Homeಮುಖಪುಟದೇಶಾದ್ಯಂತ 'ಭಗತ್ ಸಿಂಗ್ ಜನ್ ಅಧಿಕಾರ ಯಾತ್ರೆ' ಆರಂಭ; ನೂರಾರು ಯುವಕರು, ಕಾರ್ಮಿಕರು ಭಾಗಿ

ದೇಶಾದ್ಯಂತ ‘ಭಗತ್ ಸಿಂಗ್ ಜನ್ ಅಧಿಕಾರ ಯಾತ್ರೆ’ ಆರಂಭ; ನೂರಾರು ಯುವಕರು, ಕಾರ್ಮಿಕರು ಭಾಗಿ

- Advertisement -
- Advertisement -

ದೇಶ ಹಿಂದೆಂದೂ ಕಂಡರಿಯದಂತಹ ನಿರುದ್ಯೋಗ, ಹಣದುಬ್ಬರ ಮತ್ತು ಆರ್ಥಿಕ ಅಸಮಾನತೆಯನ್ನು ಎದುರಿಸುತ್ತಿದೆ. ನಿರಂತರವಾಗಿ ಬೆಲೆ ಏರಿಕೆ ಮತ್ತು ಉದ್ಯೋಗಗಳಿಲ್ಲದೆ ಯುವಕರು ಹತಾಶರಾಗಿದ್ದಾರೆ. ಈ ರೀತಿಯ ಅನೇಕ ಸಮಸ್ಯೆಗಳ ಪರಿಹಾರಕ್ಕಾಗಿ ವಿವಿಧ ಸಂಘಟನೆಗಳು ಇಂದಿನಿಂದ (12 ಮಾರ್ಚ್ 2023ರಿಂದ) 14 ಏಪ್ರಿಲ್ 2023 ರವರೆಗೆ ಭಗತ್ ಸಿಂಗ್ ಜನ್ ಅಧಿಕಾರ ಯಾತ್ರೆ (BSJAY) ಹೆಸರಿನಲ್ಲಿ ದೇಶಾದ್ಯಂತ ಒಂದು ತಿಂಗಳ ಮೆರವಣಿಗೆ ಪ್ರಾರಂಭಿಸಿವೆ.

ಈ ಯಾತ್ರೆಯನ್ನು ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾ (RWPI), ನೌಜವಾನ್ ಭಾರತ್ ಸಭಾ, ದಿಶಾ ವಿದ್ಯಾರ್ಥಿಗಳ ಸಂಘಟನೆ, ದೆಹಲಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘ ಮತ್ತು ಬಿಗುಲ್ ಮಜ್ದೂರ್ ದಸ್ತಾ ಎಂಬ ಹಲವಾರು ವಿದ್ಯಾರ್ಥಿಗಳು, ಯುವಕರು ಮತ್ತು ಕಾರ್ಮಿಕರ ಸಂಘಟನೆಗಳು ಆಯೋಜಿಸಿವೆ.

ಇಂದಿನಿಂದ ಆರಂಭವಾಗುವ ಯಾತ್ರೆಯು ದೆಹಲಿ, ಉತ್ತರ ಪ್ರದೇಶ, ಮಹಾರಾಷ್ಟ್ರ, ಹರಿಯಾಣ, ಬಿಹಾರ, ಉತ್ತರಾಖಂಡ, ಪಂಜಾಬ್, ಆಂಧ್ರಪ್ರದೇಶ, ಚಂಡೀಗಢ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಸಾಗಲಿದೆ. ಈ ರಾಜ್ಯಗಳ ಹಳ್ಳಿಗಳು ಮತ್ತು ನಗರಗಳಲ್ಲಿ ಸಾರ್ವಜನಿಕರೊಂದಿಗೆ ಅವರ ಸಮಸ್ಯಗಳ ಕುರಿತಾಗಿ ಸಂವಾದಗಳನ್ನು ನಡೆಸಲಾಗುತ್ತದೆ.

ವಿವಿಧ ಸಂಘಟನೆಗಳ ಪ್ರತಿನಿಧಿಗಳು ಈ ಬಗ್ಗೆ ವಾರದ ಆರಂಭದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದರು. ಈ ವೇಳೆ ಸಧ್ಯ ಜಾರಿಯಲ್ಲಿರುವ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳ ಅಡಿಯಲ್ಲಿ ವಿದ್ಯಾರ್ಥಿಗಳು ಮತ್ತು ಕಾರ್ಮಿಕರ ಬಿಕ್ಕಟ್ಟನ್ನು ಎತ್ತಿ ತೋರಿಸಿದರು.

ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾ ಪರವಾಗಿ ಮಾತನಾಡಿದ ಯೋಗೇಶ್, ”ಕೇಂದ್ರ ಸರ್ಕಾರ ‘ಧರ್ಮದ ಉನ್ಮಾದ’ವನ್ನು ಬಳಸಿಕೊಂಡು ಮೂಲಭೂತ ಸಾಮಾಜಿಕ ಭದ್ರತೆ ಮತ್ತು ಆರ್ಥಿಕ ಹಕ್ಕುಗಳ ಬಗೆಗಿನ ಗಮನವನ್ನು ಬೆರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದೆ” ಎಂದು ವಾದಿಸಿದರು.

”ಕೇಂದ್ರ ಬಿಜೆಪಿ ಸರ್ಕಾರ ಸುಳ್ಳು ಧಾರ್ಮಿಕ ಶತ್ರುವನ್ನು ಹುಟ್ಟುಹಾಕುವ ಮೂಲಕ, ಬ್ರಿಟಿಷರ ಒಡೆದು ಆಳುವ ನೀತಿಯನ್ನು ನಿಷ್ಠೆಯಿಂದ ಜಾರಿಗೆ ತರುತ್ತಿದೆ. ಬಿಜೆಪಿ, ಕಾಂಗ್ರೆಸ್, ಎಸ್‌ಪಿ, ಬಿಎಸ್‌ಪಿ, ಆರ್‌ಜೆಡಿ, ಜೆಡಿಯು ಮತ್ತು ಎಎಪಿ ದೊಡ್ಡ ಬಂಡವಾಳಶಾಹಿಗಳ ಹಿತಾಸಕ್ತಿಗಳನ್ನು ಪೂರೈಸುತ್ತಿವೆ. ಈಗ ಕ್ರಾಂತಿಯ ಮನೋಭಾವವನ್ನು ಪುನಶ್ಚೇತನಗೊಳಿಸುವುದು ಮುಖ್ಯವಾಗಿದೆ. ಭಗತ್ ಸಿಂಗ್ ಜನ್ ಅಧಿಕಾರ ಯಾತ್ರೆಯು (BSJAY) ಆ ನಿಟ್ಟಿನಲ್ಲಿ ಒಂದು ಪ್ರಯತ್ನವಾಗಿದೆ” ಎಂದು ಅವರು ಹೇಳಿದರು.

ದೆಹಲಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಒಕ್ಕೂಟದ ಅಧ್ಯಕ್ಷೆ ಶಿವಾನಿ ಕೌಲ್ ಮಾತನಾಡಿ, ”ಈ ಯಾತ್ರೆಯ ಉದ್ದೇಶವು ಜಾಗೃತಗೊಳಿಸುವುದು, ಜನರಲ್ಲಿ ಪ್ರಜ್ಞೆಯನ್ನು ಮೂಡಿಸುವುದು ಮತ್ತು ಅವರ ಮೂಲಭೂತ ಹಕ್ಕುಗಳಿಗಾಗಿ ಹೋರಾಡಲು ಅವರನ್ನು ಸಂಘಟಿಸುವುದಾಗಿದೆ” ಎಂದು ತಿಳಿಸಿದರು.

ದಿಶಾ ಸ್ಟೂಡೆಂಟ್ಸ್ ಆರ್ಗನೈಸೇಶನ್‌ನ ಪ್ರಿಯಂವದಾ, ”ಪ್ರಾಥಮಿಕ ಮತ್ತು ಉನ್ನತ ಶಿಕ್ಷಣದ ದುಃಸ್ಥಿತಿಯನ್ನು ವಿವರಿಸಿದರು. ದೇಶದಾದ್ಯಂತ ಶಾಲೆಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಶುಲ್ಕಗಳು ಹೆಚ್ಚಾಗುತ್ತಲೇ ಇವೆ ಆದರೆ ಬೋಧಕರ ಹುದ್ದೆಗಳು ಖಾಲಿ ಉಳಿದಿವೆ. ಮೋದಿ ಸರ್ಕಾರ ತಂದಿರುವ ಹೊಸ ಶಿಕ್ಷಣ ನೀತಿಯು ಶಿಕ್ಷಣದ ಖಾಸಗೀಕರಣ ಮತ್ತು ಕೋಮುವಾದವನ್ನು ಮಾತ್ರ ಮುಂದಿಡುತ್ತದೆ” ಎಂದು ಹೇಳಿದರು.

