Homeಮುಖಪುಟದೇಶಾದ್ಯಂತ 'ಭಗತ್ ಸಿಂಗ್ ಜನ್ ಅಧಿಕಾರ ಯಾತ್ರೆ' ಆರಂಭ; ನೂರಾರು ಯುವಕರು, ಕಾರ್ಮಿಕರು ಭಾಗಿ

ದೇಶಾದ್ಯಂತ ‘ಭಗತ್ ಸಿಂಗ್ ಜನ್ ಅಧಿಕಾರ ಯಾತ್ರೆ’ ಆರಂಭ; ನೂರಾರು ಯುವಕರು, ಕಾರ್ಮಿಕರು ಭಾಗಿ

- Advertisement -
- Advertisement -

ದೇಶ ಹಿಂದೆಂದೂ ಕಂಡರಿಯದಂತಹ ನಿರುದ್ಯೋಗ, ಹಣದುಬ್ಬರ ಮತ್ತು ಆರ್ಥಿಕ ಅಸಮಾನತೆಯನ್ನು ಎದುರಿಸುತ್ತಿದೆ. ನಿರಂತರವಾಗಿ ಬೆಲೆ ಏರಿಕೆ ಮತ್ತು ಉದ್ಯೋಗಗಳಿಲ್ಲದೆ ಯುವಕರು ಹತಾಶರಾಗಿದ್ದಾರೆ. ಈ ರೀತಿಯ ಅನೇಕ ಸಮಸ್ಯೆಗಳ ಪರಿಹಾರಕ್ಕಾಗಿ ವಿವಿಧ ಸಂಘಟನೆಗಳು ಇಂದಿನಿಂದ (12 ಮಾರ್ಚ್ 2023ರಿಂದ) 14 ಏಪ್ರಿಲ್ 2023 ರವರೆಗೆ ಭಗತ್ ಸಿಂಗ್ ಜನ್ ಅಧಿಕಾರ ಯಾತ್ರೆ (BSJAY) ಹೆಸರಿನಲ್ಲಿ ದೇಶಾದ್ಯಂತ ಒಂದು ತಿಂಗಳ ಮೆರವಣಿಗೆ ಪ್ರಾರಂಭಿಸಿವೆ.

ಈ ಯಾತ್ರೆಯನ್ನು ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾ (RWPI), ನೌಜವಾನ್ ಭಾರತ್ ಸಭಾ, ದಿಶಾ ವಿದ್ಯಾರ್ಥಿಗಳ ಸಂಘಟನೆ, ದೆಹಲಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘ ಮತ್ತು ಬಿಗುಲ್ ಮಜ್ದೂರ್ ದಸ್ತಾ ಎಂಬ ಹಲವಾರು ವಿದ್ಯಾರ್ಥಿಗಳು, ಯುವಕರು ಮತ್ತು ಕಾರ್ಮಿಕರ ಸಂಘಟನೆಗಳು ಆಯೋಜಿಸಿವೆ.

ಇಂದಿನಿಂದ ಆರಂಭವಾಗುವ ಯಾತ್ರೆಯು ದೆಹಲಿ, ಉತ್ತರ ಪ್ರದೇಶ, ಮಹಾರಾಷ್ಟ್ರ, ಹರಿಯಾಣ, ಬಿಹಾರ, ಉತ್ತರಾಖಂಡ, ಪಂಜಾಬ್, ಆಂಧ್ರಪ್ರದೇಶ, ಚಂಡೀಗಢ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಸಾಗಲಿದೆ. ಈ ರಾಜ್ಯಗಳ ಹಳ್ಳಿಗಳು ಮತ್ತು ನಗರಗಳಲ್ಲಿ ಸಾರ್ವಜನಿಕರೊಂದಿಗೆ ಅವರ ಸಮಸ್ಯಗಳ ಕುರಿತಾಗಿ ಸಂವಾದಗಳನ್ನು ನಡೆಸಲಾಗುತ್ತದೆ.

ವಿವಿಧ ಸಂಘಟನೆಗಳ ಪ್ರತಿನಿಧಿಗಳು ಈ ಬಗ್ಗೆ ವಾರದ ಆರಂಭದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದರು. ಈ ವೇಳೆ ಸಧ್ಯ ಜಾರಿಯಲ್ಲಿರುವ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳ ಅಡಿಯಲ್ಲಿ ವಿದ್ಯಾರ್ಥಿಗಳು ಮತ್ತು ಕಾರ್ಮಿಕರ ಬಿಕ್ಕಟ್ಟನ್ನು ಎತ್ತಿ ತೋರಿಸಿದರು.

ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾ ಪರವಾಗಿ ಮಾತನಾಡಿದ ಯೋಗೇಶ್, ”ಕೇಂದ್ರ ಸರ್ಕಾರ ‘ಧರ್ಮದ ಉನ್ಮಾದ’ವನ್ನು ಬಳಸಿಕೊಂಡು ಮೂಲಭೂತ ಸಾಮಾಜಿಕ ಭದ್ರತೆ ಮತ್ತು ಆರ್ಥಿಕ ಹಕ್ಕುಗಳ ಬಗೆಗಿನ ಗಮನವನ್ನು ಬೆರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದೆ” ಎಂದು ವಾದಿಸಿದರು.

”ಕೇಂದ್ರ ಬಿಜೆಪಿ ಸರ್ಕಾರ ಸುಳ್ಳು ಧಾರ್ಮಿಕ ಶತ್ರುವನ್ನು ಹುಟ್ಟುಹಾಕುವ ಮೂಲಕ, ಬ್ರಿಟಿಷರ ಒಡೆದು ಆಳುವ ನೀತಿಯನ್ನು ನಿಷ್ಠೆಯಿಂದ ಜಾರಿಗೆ ತರುತ್ತಿದೆ. ಬಿಜೆಪಿ, ಕಾಂಗ್ರೆಸ್, ಎಸ್‌ಪಿ, ಬಿಎಸ್‌ಪಿ, ಆರ್‌ಜೆಡಿ, ಜೆಡಿಯು ಮತ್ತು ಎಎಪಿ ದೊಡ್ಡ ಬಂಡವಾಳಶಾಹಿಗಳ ಹಿತಾಸಕ್ತಿಗಳನ್ನು ಪೂರೈಸುತ್ತಿವೆ. ಈಗ ಕ್ರಾಂತಿಯ ಮನೋಭಾವವನ್ನು ಪುನಶ್ಚೇತನಗೊಳಿಸುವುದು ಮುಖ್ಯವಾಗಿದೆ. ಭಗತ್ ಸಿಂಗ್ ಜನ್ ಅಧಿಕಾರ ಯಾತ್ರೆಯು (BSJAY) ಆ ನಿಟ್ಟಿನಲ್ಲಿ ಒಂದು ಪ್ರಯತ್ನವಾಗಿದೆ” ಎಂದು ಅವರು ಹೇಳಿದರು.

ದೆಹಲಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಒಕ್ಕೂಟದ ಅಧ್ಯಕ್ಷೆ ಶಿವಾನಿ ಕೌಲ್ ಮಾತನಾಡಿ, ”ಈ ಯಾತ್ರೆಯ ಉದ್ದೇಶವು ಜಾಗೃತಗೊಳಿಸುವುದು, ಜನರಲ್ಲಿ ಪ್ರಜ್ಞೆಯನ್ನು ಮೂಡಿಸುವುದು ಮತ್ತು ಅವರ ಮೂಲಭೂತ ಹಕ್ಕುಗಳಿಗಾಗಿ ಹೋರಾಡಲು ಅವರನ್ನು ಸಂಘಟಿಸುವುದಾಗಿದೆ” ಎಂದು ತಿಳಿಸಿದರು.

ದಿಶಾ ಸ್ಟೂಡೆಂಟ್ಸ್ ಆರ್ಗನೈಸೇಶನ್‌ನ ಪ್ರಿಯಂವದಾ, ”ಪ್ರಾಥಮಿಕ ಮತ್ತು ಉನ್ನತ ಶಿಕ್ಷಣದ ದುಃಸ್ಥಿತಿಯನ್ನು ವಿವರಿಸಿದರು. ದೇಶದಾದ್ಯಂತ ಶಾಲೆಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಶುಲ್ಕಗಳು ಹೆಚ್ಚಾಗುತ್ತಲೇ ಇವೆ ಆದರೆ ಬೋಧಕರ ಹುದ್ದೆಗಳು ಖಾಲಿ ಉಳಿದಿವೆ. ಮೋದಿ ಸರ್ಕಾರ ತಂದಿರುವ ಹೊಸ ಶಿಕ್ಷಣ ನೀತಿಯು ಶಿಕ್ಷಣದ ಖಾಸಗೀಕರಣ ಮತ್ತು ಕೋಮುವಾದವನ್ನು ಮಾತ್ರ ಮುಂದಿಡುತ್ತದೆ” ಎಂದು ಹೇಳಿದರು.

