Homeಮುಖಪುಟಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

- Advertisement -
- Advertisement -

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ ಮೋರ್ಚಾ ಮೇ 15 ರಂದು ಮನರೇಗಾ ಕಾರ್ಮಿಕರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ.

ಹಕ್ಕು ಆಧಾರಿತ ಉದ್ಯೋಗ ಕಾರ್ಯಕ್ರಮದ ದುರ್ಬಲಗೊಳಿಸುವಿಕೆ ಎಂದು ಹೊಸ ಕಾಯ್ದೆ ವಿರುದ್ಧ ಪ್ರಸ್ತಾವಿತ ಮುಷ್ಕರವನ್ನು ರೂಪಿಸಲಾಗಿದೆ ಎಂದು ವೇದಿಕೆಯು ತನ್ನ ಜಂಟಿ ಹೇಳಿಕೆಯಲ್ಲಿ ತಿಳಿಸಿದೆ. ದೇಶಾದ್ಯಂತ ಕನಿಷ್ಠ 200 ದಿನಗಳ ಕೆಲಸ ಮತ್ತು 700 ರೂ.ಗಳ ಕನಿಷ್ಠ ವೇತನದ ಖಾತರಿಯೊಂದಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯ ಬಲವರ್ಧಿತ ಆವೃತ್ತಿ ಜಾರಿ ಮಾಡಬೇಕು ಎಂದು ಒಕ್ಕೂಟಗಳು ಒತ್ತಾಯಿಸಿವೆ.

ಕೆಲಸದ ಸ್ಥಳದಲ್ಲಿ ಮುಖ ಗುರುತಿಸುವಿಕೆ (Facial recognition) ಕಾರ್ಯವಿಧಾನಗಳು ಸೇರಿದಂತೆ ತಂತ್ರಜ್ಞಾನ-ಚಾಲಿತ ಹಾಜರಾತಿ ಮತ್ತು ಪಾವತಿ ವ್ಯವಸ್ಥೆಗಳನ್ನು ಸಂಘಟನೆಗಳು ವಿರೋಧಿಸಿವೆ. ಕೇಂದ್ರದ ಕ್ರಮಗಳು ದೊಡ್ಡ ಪ್ರಮಾಣದ ಕಾರ್ಮಿಕರನ್ನು ಯೋಜನೆಯಿಂದ ಹೊರಗಿಡಲು ಕಾರಣವಾಗಿವೆ ಎಂದು ಆರೋಪಿಸಿದ್ದಾರೆ.

ಗ್ರಾಮೀಣ ಉದ್ಯೋಗ ಯೋಜನೆಗಳ ಯೋಜನೆ ಮತ್ತು ಅನುಷ್ಠಾನದಲ್ಲಿ ಗ್ರಾಮ ಸಭೆಗಳ ಪಾತ್ರವನ್ನು ಹೆಚ್ಚಿಸುವತ್ತ ಗಮನಹರಿಸಿದ ಮತ್ತೊಂದು ಪ್ರಮುಖ ಬೇಡಿಕೆಯೂ ಸೇರಿದೆ. ಮನರೇಗಾ ಕೆಲಸಗಳಿಗೆ ಸಂಬಂಧಿಸಿದ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಗಳಲ್ಲಿ ಸ್ಥಳೀಯ ಸಮುದಾಯಗಳಿಗೆ ಹೆಚ್ಚಿನ ಅಧಿಕಾರ ಇರಬೇಕು ಎಂದು ಒಕ್ಕೂಟಗಳು ಪ್ರತಿಪಾದಿಸಿದವು.

ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್, ಭಾರತೀಯ ಟ್ರೇಡ್ ಯೂನಿಯನ್‌ಗಳ ಕೇಂದ್ರ, ಭಾರತೀಯ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಮತ್ತು ಇತರವುಗಳು ಸೇರಿದಂತೆ ಹಲವಾರು ಕೇಂದ್ರೀಯ ಟ್ರೇಡ್ ಯೂನಿಯನ್‌ಗಳು ಪ್ರಸ್ತಾವಿತ ಮುಷ್ಕರಕ್ಕೆ ಒಗ್ಗಟ್ಟನ್ನು ವ್ಯಕ್ತಪಡಿಸಿವೆ. ಮೇ 15 ರಂದು ನಡೆಯುವ ಪ್ರತಿಭಟನಾ ಕ್ರಮಗಳಲ್ಲಿ ಭಾಗವಹಿಸುವಂತೆ ವಿವಿಧ ವಲಯಗಳ ಕಾರ್ಮಿಕರನ್ನು ಒತ್ತಾಯಿಸಿದವು.