ನೌಜವಾನ್ ಭಾರತ್ ಸಭೆಯನ್ನು ಪ್ರತಿನಿಧಿಸುವ ವಿಶಾಲ್ ಅವರು ನಿರುದ್ಯೋಗದ ಬಗ್ಗೆ ಮಾತನಾಡಿ, ”ಮೋದಿ ಸರ್ಕಾರ ಪ್ರತಿ ವರ್ಷ ಎರಡು ಕೋಟಿ ಉದ್ಯೋಗಗಳನ್ನು ಒದಗಿಸುವ ಭರವಸೆಯ ಮೇಲೆ ಅಧಿಕಾರಕ್ಕೆ ಬಂದಿದೆ. ಆದರೆ ದೇಶದ ಸುಮಾರು 32 ಕೋಟಿ ಜನಸಂಖ್ಯೆಯು ನಿರುದ್ಯೋಗದ ಸಂಕಷ್ಟವನ್ನು ಎದುರಿಸುತ್ತಿದೆ” ಎಂದು ತಿಳಿಸಿದರು.

ಇದನ್ನೂ ಓದಿ: ಮೋದಿ ರೋಡ್‌ ಶೋ: ಒಂದು ಬದಿಗಷ್ಟೇ ಡಾಂಬರು, ಅಲಂಕಾರ ಮತ್ತೊಂದು ಬದಿಯಲ್ಲಿ ಗುಂಡಿಗಳ ಸಾಲು

CMIE (ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ)ದ ಅಂಕಿಅಂಶಗಳ ಪ್ರಕಾರ, ಪ್ರಸ್ತುತ, ದೇಶದಲ್ಲಿ ನಿರುದ್ಯೋಗ ದರವು COVID ಸಮಯದಲ್ಲಿ ಇದ್ದ ಮಟ್ಟವನ್ನು ತಲುಪಿದೆ. ಕೋವಿಡ್ ಸಮಯದಲ್ಲಿ ಕೆಲಸವನ್ನು ಕಳೆದುಕೊಂಡ ಪ್ರತಿ ಐದು ಯುವಕರಲ್ಲಿ ಒಬ್ಬರೂ ಇಲ್ಲಿಯವರೆಗೆ ಉದ್ಯೋಗವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಟ್ವಿಟರ್, ಅಮೆಜಾನ್, ಎಚ್‌ಪಿ, ಮೈಕ್ರೋಸಾಫ್ಟ್ ಮತ್ತು ನೆಟ್‌ಫ್ಲಿಕ್ಸ್‌ನಂತಹ ದೊಡ್ಡ ಮತ್ತು ಪ್ರತಿಷ್ಠಿತ ಕಂಪನಿಗಳು ಉದ್ಯೋಗಿಗಳನ್ನು ಕಡಿಮೆ ಮಾಡುತ್ತಿದೆ ಮತ್ತು ಹಿಂಬಡ್ತಿಯನ್ನು ನೀಡಲಾರಂಭಿಸಿವೆ. ಇದರಿಂದ ವೈಟ್-ಕಾಲರ್ ಟೆಕ್ ಮತ್ತು ಮ್ಯಾನೇಜರ್ ವರ್ಗಗಳು ಸಹ ಉದ್ಯೋಗ ನಷ್ಟ ಎದುರಿಸುತ್ತಿದೆ. ಇದೇ ರೀತಿ ಇಡೀ ದೇಶದ ಎಲ್ಲಾ ಕಾರ್ಖಾನೆಗಳು, ಕಚೇರಿಗಳು, ಅಂಗಡಿಗಳು, ವರ್ಕ್‌ಶಾಪ್‌ಗಳು ಇತ್ಯಾದಿಗಳಲ್ಲಿ ನಡೆಯುತ್ತಿದೆ. ಇದರಿಂದ ನಿರುದ್ಯೋಗ ಹೆಚ್ಚಾಗುತ್ತಲೇ ಇದೆ” ಎಂದು ವಿಶಾಲ್ ಅವರು ವಿವರಿಸಿದರು.

ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಕೆಳಗಿನ ಬೇಡಿಕೆಗಳನ್ನು ಮುಂದಿಟ್ಟು ಯಾತ್ರೆಯನ್ನು ಆಯೋಜಿಸಲಾಗಿದೆ:

1.) ಉದ್ಯೋಗದ ಮೂಲಭೂತ ಹಕ್ಕು: ಭಗತ್ ಸಿಂಗ್ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯಿದೆ (BASNEGA)ಯನ್ನು ಸಂಸತ್ತಿನಲ್ಲಿ ಅಂಗೀಕರಿಸಬೇಕು. ಅದರ ಅಡಿಯಲ್ಲಿ ಎಲ್ಲಾ ಅರ್ಹ ನಾಗರಿಕರಿಗೆ ಉದ್ಯೋಗಗಳನ್ನು ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ತಪ್ಪಿದಲ್ಲಿ ಕನಿಷ್ಠ 10,000 ರೂ. ನಿರುದ್ಯೋಗ ಭತ್ಯೆ ರೂಪದಲ್ಲಿ ನೀಡಬೇಕು.