ನೌಜವಾನ್ ಭಾರತ್ ಸಭೆಯನ್ನು ಪ್ರತಿನಿಧಿಸುವ ವಿಶಾಲ್ ಅವರು ನಿರುದ್ಯೋಗದ ಬಗ್ಗೆ ಮಾತನಾಡಿ, ”ಮೋದಿ ಸರ್ಕಾರ ಪ್ರತಿ ವರ್ಷ ಎರಡು ಕೋಟಿ ಉದ್ಯೋಗಗಳನ್ನು ಒದಗಿಸುವ ಭರವಸೆಯ ಮೇಲೆ ಅಧಿಕಾರಕ್ಕೆ ಬಂದಿದೆ. ಆದರೆ ದೇಶದ ಸುಮಾರು 32 ಕೋಟಿ ಜನಸಂಖ್ಯೆಯು ನಿರುದ್ಯೋಗದ ಸಂಕಷ್ಟವನ್ನು ಎದುರಿಸುತ್ತಿದೆ” ಎಂದು ತಿಳಿಸಿದರು.

ಇದನ್ನೂ ಓದಿ: ಮೋದಿ ರೋಡ್‌ ಶೋ: ಒಂದು ಬದಿಗಷ್ಟೇ ಡಾಂಬರು, ಅಲಂಕಾರ ಮತ್ತೊಂದು ಬದಿಯಲ್ಲಿ ಗುಂಡಿಗಳ ಸಾಲು

CMIE (ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ)ದ ಅಂಕಿಅಂಶಗಳ ಪ್ರಕಾರ, ಪ್ರಸ್ತುತ, ದೇಶದಲ್ಲಿ ನಿರುದ್ಯೋಗ ದರವು COVID ಸಮಯದಲ್ಲಿ ಇದ್ದ ಮಟ್ಟವನ್ನು ತಲುಪಿದೆ. ಕೋವಿಡ್ ಸಮಯದಲ್ಲಿ ಕೆಲಸವನ್ನು ಕಳೆದುಕೊಂಡ ಪ್ರತಿ ಐದು ಯುವಕರಲ್ಲಿ ಒಬ್ಬರೂ ಇಲ್ಲಿಯವರೆಗೆ ಉದ್ಯೋಗವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಟ್ವಿಟರ್, ಅಮೆಜಾನ್, ಎಚ್‌ಪಿ, ಮೈಕ್ರೋಸಾಫ್ಟ್ ಮತ್ತು ನೆಟ್‌ಫ್ಲಿಕ್ಸ್‌ನಂತಹ ದೊಡ್ಡ ಮತ್ತು ಪ್ರತಿಷ್ಠಿತ ಕಂಪನಿಗಳು ಉದ್ಯೋಗಿಗಳನ್ನು ಕಡಿಮೆ ಮಾಡುತ್ತಿದೆ ಮತ್ತು ಹಿಂಬಡ್ತಿಯನ್ನು ನೀಡಲಾರಂಭಿಸಿವೆ. ಇದರಿಂದ ವೈಟ್-ಕಾಲರ್ ಟೆಕ್ ಮತ್ತು ಮ್ಯಾನೇಜರ್ ವರ್ಗಗಳು ಸಹ ಉದ್ಯೋಗ ನಷ್ಟ ಎದುರಿಸುತ್ತಿದೆ. ಇದೇ ರೀತಿ ಇಡೀ ದೇಶದ ಎಲ್ಲಾ ಕಾರ್ಖಾನೆಗಳು, ಕಚೇರಿಗಳು, ಅಂಗಡಿಗಳು, ವರ್ಕ್‌ಶಾಪ್‌ಗಳು ಇತ್ಯಾದಿಗಳಲ್ಲಿ ನಡೆಯುತ್ತಿದೆ. ಇದರಿಂದ ನಿರುದ್ಯೋಗ ಹೆಚ್ಚಾಗುತ್ತಲೇ ಇದೆ” ಎಂದು ವಿಶಾಲ್ ಅವರು ವಿವರಿಸಿದರು.

ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಕೆಳಗಿನ ಬೇಡಿಕೆಗಳನ್ನು ಮುಂದಿಟ್ಟು ಯಾತ್ರೆಯನ್ನು ಆಯೋಜಿಸಲಾಗಿದೆ:

1.) ಉದ್ಯೋಗದ ಮೂಲಭೂತ ಹಕ್ಕು: ಭಗತ್ ಸಿಂಗ್ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯಿದೆ (BASNEGA)ಯನ್ನು ಸಂಸತ್ತಿನಲ್ಲಿ ಅಂಗೀಕರಿಸಬೇಕು. ಅದರ ಅಡಿಯಲ್ಲಿ ಎಲ್ಲಾ ಅರ್ಹ ನಾಗರಿಕರಿಗೆ ಉದ್ಯೋಗಗಳನ್ನು ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ತಪ್ಪಿದಲ್ಲಿ ಕನಿಷ್ಠ 10,000 ರೂ. ನಿರುದ್ಯೋಗ ಭತ್ಯೆ ರೂಪದಲ್ಲಿ ನೀಡಬೇಕು.

