Homeಕರ್ನಾಟಕಸಾಮಾಜಿಕ ನ್ಯಾಯ ಕಲ್ಪಿಸಲು ದೇಶದಾದ್ಯಂತ ಜಾತಿ ಸಮೀಕ್ಷೆ ನಡೆಸಬೇಕು: ನಾಗರಾಜ್ ಯಾದವ್

ಸಾಮಾಜಿಕ ನ್ಯಾಯ ಕಲ್ಪಿಸಲು ದೇಶದಾದ್ಯಂತ ಜಾತಿ ಸಮೀಕ್ಷೆ ನಡೆಸಬೇಕು: ನಾಗರಾಜ್ ಯಾದವ್

- Advertisement -
- Advertisement -

ಸಾಮಾಜಿಕ ನ್ಯಾಯ ಕಲ್ಪಿಸುವ ಉದ್ದೇಶದಿಂದ ದೇಶದಾದ್ಯಂತ ಜಾತಿ ಸಮೀಕ್ಷೆ ನಡೆಸಬೇಕು; ರಾಜ್ಯದಲ್ಲಿ ಕಾಂತರಾಜು ಆಯೋಗ ನಡೆಸಿರುವ ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸರ್ಕಾರ ಸ್ವೀಕರಿಸಿ, ಜಾರಿ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ, ಕೆಪಿಸಿಸಿ ವಕ್ತಾರರಾದ ನಾಗರಾಜ್ ಯಾದವ್ ಆಗ್ರಹಿಸಿದರು.

ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಶೇ.70 ರಷ್ಟಿರುವ ಹಿಂದುಳಿದ ಸಮುದಾಯಗಳು ತಮ್ಮ ಹಕ್ಕುಗಳ ಪ್ರಶ್ನೆ ಬಂದಾಗ ಒಂದಾಗಿ ಹೋರಾಡಬೇಕಾಗುತ್ತದೆ. ಡಾ. ಬಿ.ಆರ್. ಅಂಬೇಡ್ಕರ್ ಕೊಟ್ಟಿರುವ ಸಂವಿಧಾನವನ್ನು ಬಳಸಿಕೊಂಡು, ಅವರು ಹೇಳಿದಂತೆ ನಾವು ಸಂಘಟಿತರಾಗಬೇಕಿದೆ. ನಮ್ಮ ಹಕ್ಕುಗಳನ್ನು ಪಡೆದುಕೊಳ್ಳುವುದಕ್ಕಾಗಿ ನಾವು ಇಂದು ಒಟ್ಟಾಗಿದ್ದೇವೆ’ ಎಂದರು

‘ಸಂವಿಧಾನ ಆಶಯಗಳನ್ನು ಉಳಿಸುವುದಕ್ಕಾಗಿ ನಾವು ಒಗ್ಗಟ್ಟಾಗಿದ್ದೇವೆ. ನಮ್ಮ ಸಾಮಾಜಿಕ ಹಾಗೂ ಶೈಕ್ಷಣಿಕ, ರಾಜಕೀಯ ಹಕ್ಕುಗಳಿಗಾಗಿ ಒಂದಾಗುತ್ತಿದ್ದೇವೆ; ಸಿದ್ದರಾಮಯ್ಯ ಅವರು ಆರು ವರ್ಷದ ಹಿಂದೆ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ನಾವು ಸ್ವಾಗತಿಸುತ್ತವೆ. ವರದಿಯನ್ನು ಸರ್ಕಾರ ಸ್ವೀಕಾರ ಮಾಡಿ, ಜಾರಿ ಮಾಡಬೇಕು ಎಂದು ಆಗ್ರಹಿಸುತ್ತೇವೆ’ ಎಂದು ಒತ್ತಾಯಿಸಿದರು.

‘ಎಲ್ಲ ಶೋಷಿತ ವರ್ಗಗಳಿಗೆ ನ್ಯಾಯ ಕೊಡಿಸಬೇಕು, ಸಂವಿಧಾನಿಕ ಹಕ್ಕುಗಳನ್ನು ನೀಡಬೇಕು ಎಂಬ ಕಾರಣಕ್ಕೆ ಸಿದ್ದರಾಮಯ್ಯ ಸಮೀಕ್ಷೆ ಮಾಡಿಸಿದ್ದಾರೆ. ಕಾಂತರಾಜು ಸಮಿತಿಯ ಎಲ್ಲ ಶಿಫಾರಸುಗಳನ್ನು ಸರ್ಕಾರ ಒಪ್ಪಿಕೊಳ್ಳಬೇಕು. ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಈ ಸಮುದಾಯಗಳಿಗೆ ನೆರವಾಗಲು ಕೇಂದ್ರ ಸರ್ಕಾರ ದೇಶದಾದ್ಯಂತ ಜಾತಿ ಸಮೀಕ್ಷೆ ನಡೆಸಬೇಕು’ ಎಂದರು

‘ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲ ಸಮುದಾಯಗಳನ್ನು ಸಮಾನವಾಗಿ ಕಾಣುತ್ತಾರೆ. ಶೋಷಿತ ವರ್ಗದವರಿಗೆ ನ್ಯಾಯ ಕೊಡಿಸುವ ಜೊತೆಗೆ, ಬಡವರಿಗೆ ಹಲವಾರು ಅಭಿವೃದ್ಧಿ ಕಾರ್ಯಕ್ರಮ ನೀಡಿದ್ದಾರೆ. ಕೊಟ್ಟ ಭರವಸೆಯಂತೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಯಾವುದಾದರೂ ಸರ್ಕಾರ ಇದ್ದರೆ ಅದು ಸಿದ್ದರಾಮಯ್ಯ ಸರ್ಕಾರ ಮಾತ್ರ. ಆದ್ದರಿಂದಲೆ ಶೋಷಿತ ವರ್ಗದವರು ಈ ಸರ್ಕಾರದ ಪರವಾಗಿ ನಿಂತಿದ್ದೇವೆ’ ಎಂದರು.

‘ಸರ್ಕಾರ ಕಾಂತರಾಜು ಆಯೋಗದ ವರದಿಯನ್ನು ಸ್ವೀಕರಿಸಬೇಕು; ಸಮಿತಿಯು ಸಾಕಷ್ಟು ವೈಜ್ಞಾನಿಕವಾಗಿ ಸಮೀಕ್ಷೆ ಮಾಡಿದ್ದಾರೆ. ಸಂವಿಧಾನ ಆಶಯಗಳನ್ನು ಉಳಿಸಿವುದಕ್ಕೋಸ್ಕರ, ಅಹಿಂದ ಸಮುದಾಯಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವುದಕ್ಕಾಗಿ ಸರ್ಕಾರ ಈ ವರದಿಯನ್ನು ಸ್ವೀಕರಿಸಬೇಕು’ ಎಂದು ನಾಗರಾಜ್ ಯಾದವ್ ಆಗ್ರಹಿಸಿದರು.

ಇದನ್ನೂ ಓದಿ; ಚಿತ್ರದುರ್ಗ: ಶೋಷಿತ ಸಮುದಾಯಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...