ಮುಷ್ಕರಕ್ಕೆ ಕಿಸಾನ್ ಮೋರ್ಚಾ ಬೆಂಬಲ

ರೈತರು ಮತ್ತು ಕಾರ್ಮಿಕರ ಸಂಘಟನೆಗಳ ಜಂಟಿ ವೇದಿಕೆಯಾದ ಸಂಯುಕ್ತ ಕಿಸಾನ್ ಮೋರ್ಚಾ, ಮೇ 15 ರಂದು ನಡೆಯಲಿರುವ ಮನರೇಗಾ ಕಾರ್ಮಿಕರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ತನ್ನ ಬೆಂಬಲವನ್ನು ಭಾನುವಾರ ಘೋಷಿಸಿದೆ. ದೇಶಾದ್ಯಂತ ಕೆಲಸದ ಸ್ಥಳಗಳಲ್ಲಿ ತನ್ನ ಎಲ್ಲಾ ಘಟಕ ಸಂಘಟನೆಗಳು ಒಗ್ಗಟ್ಟನ್ನು ತೋರಬೇಕು ಎಂದು ಕರೆ ನೀಡಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಯ ಪುನಃಸ್ಥಾಪನೆ ಹಾಗೂ ಕಾಯ್ದೆಯ ಬಲಪಡಿಸುವಿಕೆಗಾಗಿ ಒತ್ತಾಯಿಸಲು ಕೃಷಿ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ ಮೋರ್ಚಾ ಜಂಟಿಯಾಗಿ ಮುಷ್ಕರಕ್ಕೆ ಕರೆ ನೀಡಿವೆ. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಇತ್ತೀಚಿನ ನೀತಿ ಬದಲಾವಣೆಗಳಿಂದ ದುರ್ಬಲಗೊಂಡಿದೆ ಎಂದು ಕಾರ್ಮಿಕರ ಗುಂಪುಗಳು ಹೇಳುತ್ತವೆ.

ವಿವಾದಾತ್ಮಕ ವಿಬಿ-ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವಂತೆ ಎಸ್‌ಕೆಎಂ ಒತ್ತಾಯಿಸಿದೆ. ಹಣದುಬ್ಬರಕ್ಕೆ ಅನುಗುಣವಾಗಿ ದಿನಕ್ಕೆ ರೂ. 700 ಕನಿಷ್ಠ ವೇತನದೊಂದಿಗೆ ವಾರ್ಷಿಕವಾಗಿ 200 ದಿನಗಳ ಉದ್ಯೋಗವನ್ನು ಖಾತರಿಪಡಿಸುವ ಮನರೇಗಾ ಚೌಕಟ್ಟನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿತು.

ಡಿಜಿಟಲ್ ಪಾವತಿ ವ್ಯವಸ್ಥೆಗಳು ಮತ್ತು ಮುಖ ಗುರುತಿಸುವಿಕೆ ಆಧಾರಿತ ಹಾಜರಾತಿ ಕಾರ್ಯವಿಧಾನಗಳು ಸೇರಿದಂತೆ ಗ್ರಾಮೀಣ ಉದ್ಯೋಗ ಯೋಜನೆಯ ಅನುಷ್ಠಾನವು ಜನರನ್ನು ಹೊರಗಿಡುವ ತಂತ್ರಜ್ಞಾನ ಎಂದು ರೈತ ಸಂಘಟನೆ ವಿರೋಧಿಸಿದೆ. ಅಂತಹ ಕ್ರಮಗಳು ಕಾರ್ಮಿಕರನ್ನು ಉದ್ಯೋಗ ಮತ್ತು ವೇತನವನ್ನು ಪಡೆಯುವುದರಿಂದ ದೊಡ್ಡ ಪ್ರಮಾಣದಲ್ಲಿ ಹೊರಗಿಡಲು ಕಾರಣವಾಗಿವೆ ಎಂದು ಆರೋಪಿಸಿತು.

