Homeಚಳವಳಿಹೋರಾಟ ನಿರತ ರೈತರ ಕರೆಗೆ ಓಗೊಟ್ಟ ಭಾರತ: ದೇಶದಾದ್ಯಂತ ’ಚಕ್ಕಾ ಜಾಮ್‌‌’ ಪ್ರತಿಭಟನೆಯ ಚಿತ್ರಣಗಳು

ಹೋರಾಟ ನಿರತ ರೈತರ ಕರೆಗೆ ಓಗೊಟ್ಟ ಭಾರತ: ದೇಶದಾದ್ಯಂತ ’ಚಕ್ಕಾ ಜಾಮ್‌‌’ ಪ್ರತಿಭಟನೆಯ ಚಿತ್ರಣಗಳು

ದೇಶದಾದ್ಯಂತ ನಡೆಯುತ್ತಿರುವ ಪ್ರತಿಭಟನೆಯ ವಿಡಿಯೋ ಮತ್ತು ಚಿತ್ರಗಳು ಇಲ್ಲಿವೆ

- Advertisement -
- Advertisement -

ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ದೇಶದಾದ್ಯಂತ ಶನಿವಾರ ಚಕ್ಕಾ ಜಾಮ್(ರಸ್ತೆ ದಿಗ್ಭಂಧನ) ಪ್ರತಿಭಟನೆಗೆ ಕರೆ ನೀಡಿದ್ದರು. ಪ್ರತಿಭಟನಾ ನಿರತ ರೈತರ ಕರೆಗೆ ದೇಶದಾದ್ಯಂತ ಜನರು ಓಗೊಟ್ಟಿದ್ದು ಯಶಸ್ವಿ ರಸ್ತೆ ದಿಗ್ಬಂಧನ ನಡೆಯುತ್ತಿದೆ.

ದೆಹಲಿ, ಉತ್ತರ ಪ್ರದೇಶ, ಉತ್ತರಖಂಡ್ ಹೊರತುಪಡಿಸಿ ಉಳಿದ ರಾಜ್ಯಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ರೈತರು ಕರೆ ನೀಡಿದ್ದರು. ಇದಕ್ಕೆ ಕರ್ನಾಟಕ ಸೇರಿದಂತೆ ದೇಶದಾದ್ಯಂತ ಜನಬೆಂಬಲ ವ್ಯಕ್ತವಾಗಿದೆ. ಅದರಲ್ಲೂ ಪಂಜಾಬ್, ಹರಿಯಾಣ, ರಾಜಸ್ಥಾನ್‌‌ ರಾಜ್ಯಗಳಲ್ಲಿ ಭಾರಿ ಜನಬೆಂಬಲ ವ್ಯಕ್ತವಾಗಿದೆ.

ಪಂಜಾಬ್‌ನ ಮೆಹಲ್ ಕಲನ್ ಬರ್ನಾಲ ಟೋಲ್ ಪ್ಲಾಜಾ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಲೈವ್‌ ವಿಡಿಯೋ ನೋಡಿ.

ಹರಿಯಾಣದ ಕರ್ನಾಲ್‌ನಲ್ಲಿ ರಸ್ತೆ ದಿಗ್ಭಂಧನ ನಡೆಸಿ ರೈತರಿಗೆ ಬೆಂಬಲ ನೀಡಲಾಯಿತು.

ನಾಸಿಕ್-ಔರಂಗಾಬಾದ್ ಹೆದ್ದಾರಿಯನ್ನು ಸ್ವಾಭಿಮಾನಿ ಶೇತ್ಕಾರಿ ಸಂಘಟನೆಯು, ನಾಸಿಕ್‌ನ ನಿಫಾದ್‌ನಲ್ಲಿ ತೆಡೆದು ರೈತರ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ದೆಹಲಿ-ಚಂಡೀಘಡ್ ಹೆದ್ದಾರಿಯನ್ನು ರೈತರು ಕರ್ನಾಲ್‌‌ನಲ್ಲಿ ತಡೆಹಿಡಿದಿದ್ದಾರೆ.

ಹರಿಯಾಣದಲ್ಲಿರುವ ಭಿವಾನಿ-ಜಿಂದ್ ಹೆದ್ದಾರಿಯನ್ನು ರೈತರು ತಡೆದಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 44 ಅನ್ನು ಲೂಧಿಯಾನದಲ್ಲಿ ತಡೆಯಲಾಗಿದೆ. ಅಲ್ಲದೆ ಅಮೃತಸರ ಪ್ರವೇಶ ಮಾಡುವ ಹೆದ್ದಾರಿ ಬಳಿ ಭಾರಿ ಸಂಖ್ಯೆಯ ರೈತರು ನರೆದಿದ್ದಾರೆ. ಶಹಜಹಾನ್‌ಪುರ್ ಗಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆಯಲಾಗಿದೆ.

ಹರಿಯಾಣದ ಫತೇಹಾಬಾದ್ ಜಿಲ್ಲೆಯ ’ಲಾಲ್ ಬತ್ತಿ’ ಹೆದ್ದಾರಿಯನ್ನು ಬಂದ್ ಮಾಡಲಾಯಿತು.

ಹರಿಯಾಣದ ಮಹಾಮ್-ಗೊಹಾನ ರಸ್ತೆಯನ್ನು ತಡೆ ಮಾಡಲಾಗಿದೆ.

ರಾಷ್ಟ್ರೀಯ ಹೆದ್ದಾರಿ-1 ಅನ್ನು ರೈತರು ಕರ್ನಾಲ್‌‌‌ನಲ್ಲಿ ತಡೆದರು.

ಉಕ್ಲಾನಾ ಮಂಡಿಯ ಸುರೇವಾಲಾ ಚೌಕ್‌ನಲ್ಲಿ ಹೆಚ್ಚಿನ ಸಂಖ್ಯೆಯ ರೈತರು ಜಮಾಯಿಸಿದ್ದಾರೆ. ರಸ್ತೆ ತಡೆಯನ್ನು ಮಾಡಲಿದ್ದಾರೆ.

ಪಾಣಿಪತ್‌-ರೋಹ್ಟಕ್ ರಸ್ತೆಯನ್ನು ರೈತರು ತಡೆದಿದ್ದಾರೆ. ರೋಹ್ಟಕ್-ಹಿಸಾರ್ ರಸ್ತೆಯಲ್ಲಿರುವ ಮದೀನಾ ಟೋಲ್‌ನಲ್ಲಿ ರೈತರು ಸಭೆ ನಡೆಸಿ ಅಲ್ಲಿ ರಸ್ತೆ ತಡೆ ಮಾಡಿದ್ದಾರೆ. ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಗ್ರಾಮವಾದ ನಿಂಡಾನಾದಲ್ಲಿನ ಹೆದ್ದಾರಿಯನ್ನು ರೈತರು ದಿಗ್ಬಂಧನ ಮಾಡಿದ್ದಾರೆ.

ಸಂಗೂರ್‌ನ ಕಲಾಝಾರ್ ಟೋಲ್‌ ಪ್ಲಾಝಾದಲ್ಲಿ ರೈತರು ರಸ್ತೆ ತಡೆ ಮಾಡಿ ದಿಗ್ಬಂಧನ ಮಾಡಿದ್ದಾರೆ.

ಹಿಸಾರ್-ಚಂಡೀಗಡ ರಾಷ್ಟ್ರೀಯ ಹೆದ್ದಾರಿಯಲ್ಲಿನ ಬಡ್ಡೋಪಟ್ಟಿ ಟೋಲ್ ಪ್ಲಾಜಾದಲ್ಲಿ ರೈತರು ರಸ್ತೆ ದಿಗ್ಭಂಧನ ಮಾಡಿದ್ದಾರೆ. ಅಲ್ಲಿನ ಚೌಧರಿವಾಸ್, ಮಯ್ಯದ್ ಮತ್ತು ಲ್ಯಾಂಡ್ಹಾಲಿ ಟೋಲ್ ಪ್ಲಾಜಾಗಳಲ್ಲಿಯೂ ಸಹ ಚಕ್ಕಾ-ಜಾಮ್ ಮಾಡಲಾಗಿದೆ.

ಪಂಜಾಬ್‌ನ ಪಾಟಿಯಾಲದ ಹಳ್ಳಿಯಾದ ಬರ್ನ್‌ನಲ್ಲಿ ರೈತರು ರಸ್ತೆ ತಡೆ ನಡೆಸಿದ್ದಾರೆ.

ರಾಜಸ್ಥಾನ್‌‌ನ ನೋಹರ್‌‌ನಲ್ಲಿ ರೈತರು ರಸ್ತೆ ತಡೆ ನಡೆಸಿದರು.

AIKMS ಸಂಘಟನೆಯು ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯಲ್ಲಿ ರಸ್ತೆತಡೆಯನ್ನು ನಡೆಸಿ ರೈತರಿಗೆ ಬೆಂಬಲ ಸೂಚಿಸಿತು.

ಹೈದರಾಬಾದ್‌‌ನಲ್ಲಿ ರೈತರನ್ನು ಬೆಂಬಲಿಸಿ ರಸ್ತೆ ತಡೆಯನ್ನು ಮಾಡಲಾಯಿತು.

ಇದನ್ನೂ ಓದಿ: ರೈತ ಹೋರಾಟ: ಏನಿದು ‘ಚಕ್ಕಾ ಜಾಮ್’ ರಸ್ತೆ ತಡೆ ಪ್ರತಿಭಟನೆ? ಹೇಗಿರುತ್ತದೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...