Homeಚಳವಳಿಹೋರಾಟ ನಿರತ ರೈತರ ಕರೆಗೆ ಓಗೊಟ್ಟ ಭಾರತ: ದೇಶದಾದ್ಯಂತ ’ಚಕ್ಕಾ ಜಾಮ್‌‌’ ಪ್ರತಿಭಟನೆಯ ಚಿತ್ರಣಗಳು

ಹೋರಾಟ ನಿರತ ರೈತರ ಕರೆಗೆ ಓಗೊಟ್ಟ ಭಾರತ: ದೇಶದಾದ್ಯಂತ ’ಚಕ್ಕಾ ಜಾಮ್‌‌’ ಪ್ರತಿಭಟನೆಯ ಚಿತ್ರಣಗಳು

ದೇಶದಾದ್ಯಂತ ನಡೆಯುತ್ತಿರುವ ಪ್ರತಿಭಟನೆಯ ವಿಡಿಯೋ ಮತ್ತು ಚಿತ್ರಗಳು ಇಲ್ಲಿವೆ

- Advertisement -
- Advertisement -

ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ದೇಶದಾದ್ಯಂತ ಶನಿವಾರ ಚಕ್ಕಾ ಜಾಮ್(ರಸ್ತೆ ದಿಗ್ಭಂಧನ) ಪ್ರತಿಭಟನೆಗೆ ಕರೆ ನೀಡಿದ್ದರು. ಪ್ರತಿಭಟನಾ ನಿರತ ರೈತರ ಕರೆಗೆ ದೇಶದಾದ್ಯಂತ ಜನರು ಓಗೊಟ್ಟಿದ್ದು ಯಶಸ್ವಿ ರಸ್ತೆ ದಿಗ್ಬಂಧನ ನಡೆಯುತ್ತಿದೆ.

ದೆಹಲಿ, ಉತ್ತರ ಪ್ರದೇಶ, ಉತ್ತರಖಂಡ್ ಹೊರತುಪಡಿಸಿ ಉಳಿದ ರಾಜ್ಯಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ರೈತರು ಕರೆ ನೀಡಿದ್ದರು. ಇದಕ್ಕೆ ಕರ್ನಾಟಕ ಸೇರಿದಂತೆ ದೇಶದಾದ್ಯಂತ ಜನಬೆಂಬಲ ವ್ಯಕ್ತವಾಗಿದೆ. ಅದರಲ್ಲೂ ಪಂಜಾಬ್, ಹರಿಯಾಣ, ರಾಜಸ್ಥಾನ್‌‌ ರಾಜ್ಯಗಳಲ್ಲಿ ಭಾರಿ ಜನಬೆಂಬಲ ವ್ಯಕ್ತವಾಗಿದೆ.

ಪಂಜಾಬ್‌ನ ಮೆಹಲ್ ಕಲನ್ ಬರ್ನಾಲ ಟೋಲ್ ಪ್ಲಾಜಾ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಲೈವ್‌ ವಿಡಿಯೋ ನೋಡಿ.

ಹರಿಯಾಣದ ಕರ್ನಾಲ್‌ನಲ್ಲಿ ರಸ್ತೆ ದಿಗ್ಭಂಧನ ನಡೆಸಿ ರೈತರಿಗೆ ಬೆಂಬಲ ನೀಡಲಾಯಿತು.

ನಾಸಿಕ್-ಔರಂಗಾಬಾದ್ ಹೆದ್ದಾರಿಯನ್ನು ಸ್ವಾಭಿಮಾನಿ ಶೇತ್ಕಾರಿ ಸಂಘಟನೆಯು, ನಾಸಿಕ್‌ನ ನಿಫಾದ್‌ನಲ್ಲಿ ತೆಡೆದು ರೈತರ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ದೆಹಲಿ-ಚಂಡೀಘಡ್ ಹೆದ್ದಾರಿಯನ್ನು ರೈತರು ಕರ್ನಾಲ್‌‌ನಲ್ಲಿ ತಡೆಹಿಡಿದಿದ್ದಾರೆ.

ಹರಿಯಾಣದಲ್ಲಿರುವ ಭಿವಾನಿ-ಜಿಂದ್ ಹೆದ್ದಾರಿಯನ್ನು ರೈತರು ತಡೆದಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 44 ಅನ್ನು ಲೂಧಿಯಾನದಲ್ಲಿ ತಡೆಯಲಾಗಿದೆ. ಅಲ್ಲದೆ ಅಮೃತಸರ ಪ್ರವೇಶ ಮಾಡುವ ಹೆದ್ದಾರಿ ಬಳಿ ಭಾರಿ ಸಂಖ್ಯೆಯ ರೈತರು ನರೆದಿದ್ದಾರೆ. ಶಹಜಹಾನ್‌ಪುರ್ ಗಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆಯಲಾಗಿದೆ.

ಹರಿಯಾಣದ ಫತೇಹಾಬಾದ್ ಜಿಲ್ಲೆಯ ’ಲಾಲ್ ಬತ್ತಿ’ ಹೆದ್ದಾರಿಯನ್ನು ಬಂದ್ ಮಾಡಲಾಯಿತು.

ಹರಿಯಾಣದ ಮಹಾಮ್-ಗೊಹಾನ ರಸ್ತೆಯನ್ನು ತಡೆ ಮಾಡಲಾಗಿದೆ.

ರಾಷ್ಟ್ರೀಯ ಹೆದ್ದಾರಿ-1 ಅನ್ನು ರೈತರು ಕರ್ನಾಲ್‌‌‌ನಲ್ಲಿ ತಡೆದರು.

ಉಕ್ಲಾನಾ ಮಂಡಿಯ ಸುರೇವಾಲಾ ಚೌಕ್‌ನಲ್ಲಿ ಹೆಚ್ಚಿನ ಸಂಖ್ಯೆಯ ರೈತರು ಜಮಾಯಿಸಿದ್ದಾರೆ. ರಸ್ತೆ ತಡೆಯನ್ನು ಮಾಡಲಿದ್ದಾರೆ.

ಪಾಣಿಪತ್‌-ರೋಹ್ಟಕ್ ರಸ್ತೆಯನ್ನು ರೈತರು ತಡೆದಿದ್ದಾರೆ. ರೋಹ್ಟಕ್-ಹಿಸಾರ್ ರಸ್ತೆಯಲ್ಲಿರುವ ಮದೀನಾ ಟೋಲ್‌ನಲ್ಲಿ ರೈತರು ಸಭೆ ನಡೆಸಿ ಅಲ್ಲಿ ರಸ್ತೆ ತಡೆ ಮಾಡಿದ್ದಾರೆ. ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಗ್ರಾಮವಾದ ನಿಂಡಾನಾದಲ್ಲಿನ ಹೆದ್ದಾರಿಯನ್ನು ರೈತರು ದಿಗ್ಬಂಧನ ಮಾಡಿದ್ದಾರೆ.

ಸಂಗೂರ್‌ನ ಕಲಾಝಾರ್ ಟೋಲ್‌ ಪ್ಲಾಝಾದಲ್ಲಿ ರೈತರು ರಸ್ತೆ ತಡೆ ಮಾಡಿ ದಿಗ್ಬಂಧನ ಮಾಡಿದ್ದಾರೆ.

ಹಿಸಾರ್-ಚಂಡೀಗಡ ರಾಷ್ಟ್ರೀಯ ಹೆದ್ದಾರಿಯಲ್ಲಿನ ಬಡ್ಡೋಪಟ್ಟಿ ಟೋಲ್ ಪ್ಲಾಜಾದಲ್ಲಿ ರೈತರು ರಸ್ತೆ ದಿಗ್ಭಂಧನ ಮಾಡಿದ್ದಾರೆ. ಅಲ್ಲಿನ ಚೌಧರಿವಾಸ್, ಮಯ್ಯದ್ ಮತ್ತು ಲ್ಯಾಂಡ್ಹಾಲಿ ಟೋಲ್ ಪ್ಲಾಜಾಗಳಲ್ಲಿಯೂ ಸಹ ಚಕ್ಕಾ-ಜಾಮ್ ಮಾಡಲಾಗಿದೆ.

ಪಂಜಾಬ್‌ನ ಪಾಟಿಯಾಲದ ಹಳ್ಳಿಯಾದ ಬರ್ನ್‌ನಲ್ಲಿ ರೈತರು ರಸ್ತೆ ತಡೆ ನಡೆಸಿದ್ದಾರೆ.

ರಾಜಸ್ಥಾನ್‌‌ನ ನೋಹರ್‌‌ನಲ್ಲಿ ರೈತರು ರಸ್ತೆ ತಡೆ ನಡೆಸಿದರು.

AIKMS ಸಂಘಟನೆಯು ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯಲ್ಲಿ ರಸ್ತೆತಡೆಯನ್ನು ನಡೆಸಿ ರೈತರಿಗೆ ಬೆಂಬಲ ಸೂಚಿಸಿತು.

ಹೈದರಾಬಾದ್‌‌ನಲ್ಲಿ ರೈತರನ್ನು ಬೆಂಬಲಿಸಿ ರಸ್ತೆ ತಡೆಯನ್ನು ಮಾಡಲಾಯಿತು.

ಇದನ್ನೂ ಓದಿ: ರೈತ ಹೋರಾಟ: ಏನಿದು ‘ಚಕ್ಕಾ ಜಾಮ್’ ರಸ್ತೆ ತಡೆ ಪ್ರತಿಭಟನೆ? ಹೇಗಿರುತ್ತದೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...