Homeಮುಖಪುಟಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ”ಅನ್ನದಾತ’ರ ಪ್ರತಿಭಟನೆ

ಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ”ಅನ್ನದಾತ’ರ ಪ್ರತಿಭಟನೆ

ಹರಿಯಾಣದ ಬಿಜೆಪಿ ನಾಯಕರಾದ ಪಮಿಂದರ್ ಸಿಂಗ್ ಧುಲ್ ಮತ್ತು ರಾಂಪಾಲ್ ಮಜ್ರಾ ಕೃಷಿ ಮಸೂದೆಗಳನ್ನು ರೈತ ವಿರೋಧಿ ಎಂದು ಕರೆದಿದ್ದಾರೆ. ಕೇಂದ್ರ ರೈತರ ವಾದವನ್ನು ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಅಂಗೀಕರಿಸಿರುವ ಕೃಷಿ ಸುಗ್ರೀವಾಜ್ಞೆಗಳ ವಿರುದ್ಧ ದೇಶಾದ್ಯಂತ ಕರೆ ನೀಡಿದ್ದ ಭಾರತ ಬಂದ್‌ ಹಿನ್ನೆಲೆ ರೈತ ಸಂಘಟನೆಗಳು, ರೈತಪರ ಹೋರಾಟಗಾರರು, ವಿರೋಧ ಪಕ್ಷಗಳು ಬೀದಿಗಿಳಿದಿವೆ. ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶ, ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ ಸೇರಿದಂತೆ ಹಲವಾರು ರಾಜ್ಯಗಳ ರೈತ ಸಂಘಗಳು  “ಭಾರತ್ ಬಂದ್” ನಲ್ಲಿ ಭಾಗವಹಿಸಿವೆ.

ಪ್ರಮುಖ ರೈತ ಸಂಘಟನೆಗಳಾದ ಅಖಿಲ ಭಾರತ ಕಿಸಾನ್​ ಸಂಘರ್ಷ ಸಮನ್ವಯ ಸಮಿತಿ(ಎಐಕೆಎಸ್​ಸಿಸಿ), ಅಖಿಲ ಭಾರತ ಕಿಸಾನ್​ ಮಹಾಸಂಘ್​​(ಎಐಕೆಎಂ) ಮತ್ತು ಭಾರತೀಯ ಕಿಸಾನ್​ ಯೂನಿಯನ್​(ಬಿಕೆಯು) ಕರೆ ನೀಡಿದ್ದ ಪ್ರತಿಭಟನೆಗೆ ಕಾಂಗ್ರೆಸ್, ಡಿಎಂಕೆ, ಎಎಪಿ, ಆರ್‌ಜೆಡಿ, ತೃಣಮೂಲ ಕಾಂಗ್ರೆಸ್ ಮತ್ತು ಕನಿಷ್ಠ 10 ಕೇಂದ್ರ ಕಾರ್ಮಿಕ ಸಂಘಗಳು ಸೇರಿದಂತೆ ಹಲವಾರು ವಿರೋಧ ಪಕ್ಷಗಳು ಬೆಂಬಲ ನೀಡಿವೆ. ಮಸೂದೆಗಳನ್ನು ರದ್ದುಗೊಳಿಸದ ಹೊರತು ತಮ್ಮ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ರೈತರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ: ರಾಜ್ಯಾದ್ಯಂತ ರಸ್ತೆ ತಡೆ ಪ್ರತಿಭಟನೆ

ಕೃಷಿ ಸುಗ್ರೀವಾಜ್ಞೆಗಳನ್ನು ಆರಂಭದಿಂದಲೂ ತೀವ್ರವಾಗಿ ವಿರೋಧಿಸುತ್ತಿರುವ ಪಂಜಾಬ್‌ನ ರೈತ ಸಂಘಟನೆಗಳು ಬೆಳಗ್ಗೆಯಿಂದಲೇ ಪ್ರತಿಭಟನೆ ನಡೆಸುತ್ತಿವೆ. ರೈಲು ಹಳಿಗಳ ಮೇಲೆ ಕುಳಿತು ರೈಲ್​ ರೋಕೋ ಚಳವಳಿ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಉತ್ತರ ರೈಲ್ವೇ ವಿಭಾಗ ಈ ಭಾಗದಲ್ಲಿ ಸಂಚರಿಸುವ ಕೆಲವು ರೈಲುಗಳನ್ನ ರದ್ದುಗೊಳಿಸಿದೆ. ಪಂಜಾಂಬ್​ ಸಿಎಂ ಅಮರೀಂದರ್​ ಸಿಂಗ್​ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಪ್ರತಿಭಟನಾಕಾರಲ್ಲಿ ಮನವಿ ಮಾಡಿದ್ದಾರೆ.

