Homeಕರ್ನಾಟಕಸಿದ್ದರಾಮಯ್ಯ ಕೊಲೆಗೆ ಕರೆ ನೀಡಿದ ಅಶ್ವತ್ಥ ನಾರಾಯಣ ವಿರುದ್ಧ ರಾಜ್ಯಾದ್ಯಂತ ಖಂಡನೆ ವ್ಯಕ್ತ

ಸಿದ್ದರಾಮಯ್ಯ ಕೊಲೆಗೆ ಕರೆ ನೀಡಿದ ಅಶ್ವತ್ಥ ನಾರಾಯಣ ವಿರುದ್ಧ ರಾಜ್ಯಾದ್ಯಂತ ಖಂಡನೆ ವ್ಯಕ್ತ

- Advertisement -
- Advertisement -

ಉನ್ನತ ಶಿಕ್ಷಣ ಸಚಿವ ಸಿಎನ್ ಅಶ್ವತ್ಥ ನಾರಾಯಣ ಅವರು ಫೆ.15, ಬುಧವಾರದಂದು ಮಂಡ್ಯದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ, ”ಟಿಪ್ಪುವನ್ನು ಹೊಡೆದಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದುಹಾಕಿ” ಎಂದು ಕರೆ ಕೊಟ್ಟಿದ್ದಾರೆ. ಅವರ ಈ ವಿವಾದಾತ್ಮಕ ಹೇಳಿಕೆಯನ್ನು ರಾಜ್ಯಾದ್ಯಂತ ಅನೇಕ ನಾಯಕರು ಖಂಡಿಸಿದ್ದಾರೆ.

ಈ ಬಗ್ಗೆ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಅವರು ಹೀಗೆ ಬರೆದಿದ್ದಾರೆ.. ಟಿಪ್ಪುವನ್ನು ಉರಿಗೌಡ, ನಂಜೇಗೌಡ ಹೊಡೆದು ಹಾಕಿದ ಹಾಗೆ ಸಿದ್ದರಾಮಯ್ಯನವರನ್ನು ಮಾಡಿ ಎಂದು‌ ಸಚಿವ ಡಾ. ಅಶ್ವತ್ಥ ನಾರಾಯಣ ಬಹಿರಂಗ ಸಭೆಯಲ್ಲಿ ಪ್ರಚೋದಿಸಿದ್ದಾರೆ. ಮಾಧ್ಯಮದ ಮಂದಿ, ಬಿಜೆಪಿಯ ಸಜ್ಜನರು ಮಾತ್ರವಲ್ಲ ಕಾಂಗ್ರೆಸ್ ನಾಯಕರು ಕೂಡಾ ಮೌನಧಾರಣೆ ಮಾಡಿದ್ದಾರೆ. ಒಂದೊಮ್ಮೆ ಇದೇ ಮಾತನ್ನು ಬಿಜೆಪಿಯ ಸಚಿವರು, ಮುಖ್ಯಮಂತ್ರಿಗಳು ಇಲ್ಲವೆ ಪ್ರಧಾನಮಂತ್ರಿ ಅವರನ್ನು ಉದ್ದೇಶಿಸಿ ಹೇಳಿದ್ದರೆ ಏನಾಗುತ್ತಿತ್ತು? ಇಡೀ ದೇಶದಲ್ಲಿ ಸುಂಟರಗಾಳಿಯೋ, ಸುನಾಮಿಯೋ, ಭೂಕಂಪವೊ ಆಗುತ್ತಿತ್ತು. ಗೊತ್ತಲ್ಲಾ, ಮಣಿಶಂಕರ್ ಅಯ್ಯರ್, ಚಾಯ್ ವಾಲಾ ಎಂದು ಕರೆದ ಕಾರಣಕ್ಕಾಗಿಯೇ ನರೇಂದ್ರಮೋದಿಯವರು ಪ್ರಧಾನಿಯಾಗಿಯೇ ಬಿಟ್ಟರು. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸೋಲುತ್ತದೆ ಎಂದು ನಿಮಗೇನಾದರೂ ಅನಿಸುತ್ತಾ? ಎಂದು ಬರೆದಿದ್ದಾರೆ.

