Homeಮುಖಪುಟಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

- Advertisement -
- Advertisement -

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ ಮೋರ್ಚಾ ಮೇ 15 ರಂದು ಮನರೇಗಾ ಕಾರ್ಮಿಕರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ.

ಹಕ್ಕು ಆಧಾರಿತ ಉದ್ಯೋಗ ಕಾರ್ಯಕ್ರಮದ ದುರ್ಬಲಗೊಳಿಸುವಿಕೆ ಎಂದು ಹೊಸ ಕಾಯ್ದೆ ವಿರುದ್ಧ ಪ್ರಸ್ತಾವಿತ ಮುಷ್ಕರವನ್ನು ರೂಪಿಸಲಾಗಿದೆ ಎಂದು ವೇದಿಕೆಯು ತನ್ನ ಜಂಟಿ ಹೇಳಿಕೆಯಲ್ಲಿ ತಿಳಿಸಿದೆ. ದೇಶಾದ್ಯಂತ ಕನಿಷ್ಠ 200 ದಿನಗಳ ಕೆಲಸ ಮತ್ತು 700 ರೂ.ಗಳ ಕನಿಷ್ಠ ವೇತನದ ಖಾತರಿಯೊಂದಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯ ಬಲವರ್ಧಿತ ಆವೃತ್ತಿ ಜಾರಿ ಮಾಡಬೇಕು ಎಂದು ಒಕ್ಕೂಟಗಳು ಒತ್ತಾಯಿಸಿವೆ.

ಕೆಲಸದ ಸ್ಥಳದಲ್ಲಿ ಮುಖ ಗುರುತಿಸುವಿಕೆ (Facial recognition) ಕಾರ್ಯವಿಧಾನಗಳು ಸೇರಿದಂತೆ ತಂತ್ರಜ್ಞಾನ-ಚಾಲಿತ ಹಾಜರಾತಿ ಮತ್ತು ಪಾವತಿ ವ್ಯವಸ್ಥೆಗಳನ್ನು ಸಂಘಟನೆಗಳು ವಿರೋಧಿಸಿವೆ. ಕೇಂದ್ರದ ಕ್ರಮಗಳು ದೊಡ್ಡ ಪ್ರಮಾಣದ ಕಾರ್ಮಿಕರನ್ನು ಯೋಜನೆಯಿಂದ ಹೊರಗಿಡಲು ಕಾರಣವಾಗಿವೆ ಎಂದು ಆರೋಪಿಸಿದ್ದಾರೆ.

ಗ್ರಾಮೀಣ ಉದ್ಯೋಗ ಯೋಜನೆಗಳ ಯೋಜನೆ ಮತ್ತು ಅನುಷ್ಠಾನದಲ್ಲಿ ಗ್ರಾಮ ಸಭೆಗಳ ಪಾತ್ರವನ್ನು ಹೆಚ್ಚಿಸುವತ್ತ ಗಮನಹರಿಸಿದ ಮತ್ತೊಂದು ಪ್ರಮುಖ ಬೇಡಿಕೆಯೂ ಸೇರಿದೆ. ಮನರೇಗಾ ಕೆಲಸಗಳಿಗೆ ಸಂಬಂಧಿಸಿದ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಗಳಲ್ಲಿ ಸ್ಥಳೀಯ ಸಮುದಾಯಗಳಿಗೆ ಹೆಚ್ಚಿನ ಅಧಿಕಾರ ಇರಬೇಕು ಎಂದು ಒಕ್ಕೂಟಗಳು ಪ್ರತಿಪಾದಿಸಿದವು.

ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್, ಭಾರತೀಯ ಟ್ರೇಡ್ ಯೂನಿಯನ್‌ಗಳ ಕೇಂದ್ರ, ಭಾರತೀಯ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಮತ್ತು ಇತರವುಗಳು ಸೇರಿದಂತೆ ಹಲವಾರು ಕೇಂದ್ರೀಯ ಟ್ರೇಡ್ ಯೂನಿಯನ್‌ಗಳು ಪ್ರಸ್ತಾವಿತ ಮುಷ್ಕರಕ್ಕೆ ಒಗ್ಗಟ್ಟನ್ನು ವ್ಯಕ್ತಪಡಿಸಿವೆ. ಮೇ 15 ರಂದು ನಡೆಯುವ ಪ್ರತಿಭಟನಾ ಕ್ರಮಗಳಲ್ಲಿ ಭಾಗವಹಿಸುವಂತೆ ವಿವಿಧ ವಲಯಗಳ ಕಾರ್ಮಿಕರನ್ನು ಒತ್ತಾಯಿಸಿದವು.

