Homeಮುಖಪುಟಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ”ಅನ್ನದಾತ’ರ ಪ್ರತಿಭಟನೆ

ಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ”ಅನ್ನದಾತ’ರ ಪ್ರತಿಭಟನೆ

ಹರಿಯಾಣದ ಬಿಜೆಪಿ ನಾಯಕರಾದ ಪಮಿಂದರ್ ಸಿಂಗ್ ಧುಲ್ ಮತ್ತು ರಾಂಪಾಲ್ ಮಜ್ರಾ ಕೃಷಿ ಮಸೂದೆಗಳನ್ನು ರೈತ ವಿರೋಧಿ ಎಂದು ಕರೆದಿದ್ದಾರೆ. ಕೇಂದ್ರ ರೈತರ ವಾದವನ್ನು ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಅಂಗೀಕರಿಸಿರುವ ಕೃಷಿ ಸುಗ್ರೀವಾಜ್ಞೆಗಳ ವಿರುದ್ಧ ದೇಶಾದ್ಯಂತ ಕರೆ ನೀಡಿದ್ದ ಭಾರತ ಬಂದ್‌ ಹಿನ್ನೆಲೆ ರೈತ ಸಂಘಟನೆಗಳು, ರೈತಪರ ಹೋರಾಟಗಾರರು, ವಿರೋಧ ಪಕ್ಷಗಳು ಬೀದಿಗಿಳಿದಿವೆ. ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶ, ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ ಸೇರಿದಂತೆ ಹಲವಾರು ರಾಜ್ಯಗಳ ರೈತ ಸಂಘಗಳು  “ಭಾರತ್ ಬಂದ್” ನಲ್ಲಿ ಭಾಗವಹಿಸಿವೆ.

ಪ್ರಮುಖ ರೈತ ಸಂಘಟನೆಗಳಾದ ಅಖಿಲ ಭಾರತ ಕಿಸಾನ್​ ಸಂಘರ್ಷ ಸಮನ್ವಯ ಸಮಿತಿ(ಎಐಕೆಎಸ್​ಸಿಸಿ), ಅಖಿಲ ಭಾರತ ಕಿಸಾನ್​ ಮಹಾಸಂಘ್​​(ಎಐಕೆಎಂ) ಮತ್ತು ಭಾರತೀಯ ಕಿಸಾನ್​ ಯೂನಿಯನ್​(ಬಿಕೆಯು) ಕರೆ ನೀಡಿದ್ದ ಪ್ರತಿಭಟನೆಗೆ ಕಾಂಗ್ರೆಸ್, ಡಿಎಂಕೆ, ಎಎಪಿ, ಆರ್‌ಜೆಡಿ, ತೃಣಮೂಲ ಕಾಂಗ್ರೆಸ್ ಮತ್ತು ಕನಿಷ್ಠ 10 ಕೇಂದ್ರ ಕಾರ್ಮಿಕ ಸಂಘಗಳು ಸೇರಿದಂತೆ ಹಲವಾರು ವಿರೋಧ ಪಕ್ಷಗಳು ಬೆಂಬಲ ನೀಡಿವೆ. ಮಸೂದೆಗಳನ್ನು ರದ್ದುಗೊಳಿಸದ ಹೊರತು ತಮ್ಮ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ರೈತರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ: ರಾಜ್ಯಾದ್ಯಂತ ರಸ್ತೆ ತಡೆ ಪ್ರತಿಭಟನೆ

ಕೃಷಿ ಸುಗ್ರೀವಾಜ್ಞೆಗಳನ್ನು ಆರಂಭದಿಂದಲೂ ತೀವ್ರವಾಗಿ ವಿರೋಧಿಸುತ್ತಿರುವ ಪಂಜಾಬ್‌ನ ರೈತ ಸಂಘಟನೆಗಳು ಬೆಳಗ್ಗೆಯಿಂದಲೇ ಪ್ರತಿಭಟನೆ ನಡೆಸುತ್ತಿವೆ. ರೈಲು ಹಳಿಗಳ ಮೇಲೆ ಕುಳಿತು ರೈಲ್​ ರೋಕೋ ಚಳವಳಿ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಉತ್ತರ ರೈಲ್ವೇ ವಿಭಾಗ ಈ ಭಾಗದಲ್ಲಿ ಸಂಚರಿಸುವ ಕೆಲವು ರೈಲುಗಳನ್ನ ರದ್ದುಗೊಳಿಸಿದೆ. ಪಂಜಾಂಬ್​ ಸಿಎಂ ಅಮರೀಂದರ್​ ಸಿಂಗ್​ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಪ್ರತಿಭಟನಾಕಾರಲ್ಲಿ ಮನವಿ ಮಾಡಿದ್ದಾರೆ.

