Homeಮುಖಪುಟಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

- Advertisement -
- Advertisement -

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ ಮೋರ್ಚಾ ಮೇ 15 ರಂದು ಮನರೇಗಾ ಕಾರ್ಮಿಕರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ.

ಹಕ್ಕು ಆಧಾರಿತ ಉದ್ಯೋಗ ಕಾರ್ಯಕ್ರಮದ ದುರ್ಬಲಗೊಳಿಸುವಿಕೆ ಎಂದು ಹೊಸ ಕಾಯ್ದೆ ವಿರುದ್ಧ ಪ್ರಸ್ತಾವಿತ ಮುಷ್ಕರವನ್ನು ರೂಪಿಸಲಾಗಿದೆ ಎಂದು ವೇದಿಕೆಯು ತನ್ನ ಜಂಟಿ ಹೇಳಿಕೆಯಲ್ಲಿ ತಿಳಿಸಿದೆ. ದೇಶಾದ್ಯಂತ ಕನಿಷ್ಠ 200 ದಿನಗಳ ಕೆಲಸ ಮತ್ತು 700 ರೂ.ಗಳ ಕನಿಷ್ಠ ವೇತನದ ಖಾತರಿಯೊಂದಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯ ಬಲವರ್ಧಿತ ಆವೃತ್ತಿ ಜಾರಿ ಮಾಡಬೇಕು ಎಂದು ಒಕ್ಕೂಟಗಳು ಒತ್ತಾಯಿಸಿವೆ.

ಕೆಲಸದ ಸ್ಥಳದಲ್ಲಿ ಮುಖ ಗುರುತಿಸುವಿಕೆ (Facial recognition) ಕಾರ್ಯವಿಧಾನಗಳು ಸೇರಿದಂತೆ ತಂತ್ರಜ್ಞಾನ-ಚಾಲಿತ ಹಾಜರಾತಿ ಮತ್ತು ಪಾವತಿ ವ್ಯವಸ್ಥೆಗಳನ್ನು ಸಂಘಟನೆಗಳು ವಿರೋಧಿಸಿವೆ. ಕೇಂದ್ರದ ಕ್ರಮಗಳು ದೊಡ್ಡ ಪ್ರಮಾಣದ ಕಾರ್ಮಿಕರನ್ನು ಯೋಜನೆಯಿಂದ ಹೊರಗಿಡಲು ಕಾರಣವಾಗಿವೆ ಎಂದು ಆರೋಪಿಸಿದ್ದಾರೆ.

ಗ್ರಾಮೀಣ ಉದ್ಯೋಗ ಯೋಜನೆಗಳ ಯೋಜನೆ ಮತ್ತು ಅನುಷ್ಠಾನದಲ್ಲಿ ಗ್ರಾಮ ಸಭೆಗಳ ಪಾತ್ರವನ್ನು ಹೆಚ್ಚಿಸುವತ್ತ ಗಮನಹರಿಸಿದ ಮತ್ತೊಂದು ಪ್ರಮುಖ ಬೇಡಿಕೆಯೂ ಸೇರಿದೆ. ಮನರೇಗಾ ಕೆಲಸಗಳಿಗೆ ಸಂಬಂಧಿಸಿದ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಗಳಲ್ಲಿ ಸ್ಥಳೀಯ ಸಮುದಾಯಗಳಿಗೆ ಹೆಚ್ಚಿನ ಅಧಿಕಾರ ಇರಬೇಕು ಎಂದು ಒಕ್ಕೂಟಗಳು ಪ್ರತಿಪಾದಿಸಿದವು.

ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್, ಭಾರತೀಯ ಟ್ರೇಡ್ ಯೂನಿಯನ್‌ಗಳ ಕೇಂದ್ರ, ಭಾರತೀಯ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಮತ್ತು ಇತರವುಗಳು ಸೇರಿದಂತೆ ಹಲವಾರು ಕೇಂದ್ರೀಯ ಟ್ರೇಡ್ ಯೂನಿಯನ್‌ಗಳು ಪ್ರಸ್ತಾವಿತ ಮುಷ್ಕರಕ್ಕೆ ಒಗ್ಗಟ್ಟನ್ನು ವ್ಯಕ್ತಪಡಿಸಿವೆ. ಮೇ 15 ರಂದು ನಡೆಯುವ ಪ್ರತಿಭಟನಾ ಕ್ರಮಗಳಲ್ಲಿ ಭಾಗವಹಿಸುವಂತೆ ವಿವಿಧ ವಲಯಗಳ ಕಾರ್ಮಿಕರನ್ನು ಒತ್ತಾಯಿಸಿದವು.

