Homeಮುಖಪುಟದೇಶಾದ್ಯಂತ 'ಭಗತ್ ಸಿಂಗ್ ಜನ್ ಅಧಿಕಾರ ಯಾತ್ರೆ' ಆರಂಭ; ನೂರಾರು ಯುವಕರು, ಕಾರ್ಮಿಕರು ಭಾಗಿ

ದೇಶಾದ್ಯಂತ ‘ಭಗತ್ ಸಿಂಗ್ ಜನ್ ಅಧಿಕಾರ ಯಾತ್ರೆ’ ಆರಂಭ; ನೂರಾರು ಯುವಕರು, ಕಾರ್ಮಿಕರು ಭಾಗಿ

- Advertisement -
- Advertisement -

ದೇಶ ಹಿಂದೆಂದೂ ಕಂಡರಿಯದಂತಹ ನಿರುದ್ಯೋಗ, ಹಣದುಬ್ಬರ ಮತ್ತು ಆರ್ಥಿಕ ಅಸಮಾನತೆಯನ್ನು ಎದುರಿಸುತ್ತಿದೆ. ನಿರಂತರವಾಗಿ ಬೆಲೆ ಏರಿಕೆ ಮತ್ತು ಉದ್ಯೋಗಗಳಿಲ್ಲದೆ ಯುವಕರು ಹತಾಶರಾಗಿದ್ದಾರೆ. ಈ ರೀತಿಯ ಅನೇಕ ಸಮಸ್ಯೆಗಳ ಪರಿಹಾರಕ್ಕಾಗಿ ವಿವಿಧ ಸಂಘಟನೆಗಳು ಇಂದಿನಿಂದ (12 ಮಾರ್ಚ್ 2023ರಿಂದ) 14 ಏಪ್ರಿಲ್ 2023 ರವರೆಗೆ ಭಗತ್ ಸಿಂಗ್ ಜನ್ ಅಧಿಕಾರ ಯಾತ್ರೆ (BSJAY) ಹೆಸರಿನಲ್ಲಿ ದೇಶಾದ್ಯಂತ ಒಂದು ತಿಂಗಳ ಮೆರವಣಿಗೆ ಪ್ರಾರಂಭಿಸಿವೆ.

ಈ ಯಾತ್ರೆಯನ್ನು ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾ (RWPI), ನೌಜವಾನ್ ಭಾರತ್ ಸಭಾ, ದಿಶಾ ವಿದ್ಯಾರ್ಥಿಗಳ ಸಂಘಟನೆ, ದೆಹಲಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘ ಮತ್ತು ಬಿಗುಲ್ ಮಜ್ದೂರ್ ದಸ್ತಾ ಎಂಬ ಹಲವಾರು ವಿದ್ಯಾರ್ಥಿಗಳು, ಯುವಕರು ಮತ್ತು ಕಾರ್ಮಿಕರ ಸಂಘಟನೆಗಳು ಆಯೋಜಿಸಿವೆ.

ಇಂದಿನಿಂದ ಆರಂಭವಾಗುವ ಯಾತ್ರೆಯು ದೆಹಲಿ, ಉತ್ತರ ಪ್ರದೇಶ, ಮಹಾರಾಷ್ಟ್ರ, ಹರಿಯಾಣ, ಬಿಹಾರ, ಉತ್ತರಾಖಂಡ, ಪಂಜಾಬ್, ಆಂಧ್ರಪ್ರದೇಶ, ಚಂಡೀಗಢ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಸಾಗಲಿದೆ. ಈ ರಾಜ್ಯಗಳ ಹಳ್ಳಿಗಳು ಮತ್ತು ನಗರಗಳಲ್ಲಿ ಸಾರ್ವಜನಿಕರೊಂದಿಗೆ ಅವರ ಸಮಸ್ಯಗಳ ಕುರಿತಾಗಿ ಸಂವಾದಗಳನ್ನು ನಡೆಸಲಾಗುತ್ತದೆ.

ವಿವಿಧ ಸಂಘಟನೆಗಳ ಪ್ರತಿನಿಧಿಗಳು ಈ ಬಗ್ಗೆ ವಾರದ ಆರಂಭದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದರು. ಈ ವೇಳೆ ಸಧ್ಯ ಜಾರಿಯಲ್ಲಿರುವ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳ ಅಡಿಯಲ್ಲಿ ವಿದ್ಯಾರ್ಥಿಗಳು ಮತ್ತು ಕಾರ್ಮಿಕರ ಬಿಕ್ಕಟ್ಟನ್ನು ಎತ್ತಿ ತೋರಿಸಿದರು.

ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾ ಪರವಾಗಿ ಮಾತನಾಡಿದ ಯೋಗೇಶ್, ”ಕೇಂದ್ರ ಸರ್ಕಾರ ‘ಧರ್ಮದ ಉನ್ಮಾದ’ವನ್ನು ಬಳಸಿಕೊಂಡು ಮೂಲಭೂತ ಸಾಮಾಜಿಕ ಭದ್ರತೆ ಮತ್ತು ಆರ್ಥಿಕ ಹಕ್ಕುಗಳ ಬಗೆಗಿನ ಗಮನವನ್ನು ಬೆರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದೆ” ಎಂದು ವಾದಿಸಿದರು.

”ಕೇಂದ್ರ ಬಿಜೆಪಿ ಸರ್ಕಾರ ಸುಳ್ಳು ಧಾರ್ಮಿಕ ಶತ್ರುವನ್ನು ಹುಟ್ಟುಹಾಕುವ ಮೂಲಕ, ಬ್ರಿಟಿಷರ ಒಡೆದು ಆಳುವ ನೀತಿಯನ್ನು ನಿಷ್ಠೆಯಿಂದ ಜಾರಿಗೆ ತರುತ್ತಿದೆ. ಬಿಜೆಪಿ, ಕಾಂಗ್ರೆಸ್, ಎಸ್‌ಪಿ, ಬಿಎಸ್‌ಪಿ, ಆರ್‌ಜೆಡಿ, ಜೆಡಿಯು ಮತ್ತು ಎಎಪಿ ದೊಡ್ಡ ಬಂಡವಾಳಶಾಹಿಗಳ ಹಿತಾಸಕ್ತಿಗಳನ್ನು ಪೂರೈಸುತ್ತಿವೆ. ಈಗ ಕ್ರಾಂತಿಯ ಮನೋಭಾವವನ್ನು ಪುನಶ್ಚೇತನಗೊಳಿಸುವುದು ಮುಖ್ಯವಾಗಿದೆ. ಭಗತ್ ಸಿಂಗ್ ಜನ್ ಅಧಿಕಾರ ಯಾತ್ರೆಯು (BSJAY) ಆ ನಿಟ್ಟಿನಲ್ಲಿ ಒಂದು ಪ್ರಯತ್ನವಾಗಿದೆ” ಎಂದು ಅವರು ಹೇಳಿದರು.

ದೆಹಲಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಒಕ್ಕೂಟದ ಅಧ್ಯಕ್ಷೆ ಶಿವಾನಿ ಕೌಲ್ ಮಾತನಾಡಿ, ”ಈ ಯಾತ್ರೆಯ ಉದ್ದೇಶವು ಜಾಗೃತಗೊಳಿಸುವುದು, ಜನರಲ್ಲಿ ಪ್ರಜ್ಞೆಯನ್ನು ಮೂಡಿಸುವುದು ಮತ್ತು ಅವರ ಮೂಲಭೂತ ಹಕ್ಕುಗಳಿಗಾಗಿ ಹೋರಾಡಲು ಅವರನ್ನು ಸಂಘಟಿಸುವುದಾಗಿದೆ” ಎಂದು ತಿಳಿಸಿದರು.

ದಿಶಾ ಸ್ಟೂಡೆಂಟ್ಸ್ ಆರ್ಗನೈಸೇಶನ್‌ನ ಪ್ರಿಯಂವದಾ, ”ಪ್ರಾಥಮಿಕ ಮತ್ತು ಉನ್ನತ ಶಿಕ್ಷಣದ ದುಃಸ್ಥಿತಿಯನ್ನು ವಿವರಿಸಿದರು. ದೇಶದಾದ್ಯಂತ ಶಾಲೆಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಶುಲ್ಕಗಳು ಹೆಚ್ಚಾಗುತ್ತಲೇ ಇವೆ ಆದರೆ ಬೋಧಕರ ಹುದ್ದೆಗಳು ಖಾಲಿ ಉಳಿದಿವೆ. ಮೋದಿ ಸರ್ಕಾರ ತಂದಿರುವ ಹೊಸ ಶಿಕ್ಷಣ ನೀತಿಯು ಶಿಕ್ಷಣದ ಖಾಸಗೀಕರಣ ಮತ್ತು ಕೋಮುವಾದವನ್ನು ಮಾತ್ರ ಮುಂದಿಡುತ್ತದೆ” ಎಂದು ಹೇಳಿದರು.