PC:Hindustan Times

ರೈತರ ಪ್ರತಿಭಟನೆಗೆ ಬೆಂಬಲ ನೀಡಿರುವ ಆರ್​ಜೆಡಿ ಮುಖಂಡ ತೇಜಸ್ವಿ ಯಾದವ್​ ಟ್ರ್ಯಾಕ್ಟರ್​ ಚಾಲನೆ ಮಾಡುವ ಮೂಲಕ ಪ್ರತಿಭಟನೆಗೆ ಸಾಥ್ ನೀಡಿದ್ದಾರೆ. ಹರಿಯಾಣದ ಬಿಜೆಪಿ ನಾಯಕರಾದ ಪಮಿಂದರ್ ಸಿಂಗ್ ಧುಲ್ ಮತ್ತು ರಾಂಪಾಲ್ ಮಜ್ರಾ ಕೃಷಿ ಮಸೂದೆಗಳನ್ನು ರೈತ ವಿರೋಧಿ ಎಂದು ಕರೆದಿದ್ದಾರೆ. ಕೇಂದ್ರ ರೈತರ ವಾದವನ್ನು ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

ಕೃಷಿ ಮಸೂದೆಗಳ ವಿರುದ್ಧದ ಪ್ರತಿಭಟನೆಗೆ ಆರ್‌ಎಸ್‌ಎಸ್‌ ನೇತೃತ್ವದ ಎಲ್ಲಾ ರೈತ ಸಂಘಟನೆಗಳು ಬೆಂಬಲ ಸೂಚಿಸಿ, ಪ್ರತಿಭಟನೆಗೆ ಕೈಜೋಡಿಸಿವೆ. ಕರ್ನಾಟಕ ರಾಜ್ಯದಲ್ಲೂ ಹಲವು ಜಿಲ್ಲೆಗಳಲ್ಲಿ ರಸ್ತೆ ತಡೆ ನಡೆಸಲಾಗುತ್ತಿದ್ದು, ರೈತ ಸಂಘಟನೆಗಳು ಭಾರಿ ಪ್ರತಿಭಟನೆ ನಡೆಸುತ್ತಿವೆ.

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಜಮಾಯಿಸಿದ ರೈತ, ಕಾರ್ಮಿಕ ಮತ್ತು ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಸುಮಾರು ಒಂದು ಗಂಟೆಗಳ ಕಾಲ ರಸ್ತೆ ತಡೆ ನಡೆಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಧಿಕ್ಕಾರ, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಬೇಡವೇ ಬೇಡ, ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯನ್ನು ಒಪ್ಪುವುದಿಲ್ಲ, ಕಾರ್ಪೊರೇಟ್ ಕಂಪನಿಗಳ ಪರ ನಿಂತಿರುವ ಕೇಂದ್ರ ರಾಜ್ಯ ಸರ್ಕಾರಗಳಿಗೆ ಧಿಕ್ಕಾರ ಎಂಬ ಘೋಷಣೆಗಳು ಕೇಳಿಬಂದವು.

ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದರೂ, ರೈತರೇ ಈ ಮಸೂದೆಗಳನ್ನು ವಿರೋಧಿಸುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಮಾತ್ರ ವಿರೋಧ ಪಕ್ಷಗಳು ಮಸೂದೆಗಳ ವಿರುದ್ಧ ಸುಳ್ಳು ವದಂತಿ ಹರಡುತ್ತಿವೆ ಎನ್ನುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ರೈತರಿಗೆ ಈ ಕಾಯ್ದೆಗಳ ಮಹತ್ವ ತಿಳಿಸಿ ಎಂದು ಸಲಹೆ ನೀಡುತ್ತಿದ್ದಾರೆ.


ಇದನ್ನೂ ಓದಿ: ಬೆಂಬಲ ಬೆಲೆ ಹಿಂದೆಯೂ ಇರಲಿಲ್ಲ, ಈಗಲೂ ಕೊಡಲು ಸಾಧ್ಯವಿಲ್ಲ: ಕೇಂದ್ರ ಕೃಷಿ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...