ಮುಷ್ಕರಕ್ಕೆ ಕಿಸಾನ್ ಮೋರ್ಚಾ ಬೆಂಬಲ

ರೈತರು ಮತ್ತು ಕಾರ್ಮಿಕರ ಸಂಘಟನೆಗಳ ಜಂಟಿ ವೇದಿಕೆಯಾದ ಸಂಯುಕ್ತ ಕಿಸಾನ್ ಮೋರ್ಚಾ, ಮೇ 15 ರಂದು ನಡೆಯಲಿರುವ ಮನರೇಗಾ ಕಾರ್ಮಿಕರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ತನ್ನ ಬೆಂಬಲವನ್ನು ಭಾನುವಾರ ಘೋಷಿಸಿದೆ. ದೇಶಾದ್ಯಂತ ಕೆಲಸದ ಸ್ಥಳಗಳಲ್ಲಿ ತನ್ನ ಎಲ್ಲಾ ಘಟಕ ಸಂಘಟನೆಗಳು ಒಗ್ಗಟ್ಟನ್ನು ತೋರಬೇಕು ಎಂದು ಕರೆ ನೀಡಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಯ ಪುನಃಸ್ಥಾಪನೆ ಹಾಗೂ ಕಾಯ್ದೆಯ ಬಲಪಡಿಸುವಿಕೆಗಾಗಿ ಒತ್ತಾಯಿಸಲು ಕೃಷಿ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ ಮೋರ್ಚಾ ಜಂಟಿಯಾಗಿ ಮುಷ್ಕರಕ್ಕೆ ಕರೆ ನೀಡಿವೆ. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಇತ್ತೀಚಿನ ನೀತಿ ಬದಲಾವಣೆಗಳಿಂದ ದುರ್ಬಲಗೊಂಡಿದೆ ಎಂದು ಕಾರ್ಮಿಕರ ಗುಂಪುಗಳು ಹೇಳುತ್ತವೆ.

ವಿವಾದಾತ್ಮಕ ವಿಬಿ-ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವಂತೆ ಎಸ್‌ಕೆಎಂ ಒತ್ತಾಯಿಸಿದೆ. ಹಣದುಬ್ಬರಕ್ಕೆ ಅನುಗುಣವಾಗಿ ದಿನಕ್ಕೆ ರೂ. 700 ಕನಿಷ್ಠ ವೇತನದೊಂದಿಗೆ ವಾರ್ಷಿಕವಾಗಿ 200 ದಿನಗಳ ಉದ್ಯೋಗವನ್ನು ಖಾತರಿಪಡಿಸುವ ಮನರೇಗಾ ಚೌಕಟ್ಟನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿತು.

ಡಿಜಿಟಲ್ ಪಾವತಿ ವ್ಯವಸ್ಥೆಗಳು ಮತ್ತು ಮುಖ ಗುರುತಿಸುವಿಕೆ ಆಧಾರಿತ ಹಾಜರಾತಿ ಕಾರ್ಯವಿಧಾನಗಳು ಸೇರಿದಂತೆ ಗ್ರಾಮೀಣ ಉದ್ಯೋಗ ಯೋಜನೆಯ ಅನುಷ್ಠಾನವು ಜನರನ್ನು ಹೊರಗಿಡುವ ತಂತ್ರಜ್ಞಾನ ಎಂದು ರೈತ ಸಂಘಟನೆ ವಿರೋಧಿಸಿದೆ. ಅಂತಹ ಕ್ರಮಗಳು ಕಾರ್ಮಿಕರನ್ನು ಉದ್ಯೋಗ ಮತ್ತು ವೇತನವನ್ನು ಪಡೆಯುವುದರಿಂದ ದೊಡ್ಡ ಪ್ರಮಾಣದಲ್ಲಿ ಹೊರಗಿಡಲು ಕಾರಣವಾಗಿವೆ ಎಂದು ಆರೋಪಿಸಿತು.

