ನು ಜೂನ್‌ನಲ್ಲಿ ಮುಂದೂಡಲಾಗಿತ್ತು. ಆದರೆ ಇನ್ನೂ ಕೂಡಾ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಿಲ್ಲ. ಇದರಲ್ಲಿ 1 ಲಕ್ಷಕ್ಕೂ ಅಧಿಕ ಹುದ್ದೆಗಳಿದ್ದು, ಈಗಾಗಲೆ 1.25 ಲಕ್ಷಕ್ಕಿಂತಲೂ ಅಧಿಕ ಅಭ್ಯರ್ಥಿಗಳು ಅರ್ಜಿಸಲ್ಲಿಸಿದ್ದಾರೆ.

 

ಸೋನಿಯಾ ಅವರು, “ನಮ್ಮ ಪ್ರಧಾನಿಯ ಅವರು ‘ಗಜನಿ’ ಚಿತ್ರದ ಅಮೀರ್‌ ಖಾನ್ ತರ. ಅವರು ಚುನಾವಣೆ ಸಮಯದಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಮರೆತಿದ್ದಾರೆ” ಎಂದು ಬರೆದಿದ್ದಾರೆ.

ರೋಹಿತಾಶ್ ಅವರು, “ನಿರುದ್ಯೋಗವು ನಿರುದ್ಯೋಗಿ ಯುವಕರಿಗೆ ಶಾಪವಾಗಿ ಪರಿಣಮಿಸಿದೆ. ಸಾರ್ವಜನಿಕ ವಲಯದಲ್ಲಿ ಉದ್ಯೋಗಗಳನ್ನು ಕಡಿಮೆ ಮಾಡಿರುವ ಮೋದಿ ಸರ್ಕಾರದ ತಂತ್ರಗಳು ನಿರುದ್ಯೋಗದ ಮೇಲೆ ದೊಡ್ಡ ಹೊಡೆತ ನೀಡಿದೆ” ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಆಗಸ್ಟ್‌ನಲ್ಲಿ 15 ಲಕ್ಷ ಭಾರತೀಯರ ಉದ್ಯೋಗ ನಷ್ಟ; ಶೇ. 8.32ಕ್ಕೇರಿದ ನಿರುದ್ಯೋಗ ಪ್ರಮಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...