Homeಕರ್ನಾಟಕಸಿದ್ದರಾಮಯ್ಯ ಕೊಲೆಗೆ ಕರೆ ನೀಡಿದ ಅಶ್ವತ್ಥ ನಾರಾಯಣ ವಿರುದ್ಧ ರಾಜ್ಯಾದ್ಯಂತ ಖಂಡನೆ ವ್ಯಕ್ತ

ಸಿದ್ದರಾಮಯ್ಯ ಕೊಲೆಗೆ ಕರೆ ನೀಡಿದ ಅಶ್ವತ್ಥ ನಾರಾಯಣ ವಿರುದ್ಧ ರಾಜ್ಯಾದ್ಯಂತ ಖಂಡನೆ ವ್ಯಕ್ತ

- Advertisement -
- Advertisement -

ಉನ್ನತ ಶಿಕ್ಷಣ ಸಚಿವ ಸಿಎನ್ ಅಶ್ವತ್ಥ ನಾರಾಯಣ ಅವರು ಫೆ.15, ಬುಧವಾರದಂದು ಮಂಡ್ಯದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ, ”ಟಿಪ್ಪುವನ್ನು ಹೊಡೆದಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದುಹಾಕಿ” ಎಂದು ಕರೆ ಕೊಟ್ಟಿದ್ದಾರೆ. ಅವರ ಈ ವಿವಾದಾತ್ಮಕ ಹೇಳಿಕೆಯನ್ನು ರಾಜ್ಯಾದ್ಯಂತ ಅನೇಕ ನಾಯಕರು ಖಂಡಿಸಿದ್ದಾರೆ.

ಈ ಬಗ್ಗೆ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಅವರು ಹೀಗೆ ಬರೆದಿದ್ದಾರೆ.. ಟಿಪ್ಪುವನ್ನು ಉರಿಗೌಡ, ನಂಜೇಗೌಡ ಹೊಡೆದು ಹಾಕಿದ ಹಾಗೆ ಸಿದ್ದರಾಮಯ್ಯನವರನ್ನು ಮಾಡಿ ಎಂದು‌ ಸಚಿವ ಡಾ. ಅಶ್ವತ್ಥ ನಾರಾಯಣ ಬಹಿರಂಗ ಸಭೆಯಲ್ಲಿ ಪ್ರಚೋದಿಸಿದ್ದಾರೆ. ಮಾಧ್ಯಮದ ಮಂದಿ, ಬಿಜೆಪಿಯ ಸಜ್ಜನರು ಮಾತ್ರವಲ್ಲ ಕಾಂಗ್ರೆಸ್ ನಾಯಕರು ಕೂಡಾ ಮೌನಧಾರಣೆ ಮಾಡಿದ್ದಾರೆ. ಒಂದೊಮ್ಮೆ ಇದೇ ಮಾತನ್ನು ಬಿಜೆಪಿಯ ಸಚಿವರು, ಮುಖ್ಯಮಂತ್ರಿಗಳು ಇಲ್ಲವೆ ಪ್ರಧಾನಮಂತ್ರಿ ಅವರನ್ನು ಉದ್ದೇಶಿಸಿ ಹೇಳಿದ್ದರೆ ಏನಾಗುತ್ತಿತ್ತು? ಇಡೀ ದೇಶದಲ್ಲಿ ಸುಂಟರಗಾಳಿಯೋ, ಸುನಾಮಿಯೋ, ಭೂಕಂಪವೊ ಆಗುತ್ತಿತ್ತು. ಗೊತ್ತಲ್ಲಾ, ಮಣಿಶಂಕರ್ ಅಯ್ಯರ್, ಚಾಯ್ ವಾಲಾ ಎಂದು ಕರೆದ ಕಾರಣಕ್ಕಾಗಿಯೇ ನರೇಂದ್ರಮೋದಿಯವರು ಪ್ರಧಾನಿಯಾಗಿಯೇ ಬಿಟ್ಟರು. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸೋಲುತ್ತದೆ ಎಂದು ನಿಮಗೇನಾದರೂ ಅನಿಸುತ್ತಾ? ಎಂದು ಬರೆದಿದ್ದಾರೆ.