ಹೆಚ್ಚಿನ ವಿಕೇಂದ್ರೀಕರಣಕ್ಕೆ ಕರೆ ನೀಡಿದ ಎಸ್‌ಕೆಎಂ, ಗ್ರಾಮ ಮಟ್ಟದಲ್ಲಿ ಮನರೇಗಾ ಕೆಲಸಗಳನ್ನು ಯೋಜಿಸುವ ಮತ್ತು ಕಾರ್ಯಗತಗೊಳಿಸುವಲ್ಲಿ ಪ್ರಮುಖ ಪಾಲುದಾರರಾಗಿ ಗ್ರಾಮ ಸಭೆಗಳನ್ನು ಸಬಲೀಕರಣಗೊಳಿಸಬೇಕು ಎಂದು ಹೇಳಿದೆ.

ಕೇಂದ್ರ ಸರ್ಕಾರವನ್ನು ಟೀಕಿಸಿದ ಸಂಘಟನೆ, ವಿಬಿ-ಜಿರಾಮ್‌(ಜಿ) ಕಾಯ್ದೆಯು ಮೂಲ ಮನರೇಗಾ ಶಾಸನದ ಅಡಿಯಲ್ಲಿ ಖಾತರಿಪಡಿಸಲಾದ ‘ಕೆಲಸದ ಹಕ್ಕನ್ನು’ ಶಾಸನಬದ್ಧ ಅರ್ಹತೆಗಿಂತ ಹಣಕಾಸಿನ ಹಂಚಿಕೆಗಳಿಗೆ ಲಿಂಕ್ ಮಾಡುವ ಮೂಲಕ ದುರ್ಬಲಗೊಳಿಸಿದೆ ಎಂದು ಆರೋಪಿಸಿತು.

“ಸರ್ಕಾರವು ಹೊಸ ಕಾನೂನನ್ನು ಮನರೇಗಾ ಗಿಂತ ಸುಧಾರಣೆ ಎಂದು ಬಿಂಬಿಸುತ್ತಿದೆ. ಆದರೆ, ವಾಸ್ತವದಲ್ಲಿ ಇದು ಉದ್ಯೋಗಾವಕಾಶಗಳನ್ನು ನಿರ್ಬಂಧಿಸುತ್ತದೆ. ಗ್ರಾಮೀಣ ನಿರುದ್ಯೋಗವನ್ನು ಹೆಚ್ಚಿಸುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಿದೆ. ಉದ್ಯೋಗ ಖಾತರಿ ಸಿಗದೆ ಗ್ರಾಮೀಣ ಬಡವರನ್ನು ಹೆಚ್ಚಿನ ಆರ್ಥಿಕ ದುರ್ಬಲತೆ ಮತ್ತು ದೊಡ್ಡ ಭೂಮಾಲೀಕರ ಮೇಲೆ ಅವಲಂಬನೆಗೆ ತಳ್ಳುತ್ತದೆ ಎಂದು ಎಸ್‌ಕೆಎಂ ಎಚ್ಚರಿಸಿದೆ.

“ಕೇಂದ್ರ ಸರ್ಕಾರವು ಈ ಯೋಜನೆಗೆ 90 ಪ್ರತಿಶತದಷ್ಟು ಹಣವನ್ನು ಮೀಸಲಿಡಬೇಕು, ನಿರಂತರ ಕೆಲಸ ಒದಗಿಸಬೇಕು” ಎಂದು ಎಸ್‌ಕೆಎಂ ಒತ್ತಾಯಿಸಿತು. 1977 ರ ಮಹಾರಾಷ್ಟ್ರ ಉದ್ಯೋಗ ಖಾತರಿ ಯೋಜನೆ (ಇಜಿಎಸ್‌) ಕಾಯ್ದೆಯಂತಹ ರಾಜ್ಯ ಮಟ್ಟದ ಉದ್ಯೋಗ ಖಾತರಿ ಕಾನೂನುಗಳು ಕೇಂದ್ರ ಶಾಸನದ ಜೊತೆಗೆ ಮುಂದುವರಿಯಬೇಕು ಎಂದು ಎಸ್‌ಕೆಎಂ ವಾದಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...