2.) ಕಾರ್ಮಿಕರ ಪರವಾದ ಕಾನೂನುಗಳ ಕಟ್ಟುನಿಟ್ಟಾದ ಅನುಷ್ಠಾನ: ಎಲ್ಲಾ ಕಾರ್ಮಿಕ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಮತ್ತು ಹೊಸ ಉದ್ದೇಶಿತ ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು. ಕಾನೂನುಗಳು- 8ಗಂಟೆಗಳ ಕೆಲಸದ ದಿನ, ಸಾಪ್ತಾಹಿಕ ರಜೆ, ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ಸಂಬಳ, ಒಕ್ಕೂಟವನ್ನು ರಚಿಸುವ ಹಕ್ಕು ಮತ್ತು ಭದ್ರತಾ ನಿಬಂಧನೆಗಳ ಹಕ್ಕು, ಅನೌಪಚಾರಿಕ ಕಾರ್ಖಾನೆಗಳ ಮೇಲೆ ಸರ್ಕಾರದ ನಿಯಂತ್ರಣ, ನಿರಂತರವಾಗಿ ಕೆಲಸ ಮಾಡುವವರ ಗುತ್ತಿಗೆ ಕೆಲಸವನ್ನು ರದ್ದುಗೊಳಿಸಿ ಖಾಯಂಗೊಳಿಸಬೇಕು ಮತ್ತು ಕಾರ್ಮಿಕ ಕಾನೂನುಗಳ ಉಲ್ಲಂಘನೆಯನ್ನು ಕ್ರಿಮಿನಲ್ ವರ್ಗದ ಅಡಿಯಲ್ಲಿ ತರಬೇಕು ಆ ಮೂಲಕ ಅದನ್ನು ಶಿಕ್ಷಾರ್ಹಗೊಳಿಸಬೇಕು.

3.) ಹಣದುಬ್ಬರ ನಿಯಂತ್ರಣ: ಕಾಳಧನ ಮತ್ತು ಬೆಟ್ಟಿಂಗ್‌ಅನ್ನು ಶಿಕ್ಷಾರ್ಹ ಅಪರಾಧಗಳೆಂದು ಘೋಷಿಸುವ ಕಾನೂನನ್ನು ತರಬೇಕು. ಮೂಲ ಸರಕು ಮತ್ತು ಸೇವೆಗಳ ವಿತರಣೆಯ ವ್ಯವಸ್ಥೆಯನ್ನು ರಾಷ್ಟ್ರೀಕರಣಗೊಳಿಸಬೇಕು. ಎಲ್ಲಾ ನಾಗರಿಕರಿಗೆ ಆಹಾರ ಲಭ್ಯವಾಗುವಂತೆ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಸಾರ್ವತ್ರೀಕರಣಗೊಳಿಸಬೇಕು. ಹಣದುಬ್ಬರವನ್ನು ಕಡಿಮೆ ಮಾಡಲು, ಪರೋಕ್ಷ ತೆರಿಗೆಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಮತ್ತು ಆಸ್ತಿಯ ಆಧಾರದ ಮೇಲೆ ನೇರ ತೆರಿಗೆಗಳ ವ್ಯವಸ್ಥೆಯನ್ನು ಬಲಪಡಿಸಬೇಕು.

4.) ಶಿಕ್ಷಣ ಮೂಲಭೂತ ಹಕ್ಕು: ಜನವಿರೋಧಿ ಹೊಸ ಶಿಕ್ಷಣ ನೀತಿ 2020ನ್ನು ರದ್ದುಗೊಳಿಸಬೇಕು ಮತ್ತು ಪ್ರಾಥಮಿಕ ಮತ್ತು ಉನ್ನತ ಶಿಕ್ಷಣವನ್ನು ಬಲಪಡಿಸಬೇಕು.

5.) ಜಾತ್ಯತೀತ ದೇಶ: ‘ಸರ್ವ ಧರ್ಮ ಸಮಭವ’ದ ನಕಲಿ ಸೆಕ್ಯುಲರಿಸಂ ಬದಲಿಗೆ ನಿಜವಾದ ಜಾತ್ಯತೀತ ರಾಜ್ಯವನ್ನು ನಿರ್ಮಾಣ ಮಾಡಬೇಕು. ಯಾವುದೇ ಸಾರ್ವಜನಿಕ ನಾಯಕರು ಯಾವುದೇ ಧರ್ಮ, ಸಮುದಾಯ ಅಥವಾ ನಂಬಿಕೆಯ ಯಾವುದೇ ಉಲ್ಲೇಖ ಅಥವಾ ಬಳಕೆ ಮಾಡಿದರೆ ಅದನ್ನು ಶಿಕ್ಷಾರ್ಹ ಅಪರಾಧವೆಂದು ಕಾನೂನು ಮಾಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...