PC:Hindustan Times

ರೈತರ ಪ್ರತಿಭಟನೆಗೆ ಬೆಂಬಲ ನೀಡಿರುವ ಆರ್​ಜೆಡಿ ಮುಖಂಡ ತೇಜಸ್ವಿ ಯಾದವ್​ ಟ್ರ್ಯಾಕ್ಟರ್​ ಚಾಲನೆ ಮಾಡುವ ಮೂಲಕ ಪ್ರತಿಭಟನೆಗೆ ಸಾಥ್ ನೀಡಿದ್ದಾರೆ. ಹರಿಯಾಣದ ಬಿಜೆಪಿ ನಾಯಕರಾದ ಪಮಿಂದರ್ ಸಿಂಗ್ ಧುಲ್ ಮತ್ತು ರಾಂಪಾಲ್ ಮಜ್ರಾ ಕೃಷಿ ಮಸೂದೆಗಳನ್ನು ರೈತ ವಿರೋಧಿ ಎಂದು ಕರೆದಿದ್ದಾರೆ. ಕೇಂದ್ರ ರೈತರ ವಾದವನ್ನು ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

ಕೃಷಿ ಮಸೂದೆಗಳ ವಿರುದ್ಧದ ಪ್ರತಿಭಟನೆಗೆ ಆರ್‌ಎಸ್‌ಎಸ್‌ ನೇತೃತ್ವದ ಎಲ್ಲಾ ರೈತ ಸಂಘಟನೆಗಳು ಬೆಂಬಲ ಸೂಚಿಸಿ, ಪ್ರತಿಭಟನೆಗೆ ಕೈಜೋಡಿಸಿವೆ. ಕರ್ನಾಟಕ ರಾಜ್ಯದಲ್ಲೂ ಹಲವು ಜಿಲ್ಲೆಗಳಲ್ಲಿ ರಸ್ತೆ ತಡೆ ನಡೆಸಲಾಗುತ್ತಿದ್ದು, ರೈತ ಸಂಘಟನೆಗಳು ಭಾರಿ ಪ್ರತಿಭಟನೆ ನಡೆಸುತ್ತಿವೆ.

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಜಮಾಯಿಸಿದ ರೈತ, ಕಾರ್ಮಿಕ ಮತ್ತು ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಸುಮಾರು ಒಂದು ಗಂಟೆಗಳ ಕಾಲ ರಸ್ತೆ ತಡೆ ನಡೆಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಧಿಕ್ಕಾರ, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಬೇಡವೇ ಬೇಡ, ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯನ್ನು ಒಪ್ಪುವುದಿಲ್ಲ, ಕಾರ್ಪೊರೇಟ್ ಕಂಪನಿಗಳ ಪರ ನಿಂತಿರುವ ಕೇಂದ್ರ ರಾಜ್ಯ ಸರ್ಕಾರಗಳಿಗೆ ಧಿಕ್ಕಾರ ಎಂಬ ಘೋಷಣೆಗಳು ಕೇಳಿಬಂದವು.

ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದರೂ, ರೈತರೇ ಈ ಮಸೂದೆಗಳನ್ನು ವಿರೋಧಿಸುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಮಾತ್ರ ವಿರೋಧ ಪಕ್ಷಗಳು ಮಸೂದೆಗಳ ವಿರುದ್ಧ ಸುಳ್ಳು ವದಂತಿ ಹರಡುತ್ತಿವೆ ಎನ್ನುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ರೈತರಿಗೆ ಈ ಕಾಯ್ದೆಗಳ ಮಹತ್ವ ತಿಳಿಸಿ ಎಂದು ಸಲಹೆ ನೀಡುತ್ತಿದ್ದಾರೆ.


