Homeಚಳವಳಿಹೋರಾಟ ನಿರತ ರೈತರ ಕರೆಗೆ ಓಗೊಟ್ಟ ಭಾರತ: ದೇಶದಾದ್ಯಂತ ’ಚಕ್ಕಾ ಜಾಮ್‌‌’ ಪ್ರತಿಭಟನೆಯ ಚಿತ್ರಣಗಳು

ಹೋರಾಟ ನಿರತ ರೈತರ ಕರೆಗೆ ಓಗೊಟ್ಟ ಭಾರತ: ದೇಶದಾದ್ಯಂತ ’ಚಕ್ಕಾ ಜಾಮ್‌‌’ ಪ್ರತಿಭಟನೆಯ ಚಿತ್ರಣಗಳು

ದೇಶದಾದ್ಯಂತ ನಡೆಯುತ್ತಿರುವ ಪ್ರತಿಭಟನೆಯ ವಿಡಿಯೋ ಮತ್ತು ಚಿತ್ರಗಳು ಇಲ್ಲಿವೆ

- Advertisement -
- Advertisement -

ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ದೇಶದಾದ್ಯಂತ ಶನಿವಾರ ಚಕ್ಕಾ ಜಾಮ್(ರಸ್ತೆ ದಿಗ್ಭಂಧನ) ಪ್ರತಿಭಟನೆಗೆ ಕರೆ ನೀಡಿದ್ದರು. ಪ್ರತಿಭಟನಾ ನಿರತ ರೈತರ ಕರೆಗೆ ದೇಶದಾದ್ಯಂತ ಜನರು ಓಗೊಟ್ಟಿದ್ದು ಯಶಸ್ವಿ ರಸ್ತೆ ದಿಗ್ಬಂಧನ ನಡೆಯುತ್ತಿದೆ.

ದೆಹಲಿ, ಉತ್ತರ ಪ್ರದೇಶ, ಉತ್ತರಖಂಡ್ ಹೊರತುಪಡಿಸಿ ಉಳಿದ ರಾಜ್ಯಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ರೈತರು ಕರೆ ನೀಡಿದ್ದರು. ಇದಕ್ಕೆ ಕರ್ನಾಟಕ ಸೇರಿದಂತೆ ದೇಶದಾದ್ಯಂತ ಜನಬೆಂಬಲ ವ್ಯಕ್ತವಾಗಿದೆ. ಅದರಲ್ಲೂ ಪಂಜಾಬ್, ಹರಿಯಾಣ, ರಾಜಸ್ಥಾನ್‌‌ ರಾಜ್ಯಗಳಲ್ಲಿ ಭಾರಿ ಜನಬೆಂಬಲ ವ್ಯಕ್ತವಾಗಿದೆ.

ಪಂಜಾಬ್‌ನ ಮೆಹಲ್ ಕಲನ್ ಬರ್ನಾಲ ಟೋಲ್ ಪ್ಲಾಜಾ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಲೈವ್‌ ವಿಡಿಯೋ ನೋಡಿ.

ಹರಿಯಾಣದ ಕರ್ನಾಲ್‌ನಲ್ಲಿ ರಸ್ತೆ ದಿಗ್ಭಂಧನ ನಡೆಸಿ ರೈತರಿಗೆ ಬೆಂಬಲ ನೀಡಲಾಯಿತು.

ನಾಸಿಕ್-ಔರಂಗಾಬಾದ್ ಹೆದ್ದಾರಿಯನ್ನು ಸ್ವಾಭಿಮಾನಿ ಶೇತ್ಕಾರಿ ಸಂಘಟನೆಯು, ನಾಸಿಕ್‌ನ ನಿಫಾದ್‌ನಲ್ಲಿ ತೆಡೆದು ರೈತರ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ದೆಹಲಿ-ಚಂಡೀಘಡ್ ಹೆದ್ದಾರಿಯನ್ನು ರೈತರು ಕರ್ನಾಲ್‌‌ನಲ್ಲಿ ತಡೆಹಿಡಿದಿದ್ದಾರೆ.

ಹರಿಯಾಣದಲ್ಲಿರುವ ಭಿವಾನಿ-ಜಿಂದ್ ಹೆದ್ದಾರಿಯನ್ನು ರೈತರು ತಡೆದಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 44 ಅನ್ನು ಲೂಧಿಯಾನದಲ್ಲಿ ತಡೆಯಲಾಗಿದೆ. ಅಲ್ಲದೆ ಅಮೃತಸರ ಪ್ರವೇಶ ಮಾಡುವ ಹೆದ್ದಾರಿ ಬಳಿ ಭಾರಿ ಸಂಖ್ಯೆಯ ರೈತರು ನರೆದಿದ್ದಾರೆ. ಶಹಜಹಾನ್‌ಪುರ್ ಗಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆಯಲಾಗಿದೆ.

ಹರಿಯಾಣದ ಫತೇಹಾಬಾದ್ ಜಿಲ್ಲೆಯ ’ಲಾಲ್ ಬತ್ತಿ’ ಹೆದ್ದಾರಿಯನ್ನು ಬಂದ್ ಮಾಡಲಾಯಿತು.

ಹರಿಯಾಣದ ಮಹಾಮ್-ಗೊಹಾನ ರಸ್ತೆಯನ್ನು ತಡೆ ಮಾಡಲಾಗಿದೆ.

ರಾಷ್ಟ್ರೀಯ ಹೆದ್ದಾರಿ-1 ಅನ್ನು ರೈತರು ಕರ್ನಾಲ್‌‌‌ನಲ್ಲಿ ತಡೆದರು.

ಉಕ್ಲಾನಾ ಮಂಡಿಯ ಸುರೇವಾಲಾ ಚೌಕ್‌ನಲ್ಲಿ ಹೆಚ್ಚಿನ ಸಂಖ್ಯೆಯ ರೈತರು ಜಮಾಯಿಸಿದ್ದಾರೆ. ರಸ್ತೆ ತಡೆಯನ್ನು ಮಾಡಲಿದ್ದಾರೆ.

ಪಾಣಿಪತ್‌-ರೋಹ್ಟಕ್ ರಸ್ತೆಯನ್ನು ರೈತರು ತಡೆದಿದ್ದಾರೆ. ರೋಹ್ಟಕ್-ಹಿಸಾರ್ ರಸ್ತೆಯಲ್ಲಿರುವ ಮದೀನಾ ಟೋಲ್‌ನಲ್ಲಿ ರೈತರು ಸಭೆ ನಡೆಸಿ ಅಲ್ಲಿ ರಸ್ತೆ ತಡೆ ಮಾಡಿದ್ದಾರೆ. ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಗ್ರಾಮವಾದ ನಿಂಡಾನಾದಲ್ಲಿನ ಹೆದ್ದಾರಿಯನ್ನು ರೈತರು ದಿಗ್ಬಂಧನ ಮಾಡಿದ್ದಾರೆ.

ಸಂಗೂರ್‌ನ ಕಲಾಝಾರ್ ಟೋಲ್‌ ಪ್ಲಾಝಾದಲ್ಲಿ ರೈತರು ರಸ್ತೆ ತಡೆ ಮಾಡಿ ದಿಗ್ಬಂಧನ ಮಾಡಿದ್ದಾರೆ.

ಹಿಸಾರ್-ಚಂಡೀಗಡ ರಾಷ್ಟ್ರೀಯ ಹೆದ್ದಾರಿಯಲ್ಲಿನ ಬಡ್ಡೋಪಟ್ಟಿ ಟೋಲ್ ಪ್ಲಾಜಾದಲ್ಲಿ ರೈತರು ರಸ್ತೆ ದಿಗ್ಭಂಧನ ಮಾಡಿದ್ದಾರೆ. ಅಲ್ಲಿನ ಚೌಧರಿವಾಸ್, ಮಯ್ಯದ್ ಮತ್ತು ಲ್ಯಾಂಡ್ಹಾಲಿ ಟೋಲ್ ಪ್ಲಾಜಾಗಳಲ್ಲಿಯೂ ಸಹ ಚಕ್ಕಾ-ಜಾಮ್ ಮಾಡಲಾಗಿದೆ.

ಪಂಜಾಬ್‌ನ ಪಾಟಿಯಾಲದ ಹಳ್ಳಿಯಾದ ಬರ್ನ್‌ನಲ್ಲಿ ರೈತರು ರಸ್ತೆ ತಡೆ ನಡೆಸಿದ್ದಾರೆ.

ರಾಜಸ್ಥಾನ್‌‌ನ ನೋಹರ್‌‌ನಲ್ಲಿ ರೈತರು ರಸ್ತೆ ತಡೆ ನಡೆಸಿದರು.

AIKMS ಸಂಘಟನೆಯು ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯಲ್ಲಿ ರಸ್ತೆತಡೆಯನ್ನು ನಡೆಸಿ ರೈತರಿಗೆ ಬೆಂಬಲ ಸೂಚಿಸಿತು.

ಹೈದರಾಬಾದ್‌‌ನಲ್ಲಿ ರೈತರನ್ನು ಬೆಂಬಲಿಸಿ ರಸ್ತೆ ತಡೆಯನ್ನು ಮಾಡಲಾಯಿತು.

ಇದನ್ನೂ ಓದಿ: ರೈತ ಹೋರಾಟ: ಏನಿದು ‘ಚಕ್ಕಾ ಜಾಮ್’ ರಸ್ತೆ ತಡೆ ಪ್ರತಿಭಟನೆ? ಹೇಗಿರುತ್ತದೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...