2.) ಕಾರ್ಮಿಕರ ಪರವಾದ ಕಾನೂನುಗಳ ಕಟ್ಟುನಿಟ್ಟಾದ ಅನುಷ್ಠಾನ: ಎಲ್ಲಾ ಕಾರ್ಮಿಕ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಮತ್ತು ಹೊಸ ಉದ್ದೇಶಿತ ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು. ಕಾನೂನುಗಳು- 8ಗಂಟೆಗಳ ಕೆಲಸದ ದಿನ, ಸಾಪ್ತಾಹಿಕ ರಜೆ, ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ಸಂಬಳ, ಒಕ್ಕೂಟವನ್ನು ರಚಿಸುವ ಹಕ್ಕು ಮತ್ತು ಭದ್ರತಾ ನಿಬಂಧನೆಗಳ ಹಕ್ಕು, ಅನೌಪಚಾರಿಕ ಕಾರ್ಖಾನೆಗಳ ಮೇಲೆ ಸರ್ಕಾರದ ನಿಯಂತ್ರಣ, ನಿರಂತರವಾಗಿ ಕೆಲಸ ಮಾಡುವವರ ಗುತ್ತಿಗೆ ಕೆಲಸವನ್ನು ರದ್ದುಗೊಳಿಸಿ ಖಾಯಂಗೊಳಿಸಬೇಕು ಮತ್ತು ಕಾರ್ಮಿಕ ಕಾನೂನುಗಳ ಉಲ್ಲಂಘನೆಯನ್ನು ಕ್ರಿಮಿನಲ್ ವರ್ಗದ ಅಡಿಯಲ್ಲಿ ತರಬೇಕು ಆ ಮೂಲಕ ಅದನ್ನು ಶಿಕ್ಷಾರ್ಹಗೊಳಿಸಬೇಕು.

3.) ಹಣದುಬ್ಬರ ನಿಯಂತ್ರಣ: ಕಾಳಧನ ಮತ್ತು ಬೆಟ್ಟಿಂಗ್‌ಅನ್ನು ಶಿಕ್ಷಾರ್ಹ ಅಪರಾಧಗಳೆಂದು ಘೋಷಿಸುವ ಕಾನೂನನ್ನು ತರಬೇಕು. ಮೂಲ ಸರಕು ಮತ್ತು ಸೇವೆಗಳ ವಿತರಣೆಯ ವ್ಯವಸ್ಥೆಯನ್ನು ರಾಷ್ಟ್ರೀಕರಣಗೊಳಿಸಬೇಕು. ಎಲ್ಲಾ ನಾಗರಿಕರಿಗೆ ಆಹಾರ ಲಭ್ಯವಾಗುವಂತೆ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಸಾರ್ವತ್ರೀಕರಣಗೊಳಿಸಬೇಕು. ಹಣದುಬ್ಬರವನ್ನು ಕಡಿಮೆ ಮಾಡಲು, ಪರೋಕ್ಷ ತೆರಿಗೆಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಮತ್ತು ಆಸ್ತಿಯ ಆಧಾರದ ಮೇಲೆ ನೇರ ತೆರಿಗೆಗಳ ವ್ಯವಸ್ಥೆಯನ್ನು ಬಲಪಡಿಸಬೇಕು.

4.) ಶಿಕ್ಷಣ ಮೂಲಭೂತ ಹಕ್ಕು: ಜನವಿರೋಧಿ ಹೊಸ ಶಿಕ್ಷಣ ನೀತಿ 2020ನ್ನು ರದ್ದುಗೊಳಿಸಬೇಕು ಮತ್ತು ಪ್ರಾಥಮಿಕ ಮತ್ತು ಉನ್ನತ ಶಿಕ್ಷಣವನ್ನು ಬಲಪಡಿಸಬೇಕು.

5.) ಜಾತ್ಯತೀತ ದೇಶ: ‘ಸರ್ವ ಧರ್ಮ ಸಮಭವ’ದ ನಕಲಿ ಸೆಕ್ಯುಲರಿಸಂ ಬದಲಿಗೆ ನಿಜವಾದ ಜಾತ್ಯತೀತ ರಾಜ್ಯವನ್ನು ನಿರ್ಮಾಣ ಮಾಡಬೇಕು. ಯಾವುದೇ ಸಾರ್ವಜನಿಕ ನಾಯಕರು ಯಾವುದೇ ಧರ್ಮ, ಸಮುದಾಯ ಅಥವಾ ನಂಬಿಕೆಯ ಯಾವುದೇ ಉಲ್ಲೇಖ ಅಥವಾ ಬಳಕೆ ಮಾಡಿದರೆ ಅದನ್ನು ಶಿಕ್ಷಾರ್ಹ ಅಪರಾಧವೆಂದು ಕಾನೂನು ಮಾಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...