ಹೋರಾಟಗಾರ, ನಟ ಚೇತನ್ ಕೂಡ ಖಂಡಿಸಿದ್ದು, ”ಟಿಪ್ಪುವನ್ನು ಪ್ರೀತಿಸುವವರು ‘ಇರಬಾರದು’ ಎಂಬ ಬಿಜೆಪಿಯ ಕಟೀಲು ಮತ್ತು ಟಿಪ್ಪುವಿನಂತೆ ಸಿದ್ದರಾಮಯ್ಯ ಅವರನ್ನು ‘ಮುಗಿಯಬೇಕು’ ಎಂಬ ಅಶ್ವತ್ಥ ನಾರಾಯಣ ಅವರ ಹೇಳಿಕೆಗಳು ಹಿಂಸೆಯ ಕರೆಗಳು! ನಮ್ಮ ಪ್ರಜಾಪ್ರಭುತ್ವದಲ್ಲಿ ಇಂತಹ ಮಾತುಗಳನ್ನು ಸಹಿಸಲು ಸಾಧ್ಯವಿಲ್ಲ. ಈ 2 ಹಿಂಸಾಚಾರ ಪ್ರಚೋದಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದಾರೆ.

ಮಾಜಿ ಸಚಿವ ಡಾ.ಎಚ್‌ಸಿ ಮಹಾದೇವಪ್ಪ ಟ್ವೀಟ್ ಮಾಡಿದ್ದು, ”ಕೊಡಗಿಗೆ ಹೋದಾಗ ಬಿಜೆಪಿಗರು ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಹೊಡೆಯುವ ಕೆಲಸ ಮಾಡಿದ್ದರು, ಈಗ ಅವರ ಹತ್ಯೆಗೆ ಪ್ರಚೋದಿಸುವ ಹೇಳಿಕೆಯನ್ನು ಸಚಿವರೇ ಕೊಡುತ್ತಿದ್ದಾರೆ. ರಾಜ್ಯದಲ್ಲಿ ಗೃಹ ಇಲಾಖೆ ಏನಾದರೂ ಬದುಕಿದ್ದರೆ ಮೊದಲು ಬೇಜವಾಬ್ದಾರಿ ಸಚಿವ ಅಶ್ವತ್ಥ ನಾರಾಯಣ ಅವರ ಮೇಲೆ ಕ್ರಮ ಜರುಗಿಸಲಿ ಮತ್ತು ಈತನನ್ನು ಸಂಪುಟದಿಂದ ವಜಾ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಅವರು, ”ಸಿದ್ದರಾಮಯ್ಯರನ್ನ ಕೊಲೆ ಮಾಡಲು ಅಶ್ವತ್ಥ ನಾರಾಯಣ ಬಹಿರಂಗ ಕರೆ ನೀಡುತ್ತಿದ್ದಾರೆ. ಇದು ಕ್ರೂರವಾದದ್ದು, ರಾಜ್ಯದ ಕ್ಯಾಬಿನೆಟ್ ಮಂತ್ರಿಯೊಬ್ಬರು ಕೊಲೆಗೆ ಬಹಿರಂಗವಾಗಿ ಕರೆ ನೀಡುತ್ತಾರೆ. ಗಾಂಧೀಜಿ ಕೊಲೆಗಾರರ ​​ಬಗ್ಗೆ ಸಹಾನುಭೂತಿ ಹೊಂದಿರುವ ಜನರಿಂದ ಇನ್ನೇನು ನಿರೀಕ್ಷಿಸಬಹುದು? ಪೊಲೀಸರು ಸಚಿವರ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು” ಎಂದು ಟ್ವೀಟ್ ಮಾಡಿದ್ದಾರೆ.

ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಅವರು, ”ಅಶ್ವತ್ಥ ನಾರಾಯಣ ಅವರಿಂದ ಇದನ್ನು ನಿರೀಕ್ಷಿಸಿರಲಿಲ್ಲ. ಕೇಶವ ಕೃಪಾದವರನ್ನು ಸಮಾಧಾನ ಪಡಿಸುವುದೊಂದೇ ರಾಜ್ಯ ಬಿಜೆಪಿ ನಾಯಕರ ಅಜೆಂಡಾದಂತೆ ಕಾಣುತ್ತಿದೆ. ಬಿಜೆಪಿ ಹತಾಶವಾಗಿದೆ ಮತ್ತು ಇಂತಹ ಅಸಂಬದ್ಧ ಹೇಳಿಕೆಗಳ ಮೂಲಕ ಮತದಾರರ ಗಮನ ಸೆಳೆಯಲು ಶ್ರಮಿಸುತ್ತಿದೆ” ಎಂದಿದ್ದಾರೆ.

ಈ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ”ಟಿಪ್ಪು ಸುಲ್ತಾನ್ ಬಗ್ಗೆ ಕೇಂದ್ರದ ನಿಲುವು ಏನಿದೆ.. ಕೇಂದ್ರದ ವಸ್ತು ಸಂಗ್ರಹಾಲಯದಲ್ಲಿ ಟಿಪ್ಪು ಸುಲ್ತಾನರಿಗೆ ಏನು ಗೌರವ ಕೊಟ್ಟಿದ್ದಾರೆ ಎನ್ನುವುದು ರಾಜ್ಯ ಬಿಜೆಪಿ ನಾಯಕರು ತಿಳಿದುಕೊಳ್ಳಬೇಕು.. ಈ ಅಶ್ವತ್ಥ ನಾರಾಯಣ ಒಬ್ಬ ಮಲ್ಲೇಶ್ವರಂನ ಚಿಲ್ಲಾರೆ ಗಿರಾಕಿ ಇಂತವನಿಗೆ ಇತಿಹಾಸವೂ ಗೊತ್ತಿಲ್ಲ ಚುನಾವಣೆ ಸಂದರ್ಭದಲ್ಲಿ ಯಾವ ವಿಚಾರ ಮಾತನಾಡಬೇಕು ಎನ್ನುವ ಕನಿಷ್ಠ ಜ್ಞಾನವೂ ಇಲ್ಲ” ಎಂದರು.
”ಸಿದ್ದರಾಮಯ್ಯರನ್ನ ಹೊಡದಾಕಿಬಿಡಿ ಅಂದ್ರೆ ಹೇಗೆ.. ಅವರು ಬೇರೆ ಪಕ್ಷದಲ್ಲಿ ಇರಬಹುದು, ಸಂಸ್ಕೃತಿ ಇರುವಂತವರಾಗಿ, ನಾಗರಿಕ ಸಮಾಜದಲ್ಲಿ ಬದುಕುತ್ತಿದ್ದೇವೆ ಎನ್ನುವ ಅರಿವು ಇರಬೇಕು. ಈ ರೀತಿ ಹೇಳಿಕೆ ನೀಡುವುದು ಖಂಡನೀಯ, ಡಿಸಿಯವರು ಇವರ ಮೇಲೆ ಸುಮೋಟೋ ಕೇಸ್ ದಾಖಲಿಸಬೇಕಿತ್ತು. ಈಗಲಾದರೂ ಮಾನ್ಯ ಮುಖ್ಯಮಂತ್ರಿಗಳು ಅಶ್ವತ್ಥ ನಾರಾಯಣ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸುತ್ತೇನೆ” ಎಂದರು.

ಇದೇ ವೇಳೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು, ”ಅಶ್ವತ್ಥ ನಾರಾಯಣ ಸಂಸ್ಕೃತಿಯೇ ಅಂತಹದ್ದು, ಈ ರೀತಿ ಆಗಾಗ ಅದು ಹೊರಗೆ ಬರುತ್ತದೆ” ಎಂದರು.
ಸಚಿವ ಅಶ್ವತ್ಥ ನಾರಾಯಣ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಮಾಡಲು ನಿರ್ಧರಿಸಿದೆ. ಇತ್ತ ಕುರುಬ ಸಮುದಾಯದ ನಾಯಕರು ಸಹ ಪ್ರತಿಭಟನೆಗೆ ಮುಂದಾಗಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...