Homeಕರ್ನಾಟಕಸಾಮಾಜಿಕ ನ್ಯಾಯ ಕಲ್ಪಿಸಲು ದೇಶದಾದ್ಯಂತ ಜಾತಿ ಸಮೀಕ್ಷೆ ನಡೆಸಬೇಕು: ನಾಗರಾಜ್ ಯಾದವ್

ಸಾಮಾಜಿಕ ನ್ಯಾಯ ಕಲ್ಪಿಸಲು ದೇಶದಾದ್ಯಂತ ಜಾತಿ ಸಮೀಕ್ಷೆ ನಡೆಸಬೇಕು: ನಾಗರಾಜ್ ಯಾದವ್

- Advertisement -
- Advertisement -

ಸಾಮಾಜಿಕ ನ್ಯಾಯ ಕಲ್ಪಿಸುವ ಉದ್ದೇಶದಿಂದ ದೇಶದಾದ್ಯಂತ ಜಾತಿ ಸಮೀಕ್ಷೆ ನಡೆಸಬೇಕು; ರಾಜ್ಯದಲ್ಲಿ ಕಾಂತರಾಜು ಆಯೋಗ ನಡೆಸಿರುವ ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸರ್ಕಾರ ಸ್ವೀಕರಿಸಿ, ಜಾರಿ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ, ಕೆಪಿಸಿಸಿ ವಕ್ತಾರರಾದ ನಾಗರಾಜ್ ಯಾದವ್ ಆಗ್ರಹಿಸಿದರು.

ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಶೇ.70 ರಷ್ಟಿರುವ ಹಿಂದುಳಿದ ಸಮುದಾಯಗಳು ತಮ್ಮ ಹಕ್ಕುಗಳ ಪ್ರಶ್ನೆ ಬಂದಾಗ ಒಂದಾಗಿ ಹೋರಾಡಬೇಕಾಗುತ್ತದೆ. ಡಾ. ಬಿ.ಆರ್. ಅಂಬೇಡ್ಕರ್ ಕೊಟ್ಟಿರುವ ಸಂವಿಧಾನವನ್ನು ಬಳಸಿಕೊಂಡು, ಅವರು ಹೇಳಿದಂತೆ ನಾವು ಸಂಘಟಿತರಾಗಬೇಕಿದೆ. ನಮ್ಮ ಹಕ್ಕುಗಳನ್ನು ಪಡೆದುಕೊಳ್ಳುವುದಕ್ಕಾಗಿ ನಾವು ಇಂದು ಒಟ್ಟಾಗಿದ್ದೇವೆ’ ಎಂದರು

‘ಸಂವಿಧಾನ ಆಶಯಗಳನ್ನು ಉಳಿಸುವುದಕ್ಕಾಗಿ ನಾವು ಒಗ್ಗಟ್ಟಾಗಿದ್ದೇವೆ. ನಮ್ಮ ಸಾಮಾಜಿಕ ಹಾಗೂ ಶೈಕ್ಷಣಿಕ, ರಾಜಕೀಯ ಹಕ್ಕುಗಳಿಗಾಗಿ ಒಂದಾಗುತ್ತಿದ್ದೇವೆ; ಸಿದ್ದರಾಮಯ್ಯ ಅವರು ಆರು ವರ್ಷದ ಹಿಂದೆ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ನಾವು ಸ್ವಾಗತಿಸುತ್ತವೆ. ವರದಿಯನ್ನು ಸರ್ಕಾರ ಸ್ವೀಕಾರ ಮಾಡಿ, ಜಾರಿ ಮಾಡಬೇಕು ಎಂದು ಆಗ್ರಹಿಸುತ್ತೇವೆ’ ಎಂದು ಒತ್ತಾಯಿಸಿದರು.

‘ಎಲ್ಲ ಶೋಷಿತ ವರ್ಗಗಳಿಗೆ ನ್ಯಾಯ ಕೊಡಿಸಬೇಕು, ಸಂವಿಧಾನಿಕ ಹಕ್ಕುಗಳನ್ನು ನೀಡಬೇಕು ಎಂಬ ಕಾರಣಕ್ಕೆ ಸಿದ್ದರಾಮಯ್ಯ ಸಮೀಕ್ಷೆ ಮಾಡಿಸಿದ್ದಾರೆ. ಕಾಂತರಾಜು ಸಮಿತಿಯ ಎಲ್ಲ ಶಿಫಾರಸುಗಳನ್ನು ಸರ್ಕಾರ ಒಪ್ಪಿಕೊಳ್ಳಬೇಕು. ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಈ ಸಮುದಾಯಗಳಿಗೆ ನೆರವಾಗಲು ಕೇಂದ್ರ ಸರ್ಕಾರ ದೇಶದಾದ್ಯಂತ ಜಾತಿ ಸಮೀಕ್ಷೆ ನಡೆಸಬೇಕು’ ಎಂದರು

‘ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲ ಸಮುದಾಯಗಳನ್ನು ಸಮಾನವಾಗಿ ಕಾಣುತ್ತಾರೆ. ಶೋಷಿತ ವರ್ಗದವರಿಗೆ ನ್ಯಾಯ ಕೊಡಿಸುವ ಜೊತೆಗೆ, ಬಡವರಿಗೆ ಹಲವಾರು ಅಭಿವೃದ್ಧಿ ಕಾರ್ಯಕ್ರಮ ನೀಡಿದ್ದಾರೆ. ಕೊಟ್ಟ ಭರವಸೆಯಂತೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಯಾವುದಾದರೂ ಸರ್ಕಾರ ಇದ್ದರೆ ಅದು ಸಿದ್ದರಾಮಯ್ಯ ಸರ್ಕಾರ ಮಾತ್ರ. ಆದ್ದರಿಂದಲೆ ಶೋಷಿತ ವರ್ಗದವರು ಈ ಸರ್ಕಾರದ ಪರವಾಗಿ ನಿಂತಿದ್ದೇವೆ’ ಎಂದರು.

‘ಸರ್ಕಾರ ಕಾಂತರಾಜು ಆಯೋಗದ ವರದಿಯನ್ನು ಸ್ವೀಕರಿಸಬೇಕು; ಸಮಿತಿಯು ಸಾಕಷ್ಟು ವೈಜ್ಞಾನಿಕವಾಗಿ ಸಮೀಕ್ಷೆ ಮಾಡಿದ್ದಾರೆ. ಸಂವಿಧಾನ ಆಶಯಗಳನ್ನು ಉಳಿಸಿವುದಕ್ಕೋಸ್ಕರ, ಅಹಿಂದ ಸಮುದಾಯಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವುದಕ್ಕಾಗಿ ಸರ್ಕಾರ ಈ ವರದಿಯನ್ನು ಸ್ವೀಕರಿಸಬೇಕು’ ಎಂದು ನಾಗರಾಜ್ ಯಾದವ್ ಆಗ್ರಹಿಸಿದರು.

ಇದನ್ನೂ ಓದಿ; ಚಿತ್ರದುರ್ಗ: ಶೋಷಿತ ಸಮುದಾಯಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...