Homeಚಳವಳಿಹೋರಾಟ ನಿರತ ರೈತರ ಕರೆಗೆ ಓಗೊಟ್ಟ ಭಾರತ: ದೇಶದಾದ್ಯಂತ ’ಚಕ್ಕಾ ಜಾಮ್‌‌’ ಪ್ರತಿಭಟನೆಯ ಚಿತ್ರಣಗಳು

ಹೋರಾಟ ನಿರತ ರೈತರ ಕರೆಗೆ ಓಗೊಟ್ಟ ಭಾರತ: ದೇಶದಾದ್ಯಂತ ’ಚಕ್ಕಾ ಜಾಮ್‌‌’ ಪ್ರತಿಭಟನೆಯ ಚಿತ್ರಣಗಳು

ದೇಶದಾದ್ಯಂತ ನಡೆಯುತ್ತಿರುವ ಪ್ರತಿಭಟನೆಯ ವಿಡಿಯೋ ಮತ್ತು ಚಿತ್ರಗಳು ಇಲ್ಲಿವೆ

- Advertisement -
- Advertisement -

ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ದೇಶದಾದ್ಯಂತ ಶನಿವಾರ ಚಕ್ಕಾ ಜಾಮ್(ರಸ್ತೆ ದಿಗ್ಭಂಧನ) ಪ್ರತಿಭಟನೆಗೆ ಕರೆ ನೀಡಿದ್ದರು. ಪ್ರತಿಭಟನಾ ನಿರತ ರೈತರ ಕರೆಗೆ ದೇಶದಾದ್ಯಂತ ಜನರು ಓಗೊಟ್ಟಿದ್ದು ಯಶಸ್ವಿ ರಸ್ತೆ ದಿಗ್ಬಂಧನ ನಡೆಯುತ್ತಿದೆ.

ದೆಹಲಿ, ಉತ್ತರ ಪ್ರದೇಶ, ಉತ್ತರಖಂಡ್ ಹೊರತುಪಡಿಸಿ ಉಳಿದ ರಾಜ್ಯಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ರೈತರು ಕರೆ ನೀಡಿದ್ದರು. ಇದಕ್ಕೆ ಕರ್ನಾಟಕ ಸೇರಿದಂತೆ ದೇಶದಾದ್ಯಂತ ಜನಬೆಂಬಲ ವ್ಯಕ್ತವಾಗಿದೆ. ಅದರಲ್ಲೂ ಪಂಜಾಬ್, ಹರಿಯಾಣ, ರಾಜಸ್ಥಾನ್‌‌ ರಾಜ್ಯಗಳಲ್ಲಿ ಭಾರಿ ಜನಬೆಂಬಲ ವ್ಯಕ್ತವಾಗಿದೆ.

ಪಂಜಾಬ್‌ನ ಮೆಹಲ್ ಕಲನ್ ಬರ್ನಾಲ ಟೋಲ್ ಪ್ಲಾಜಾ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಲೈವ್‌ ವಿಡಿಯೋ ನೋಡಿ.

ಹರಿಯಾಣದ ಕರ್ನಾಲ್‌ನಲ್ಲಿ ರಸ್ತೆ ದಿಗ್ಭಂಧನ ನಡೆಸಿ ರೈತರಿಗೆ ಬೆಂಬಲ ನೀಡಲಾಯಿತು.

ನಾಸಿಕ್-ಔರಂಗಾಬಾದ್ ಹೆದ್ದಾರಿಯನ್ನು ಸ್ವಾಭಿಮಾನಿ ಶೇತ್ಕಾರಿ ಸಂಘಟನೆಯು, ನಾಸಿಕ್‌ನ ನಿಫಾದ್‌ನಲ್ಲಿ ತೆಡೆದು ರೈತರ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ದೆಹಲಿ-ಚಂಡೀಘಡ್ ಹೆದ್ದಾರಿಯನ್ನು ರೈತರು ಕರ್ನಾಲ್‌‌ನಲ್ಲಿ ತಡೆಹಿಡಿದಿದ್ದಾರೆ.

ಹರಿಯಾಣದಲ್ಲಿರುವ ಭಿವಾನಿ-ಜಿಂದ್ ಹೆದ್ದಾರಿಯನ್ನು ರೈತರು ತಡೆದಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 44 ಅನ್ನು ಲೂಧಿಯಾನದಲ್ಲಿ ತಡೆಯಲಾಗಿದೆ. ಅಲ್ಲದೆ ಅಮೃತಸರ ಪ್ರವೇಶ ಮಾಡುವ ಹೆದ್ದಾರಿ ಬಳಿ ಭಾರಿ ಸಂಖ್ಯೆಯ ರೈತರು ನರೆದಿದ್ದಾರೆ. ಶಹಜಹಾನ್‌ಪುರ್ ಗಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆಯಲಾಗಿದೆ.

ಹರಿಯಾಣದ ಫತೇಹಾಬಾದ್ ಜಿಲ್ಲೆಯ ’ಲಾಲ್ ಬತ್ತಿ’ ಹೆದ್ದಾರಿಯನ್ನು ಬಂದ್ ಮಾಡಲಾಯಿತು.

ಹರಿಯಾಣದ ಮಹಾಮ್-ಗೊಹಾನ ರಸ್ತೆಯನ್ನು ತಡೆ ಮಾಡಲಾಗಿದೆ.

ರಾಷ್ಟ್ರೀಯ ಹೆದ್ದಾರಿ-1 ಅನ್ನು ರೈತರು ಕರ್ನಾಲ್‌‌‌ನಲ್ಲಿ ತಡೆದರು.

ಉಕ್ಲಾನಾ ಮಂಡಿಯ ಸುರೇವಾಲಾ ಚೌಕ್‌ನಲ್ಲಿ ಹೆಚ್ಚಿನ ಸಂಖ್ಯೆಯ ರೈತರು ಜಮಾಯಿಸಿದ್ದಾರೆ. ರಸ್ತೆ ತಡೆಯನ್ನು ಮಾಡಲಿದ್ದಾರೆ.

ಪಾಣಿಪತ್‌-ರೋಹ್ಟಕ್ ರಸ್ತೆಯನ್ನು ರೈತರು ತಡೆದಿದ್ದಾರೆ. ರೋಹ್ಟಕ್-ಹಿಸಾರ್ ರಸ್ತೆಯಲ್ಲಿರುವ ಮದೀನಾ ಟೋಲ್‌ನಲ್ಲಿ ರೈತರು ಸಭೆ ನಡೆಸಿ ಅಲ್ಲಿ ರಸ್ತೆ ತಡೆ ಮಾಡಿದ್ದಾರೆ. ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಗ್ರಾಮವಾದ ನಿಂಡಾನಾದಲ್ಲಿನ ಹೆದ್ದಾರಿಯನ್ನು ರೈತರು ದಿಗ್ಬಂಧನ ಮಾಡಿದ್ದಾರೆ.

ಸಂಗೂರ್‌ನ ಕಲಾಝಾರ್ ಟೋಲ್‌ ಪ್ಲಾಝಾದಲ್ಲಿ ರೈತರು ರಸ್ತೆ ತಡೆ ಮಾಡಿ ದಿಗ್ಬಂಧನ ಮಾಡಿದ್ದಾರೆ.

ಹಿಸಾರ್-ಚಂಡೀಗಡ ರಾಷ್ಟ್ರೀಯ ಹೆದ್ದಾರಿಯಲ್ಲಿನ ಬಡ್ಡೋಪಟ್ಟಿ ಟೋಲ್ ಪ್ಲಾಜಾದಲ್ಲಿ ರೈತರು ರಸ್ತೆ ದಿಗ್ಭಂಧನ ಮಾಡಿದ್ದಾರೆ. ಅಲ್ಲಿನ ಚೌಧರಿವಾಸ್, ಮಯ್ಯದ್ ಮತ್ತು ಲ್ಯಾಂಡ್ಹಾಲಿ ಟೋಲ್ ಪ್ಲಾಜಾಗಳಲ್ಲಿಯೂ ಸಹ ಚಕ್ಕಾ-ಜಾಮ್ ಮಾಡಲಾಗಿದೆ.

ಪಂಜಾಬ್‌ನ ಪಾಟಿಯಾಲದ ಹಳ್ಳಿಯಾದ ಬರ್ನ್‌ನಲ್ಲಿ ರೈತರು ರಸ್ತೆ ತಡೆ ನಡೆಸಿದ್ದಾರೆ.

ರಾಜಸ್ಥಾನ್‌‌ನ ನೋಹರ್‌‌ನಲ್ಲಿ ರೈತರು ರಸ್ತೆ ತಡೆ ನಡೆಸಿದರು.

AIKMS ಸಂಘಟನೆಯು ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯಲ್ಲಿ ರಸ್ತೆತಡೆಯನ್ನು ನಡೆಸಿ ರೈತರಿಗೆ ಬೆಂಬಲ ಸೂಚಿಸಿತು.

ಹೈದರಾಬಾದ್‌‌ನಲ್ಲಿ ರೈತರನ್ನು ಬೆಂಬಲಿಸಿ ರಸ್ತೆ ತಡೆಯನ್ನು ಮಾಡಲಾಯಿತು.

ಇದನ್ನೂ ಓದಿ: ರೈತ ಹೋರಾಟ: ಏನಿದು ‘ಚಕ್ಕಾ ಜಾಮ್’ ರಸ್ತೆ ತಡೆ ಪ್ರತಿಭಟನೆ? ಹೇಗಿರುತ್ತದೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...