ನೌಜವಾನ್ ಭಾರತ್ ಸಭೆಯನ್ನು ಪ್ರತಿನಿಧಿಸುವ ವಿಶಾಲ್ ಅವರು ನಿರುದ್ಯೋಗದ ಬಗ್ಗೆ ಮಾತನಾಡಿ, ”ಮೋದಿ ಸರ್ಕಾರ ಪ್ರತಿ ವರ್ಷ ಎರಡು ಕೋಟಿ ಉದ್ಯೋಗಗಳನ್ನು ಒದಗಿಸುವ ಭರವಸೆಯ ಮೇಲೆ ಅಧಿಕಾರಕ್ಕೆ ಬಂದಿದೆ. ಆದರೆ ದೇಶದ ಸುಮಾರು 32 ಕೋಟಿ ಜನಸಂಖ್ಯೆಯು ನಿರುದ್ಯೋಗದ ಸಂಕಷ್ಟವನ್ನು ಎದುರಿಸುತ್ತಿದೆ” ಎಂದು ತಿಳಿಸಿದರು.

ಇದನ್ನೂ ಓದಿ: ಮೋದಿ ರೋಡ್‌ ಶೋ: ಒಂದು ಬದಿಗಷ್ಟೇ ಡಾಂಬರು, ಅಲಂಕಾರ ಮತ್ತೊಂದು ಬದಿಯಲ್ಲಿ ಗುಂಡಿಗಳ ಸಾಲು

CMIE (ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ)ದ ಅಂಕಿಅಂಶಗಳ ಪ್ರಕಾರ, ಪ್ರಸ್ತುತ, ದೇಶದಲ್ಲಿ ನಿರುದ್ಯೋಗ ದರವು COVID ಸಮಯದಲ್ಲಿ ಇದ್ದ ಮಟ್ಟವನ್ನು ತಲುಪಿದೆ. ಕೋವಿಡ್ ಸಮಯದಲ್ಲಿ ಕೆಲಸವನ್ನು ಕಳೆದುಕೊಂಡ ಪ್ರತಿ ಐದು ಯುವಕರಲ್ಲಿ ಒಬ್ಬರೂ ಇಲ್ಲಿಯವರೆಗೆ ಉದ್ಯೋಗವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಟ್ವಿಟರ್, ಅಮೆಜಾನ್, ಎಚ್‌ಪಿ, ಮೈಕ್ರೋಸಾಫ್ಟ್ ಮತ್ತು ನೆಟ್‌ಫ್ಲಿಕ್ಸ್‌ನಂತಹ ದೊಡ್ಡ ಮತ್ತು ಪ್ರತಿಷ್ಠಿತ ಕಂಪನಿಗಳು ಉದ್ಯೋಗಿಗಳನ್ನು ಕಡಿಮೆ ಮಾಡುತ್ತಿದೆ ಮತ್ತು ಹಿಂಬಡ್ತಿಯನ್ನು ನೀಡಲಾರಂಭಿಸಿವೆ. ಇದರಿಂದ ವೈಟ್-ಕಾಲರ್ ಟೆಕ್ ಮತ್ತು ಮ್ಯಾನೇಜರ್ ವರ್ಗಗಳು ಸಹ ಉದ್ಯೋಗ ನಷ್ಟ ಎದುರಿಸುತ್ತಿದೆ. ಇದೇ ರೀತಿ ಇಡೀ ದೇಶದ ಎಲ್ಲಾ ಕಾರ್ಖಾನೆಗಳು, ಕಚೇರಿಗಳು, ಅಂಗಡಿಗಳು, ವರ್ಕ್‌ಶಾಪ್‌ಗಳು ಇತ್ಯಾದಿಗಳಲ್ಲಿ ನಡೆಯುತ್ತಿದೆ. ಇದರಿಂದ ನಿರುದ್ಯೋಗ ಹೆಚ್ಚಾಗುತ್ತಲೇ ಇದೆ” ಎಂದು ವಿಶಾಲ್ ಅವರು ವಿವರಿಸಿದರು.

ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಕೆಳಗಿನ ಬೇಡಿಕೆಗಳನ್ನು ಮುಂದಿಟ್ಟು ಯಾತ್ರೆಯನ್ನು ಆಯೋಜಿಸಲಾಗಿದೆ:

1.) ಉದ್ಯೋಗದ ಮೂಲಭೂತ ಹಕ್ಕು: ಭಗತ್ ಸಿಂಗ್ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯಿದೆ (BASNEGA)ಯನ್ನು ಸಂಸತ್ತಿನಲ್ಲಿ ಅಂಗೀಕರಿಸಬೇಕು. ಅದರ ಅಡಿಯಲ್ಲಿ ಎಲ್ಲಾ ಅರ್ಹ ನಾಗರಿಕರಿಗೆ ಉದ್ಯೋಗಗಳನ್ನು ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ತಪ್ಪಿದಲ್ಲಿ ಕನಿಷ್ಠ 10,000 ರೂ. ನಿರುದ್ಯೋಗ ಭತ್ಯೆ ರೂಪದಲ್ಲಿ ನೀಡಬೇಕು.

