Homeಮುಖಪುಟ#NationalUnemploymentDay | ಪ್ರಧಾನಿ ಜನ್ಮದಿನದಂದೆ ಉದ್ಯೋಗ ಕೇಳಿದ ದೇಶದ ಜನತೆ

#NationalUnemploymentDay | ಪ್ರಧಾನಿ ಜನ್ಮದಿನದಂದೆ ಉದ್ಯೋಗ ಕೇಳಿದ ದೇಶದ ಜನತೆ

ಗ್ರಹಚಾರ ದಿವಸ - #अखंड_पनौती_दिवस - ಎಂಬ ಹ್ಯಾಶ್‌ಟ್ಯಾಗ್‌‌ ಕೂಡಾ ಟ್ರೆಂಡ್ ಆಗಿದೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ 71 ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಆದರೆ ದೇಶದ ಜನತೆ ಸಾಮಾಜಿಕ ಜಾಲತಾಣಗಳಲ್ಲಿ, ನಿರುದ್ಯೋಗದ ಬಗ್ಗೆ ಟ್ವೀಟ್ ಮಾಡಿ ಧ್ವನಿ ಎತ್ತಿದ್ದು, ರಾಷ್ಟ್ರೀಯ ನಿರುದ್ಯೋಗ ದಿನ(#NationalUnemploymentDay, #राष्ट्रीय_बेरोजगार_दिवस), ಮೋದಿ ನಮಗೆ ಉದ್ಯೋಗ ನೀಡಿ(#मोदी_रोजगार_दो), ಅಖಂಡ ಗ್ರಹಚಾರ ದಿವಸ (#अखंड_पनौती_दिवस) ಹ್ಯಾಶ್‌ಟ್ಯಾಗ್‌ಗಳು ಕ್ರಮವಾಗಿ ಟ್ವಿಟರ್‌ ಟ್ರೆಂಡ್‌‌‌ನಲ್ಲಿದೆ. ಇದರ ಜೊತೆಗೆ ‘ವಿಶ್ವ ಫೇಕು ದಿನ’ #WorldFekuDay ಮತ್ತು ಜುಮ್ಲಾ ದಿವಸ್ #JumlaDiwas ಹ್ಯಾಶ್‌ಟ್ಯಾಗ್‌ಗಳು ಕೂಡಾ ಟ್ರೆಂಡ್‌ ಆಗಿವೆ.

ಬಿಜೆಪಿ ಅವರ ಹುಟ್ಟುಹಬ್ಬವನ್ನು ಒಂದು ವಾರಗಳ ಕಾಲ ಆಚರಿಸುವುದಾಗಿ ಹೇಳಿದೆ. ಜೊತೆಗೆ ಬಿಜೆಪಿಯ ನಾಯಕರು, ಬೆಂಬಲಿಗರು ಸಾಮಾಜಿಕ ಜಾಲತಾಣಲ್ಲಿ ಪ್ರಧಾನಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಹೇಳುತ್ತಿದ್ದು, ಈ ಹ್ಯಾಶ್‌ಟ್ಯಾಗ್‌ಗಳು 4 ಲಕ್ಷ ಟ್ವೀಟ್‌ಗಳಿದ್ದರೆ, ರಾಷ್ಟ್ರೀಯ ನಿರುದ್ಯೋಗ ದಿನ ಎಂಬ ಹಿಂದಿ ಹ್ಯಾಶ್‌ಟ್ಯಾಗ್‌ ಇದುವರೆಗೂ 11 ಲಕ್ಷ ಟ್ವೀಟ್‌ಗಳಾಗಿದೆ. ಉಳಿದ ಟ್ವೀಟ್‌ಗಳು ಕೂಡಾ ಕ್ರಮವಾಗಿ ಐದರಿಂದ ಎಂಟು ಲಕ್ಷಗಳವರೆಗೂ ಟ್ವೀಟ್‌ ಆಗಿದೆ.

ಇದನ್ನೂ ಓದಿ: #WorldFekuDay | ಪ್ರಧಾನಿ ಮೋದಿ ಜನ್ಮದಿನ – ‘ವಿಶ್ವ ಫೇಕು ದಿನ’ ಟ್ವಿಟರ್‌ ಟ್ರೆಂಡ್‌!

