Homeಕರ್ನಾಟಕಸಾಮಾಜಿಕ ನ್ಯಾಯ ಕಲ್ಪಿಸಲು ದೇಶದಾದ್ಯಂತ ಜಾತಿ ಸಮೀಕ್ಷೆ ನಡೆಸಬೇಕು: ನಾಗರಾಜ್ ಯಾದವ್

ಸಾಮಾಜಿಕ ನ್ಯಾಯ ಕಲ್ಪಿಸಲು ದೇಶದಾದ್ಯಂತ ಜಾತಿ ಸಮೀಕ್ಷೆ ನಡೆಸಬೇಕು: ನಾಗರಾಜ್ ಯಾದವ್

- Advertisement -
- Advertisement -

ಸಾಮಾಜಿಕ ನ್ಯಾಯ ಕಲ್ಪಿಸುವ ಉದ್ದೇಶದಿಂದ ದೇಶದಾದ್ಯಂತ ಜಾತಿ ಸಮೀಕ್ಷೆ ನಡೆಸಬೇಕು; ರಾಜ್ಯದಲ್ಲಿ ಕಾಂತರಾಜು ಆಯೋಗ ನಡೆಸಿರುವ ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸರ್ಕಾರ ಸ್ವೀಕರಿಸಿ, ಜಾರಿ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ, ಕೆಪಿಸಿಸಿ ವಕ್ತಾರರಾದ ನಾಗರಾಜ್ ಯಾದವ್ ಆಗ್ರಹಿಸಿದರು.

ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಶೇ.70 ರಷ್ಟಿರುವ ಹಿಂದುಳಿದ ಸಮುದಾಯಗಳು ತಮ್ಮ ಹಕ್ಕುಗಳ ಪ್ರಶ್ನೆ ಬಂದಾಗ ಒಂದಾಗಿ ಹೋರಾಡಬೇಕಾಗುತ್ತದೆ. ಡಾ. ಬಿ.ಆರ್. ಅಂಬೇಡ್ಕರ್ ಕೊಟ್ಟಿರುವ ಸಂವಿಧಾನವನ್ನು ಬಳಸಿಕೊಂಡು, ಅವರು ಹೇಳಿದಂತೆ ನಾವು ಸಂಘಟಿತರಾಗಬೇಕಿದೆ. ನಮ್ಮ ಹಕ್ಕುಗಳನ್ನು ಪಡೆದುಕೊಳ್ಳುವುದಕ್ಕಾಗಿ ನಾವು ಇಂದು ಒಟ್ಟಾಗಿದ್ದೇವೆ’ ಎಂದರು

‘ಸಂವಿಧಾನ ಆಶಯಗಳನ್ನು ಉಳಿಸುವುದಕ್ಕಾಗಿ ನಾವು ಒಗ್ಗಟ್ಟಾಗಿದ್ದೇವೆ. ನಮ್ಮ ಸಾಮಾಜಿಕ ಹಾಗೂ ಶೈಕ್ಷಣಿಕ, ರಾಜಕೀಯ ಹಕ್ಕುಗಳಿಗಾಗಿ ಒಂದಾಗುತ್ತಿದ್ದೇವೆ; ಸಿದ್ದರಾಮಯ್ಯ ಅವರು ಆರು ವರ್ಷದ ಹಿಂದೆ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ನಾವು ಸ್ವಾಗತಿಸುತ್ತವೆ. ವರದಿಯನ್ನು ಸರ್ಕಾರ ಸ್ವೀಕಾರ ಮಾಡಿ, ಜಾರಿ ಮಾಡಬೇಕು ಎಂದು ಆಗ್ರಹಿಸುತ್ತೇವೆ’ ಎಂದು ಒತ್ತಾಯಿಸಿದರು.

‘ಎಲ್ಲ ಶೋಷಿತ ವರ್ಗಗಳಿಗೆ ನ್ಯಾಯ ಕೊಡಿಸಬೇಕು, ಸಂವಿಧಾನಿಕ ಹಕ್ಕುಗಳನ್ನು ನೀಡಬೇಕು ಎಂಬ ಕಾರಣಕ್ಕೆ ಸಿದ್ದರಾಮಯ್ಯ ಸಮೀಕ್ಷೆ ಮಾಡಿಸಿದ್ದಾರೆ. ಕಾಂತರಾಜು ಸಮಿತಿಯ ಎಲ್ಲ ಶಿಫಾರಸುಗಳನ್ನು ಸರ್ಕಾರ ಒಪ್ಪಿಕೊಳ್ಳಬೇಕು. ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಈ ಸಮುದಾಯಗಳಿಗೆ ನೆರವಾಗಲು ಕೇಂದ್ರ ಸರ್ಕಾರ ದೇಶದಾದ್ಯಂತ ಜಾತಿ ಸಮೀಕ್ಷೆ ನಡೆಸಬೇಕು’ ಎಂದರು

‘ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲ ಸಮುದಾಯಗಳನ್ನು ಸಮಾನವಾಗಿ ಕಾಣುತ್ತಾರೆ. ಶೋಷಿತ ವರ್ಗದವರಿಗೆ ನ್ಯಾಯ ಕೊಡಿಸುವ ಜೊತೆಗೆ, ಬಡವರಿಗೆ ಹಲವಾರು ಅಭಿವೃದ್ಧಿ ಕಾರ್ಯಕ್ರಮ ನೀಡಿದ್ದಾರೆ. ಕೊಟ್ಟ ಭರವಸೆಯಂತೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಯಾವುದಾದರೂ ಸರ್ಕಾರ ಇದ್ದರೆ ಅದು ಸಿದ್ದರಾಮಯ್ಯ ಸರ್ಕಾರ ಮಾತ್ರ. ಆದ್ದರಿಂದಲೆ ಶೋಷಿತ ವರ್ಗದವರು ಈ ಸರ್ಕಾರದ ಪರವಾಗಿ ನಿಂತಿದ್ದೇವೆ’ ಎಂದರು.

‘ಸರ್ಕಾರ ಕಾಂತರಾಜು ಆಯೋಗದ ವರದಿಯನ್ನು ಸ್ವೀಕರಿಸಬೇಕು; ಸಮಿತಿಯು ಸಾಕಷ್ಟು ವೈಜ್ಞಾನಿಕವಾಗಿ ಸಮೀಕ್ಷೆ ಮಾಡಿದ್ದಾರೆ. ಸಂವಿಧಾನ ಆಶಯಗಳನ್ನು ಉಳಿಸಿವುದಕ್ಕೋಸ್ಕರ, ಅಹಿಂದ ಸಮುದಾಯಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವುದಕ್ಕಾಗಿ ಸರ್ಕಾರ ಈ ವರದಿಯನ್ನು ಸ್ವೀಕರಿಸಬೇಕು’ ಎಂದು ನಾಗರಾಜ್ ಯಾದವ್ ಆಗ್ರಹಿಸಿದರು.

ಇದನ್ನೂ ಓದಿ; ಚಿತ್ರದುರ್ಗ: ಶೋಷಿತ ಸಮುದಾಯಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...