Homeಕರ್ನಾಟಕಸಿದ್ದರಾಮಯ್ಯ ಕೊಲೆಗೆ ಕರೆ ನೀಡಿದ ಅಶ್ವತ್ಥ ನಾರಾಯಣ ವಿರುದ್ಧ ರಾಜ್ಯಾದ್ಯಂತ ಖಂಡನೆ ವ್ಯಕ್ತ

ಸಿದ್ದರಾಮಯ್ಯ ಕೊಲೆಗೆ ಕರೆ ನೀಡಿದ ಅಶ್ವತ್ಥ ನಾರಾಯಣ ವಿರುದ್ಧ ರಾಜ್ಯಾದ್ಯಂತ ಖಂಡನೆ ವ್ಯಕ್ತ

- Advertisement -
- Advertisement -

ಉನ್ನತ ಶಿಕ್ಷಣ ಸಚಿವ ಸಿಎನ್ ಅಶ್ವತ್ಥ ನಾರಾಯಣ ಅವರು ಫೆ.15, ಬುಧವಾರದಂದು ಮಂಡ್ಯದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ, ”ಟಿಪ್ಪುವನ್ನು ಹೊಡೆದಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದುಹಾಕಿ” ಎಂದು ಕರೆ ಕೊಟ್ಟಿದ್ದಾರೆ. ಅವರ ಈ ವಿವಾದಾತ್ಮಕ ಹೇಳಿಕೆಯನ್ನು ರಾಜ್ಯಾದ್ಯಂತ ಅನೇಕ ನಾಯಕರು ಖಂಡಿಸಿದ್ದಾರೆ.

ಈ ಬಗ್ಗೆ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಅವರು ಹೀಗೆ ಬರೆದಿದ್ದಾರೆ.. ಟಿಪ್ಪುವನ್ನು ಉರಿಗೌಡ, ನಂಜೇಗೌಡ ಹೊಡೆದು ಹಾಕಿದ ಹಾಗೆ ಸಿದ್ದರಾಮಯ್ಯನವರನ್ನು ಮಾಡಿ ಎಂದು‌ ಸಚಿವ ಡಾ. ಅಶ್ವತ್ಥ ನಾರಾಯಣ ಬಹಿರಂಗ ಸಭೆಯಲ್ಲಿ ಪ್ರಚೋದಿಸಿದ್ದಾರೆ. ಮಾಧ್ಯಮದ ಮಂದಿ, ಬಿಜೆಪಿಯ ಸಜ್ಜನರು ಮಾತ್ರವಲ್ಲ ಕಾಂಗ್ರೆಸ್ ನಾಯಕರು ಕೂಡಾ ಮೌನಧಾರಣೆ ಮಾಡಿದ್ದಾರೆ. ಒಂದೊಮ್ಮೆ ಇದೇ ಮಾತನ್ನು ಬಿಜೆಪಿಯ ಸಚಿವರು, ಮುಖ್ಯಮಂತ್ರಿಗಳು ಇಲ್ಲವೆ ಪ್ರಧಾನಮಂತ್ರಿ ಅವರನ್ನು ಉದ್ದೇಶಿಸಿ ಹೇಳಿದ್ದರೆ ಏನಾಗುತ್ತಿತ್ತು? ಇಡೀ ದೇಶದಲ್ಲಿ ಸುಂಟರಗಾಳಿಯೋ, ಸುನಾಮಿಯೋ, ಭೂಕಂಪವೊ ಆಗುತ್ತಿತ್ತು. ಗೊತ್ತಲ್ಲಾ, ಮಣಿಶಂಕರ್ ಅಯ್ಯರ್, ಚಾಯ್ ವಾಲಾ ಎಂದು ಕರೆದ ಕಾರಣಕ್ಕಾಗಿಯೇ ನರೇಂದ್ರಮೋದಿಯವರು ಪ್ರಧಾನಿಯಾಗಿಯೇ ಬಿಟ್ಟರು. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸೋಲುತ್ತದೆ ಎಂದು ನಿಮಗೇನಾದರೂ ಅನಿಸುತ್ತಾ? ಎಂದು ಬರೆದಿದ್ದಾರೆ.

