Homeಮುಖಪುಟದೇಶಾದ್ಯಂತ 'ಭಗತ್ ಸಿಂಗ್ ಜನ್ ಅಧಿಕಾರ ಯಾತ್ರೆ' ಆರಂಭ; ನೂರಾರು ಯುವಕರು, ಕಾರ್ಮಿಕರು ಭಾಗಿ

ದೇಶಾದ್ಯಂತ ‘ಭಗತ್ ಸಿಂಗ್ ಜನ್ ಅಧಿಕಾರ ಯಾತ್ರೆ’ ಆರಂಭ; ನೂರಾರು ಯುವಕರು, ಕಾರ್ಮಿಕರು ಭಾಗಿ

- Advertisement -
- Advertisement -

ದೇಶ ಹಿಂದೆಂದೂ ಕಂಡರಿಯದಂತಹ ನಿರುದ್ಯೋಗ, ಹಣದುಬ್ಬರ ಮತ್ತು ಆರ್ಥಿಕ ಅಸಮಾನತೆಯನ್ನು ಎದುರಿಸುತ್ತಿದೆ. ನಿರಂತರವಾಗಿ ಬೆಲೆ ಏರಿಕೆ ಮತ್ತು ಉದ್ಯೋಗಗಳಿಲ್ಲದೆ ಯುವಕರು ಹತಾಶರಾಗಿದ್ದಾರೆ. ಈ ರೀತಿಯ ಅನೇಕ ಸಮಸ್ಯೆಗಳ ಪರಿಹಾರಕ್ಕಾಗಿ ವಿವಿಧ ಸಂಘಟನೆಗಳು ಇಂದಿನಿಂದ (12 ಮಾರ್ಚ್ 2023ರಿಂದ) 14 ಏಪ್ರಿಲ್ 2023 ರವರೆಗೆ ಭಗತ್ ಸಿಂಗ್ ಜನ್ ಅಧಿಕಾರ ಯಾತ್ರೆ (BSJAY) ಹೆಸರಿನಲ್ಲಿ ದೇಶಾದ್ಯಂತ ಒಂದು ತಿಂಗಳ ಮೆರವಣಿಗೆ ಪ್ರಾರಂಭಿಸಿವೆ.

ಈ ಯಾತ್ರೆಯನ್ನು ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾ (RWPI), ನೌಜವಾನ್ ಭಾರತ್ ಸಭಾ, ದಿಶಾ ವಿದ್ಯಾರ್ಥಿಗಳ ಸಂಘಟನೆ, ದೆಹಲಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘ ಮತ್ತು ಬಿಗುಲ್ ಮಜ್ದೂರ್ ದಸ್ತಾ ಎಂಬ ಹಲವಾರು ವಿದ್ಯಾರ್ಥಿಗಳು, ಯುವಕರು ಮತ್ತು ಕಾರ್ಮಿಕರ ಸಂಘಟನೆಗಳು ಆಯೋಜಿಸಿವೆ.

ಇಂದಿನಿಂದ ಆರಂಭವಾಗುವ ಯಾತ್ರೆಯು ದೆಹಲಿ, ಉತ್ತರ ಪ್ರದೇಶ, ಮಹಾರಾಷ್ಟ್ರ, ಹರಿಯಾಣ, ಬಿಹಾರ, ಉತ್ತರಾಖಂಡ, ಪಂಜಾಬ್, ಆಂಧ್ರಪ್ರದೇಶ, ಚಂಡೀಗಢ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಸಾಗಲಿದೆ. ಈ ರಾಜ್ಯಗಳ ಹಳ್ಳಿಗಳು ಮತ್ತು ನಗರಗಳಲ್ಲಿ ಸಾರ್ವಜನಿಕರೊಂದಿಗೆ ಅವರ ಸಮಸ್ಯಗಳ ಕುರಿತಾಗಿ ಸಂವಾದಗಳನ್ನು ನಡೆಸಲಾಗುತ್ತದೆ.

ವಿವಿಧ ಸಂಘಟನೆಗಳ ಪ್ರತಿನಿಧಿಗಳು ಈ ಬಗ್ಗೆ ವಾರದ ಆರಂಭದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದರು. ಈ ವೇಳೆ ಸಧ್ಯ ಜಾರಿಯಲ್ಲಿರುವ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳ ಅಡಿಯಲ್ಲಿ ವಿದ್ಯಾರ್ಥಿಗಳು ಮತ್ತು ಕಾರ್ಮಿಕರ ಬಿಕ್ಕಟ್ಟನ್ನು ಎತ್ತಿ ತೋರಿಸಿದರು.

ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾ ಪರವಾಗಿ ಮಾತನಾಡಿದ ಯೋಗೇಶ್, ”ಕೇಂದ್ರ ಸರ್ಕಾರ ‘ಧರ್ಮದ ಉನ್ಮಾದ’ವನ್ನು ಬಳಸಿಕೊಂಡು ಮೂಲಭೂತ ಸಾಮಾಜಿಕ ಭದ್ರತೆ ಮತ್ತು ಆರ್ಥಿಕ ಹಕ್ಕುಗಳ ಬಗೆಗಿನ ಗಮನವನ್ನು ಬೆರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದೆ” ಎಂದು ವಾದಿಸಿದರು.

”ಕೇಂದ್ರ ಬಿಜೆಪಿ ಸರ್ಕಾರ ಸುಳ್ಳು ಧಾರ್ಮಿಕ ಶತ್ರುವನ್ನು ಹುಟ್ಟುಹಾಕುವ ಮೂಲಕ, ಬ್ರಿಟಿಷರ ಒಡೆದು ಆಳುವ ನೀತಿಯನ್ನು ನಿಷ್ಠೆಯಿಂದ ಜಾರಿಗೆ ತರುತ್ತಿದೆ. ಬಿಜೆಪಿ, ಕಾಂಗ್ರೆಸ್, ಎಸ್‌ಪಿ, ಬಿಎಸ್‌ಪಿ, ಆರ್‌ಜೆಡಿ, ಜೆಡಿಯು ಮತ್ತು ಎಎಪಿ ದೊಡ್ಡ ಬಂಡವಾಳಶಾಹಿಗಳ ಹಿತಾಸಕ್ತಿಗಳನ್ನು ಪೂರೈಸುತ್ತಿವೆ. ಈಗ ಕ್ರಾಂತಿಯ ಮನೋಭಾವವನ್ನು ಪುನಶ್ಚೇತನಗೊಳಿಸುವುದು ಮುಖ್ಯವಾಗಿದೆ. ಭಗತ್ ಸಿಂಗ್ ಜನ್ ಅಧಿಕಾರ ಯಾತ್ರೆಯು (BSJAY) ಆ ನಿಟ್ಟಿನಲ್ಲಿ ಒಂದು ಪ್ರಯತ್ನವಾಗಿದೆ” ಎಂದು ಅವರು ಹೇಳಿದರು.

ದೆಹಲಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಒಕ್ಕೂಟದ ಅಧ್ಯಕ್ಷೆ ಶಿವಾನಿ ಕೌಲ್ ಮಾತನಾಡಿ, ”ಈ ಯಾತ್ರೆಯ ಉದ್ದೇಶವು ಜಾಗೃತಗೊಳಿಸುವುದು, ಜನರಲ್ಲಿ ಪ್ರಜ್ಞೆಯನ್ನು ಮೂಡಿಸುವುದು ಮತ್ತು ಅವರ ಮೂಲಭೂತ ಹಕ್ಕುಗಳಿಗಾಗಿ ಹೋರಾಡಲು ಅವರನ್ನು ಸಂಘಟಿಸುವುದಾಗಿದೆ” ಎಂದು ತಿಳಿಸಿದರು.

ದಿಶಾ ಸ್ಟೂಡೆಂಟ್ಸ್ ಆರ್ಗನೈಸೇಶನ್‌ನ ಪ್ರಿಯಂವದಾ, ”ಪ್ರಾಥಮಿಕ ಮತ್ತು ಉನ್ನತ ಶಿಕ್ಷಣದ ದುಃಸ್ಥಿತಿಯನ್ನು ವಿವರಿಸಿದರು. ದೇಶದಾದ್ಯಂತ ಶಾಲೆಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಶುಲ್ಕಗಳು ಹೆಚ್ಚಾಗುತ್ತಲೇ ಇವೆ ಆದರೆ ಬೋಧಕರ ಹುದ್ದೆಗಳು ಖಾಲಿ ಉಳಿದಿವೆ. ಮೋದಿ ಸರ್ಕಾರ ತಂದಿರುವ ಹೊಸ ಶಿಕ್ಷಣ ನೀತಿಯು ಶಿಕ್ಷಣದ ಖಾಸಗೀಕರಣ ಮತ್ತು ಕೋಮುವಾದವನ್ನು ಮಾತ್ರ ಮುಂದಿಡುತ್ತದೆ” ಎಂದು ಹೇಳಿದರು.