ಪ್ರಧಾನಿ ಮೋದಿಯ ಜನ್ಮದಿನವನ್ನು ‘ರಾಷ್ಟ್ರೀಯ ನಿರುದ್ಯೋಗ ದಿನ’ ಎಂದು ಆಚರಿಸುವುದಾಗಿ ಕಾಂಗ್ರೆಸ್‌ ಸೇರಿದಂತೆ ಹಲವಾರು ವಿಪಕ್ಷಗಳು, ಜನಪರ ಸಂಘಟನೆಗಳು ಈ ಹಿಂದೆಯೆ ಹೇಳಿದ್ದವು. ಯುವ ಕಾಂಗ್ರೆಸ್‌ ಇಂದು ದೇಶದಾದ್ಯಂತ ಪ್ರತಿಭಟನೆಯನ್ನೂ ನಡೆಸುತ್ತಿದೆ.

ಟ್ವಿಟರ್‌ ಬಳಕೆದಾರ ವಿವೇಕ್ ಕುಮಾರ್‌ ಅವರು, “ನಿರುದ್ಯೋಗದ ಬಗ್ಗೆ ಇತ್ತೀಚಿನ ಎನ್‌ಸಿಆರ್‌ಬಿ ವರದಿ ಭಯಾನಕವಾಗಿದೆ. ಈ ವಿಷಯದ ಕುರಿತು ತುರ್ತು ಚಿಂತನೆಯ ಅಗತ್ಯವಿದ್ದು, ರಾಜಕೀಯ ಪಕ್ಷಗಳು ಈ ವಿಷಯವನ್ನು ಜವಾಬ್ದಾರಿಯಿಂದ ತೆಗೆದುಕೊಳ್ಳಬೇಕು” ಎಂದು ಟ್ವೀಟ್ ಮಾಡಿದ್ದಾರೆ. ನಿರುದ್ಯೋಗ ಸಂಬಂಧಿ ಆತ್ಮಹತ್ಯೆಗಳು 2016 ರಿಂದ 2019 ರವರೆಗೆ 24% ಹೆಚ್ಚಾಗಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬಿಡುಗಡೆ ಮಾಡಿರುವ ವರದಿಯ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಮುಕ್ತಾರ್‌ ರಾವ್‌ ಅವರು, “ಆಗಸ್ಟ್ 2021 ರ ಸಾಂಕ್ರಾಮಿಕ ಸಮಯದಲ್ಲಿ ಸುಮಾರು 15 ಲಕ್ಷ ಜನರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಇದೇ ಸಮಯ ಗ್ರಾಮೀಣ ಭಾಗದ ಸುಮಾರು 13 ಲಕ್ಷ ಜನರು ಕೆಲಸ ಕಳೆದುಕೊಂಡಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಹುಟ್ಟುಹಬ್ಬವನ್ನು ‘ನಿರುದ್ಯೋಗ, ಜುಮ್ಲಾ ದಿನ’ವನ್ನಾಗಿ ಆಚರಿಸಲು ಸಜ್ಜು

ಹಂಸರಾಜ್ ಮೀನಾ ಅವರು, “ಹಲೋ ಪ್ರಧಾನಿ ನರೇಂದ್ರ ಮೋದಿ, ನೀವು ಪ್ರತಿ ವರ್ಷ 2 ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದೀರಿ. ಆದರೆ ನಿಮ್ಮ ಸರ್ಕಾರವು 7 ವರ್ಷಗಳಲ್ಲಿ 12.50 ಕೋಟಿ ಯುವಕರ ಉದ್ಯೋಗಗಳನ್ನು ಕಸಿದುಕೊಳ್ಳುವ ಕೆಲಸವನ್ನು ಮಾಡಿದೆ. ಇದು ನೇರವಾಗಿ ಯುವಕರ ಭವಿಷ್ಯದ ಜೊತೆ ಮಾಡುವ ವಂಚನೆಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮನೀಶ್ ಆನಂದ್ ಅವರು, “ಪ್ರಧಾನಿಗೆ ಒಂದೇ ಒಂದು ಪ್ರಶ್ನೆ, 14 ಕೋಟಿ ಉದ್ಯೋಗಗಳು ಎಲ್ಲಿ?” ಎಂದು ಪ್ರಶ್ನಿಸಿದ್ದಾರೆ. ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬರುವ ಮೊದಲು ಚುನಾವಣೆಯ ಪ್ರಣಾಳಿಕೆಯಲ್ಲಿ ಒಂದು ಕೋಟಿ ಉದ್ಯೋಗವನ್ನು ನೀಡುವುದಾಗಿ ಹೇಳಿದ್ದರು.