ಇದನ್ನೂ ಓದಿ: ಬೆಂಬಲ ಬೆಲೆ ಹಿಂದೆಯೂ ಇರಲಿಲ್ಲ, ಈಗಲೂ ಕೊಡಲು ಸಾಧ್ಯವಿಲ್ಲ: ಕೇಂದ್ರ ಕೃಷಿ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಉದ್ವಿಗ್ನತೆ: ಅಂತರರಾಷ್ಟ್ರೀಯ ಕಾನೂನು ಸತ್ತಿದೆ ಎಂದ ರಷ್ಯಾ, ಯುಎನ್ಎಸ್‌ಸಿ ಪಿ-5 ಶೃಂಗಸಭೆಗೆ ಒತ್ತಾಯ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ನಡುವೆ, ಇರಾನ್ ಮೇಲೆ ಅಮೆರಿಕ-ಇಸ್ರೇಲಿ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಅಂತರರಾಷ್ಟ್ರೀಯ ಕಾನೂನು ಪರಿಣಾಮಕಾರಿಯಾಗಿ ಸತ್ತಿದೆ ಎಂದು ರಷ್ಯಾ ಹೇಳಿದೆ ಮತ್ತು ಯುಎನ್ ಭದ್ರತಾ...

ಕೊಚ್ಚಿ ಬಂದರಿನಲ್ಲಿ ಇರಾನ್ ಯುದ್ಧನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನ : ಇಬ್ಬರು ‘ರಿಪಬ್ಲಿಕ್ ಟಿವಿ’ ಪತ್ರಕರ್ತರ ಬಂಧನ-ವರದಿ

ಕೇರಳದ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿರುವ ಇರಾನಿನ ಯುದ್ಧ ನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನಿಸಿದ ಇಬ್ಬರು ರಿಪಬ್ಲಿಕ್ ಟಿವಿ ಪತ್ರಕರ್ತರು ಸೇರಿದಂತೆ ಮೂವರನ್ನು ಶನಿವಾರ (ಮಾ.7) ಬಂಧಿಸಲಾಗಿದೆ ಎಂದು thenewsminute.com ವರದಿ ಮಾಡಿದೆ. ಅಂತಾರಾಷ್ಟ್ರೀಯ...

ಬಿಹಾರ | ಅಧಿಕೃತವಾಗಿ ಜೆಡಿಯು ಸೇರಿದ ನಿತೀಶ್ ಕುಮಾರ್ ಮಗ ನಿಶಾಂತ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ ನಿಶಾಂತ್ ಕುಮಾರ್ ಅವರು ಭಾನುವಾರ (ಮಾ.8) ಔಪಚಾರಿಕವಾಗಿ ಜೆಡಿಯು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪಾದಾರ್ಪಾಣೆ ಮಾಡಿದ್ದಾರೆ. ಸಿಎಂ ನಿತೀಶ್ ಕುಮಾರ್...

ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಹೆಚ್ಚಳ; 2025 ರ ವರದಿಯಲ್ಲಿ 3.6 ಲಕ್ಷ ದಾಟಿದ ಅತಿಸಾರ ಪ್ರಕರಣಗಳು

ಮುಂಬೈ: ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಸಂಖ್ಯೆ ಹೆಚ್ಚುತ್ತಿರುವುದು ಆರೋಗ್ಯ ಅಧಿಕಾರಿಗಳಲ್ಲಿ ಕಳವಳವನ್ನು ಮೂಡಿಸಿದೆ.  ಅಧಿಕೃತ ಅಂಕಿಅಂಶಗಳು ಪ್ರತಿ ವರ್ಷ ಸಾವಿರಾರು ಜನರು ಕಲುಷಿತ ನೀರು ಮತ್ತು ಕಳಪೆ ನೈರ್ಮಲ್ಯಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ...

ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ : ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಕೇಂದ್ರ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪಶ್ಚಿಮ ಬಂಗಾಳ ಭೇಟಿಗೆ ಸಂಬಂಧಿಸಿದಂತೆ ರಾಜ್ಯದ ಟಿಎಂಸಿ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ನಡುವೆ ರಾಜಕೀಯ ಕಿತ್ತಾಟ ತೀವ್ರಗೊಂಡಂತೆ ಗೋಚರಿಸುತ್ತಿದೆ. ರಾಷ್ಟ್ರಪತಿ ಭೇಟಿಯ ವೇಳೆ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಒಂದು ವಾರದಲ್ಲಿ ಗಲ್ಫ್ ದೇಶಗಳಿಂದ 52,000 ಕ್ಕೂ ಹೆಚ್ಚು ಭಾರತೀಯರು ಮರಳಿದ್ದಾರೆ: ವಿದೇಶಾಂಗ ಸಚಿವಾಲಯ

ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯನ್ನು ಸರ್ಕಾರ ಮೇಲ್ವಿಚಾರಣೆ ಮಾಡುತ್ತಿರುವುದರಿಂದ ಮಾರ್ಚ್ 1 ರಿಂದ 7 ರವರೆಗೆ ಗಲ್ಫ್ ಪ್ರದೇಶದಿಂದ 52,000 ಕ್ಕೂ ಹೆಚ್ಚು ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

‘ನೀವು ಅಮೆರಿಕನ್ನರನ್ನು ಕೊಂದರೆ ನಾವು, ನಿಮ್ಮನ್ನು ಬೇಟೆಯಾಡುತ್ತೇವೆ’: ಅಮೆರಿಕ ಬೆದರಿಕೆ 

ವಾಷಿಂಗ್ಟನ್: "ನೀವು ಅಮೆರಿಕನ್ನರನ್ನು ಕೊಂದರೆ, ನಾವು ನಿಮ್ಮನ್ನು ಬೇಟೆಯಾಡುತ್ತೇವೆ" ಎಂದು ಯುದ್ಧ ಕಾರ್ಯದರ್ಶಿ ಪೀಟ್ ಹೆಗ್ಸೆತ್ ರೀಡ್ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದಾರೆ.  ಅಮೆರಿಕ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಯಾವುದೇ ದೇಶ...

ಬಳ್ಳಾರಿ | ವಸತಿ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ದಾಳಿ : ಓರ್ವ ಸಾವು, 8 ಜನರಿಗೆ ಗಾಯ

ಬಳ್ಳಾರಿ ನಗರದ 'ಗುರುಕುಲ ವಸತಿ ಶಾಲೆ'ಯಲ್ಲಿ ಶನಿವಾರ (ಮಾ.7) ರಾತ್ರಿ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಗಳ ಮೇಲೆ ರಾಡ್, ಸ್ಕ್ರೂ ಡ್ರೈವರ್‌ನಿಂದ ದಾಳಿ ನಡೆಸಿದ್ದು, ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಎಂಟು ಜನರು ಗಾಯಗೊಂಡಿದ್ದಾರೆ...

ಗೋವುಗಳ ಕಳ್ಳಸಾಗಣೆ ಆರೋಪ: ಹಣ್ಣು-ತರಕಾರಿ ಸಾಗಿಸುತ್ತಿದ್ದ 28 ವರ್ಷದ ಮುಸ್ಲಿಂ ಚಾಲಕನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಹಿಂದುತ್ವ ಗುಂಪು

ಭಿವಾಡಿ: ರಾಜಸ್ಥಾನದ ಭಿವಾಡಿ ಪ್ರದೇಶದಲ್ಲಿ ಮಾರ್ಚ್ 2 ರ ಮುಂಜಾನೆ 28 ವರ್ಷದ ಆಮಿರ್ ಎಂಬ ವ್ಯಕ್ತಿಯನ್ನು ಗೋರಕ್ಷಕರು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ರಮವಾಗಿ ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆಂದು ಶಂಕಿಸಿ ಬಜರಂಗದಳದ ಸದಸ್ಯರು...