Homeಕರ್ನಾಟಕಸಿದ್ದರಾಮಯ್ಯ ಕೊಲೆಗೆ ಕರೆ ನೀಡಿದ ಅಶ್ವತ್ಥ ನಾರಾಯಣ ವಿರುದ್ಧ ರಾಜ್ಯಾದ್ಯಂತ ಖಂಡನೆ ವ್ಯಕ್ತ

ಸಿದ್ದರಾಮಯ್ಯ ಕೊಲೆಗೆ ಕರೆ ನೀಡಿದ ಅಶ್ವತ್ಥ ನಾರಾಯಣ ವಿರುದ್ಧ ರಾಜ್ಯಾದ್ಯಂತ ಖಂಡನೆ ವ್ಯಕ್ತ

- Advertisement -
- Advertisement -

ಉನ್ನತ ಶಿಕ್ಷಣ ಸಚಿವ ಸಿಎನ್ ಅಶ್ವತ್ಥ ನಾರಾಯಣ ಅವರು ಫೆ.15, ಬುಧವಾರದಂದು ಮಂಡ್ಯದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ, ”ಟಿಪ್ಪುವನ್ನು ಹೊಡೆದಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದುಹಾಕಿ” ಎಂದು ಕರೆ ಕೊಟ್ಟಿದ್ದಾರೆ. ಅವರ ಈ ವಿವಾದಾತ್ಮಕ ಹೇಳಿಕೆಯನ್ನು ರಾಜ್ಯಾದ್ಯಂತ ಅನೇಕ ನಾಯಕರು ಖಂಡಿಸಿದ್ದಾರೆ.

ಈ ಬಗ್ಗೆ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಅವರು ಹೀಗೆ ಬರೆದಿದ್ದಾರೆ.. ಟಿಪ್ಪುವನ್ನು ಉರಿಗೌಡ, ನಂಜೇಗೌಡ ಹೊಡೆದು ಹಾಕಿದ ಹಾಗೆ ಸಿದ್ದರಾಮಯ್ಯನವರನ್ನು ಮಾಡಿ ಎಂದು‌ ಸಚಿವ ಡಾ. ಅಶ್ವತ್ಥ ನಾರಾಯಣ ಬಹಿರಂಗ ಸಭೆಯಲ್ಲಿ ಪ್ರಚೋದಿಸಿದ್ದಾರೆ. ಮಾಧ್ಯಮದ ಮಂದಿ, ಬಿಜೆಪಿಯ ಸಜ್ಜನರು ಮಾತ್ರವಲ್ಲ ಕಾಂಗ್ರೆಸ್ ನಾಯಕರು ಕೂಡಾ ಮೌನಧಾರಣೆ ಮಾಡಿದ್ದಾರೆ. ಒಂದೊಮ್ಮೆ ಇದೇ ಮಾತನ್ನು ಬಿಜೆಪಿಯ ಸಚಿವರು, ಮುಖ್ಯಮಂತ್ರಿಗಳು ಇಲ್ಲವೆ ಪ್ರಧಾನಮಂತ್ರಿ ಅವರನ್ನು ಉದ್ದೇಶಿಸಿ ಹೇಳಿದ್ದರೆ ಏನಾಗುತ್ತಿತ್ತು? ಇಡೀ ದೇಶದಲ್ಲಿ ಸುಂಟರಗಾಳಿಯೋ, ಸುನಾಮಿಯೋ, ಭೂಕಂಪವೊ ಆಗುತ್ತಿತ್ತು. ಗೊತ್ತಲ್ಲಾ, ಮಣಿಶಂಕರ್ ಅಯ್ಯರ್, ಚಾಯ್ ವಾಲಾ ಎಂದು ಕರೆದ ಕಾರಣಕ್ಕಾಗಿಯೇ ನರೇಂದ್ರಮೋದಿಯವರು ಪ್ರಧಾನಿಯಾಗಿಯೇ ಬಿಟ್ಟರು. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸೋಲುತ್ತದೆ ಎಂದು ನಿಮಗೇನಾದರೂ ಅನಿಸುತ್ತಾ? ಎಂದು ಬರೆದಿದ್ದಾರೆ.