ಹೋರಾಟಗಾರ, ನಟ ಚೇತನ್ ಕೂಡ ಖಂಡಿಸಿದ್ದು, ”ಟಿಪ್ಪುವನ್ನು ಪ್ರೀತಿಸುವವರು ‘ಇರಬಾರದು’ ಎಂಬ ಬಿಜೆಪಿಯ ಕಟೀಲು ಮತ್ತು ಟಿಪ್ಪುವಿನಂತೆ ಸಿದ್ದರಾಮಯ್ಯ ಅವರನ್ನು ‘ಮುಗಿಯಬೇಕು’ ಎಂಬ ಅಶ್ವತ್ಥ ನಾರಾಯಣ ಅವರ ಹೇಳಿಕೆಗಳು ಹಿಂಸೆಯ ಕರೆಗಳು! ನಮ್ಮ ಪ್ರಜಾಪ್ರಭುತ್ವದಲ್ಲಿ ಇಂತಹ ಮಾತುಗಳನ್ನು ಸಹಿಸಲು ಸಾಧ್ಯವಿಲ್ಲ. ಈ 2 ಹಿಂಸಾಚಾರ ಪ್ರಚೋದಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದಾರೆ.

ಮಾಜಿ ಸಚಿವ ಡಾ.ಎಚ್‌ಸಿ ಮಹಾದೇವಪ್ಪ ಟ್ವೀಟ್ ಮಾಡಿದ್ದು, ”ಕೊಡಗಿಗೆ ಹೋದಾಗ ಬಿಜೆಪಿಗರು ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಹೊಡೆಯುವ ಕೆಲಸ ಮಾಡಿದ್ದರು, ಈಗ ಅವರ ಹತ್ಯೆಗೆ ಪ್ರಚೋದಿಸುವ ಹೇಳಿಕೆಯನ್ನು ಸಚಿವರೇ ಕೊಡುತ್ತಿದ್ದಾರೆ. ರಾಜ್ಯದಲ್ಲಿ ಗೃಹ ಇಲಾಖೆ ಏನಾದರೂ ಬದುಕಿದ್ದರೆ ಮೊದಲು ಬೇಜವಾಬ್ದಾರಿ ಸಚಿವ ಅಶ್ವತ್ಥ ನಾರಾಯಣ ಅವರ ಮೇಲೆ ಕ್ರಮ ಜರುಗಿಸಲಿ ಮತ್ತು ಈತನನ್ನು ಸಂಪುಟದಿಂದ ವಜಾ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಅವರು, ”ಸಿದ್ದರಾಮಯ್ಯರನ್ನ ಕೊಲೆ ಮಾಡಲು ಅಶ್ವತ್ಥ ನಾರಾಯಣ ಬಹಿರಂಗ ಕರೆ ನೀಡುತ್ತಿದ್ದಾರೆ. ಇದು ಕ್ರೂರವಾದದ್ದು, ರಾಜ್ಯದ ಕ್ಯಾಬಿನೆಟ್ ಮಂತ್ರಿಯೊಬ್ಬರು ಕೊಲೆಗೆ ಬಹಿರಂಗವಾಗಿ ಕರೆ ನೀಡುತ್ತಾರೆ. ಗಾಂಧೀಜಿ ಕೊಲೆಗಾರರ ​​ಬಗ್ಗೆ ಸಹಾನುಭೂತಿ ಹೊಂದಿರುವ ಜನರಿಂದ ಇನ್ನೇನು ನಿರೀಕ್ಷಿಸಬಹುದು? ಪೊಲೀಸರು ಸಚಿವರ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು” ಎಂದು ಟ್ವೀಟ್ ಮಾಡಿದ್ದಾರೆ.

ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಅವರು, ”ಅಶ್ವತ್ಥ ನಾರಾಯಣ ಅವರಿಂದ ಇದನ್ನು ನಿರೀಕ್ಷಿಸಿರಲಿಲ್ಲ. ಕೇಶವ ಕೃಪಾದವರನ್ನು ಸಮಾಧಾನ ಪಡಿಸುವುದೊಂದೇ ರಾಜ್ಯ ಬಿಜೆಪಿ ನಾಯಕರ ಅಜೆಂಡಾದಂತೆ ಕಾಣುತ್ತಿದೆ. ಬಿಜೆಪಿ ಹತಾಶವಾಗಿದೆ ಮತ್ತು ಇಂತಹ ಅಸಂಬದ್ಧ ಹೇಳಿಕೆಗಳ ಮೂಲಕ ಮತದಾರರ ಗಮನ ಸೆಳೆಯಲು ಶ್ರಮಿಸುತ್ತಿದೆ” ಎಂದಿದ್ದಾರೆ.

ಈ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ”ಟಿಪ್ಪು ಸುಲ್ತಾನ್ ಬಗ್ಗೆ ಕೇಂದ್ರದ ನಿಲುವು ಏನಿದೆ.. ಕೇಂದ್ರದ ವಸ್ತು ಸಂಗ್ರಹಾಲಯದಲ್ಲಿ ಟಿಪ್ಪು ಸುಲ್ತಾನರಿಗೆ ಏನು ಗೌರವ ಕೊಟ್ಟಿದ್ದಾರೆ ಎನ್ನುವುದು ರಾಜ್ಯ ಬಿಜೆಪಿ ನಾಯಕರು ತಿಳಿದುಕೊಳ್ಳಬೇಕು.. ಈ ಅಶ್ವತ್ಥ ನಾರಾಯಣ ಒಬ್ಬ ಮಲ್ಲೇಶ್ವರಂನ ಚಿಲ್ಲಾರೆ ಗಿರಾಕಿ ಇಂತವನಿಗೆ ಇತಿಹಾಸವೂ ಗೊತ್ತಿಲ್ಲ ಚುನಾವಣೆ ಸಂದರ್ಭದಲ್ಲಿ ಯಾವ ವಿಚಾರ ಮಾತನಾಡಬೇಕು ಎನ್ನುವ ಕನಿಷ್ಠ ಜ್ಞಾನವೂ ಇಲ್ಲ” ಎಂದರು.
”ಸಿದ್ದರಾಮಯ್ಯರನ್ನ ಹೊಡದಾಕಿಬಿಡಿ ಅಂದ್ರೆ ಹೇಗೆ.. ಅವರು ಬೇರೆ ಪಕ್ಷದಲ್ಲಿ ಇರಬಹುದು, ಸಂಸ್ಕೃತಿ ಇರುವಂತವರಾಗಿ, ನಾಗರಿಕ ಸಮಾಜದಲ್ಲಿ ಬದುಕುತ್ತಿದ್ದೇವೆ ಎನ್ನುವ ಅರಿವು ಇರಬೇಕು. ಈ ರೀತಿ ಹೇಳಿಕೆ ನೀಡುವುದು ಖಂಡನೀಯ, ಡಿಸಿಯವರು ಇವರ ಮೇಲೆ ಸುಮೋಟೋ ಕೇಸ್ ದಾಖಲಿಸಬೇಕಿತ್ತು. ಈಗಲಾದರೂ ಮಾನ್ಯ ಮುಖ್ಯಮಂತ್ರಿಗಳು ಅಶ್ವತ್ಥ ನಾರಾಯಣ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸುತ್ತೇನೆ” ಎಂದರು.

ಇದೇ ವೇಳೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು, ”ಅಶ್ವತ್ಥ ನಾರಾಯಣ ಸಂಸ್ಕೃತಿಯೇ ಅಂತಹದ್ದು, ಈ ರೀತಿ ಆಗಾಗ ಅದು ಹೊರಗೆ ಬರುತ್ತದೆ” ಎಂದರು.
ಸಚಿವ ಅಶ್ವತ್ಥ ನಾರಾಯಣ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಮಾಡಲು ನಿರ್ಧರಿಸಿದೆ. ಇತ್ತ ಕುರುಬ ಸಮುದಾಯದ ನಾಯಕರು ಸಹ ಪ್ರತಿಭಟನೆಗೆ ಮುಂದಾಗಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...