ನೌಜವಾನ್ ಭಾರತ್ ಸಭೆಯನ್ನು ಪ್ರತಿನಿಧಿಸುವ ವಿಶಾಲ್ ಅವರು ನಿರುದ್ಯೋಗದ ಬಗ್ಗೆ ಮಾತನಾಡಿ, ”ಮೋದಿ ಸರ್ಕಾರ ಪ್ರತಿ ವರ್ಷ ಎರಡು ಕೋಟಿ ಉದ್ಯೋಗಗಳನ್ನು ಒದಗಿಸುವ ಭರವಸೆಯ ಮೇಲೆ ಅಧಿಕಾರಕ್ಕೆ ಬಂದಿದೆ. ಆದರೆ ದೇಶದ ಸುಮಾರು 32 ಕೋಟಿ ಜನಸಂಖ್ಯೆಯು ನಿರುದ್ಯೋಗದ ಸಂಕಷ್ಟವನ್ನು ಎದುರಿಸುತ್ತಿದೆ” ಎಂದು ತಿಳಿಸಿದರು.

ಇದನ್ನೂ ಓದಿ: ಮೋದಿ ರೋಡ್‌ ಶೋ: ಒಂದು ಬದಿಗಷ್ಟೇ ಡಾಂಬರು, ಅಲಂಕಾರ ಮತ್ತೊಂದು ಬದಿಯಲ್ಲಿ ಗುಂಡಿಗಳ ಸಾಲು

CMIE (ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ)ದ ಅಂಕಿಅಂಶಗಳ ಪ್ರಕಾರ, ಪ್ರಸ್ತುತ, ದೇಶದಲ್ಲಿ ನಿರುದ್ಯೋಗ ದರವು COVID ಸಮಯದಲ್ಲಿ ಇದ್ದ ಮಟ್ಟವನ್ನು ತಲುಪಿದೆ. ಕೋವಿಡ್ ಸಮಯದಲ್ಲಿ ಕೆಲಸವನ್ನು ಕಳೆದುಕೊಂಡ ಪ್ರತಿ ಐದು ಯುವಕರಲ್ಲಿ ಒಬ್ಬರೂ ಇಲ್ಲಿಯವರೆಗೆ ಉದ್ಯೋಗವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಟ್ವಿಟರ್, ಅಮೆಜಾನ್, ಎಚ್‌ಪಿ, ಮೈಕ್ರೋಸಾಫ್ಟ್ ಮತ್ತು ನೆಟ್‌ಫ್ಲಿಕ್ಸ್‌ನಂತಹ ದೊಡ್ಡ ಮತ್ತು ಪ್ರತಿಷ್ಠಿತ ಕಂಪನಿಗಳು ಉದ್ಯೋಗಿಗಳನ್ನು ಕಡಿಮೆ ಮಾಡುತ್ತಿದೆ ಮತ್ತು ಹಿಂಬಡ್ತಿಯನ್ನು ನೀಡಲಾರಂಭಿಸಿವೆ. ಇದರಿಂದ ವೈಟ್-ಕಾಲರ್ ಟೆಕ್ ಮತ್ತು ಮ್ಯಾನೇಜರ್ ವರ್ಗಗಳು ಸಹ ಉದ್ಯೋಗ ನಷ್ಟ ಎದುರಿಸುತ್ತಿದೆ. ಇದೇ ರೀತಿ ಇಡೀ ದೇಶದ ಎಲ್ಲಾ ಕಾರ್ಖಾನೆಗಳು, ಕಚೇರಿಗಳು, ಅಂಗಡಿಗಳು, ವರ್ಕ್‌ಶಾಪ್‌ಗಳು ಇತ್ಯಾದಿಗಳಲ್ಲಿ ನಡೆಯುತ್ತಿದೆ. ಇದರಿಂದ ನಿರುದ್ಯೋಗ ಹೆಚ್ಚಾಗುತ್ತಲೇ ಇದೆ” ಎಂದು ವಿಶಾಲ್ ಅವರು ವಿವರಿಸಿದರು.

ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಕೆಳಗಿನ ಬೇಡಿಕೆಗಳನ್ನು ಮುಂದಿಟ್ಟು ಯಾತ್ರೆಯನ್ನು ಆಯೋಜಿಸಲಾಗಿದೆ:

1.) ಉದ್ಯೋಗದ ಮೂಲಭೂತ ಹಕ್ಕು: ಭಗತ್ ಸಿಂಗ್ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯಿದೆ (BASNEGA)ಯನ್ನು ಸಂಸತ್ತಿನಲ್ಲಿ ಅಂಗೀಕರಿಸಬೇಕು. ಅದರ ಅಡಿಯಲ್ಲಿ ಎಲ್ಲಾ ಅರ್ಹ ನಾಗರಿಕರಿಗೆ ಉದ್ಯೋಗಗಳನ್ನು ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ತಪ್ಪಿದಲ್ಲಿ ಕನಿಷ್ಠ 10,000 ರೂ. ನಿರುದ್ಯೋಗ ಭತ್ಯೆ ರೂಪದಲ್ಲಿ ನೀಡಬೇಕು.