ಮುಷ್ಕರಕ್ಕೆ ಕಿಸಾನ್ ಮೋರ್ಚಾ ಬೆಂಬಲ

ರೈತರು ಮತ್ತು ಕಾರ್ಮಿಕರ ಸಂಘಟನೆಗಳ ಜಂಟಿ ವೇದಿಕೆಯಾದ ಸಂಯುಕ್ತ ಕಿಸಾನ್ ಮೋರ್ಚಾ, ಮೇ 15 ರಂದು ನಡೆಯಲಿರುವ ಮನರೇಗಾ ಕಾರ್ಮಿಕರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ತನ್ನ ಬೆಂಬಲವನ್ನು ಭಾನುವಾರ ಘೋಷಿಸಿದೆ. ದೇಶಾದ್ಯಂತ ಕೆಲಸದ ಸ್ಥಳಗಳಲ್ಲಿ ತನ್ನ ಎಲ್ಲಾ ಘಟಕ ಸಂಘಟನೆಗಳು ಒಗ್ಗಟ್ಟನ್ನು ತೋರಬೇಕು ಎಂದು ಕರೆ ನೀಡಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಯ ಪುನಃಸ್ಥಾಪನೆ ಹಾಗೂ ಕಾಯ್ದೆಯ ಬಲಪಡಿಸುವಿಕೆಗಾಗಿ ಒತ್ತಾಯಿಸಲು ಕೃಷಿ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ ಮೋರ್ಚಾ ಜಂಟಿಯಾಗಿ ಮುಷ್ಕರಕ್ಕೆ ಕರೆ ನೀಡಿವೆ. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಇತ್ತೀಚಿನ ನೀತಿ ಬದಲಾವಣೆಗಳಿಂದ ದುರ್ಬಲಗೊಂಡಿದೆ ಎಂದು ಕಾರ್ಮಿಕರ ಗುಂಪುಗಳು ಹೇಳುತ್ತವೆ.

ವಿವಾದಾತ್ಮಕ ವಿಬಿ-ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವಂತೆ ಎಸ್‌ಕೆಎಂ ಒತ್ತಾಯಿಸಿದೆ. ಹಣದುಬ್ಬರಕ್ಕೆ ಅನುಗುಣವಾಗಿ ದಿನಕ್ಕೆ ರೂ. 700 ಕನಿಷ್ಠ ವೇತನದೊಂದಿಗೆ ವಾರ್ಷಿಕವಾಗಿ 200 ದಿನಗಳ ಉದ್ಯೋಗವನ್ನು ಖಾತರಿಪಡಿಸುವ ಮನರೇಗಾ ಚೌಕಟ್ಟನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿತು.

ಡಿಜಿಟಲ್ ಪಾವತಿ ವ್ಯವಸ್ಥೆಗಳು ಮತ್ತು ಮುಖ ಗುರುತಿಸುವಿಕೆ ಆಧಾರಿತ ಹಾಜರಾತಿ ಕಾರ್ಯವಿಧಾನಗಳು ಸೇರಿದಂತೆ ಗ್ರಾಮೀಣ ಉದ್ಯೋಗ ಯೋಜನೆಯ ಅನುಷ್ಠಾನವು ಜನರನ್ನು ಹೊರಗಿಡುವ ತಂತ್ರಜ್ಞಾನ ಎಂದು ರೈತ ಸಂಘಟನೆ ವಿರೋಧಿಸಿದೆ. ಅಂತಹ ಕ್ರಮಗಳು ಕಾರ್ಮಿಕರನ್ನು ಉದ್ಯೋಗ ಮತ್ತು ವೇತನವನ್ನು ಪಡೆಯುವುದರಿಂದ ದೊಡ್ಡ ಪ್ರಮಾಣದಲ್ಲಿ ಹೊರಗಿಡಲು ಕಾರಣವಾಗಿವೆ ಎಂದು ಆರೋಪಿಸಿತು.