ಹೋರಾಟಗಾರ, ನಟ ಚೇತನ್ ಕೂಡ ಖಂಡಿಸಿದ್ದು, ”ಟಿಪ್ಪುವನ್ನು ಪ್ರೀತಿಸುವವರು ‘ಇರಬಾರದು’ ಎಂಬ ಬಿಜೆಪಿಯ ಕಟೀಲು ಮತ್ತು ಟಿಪ್ಪುವಿನಂತೆ ಸಿದ್ದರಾಮಯ್ಯ ಅವರನ್ನು ‘ಮುಗಿಯಬೇಕು’ ಎಂಬ ಅಶ್ವತ್ಥ ನಾರಾಯಣ ಅವರ ಹೇಳಿಕೆಗಳು ಹಿಂಸೆಯ ಕರೆಗಳು! ನಮ್ಮ ಪ್ರಜಾಪ್ರಭುತ್ವದಲ್ಲಿ ಇಂತಹ ಮಾತುಗಳನ್ನು ಸಹಿಸಲು ಸಾಧ್ಯವಿಲ್ಲ. ಈ 2 ಹಿಂಸಾಚಾರ ಪ್ರಚೋದಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದಾರೆ.

ಮಾಜಿ ಸಚಿವ ಡಾ.ಎಚ್‌ಸಿ ಮಹಾದೇವಪ್ಪ ಟ್ವೀಟ್ ಮಾಡಿದ್ದು, ”ಕೊಡಗಿಗೆ ಹೋದಾಗ ಬಿಜೆಪಿಗರು ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಹೊಡೆಯುವ ಕೆಲಸ ಮಾಡಿದ್ದರು, ಈಗ ಅವರ ಹತ್ಯೆಗೆ ಪ್ರಚೋದಿಸುವ ಹೇಳಿಕೆಯನ್ನು ಸಚಿವರೇ ಕೊಡುತ್ತಿದ್ದಾರೆ. ರಾಜ್ಯದಲ್ಲಿ ಗೃಹ ಇಲಾಖೆ ಏನಾದರೂ ಬದುಕಿದ್ದರೆ ಮೊದಲು ಬೇಜವಾಬ್ದಾರಿ ಸಚಿವ ಅಶ್ವತ್ಥ ನಾರಾಯಣ ಅವರ ಮೇಲೆ ಕ್ರಮ ಜರುಗಿಸಲಿ ಮತ್ತು ಈತನನ್ನು ಸಂಪುಟದಿಂದ ವಜಾ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಅವರು, ”ಸಿದ್ದರಾಮಯ್ಯರನ್ನ ಕೊಲೆ ಮಾಡಲು ಅಶ್ವತ್ಥ ನಾರಾಯಣ ಬಹಿರಂಗ ಕರೆ ನೀಡುತ್ತಿದ್ದಾರೆ. ಇದು ಕ್ರೂರವಾದದ್ದು, ರಾಜ್ಯದ ಕ್ಯಾಬಿನೆಟ್ ಮಂತ್ರಿಯೊಬ್ಬರು ಕೊಲೆಗೆ ಬಹಿರಂಗವಾಗಿ ಕರೆ ನೀಡುತ್ತಾರೆ. ಗಾಂಧೀಜಿ ಕೊಲೆಗಾರರ ​​ಬಗ್ಗೆ ಸಹಾನುಭೂತಿ ಹೊಂದಿರುವ ಜನರಿಂದ ಇನ್ನೇನು ನಿರೀಕ್ಷಿಸಬಹುದು? ಪೊಲೀಸರು ಸಚಿವರ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು” ಎಂದು ಟ್ವೀಟ್ ಮಾಡಿದ್ದಾರೆ.

ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಅವರು, ”ಅಶ್ವತ್ಥ ನಾರಾಯಣ ಅವರಿಂದ ಇದನ್ನು ನಿರೀಕ್ಷಿಸಿರಲಿಲ್ಲ. ಕೇಶವ ಕೃಪಾದವರನ್ನು ಸಮಾಧಾನ ಪಡಿಸುವುದೊಂದೇ ರಾಜ್ಯ ಬಿಜೆಪಿ ನಾಯಕರ ಅಜೆಂಡಾದಂತೆ ಕಾಣುತ್ತಿದೆ. ಬಿಜೆಪಿ ಹತಾಶವಾಗಿದೆ ಮತ್ತು ಇಂತಹ ಅಸಂಬದ್ಧ ಹೇಳಿಕೆಗಳ ಮೂಲಕ ಮತದಾರರ ಗಮನ ಸೆಳೆಯಲು ಶ್ರಮಿಸುತ್ತಿದೆ” ಎಂದಿದ್ದಾರೆ.

ಈ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ”ಟಿಪ್ಪು ಸುಲ್ತಾನ್ ಬಗ್ಗೆ ಕೇಂದ್ರದ ನಿಲುವು ಏನಿದೆ.. ಕೇಂದ್ರದ ವಸ್ತು ಸಂಗ್ರಹಾಲಯದಲ್ಲಿ ಟಿಪ್ಪು ಸುಲ್ತಾನರಿಗೆ ಏನು ಗೌರವ ಕೊಟ್ಟಿದ್ದಾರೆ ಎನ್ನುವುದು ರಾಜ್ಯ ಬಿಜೆಪಿ ನಾಯಕರು ತಿಳಿದುಕೊಳ್ಳಬೇಕು.. ಈ ಅಶ್ವತ್ಥ ನಾರಾಯಣ ಒಬ್ಬ ಮಲ್ಲೇಶ್ವರಂನ ಚಿಲ್ಲಾರೆ ಗಿರಾಕಿ ಇಂತವನಿಗೆ ಇತಿಹಾಸವೂ ಗೊತ್ತಿಲ್ಲ ಚುನಾವಣೆ ಸಂದರ್ಭದಲ್ಲಿ ಯಾವ ವಿಚಾರ ಮಾತನಾಡಬೇಕು ಎನ್ನುವ ಕನಿಷ್ಠ ಜ್ಞಾನವೂ ಇಲ್ಲ” ಎಂದರು.
”ಸಿದ್ದರಾಮಯ್ಯರನ್ನ ಹೊಡದಾಕಿಬಿಡಿ ಅಂದ್ರೆ ಹೇಗೆ.. ಅವರು ಬೇರೆ ಪಕ್ಷದಲ್ಲಿ ಇರಬಹುದು, ಸಂಸ್ಕೃತಿ ಇರುವಂತವರಾಗಿ, ನಾಗರಿಕ ಸಮಾಜದಲ್ಲಿ ಬದುಕುತ್ತಿದ್ದೇವೆ ಎನ್ನುವ ಅರಿವು ಇರಬೇಕು. ಈ ರೀತಿ ಹೇಳಿಕೆ ನೀಡುವುದು ಖಂಡನೀಯ, ಡಿಸಿಯವರು ಇವರ ಮೇಲೆ ಸುಮೋಟೋ ಕೇಸ್ ದಾಖಲಿಸಬೇಕಿತ್ತು. ಈಗಲಾದರೂ ಮಾನ್ಯ ಮುಖ್ಯಮಂತ್ರಿಗಳು ಅಶ್ವತ್ಥ ನಾರಾಯಣ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸುತ್ತೇನೆ” ಎಂದರು.

ಇದೇ ವೇಳೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು, ”ಅಶ್ವತ್ಥ ನಾರಾಯಣ ಸಂಸ್ಕೃತಿಯೇ ಅಂತಹದ್ದು, ಈ ರೀತಿ ಆಗಾಗ ಅದು ಹೊರಗೆ ಬರುತ್ತದೆ” ಎಂದರು.
ಸಚಿವ ಅಶ್ವತ್ಥ ನಾರಾಯಣ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಮಾಡಲು ನಿರ್ಧರಿಸಿದೆ. ಇತ್ತ ಕುರುಬ ಸಮುದಾಯದ ನಾಯಕರು ಸಹ ಪ್ರತಿಭಟನೆಗೆ ಮುಂದಾಗಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...