2.) ಕಾರ್ಮಿಕರ ಪರವಾದ ಕಾನೂನುಗಳ ಕಟ್ಟುನಿಟ್ಟಾದ ಅನುಷ್ಠಾನ: ಎಲ್ಲಾ ಕಾರ್ಮಿಕ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಮತ್ತು ಹೊಸ ಉದ್ದೇಶಿತ ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು. ಕಾನೂನುಗಳು- 8ಗಂಟೆಗಳ ಕೆಲಸದ ದಿನ, ಸಾಪ್ತಾಹಿಕ ರಜೆ, ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ಸಂಬಳ, ಒಕ್ಕೂಟವನ್ನು ರಚಿಸುವ ಹಕ್ಕು ಮತ್ತು ಭದ್ರತಾ ನಿಬಂಧನೆಗಳ ಹಕ್ಕು, ಅನೌಪಚಾರಿಕ ಕಾರ್ಖಾನೆಗಳ ಮೇಲೆ ಸರ್ಕಾರದ ನಿಯಂತ್ರಣ, ನಿರಂತರವಾಗಿ ಕೆಲಸ ಮಾಡುವವರ ಗುತ್ತಿಗೆ ಕೆಲಸವನ್ನು ರದ್ದುಗೊಳಿಸಿ ಖಾಯಂಗೊಳಿಸಬೇಕು ಮತ್ತು ಕಾರ್ಮಿಕ ಕಾನೂನುಗಳ ಉಲ್ಲಂಘನೆಯನ್ನು ಕ್ರಿಮಿನಲ್ ವರ್ಗದ ಅಡಿಯಲ್ಲಿ ತರಬೇಕು ಆ ಮೂಲಕ ಅದನ್ನು ಶಿಕ್ಷಾರ್ಹಗೊಳಿಸಬೇಕು.

3.) ಹಣದುಬ್ಬರ ನಿಯಂತ್ರಣ: ಕಾಳಧನ ಮತ್ತು ಬೆಟ್ಟಿಂಗ್‌ಅನ್ನು ಶಿಕ್ಷಾರ್ಹ ಅಪರಾಧಗಳೆಂದು ಘೋಷಿಸುವ ಕಾನೂನನ್ನು ತರಬೇಕು. ಮೂಲ ಸರಕು ಮತ್ತು ಸೇವೆಗಳ ವಿತರಣೆಯ ವ್ಯವಸ್ಥೆಯನ್ನು ರಾಷ್ಟ್ರೀಕರಣಗೊಳಿಸಬೇಕು. ಎಲ್ಲಾ ನಾಗರಿಕರಿಗೆ ಆಹಾರ ಲಭ್ಯವಾಗುವಂತೆ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಸಾರ್ವತ್ರೀಕರಣಗೊಳಿಸಬೇಕು. ಹಣದುಬ್ಬರವನ್ನು ಕಡಿಮೆ ಮಾಡಲು, ಪರೋಕ್ಷ ತೆರಿಗೆಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಮತ್ತು ಆಸ್ತಿಯ ಆಧಾರದ ಮೇಲೆ ನೇರ ತೆರಿಗೆಗಳ ವ್ಯವಸ್ಥೆಯನ್ನು ಬಲಪಡಿಸಬೇಕು.

4.) ಶಿಕ್ಷಣ ಮೂಲಭೂತ ಹಕ್ಕು: ಜನವಿರೋಧಿ ಹೊಸ ಶಿಕ್ಷಣ ನೀತಿ 2020ನ್ನು ರದ್ದುಗೊಳಿಸಬೇಕು ಮತ್ತು ಪ್ರಾಥಮಿಕ ಮತ್ತು ಉನ್ನತ ಶಿಕ್ಷಣವನ್ನು ಬಲಪಡಿಸಬೇಕು.

5.) ಜಾತ್ಯತೀತ ದೇಶ: ‘ಸರ್ವ ಧರ್ಮ ಸಮಭವ’ದ ನಕಲಿ ಸೆಕ್ಯುಲರಿಸಂ ಬದಲಿಗೆ ನಿಜವಾದ ಜಾತ್ಯತೀತ ರಾಜ್ಯವನ್ನು ನಿರ್ಮಾಣ ಮಾಡಬೇಕು. ಯಾವುದೇ ಸಾರ್ವಜನಿಕ ನಾಯಕರು ಯಾವುದೇ ಧರ್ಮ, ಸಮುದಾಯ ಅಥವಾ ನಂಬಿಕೆಯ ಯಾವುದೇ ಉಲ್ಲೇಖ ಅಥವಾ ಬಳಕೆ ಮಾಡಿದರೆ ಅದನ್ನು ಶಿಕ್ಷಾರ್ಹ ಅಪರಾಧವೆಂದು ಕಾನೂನು ಮಾಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...