ಹೆಚ್ಚಿನ ವಿಕೇಂದ್ರೀಕರಣಕ್ಕೆ ಕರೆ ನೀಡಿದ ಎಸ್‌ಕೆಎಂ, ಗ್ರಾಮ ಮಟ್ಟದಲ್ಲಿ ಮನರೇಗಾ ಕೆಲಸಗಳನ್ನು ಯೋಜಿಸುವ ಮತ್ತು ಕಾರ್ಯಗತಗೊಳಿಸುವಲ್ಲಿ ಪ್ರಮುಖ ಪಾಲುದಾರರಾಗಿ ಗ್ರಾಮ ಸಭೆಗಳನ್ನು ಸಬಲೀಕರಣಗೊಳಿಸಬೇಕು ಎಂದು ಹೇಳಿದೆ.

ಕೇಂದ್ರ ಸರ್ಕಾರವನ್ನು ಟೀಕಿಸಿದ ಸಂಘಟನೆ, ವಿಬಿ-ಜಿರಾಮ್‌(ಜಿ) ಕಾಯ್ದೆಯು ಮೂಲ ಮನರೇಗಾ ಶಾಸನದ ಅಡಿಯಲ್ಲಿ ಖಾತರಿಪಡಿಸಲಾದ ‘ಕೆಲಸದ ಹಕ್ಕನ್ನು’ ಶಾಸನಬದ್ಧ ಅರ್ಹತೆಗಿಂತ ಹಣಕಾಸಿನ ಹಂಚಿಕೆಗಳಿಗೆ ಲಿಂಕ್ ಮಾಡುವ ಮೂಲಕ ದುರ್ಬಲಗೊಳಿಸಿದೆ ಎಂದು ಆರೋಪಿಸಿತು.

“ಸರ್ಕಾರವು ಹೊಸ ಕಾನೂನನ್ನು ಮನರೇಗಾ ಗಿಂತ ಸುಧಾರಣೆ ಎಂದು ಬಿಂಬಿಸುತ್ತಿದೆ. ಆದರೆ, ವಾಸ್ತವದಲ್ಲಿ ಇದು ಉದ್ಯೋಗಾವಕಾಶಗಳನ್ನು ನಿರ್ಬಂಧಿಸುತ್ತದೆ. ಗ್ರಾಮೀಣ ನಿರುದ್ಯೋಗವನ್ನು ಹೆಚ್ಚಿಸುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಿದೆ. ಉದ್ಯೋಗ ಖಾತರಿ ಸಿಗದೆ ಗ್ರಾಮೀಣ ಬಡವರನ್ನು ಹೆಚ್ಚಿನ ಆರ್ಥಿಕ ದುರ್ಬಲತೆ ಮತ್ತು ದೊಡ್ಡ ಭೂಮಾಲೀಕರ ಮೇಲೆ ಅವಲಂಬನೆಗೆ ತಳ್ಳುತ್ತದೆ ಎಂದು ಎಸ್‌ಕೆಎಂ ಎಚ್ಚರಿಸಿದೆ.

“ಕೇಂದ್ರ ಸರ್ಕಾರವು ಈ ಯೋಜನೆಗೆ 90 ಪ್ರತಿಶತದಷ್ಟು ಹಣವನ್ನು ಮೀಸಲಿಡಬೇಕು, ನಿರಂತರ ಕೆಲಸ ಒದಗಿಸಬೇಕು” ಎಂದು ಎಸ್‌ಕೆಎಂ ಒತ್ತಾಯಿಸಿತು. 1977 ರ ಮಹಾರಾಷ್ಟ್ರ ಉದ್ಯೋಗ ಖಾತರಿ ಯೋಜನೆ (ಇಜಿಎಸ್‌) ಕಾಯ್ದೆಯಂತಹ ರಾಜ್ಯ ಮಟ್ಟದ ಉದ್ಯೋಗ ಖಾತರಿ ಕಾನೂನುಗಳು ಕೇಂದ್ರ ಶಾಸನದ ಜೊತೆಗೆ ಮುಂದುವರಿಯಬೇಕು ಎಂದು ಎಸ್‌ಕೆಎಂ ವಾದಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...