ಇದನ್ನೂ ಓದಿ: ಮುಂಬೈ ದಾಳಿಯ ಬಗ್ಗೆ ಮನಮೋಹನ್‌ ಸಿಂಗ್ ಅವರನ್ನು ಪ್ರಶ್ನಿಸಿದ ಮಾಧ್ಯಮ ಪುಲ್ವಾಮ ದಾಳಿ ಬಗ್ಗೆ ಮೋದಿಯನ್ನು ಪ್ರಶ್ನಿಸಲಿಲ್ಲ!

ಜಾನ್ ಅವರು, “ರೈಲ್ವೇ ಇಲಾಖೆಯ ಗ್ರೂಪ್ ಡಿ ನೇಮಕಾತಿ ಪರೀಕ್ಷೆಯ ದಿನಾಂಕಕ್ಕಾಗಿ ಕಾಯುತ್ತಿದ್ದೇವೆ. ಈ ವರ್ಷದಲ್ಲಿ ಮುಗಿಯಬೇಕಿರುವ ಅನೇಕ ಪರೀಕ್ಷೆಗಳು ಇದೆ. ಆದರೆ ನಾವು ಅಂತಿಮವಾಗಿ ಮಾಡುವುದು ಕಾಯುವುದು ಕಾಯುವುದು ಮತ್ತು ಕಾಯುವುದಾಗಿದೆ” ಎಂದು ಹೇಳಿದ್ದಾರೆ.

ರೈಲ್ವೇ ಇಲಾಖೆಯ ಡಿಗ್ರೂಪ್‌ ಹುದ್ದೆಗಳಿಗೆ ನಡೆಯಬೇಕಿದ್ದ ಪರೀಕ್ಷೆಯನ್ನು ಜೂನ್‌ನಲ್ಲಿ ಮುಂದೂಡಲಾಗಿತ್ತು. ಆದರೆ ಇನ್ನೂ ಕೂಡಾ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಿಲ್ಲ. ಇದರಲ್ಲಿ 1 ಲಕ್ಷಕ್ಕೂ ಅಧಿಕ ಹುದ್ದೆಗಳಿದ್ದು, ಈಗಾಗಲೆ 1.25 ಲಕ್ಷಕ್ಕಿಂತಲೂ ಅಧಿಕ ಅಭ್ಯರ್ಥಿಗಳು ಅರ್ಜಿಸಲ್ಲಿಸಿದ್ದಾರೆ.

 

ಸೋನಿಯಾ ಅವರು, “ನಮ್ಮ ಪ್ರಧಾನಿಯ ಅವರು ‘ಗಜನಿ’ ಚಿತ್ರದ ಅಮೀರ್‌ ಖಾನ್ ತರ. ಅವರು ಚುನಾವಣೆ ಸಮಯದಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಮರೆತಿದ್ದಾರೆ” ಎಂದು ಬರೆದಿದ್ದಾರೆ.

ರೋಹಿತಾಶ್ ಅವರು, “ನಿರುದ್ಯೋಗವು ನಿರುದ್ಯೋಗಿ ಯುವಕರಿಗೆ ಶಾಪವಾಗಿ ಪರಿಣಮಿಸಿದೆ. ಸಾರ್ವಜನಿಕ ವಲಯದಲ್ಲಿ ಉದ್ಯೋಗಗಳನ್ನು ಕಡಿಮೆ ಮಾಡಿರುವ ಮೋದಿ ಸರ್ಕಾರದ ತಂತ್ರಗಳು ನಿರುದ್ಯೋಗದ ಮೇಲೆ ದೊಡ್ಡ ಹೊಡೆತ ನೀಡಿದೆ” ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಆಗಸ್ಟ್‌ನಲ್ಲಿ 15 ಲಕ್ಷ ಭಾರತೀಯರ ಉದ್ಯೋಗ ನಷ್ಟ; ಶೇ. 8.32ಕ್ಕೇರಿದ ನಿರುದ್ಯೋಗ ಪ್ರಮಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...