Homeಕರ್ನಾಟಕಸಾಮಾಜಿಕ ನ್ಯಾಯ ಕಲ್ಪಿಸಲು ದೇಶದಾದ್ಯಂತ ಜಾತಿ ಸಮೀಕ್ಷೆ ನಡೆಸಬೇಕು: ನಾಗರಾಜ್ ಯಾದವ್

ಸಾಮಾಜಿಕ ನ್ಯಾಯ ಕಲ್ಪಿಸಲು ದೇಶದಾದ್ಯಂತ ಜಾತಿ ಸಮೀಕ್ಷೆ ನಡೆಸಬೇಕು: ನಾಗರಾಜ್ ಯಾದವ್

- Advertisement -
- Advertisement -

ಸಾಮಾಜಿಕ ನ್ಯಾಯ ಕಲ್ಪಿಸುವ ಉದ್ದೇಶದಿಂದ ದೇಶದಾದ್ಯಂತ ಜಾತಿ ಸಮೀಕ್ಷೆ ನಡೆಸಬೇಕು; ರಾಜ್ಯದಲ್ಲಿ ಕಾಂತರಾಜು ಆಯೋಗ ನಡೆಸಿರುವ ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸರ್ಕಾರ ಸ್ವೀಕರಿಸಿ, ಜಾರಿ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ, ಕೆಪಿಸಿಸಿ ವಕ್ತಾರರಾದ ನಾಗರಾಜ್ ಯಾದವ್ ಆಗ್ರಹಿಸಿದರು.

ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಶೇ.70 ರಷ್ಟಿರುವ ಹಿಂದುಳಿದ ಸಮುದಾಯಗಳು ತಮ್ಮ ಹಕ್ಕುಗಳ ಪ್ರಶ್ನೆ ಬಂದಾಗ ಒಂದಾಗಿ ಹೋರಾಡಬೇಕಾಗುತ್ತದೆ. ಡಾ. ಬಿ.ಆರ್. ಅಂಬೇಡ್ಕರ್ ಕೊಟ್ಟಿರುವ ಸಂವಿಧಾನವನ್ನು ಬಳಸಿಕೊಂಡು, ಅವರು ಹೇಳಿದಂತೆ ನಾವು ಸಂಘಟಿತರಾಗಬೇಕಿದೆ. ನಮ್ಮ ಹಕ್ಕುಗಳನ್ನು ಪಡೆದುಕೊಳ್ಳುವುದಕ್ಕಾಗಿ ನಾವು ಇಂದು ಒಟ್ಟಾಗಿದ್ದೇವೆ’ ಎಂದರು

‘ಸಂವಿಧಾನ ಆಶಯಗಳನ್ನು ಉಳಿಸುವುದಕ್ಕಾಗಿ ನಾವು ಒಗ್ಗಟ್ಟಾಗಿದ್ದೇವೆ. ನಮ್ಮ ಸಾಮಾಜಿಕ ಹಾಗೂ ಶೈಕ್ಷಣಿಕ, ರಾಜಕೀಯ ಹಕ್ಕುಗಳಿಗಾಗಿ ಒಂದಾಗುತ್ತಿದ್ದೇವೆ; ಸಿದ್ದರಾಮಯ್ಯ ಅವರು ಆರು ವರ್ಷದ ಹಿಂದೆ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ನಾವು ಸ್ವಾಗತಿಸುತ್ತವೆ. ವರದಿಯನ್ನು ಸರ್ಕಾರ ಸ್ವೀಕಾರ ಮಾಡಿ, ಜಾರಿ ಮಾಡಬೇಕು ಎಂದು ಆಗ್ರಹಿಸುತ್ತೇವೆ’ ಎಂದು ಒತ್ತಾಯಿಸಿದರು.

‘ಎಲ್ಲ ಶೋಷಿತ ವರ್ಗಗಳಿಗೆ ನ್ಯಾಯ ಕೊಡಿಸಬೇಕು, ಸಂವಿಧಾನಿಕ ಹಕ್ಕುಗಳನ್ನು ನೀಡಬೇಕು ಎಂಬ ಕಾರಣಕ್ಕೆ ಸಿದ್ದರಾಮಯ್ಯ ಸಮೀಕ್ಷೆ ಮಾಡಿಸಿದ್ದಾರೆ. ಕಾಂತರಾಜು ಸಮಿತಿಯ ಎಲ್ಲ ಶಿಫಾರಸುಗಳನ್ನು ಸರ್ಕಾರ ಒಪ್ಪಿಕೊಳ್ಳಬೇಕು. ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಈ ಸಮುದಾಯಗಳಿಗೆ ನೆರವಾಗಲು ಕೇಂದ್ರ ಸರ್ಕಾರ ದೇಶದಾದ್ಯಂತ ಜಾತಿ ಸಮೀಕ್ಷೆ ನಡೆಸಬೇಕು’ ಎಂದರು

‘ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲ ಸಮುದಾಯಗಳನ್ನು ಸಮಾನವಾಗಿ ಕಾಣುತ್ತಾರೆ. ಶೋಷಿತ ವರ್ಗದವರಿಗೆ ನ್ಯಾಯ ಕೊಡಿಸುವ ಜೊತೆಗೆ, ಬಡವರಿಗೆ ಹಲವಾರು ಅಭಿವೃದ್ಧಿ ಕಾರ್ಯಕ್ರಮ ನೀಡಿದ್ದಾರೆ. ಕೊಟ್ಟ ಭರವಸೆಯಂತೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಯಾವುದಾದರೂ ಸರ್ಕಾರ ಇದ್ದರೆ ಅದು ಸಿದ್ದರಾಮಯ್ಯ ಸರ್ಕಾರ ಮಾತ್ರ. ಆದ್ದರಿಂದಲೆ ಶೋಷಿತ ವರ್ಗದವರು ಈ ಸರ್ಕಾರದ ಪರವಾಗಿ ನಿಂತಿದ್ದೇವೆ’ ಎಂದರು.

‘ಸರ್ಕಾರ ಕಾಂತರಾಜು ಆಯೋಗದ ವರದಿಯನ್ನು ಸ್ವೀಕರಿಸಬೇಕು; ಸಮಿತಿಯು ಸಾಕಷ್ಟು ವೈಜ್ಞಾನಿಕವಾಗಿ ಸಮೀಕ್ಷೆ ಮಾಡಿದ್ದಾರೆ. ಸಂವಿಧಾನ ಆಶಯಗಳನ್ನು ಉಳಿಸಿವುದಕ್ಕೋಸ್ಕರ, ಅಹಿಂದ ಸಮುದಾಯಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವುದಕ್ಕಾಗಿ ಸರ್ಕಾರ ಈ ವರದಿಯನ್ನು ಸ್ವೀಕರಿಸಬೇಕು’ ಎಂದು ನಾಗರಾಜ್ ಯಾದವ್ ಆಗ್ರಹಿಸಿದರು.

ಇದನ್ನೂ ಓದಿ; ಚಿತ್ರದುರ್ಗ: ಶೋಷಿತ ಸಮುದಾಯಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...