2.) ಕಾರ್ಮಿಕರ ಪರವಾದ ಕಾನೂನುಗಳ ಕಟ್ಟುನಿಟ್ಟಾದ ಅನುಷ್ಠಾನ: ಎಲ್ಲಾ ಕಾರ್ಮಿಕ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಮತ್ತು ಹೊಸ ಉದ್ದೇಶಿತ ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು. ಕಾನೂನುಗಳು- 8ಗಂಟೆಗಳ ಕೆಲಸದ ದಿನ, ಸಾಪ್ತಾಹಿಕ ರಜೆ, ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ಸಂಬಳ, ಒಕ್ಕೂಟವನ್ನು ರಚಿಸುವ ಹಕ್ಕು ಮತ್ತು ಭದ್ರತಾ ನಿಬಂಧನೆಗಳ ಹಕ್ಕು, ಅನೌಪಚಾರಿಕ ಕಾರ್ಖಾನೆಗಳ ಮೇಲೆ ಸರ್ಕಾರದ ನಿಯಂತ್ರಣ, ನಿರಂತರವಾಗಿ ಕೆಲಸ ಮಾಡುವವರ ಗುತ್ತಿಗೆ ಕೆಲಸವನ್ನು ರದ್ದುಗೊಳಿಸಿ ಖಾಯಂಗೊಳಿಸಬೇಕು ಮತ್ತು ಕಾರ್ಮಿಕ ಕಾನೂನುಗಳ ಉಲ್ಲಂಘನೆಯನ್ನು ಕ್ರಿಮಿನಲ್ ವರ್ಗದ ಅಡಿಯಲ್ಲಿ ತರಬೇಕು ಆ ಮೂಲಕ ಅದನ್ನು ಶಿಕ್ಷಾರ್ಹಗೊಳಿಸಬೇಕು.

3.) ಹಣದುಬ್ಬರ ನಿಯಂತ್ರಣ: ಕಾಳಧನ ಮತ್ತು ಬೆಟ್ಟಿಂಗ್‌ಅನ್ನು ಶಿಕ್ಷಾರ್ಹ ಅಪರಾಧಗಳೆಂದು ಘೋಷಿಸುವ ಕಾನೂನನ್ನು ತರಬೇಕು. ಮೂಲ ಸರಕು ಮತ್ತು ಸೇವೆಗಳ ವಿತರಣೆಯ ವ್ಯವಸ್ಥೆಯನ್ನು ರಾಷ್ಟ್ರೀಕರಣಗೊಳಿಸಬೇಕು. ಎಲ್ಲಾ ನಾಗರಿಕರಿಗೆ ಆಹಾರ ಲಭ್ಯವಾಗುವಂತೆ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಸಾರ್ವತ್ರೀಕರಣಗೊಳಿಸಬೇಕು. ಹಣದುಬ್ಬರವನ್ನು ಕಡಿಮೆ ಮಾಡಲು, ಪರೋಕ್ಷ ತೆರಿಗೆಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಮತ್ತು ಆಸ್ತಿಯ ಆಧಾರದ ಮೇಲೆ ನೇರ ತೆರಿಗೆಗಳ ವ್ಯವಸ್ಥೆಯನ್ನು ಬಲಪಡಿಸಬೇಕು.

4.) ಶಿಕ್ಷಣ ಮೂಲಭೂತ ಹಕ್ಕು: ಜನವಿರೋಧಿ ಹೊಸ ಶಿಕ್ಷಣ ನೀತಿ 2020ನ್ನು ರದ್ದುಗೊಳಿಸಬೇಕು ಮತ್ತು ಪ್ರಾಥಮಿಕ ಮತ್ತು ಉನ್ನತ ಶಿಕ್ಷಣವನ್ನು ಬಲಪಡಿಸಬೇಕು.

5.) ಜಾತ್ಯತೀತ ದೇಶ: ‘ಸರ್ವ ಧರ್ಮ ಸಮಭವ’ದ ನಕಲಿ ಸೆಕ್ಯುಲರಿಸಂ ಬದಲಿಗೆ ನಿಜವಾದ ಜಾತ್ಯತೀತ ರಾಜ್ಯವನ್ನು ನಿರ್ಮಾಣ ಮಾಡಬೇಕು. ಯಾವುದೇ ಸಾರ್ವಜನಿಕ ನಾಯಕರು ಯಾವುದೇ ಧರ್ಮ, ಸಮುದಾಯ ಅಥವಾ ನಂಬಿಕೆಯ ಯಾವುದೇ ಉಲ್ಲೇಖ ಅಥವಾ ಬಳಕೆ ಮಾಡಿದರೆ ಅದನ್ನು ಶಿಕ್ಷಾರ್ಹ ಅಪರಾಧವೆಂದು ಕಾನೂನು ಮಾಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...