ಹೋರಾಟಗಾರ, ನಟ ಚೇತನ್ ಕೂಡ ಖಂಡಿಸಿದ್ದು, ”ಟಿಪ್ಪುವನ್ನು ಪ್ರೀತಿಸುವವರು ‘ಇರಬಾರದು’ ಎಂಬ ಬಿಜೆಪಿಯ ಕಟೀಲು ಮತ್ತು ಟಿಪ್ಪುವಿನಂತೆ ಸಿದ್ದರಾಮಯ್ಯ ಅವರನ್ನು ‘ಮುಗಿಯಬೇಕು’ ಎಂಬ ಅಶ್ವತ್ಥ ನಾರಾಯಣ ಅವರ ಹೇಳಿಕೆಗಳು ಹಿಂಸೆಯ ಕರೆಗಳು! ನಮ್ಮ ಪ್ರಜಾಪ್ರಭುತ್ವದಲ್ಲಿ ಇಂತಹ ಮಾತುಗಳನ್ನು ಸಹಿಸಲು ಸಾಧ್ಯವಿಲ್ಲ. ಈ 2 ಹಿಂಸಾಚಾರ ಪ್ರಚೋದಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದಾರೆ.

ಮಾಜಿ ಸಚಿವ ಡಾ.ಎಚ್‌ಸಿ ಮಹಾದೇವಪ್ಪ ಟ್ವೀಟ್ ಮಾಡಿದ್ದು, ”ಕೊಡಗಿಗೆ ಹೋದಾಗ ಬಿಜೆಪಿಗರು ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಹೊಡೆಯುವ ಕೆಲಸ ಮಾಡಿದ್ದರು, ಈಗ ಅವರ ಹತ್ಯೆಗೆ ಪ್ರಚೋದಿಸುವ ಹೇಳಿಕೆಯನ್ನು ಸಚಿವರೇ ಕೊಡುತ್ತಿದ್ದಾರೆ. ರಾಜ್ಯದಲ್ಲಿ ಗೃಹ ಇಲಾಖೆ ಏನಾದರೂ ಬದುಕಿದ್ದರೆ ಮೊದಲು ಬೇಜವಾಬ್ದಾರಿ ಸಚಿವ ಅಶ್ವತ್ಥ ನಾರಾಯಣ ಅವರ ಮೇಲೆ ಕ್ರಮ ಜರುಗಿಸಲಿ ಮತ್ತು ಈತನನ್ನು ಸಂಪುಟದಿಂದ ವಜಾ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಅವರು, ”ಸಿದ್ದರಾಮಯ್ಯರನ್ನ ಕೊಲೆ ಮಾಡಲು ಅಶ್ವತ್ಥ ನಾರಾಯಣ ಬಹಿರಂಗ ಕರೆ ನೀಡುತ್ತಿದ್ದಾರೆ. ಇದು ಕ್ರೂರವಾದದ್ದು, ರಾಜ್ಯದ ಕ್ಯಾಬಿನೆಟ್ ಮಂತ್ರಿಯೊಬ್ಬರು ಕೊಲೆಗೆ ಬಹಿರಂಗವಾಗಿ ಕರೆ ನೀಡುತ್ತಾರೆ. ಗಾಂಧೀಜಿ ಕೊಲೆಗಾರರ ​​ಬಗ್ಗೆ ಸಹಾನುಭೂತಿ ಹೊಂದಿರುವ ಜನರಿಂದ ಇನ್ನೇನು ನಿರೀಕ್ಷಿಸಬಹುದು? ಪೊಲೀಸರು ಸಚಿವರ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು” ಎಂದು ಟ್ವೀಟ್ ಮಾಡಿದ್ದಾರೆ.

ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಅವರು, ”ಅಶ್ವತ್ಥ ನಾರಾಯಣ ಅವರಿಂದ ಇದನ್ನು ನಿರೀಕ್ಷಿಸಿರಲಿಲ್ಲ. ಕೇಶವ ಕೃಪಾದವರನ್ನು ಸಮಾಧಾನ ಪಡಿಸುವುದೊಂದೇ ರಾಜ್ಯ ಬಿಜೆಪಿ ನಾಯಕರ ಅಜೆಂಡಾದಂತೆ ಕಾಣುತ್ತಿದೆ. ಬಿಜೆಪಿ ಹತಾಶವಾಗಿದೆ ಮತ್ತು ಇಂತಹ ಅಸಂಬದ್ಧ ಹೇಳಿಕೆಗಳ ಮೂಲಕ ಮತದಾರರ ಗಮನ ಸೆಳೆಯಲು ಶ್ರಮಿಸುತ್ತಿದೆ” ಎಂದಿದ್ದಾರೆ.

ಈ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ”ಟಿಪ್ಪು ಸುಲ್ತಾನ್ ಬಗ್ಗೆ ಕೇಂದ್ರದ ನಿಲುವು ಏನಿದೆ.. ಕೇಂದ್ರದ ವಸ್ತು ಸಂಗ್ರಹಾಲಯದಲ್ಲಿ ಟಿಪ್ಪು ಸುಲ್ತಾನರಿಗೆ ಏನು ಗೌರವ ಕೊಟ್ಟಿದ್ದಾರೆ ಎನ್ನುವುದು ರಾಜ್ಯ ಬಿಜೆಪಿ ನಾಯಕರು ತಿಳಿದುಕೊಳ್ಳಬೇಕು.. ಈ ಅಶ್ವತ್ಥ ನಾರಾಯಣ ಒಬ್ಬ ಮಲ್ಲೇಶ್ವರಂನ ಚಿಲ್ಲಾರೆ ಗಿರಾಕಿ ಇಂತವನಿಗೆ ಇತಿಹಾಸವೂ ಗೊತ್ತಿಲ್ಲ ಚುನಾವಣೆ ಸಂದರ್ಭದಲ್ಲಿ ಯಾವ ವಿಚಾರ ಮಾತನಾಡಬೇಕು ಎನ್ನುವ ಕನಿಷ್ಠ ಜ್ಞಾನವೂ ಇಲ್ಲ” ಎಂದರು.
”ಸಿದ್ದರಾಮಯ್ಯರನ್ನ ಹೊಡದಾಕಿಬಿಡಿ ಅಂದ್ರೆ ಹೇಗೆ.. ಅವರು ಬೇರೆ ಪಕ್ಷದಲ್ಲಿ ಇರಬಹುದು, ಸಂಸ್ಕೃತಿ ಇರುವಂತವರಾಗಿ, ನಾಗರಿಕ ಸಮಾಜದಲ್ಲಿ ಬದುಕುತ್ತಿದ್ದೇವೆ ಎನ್ನುವ ಅರಿವು ಇರಬೇಕು. ಈ ರೀತಿ ಹೇಳಿಕೆ ನೀಡುವುದು ಖಂಡನೀಯ, ಡಿಸಿಯವರು ಇವರ ಮೇಲೆ ಸುಮೋಟೋ ಕೇಸ್ ದಾಖಲಿಸಬೇಕಿತ್ತು. ಈಗಲಾದರೂ ಮಾನ್ಯ ಮುಖ್ಯಮಂತ್ರಿಗಳು ಅಶ್ವತ್ಥ ನಾರಾಯಣ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸುತ್ತೇನೆ” ಎಂದರು.

ಇದೇ ವೇಳೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು, ”ಅಶ್ವತ್ಥ ನಾರಾಯಣ ಸಂಸ್ಕೃತಿಯೇ ಅಂತಹದ್ದು, ಈ ರೀತಿ ಆಗಾಗ ಅದು ಹೊರಗೆ ಬರುತ್ತದೆ” ಎಂದರು.
ಸಚಿವ ಅಶ್ವತ್ಥ ನಾರಾಯಣ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಮಾಡಲು ನಿರ್ಧರಿಸಿದೆ. ಇತ್ತ ಕುರುಬ ಸಮುದಾಯದ ನಾಯಕರು ಸಹ ಪ್ರತಿಭಟನೆಗೆ ಮುಂದಾಗಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...