ಹೆಚ್ಚಿನ ವಿಕೇಂದ್ರೀಕರಣಕ್ಕೆ ಕರೆ ನೀಡಿದ ಎಸ್‌ಕೆಎಂ, ಗ್ರಾಮ ಮಟ್ಟದಲ್ಲಿ ಮನರೇಗಾ ಕೆಲಸಗಳನ್ನು ಯೋಜಿಸುವ ಮತ್ತು ಕಾರ್ಯಗತಗೊಳಿಸುವಲ್ಲಿ ಪ್ರಮುಖ ಪಾಲುದಾರರಾಗಿ ಗ್ರಾಮ ಸಭೆಗಳನ್ನು ಸಬಲೀಕರಣಗೊಳಿಸಬೇಕು ಎಂದು ಹೇಳಿದೆ.

ಕೇಂದ್ರ ಸರ್ಕಾರವನ್ನು ಟೀಕಿಸಿದ ಸಂಘಟನೆ, ವಿಬಿ-ಜಿರಾಮ್‌(ಜಿ) ಕಾಯ್ದೆಯು ಮೂಲ ಮನರೇಗಾ ಶಾಸನದ ಅಡಿಯಲ್ಲಿ ಖಾತರಿಪಡಿಸಲಾದ ‘ಕೆಲಸದ ಹಕ್ಕನ್ನು’ ಶಾಸನಬದ್ಧ ಅರ್ಹತೆಗಿಂತ ಹಣಕಾಸಿನ ಹಂಚಿಕೆಗಳಿಗೆ ಲಿಂಕ್ ಮಾಡುವ ಮೂಲಕ ದುರ್ಬಲಗೊಳಿಸಿದೆ ಎಂದು ಆರೋಪಿಸಿತು.

“ಸರ್ಕಾರವು ಹೊಸ ಕಾನೂನನ್ನು ಮನರೇಗಾ ಗಿಂತ ಸುಧಾರಣೆ ಎಂದು ಬಿಂಬಿಸುತ್ತಿದೆ. ಆದರೆ, ವಾಸ್ತವದಲ್ಲಿ ಇದು ಉದ್ಯೋಗಾವಕಾಶಗಳನ್ನು ನಿರ್ಬಂಧಿಸುತ್ತದೆ. ಗ್ರಾಮೀಣ ನಿರುದ್ಯೋಗವನ್ನು ಹೆಚ್ಚಿಸುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಿದೆ. ಉದ್ಯೋಗ ಖಾತರಿ ಸಿಗದೆ ಗ್ರಾಮೀಣ ಬಡವರನ್ನು ಹೆಚ್ಚಿನ ಆರ್ಥಿಕ ದುರ್ಬಲತೆ ಮತ್ತು ದೊಡ್ಡ ಭೂಮಾಲೀಕರ ಮೇಲೆ ಅವಲಂಬನೆಗೆ ತಳ್ಳುತ್ತದೆ ಎಂದು ಎಸ್‌ಕೆಎಂ ಎಚ್ಚರಿಸಿದೆ.

“ಕೇಂದ್ರ ಸರ್ಕಾರವು ಈ ಯೋಜನೆಗೆ 90 ಪ್ರತಿಶತದಷ್ಟು ಹಣವನ್ನು ಮೀಸಲಿಡಬೇಕು, ನಿರಂತರ ಕೆಲಸ ಒದಗಿಸಬೇಕು” ಎಂದು ಎಸ್‌ಕೆಎಂ ಒತ್ತಾಯಿಸಿತು. 1977 ರ ಮಹಾರಾಷ್ಟ್ರ ಉದ್ಯೋಗ ಖಾತರಿ ಯೋಜನೆ (ಇಜಿಎಸ್‌) ಕಾಯ್ದೆಯಂತಹ ರಾಜ್ಯ ಮಟ್ಟದ ಉದ್ಯೋಗ ಖಾತರಿ ಕಾನೂನುಗಳು ಕೇಂದ್ರ ಶಾಸನದ ಜೊತೆಗೆ ಮುಂದುವರಿಯಬೇಕು ಎಂದು ಎಸ್‌ಕೆಎಂ ವಾದಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...