Homeಚಳವಳಿ’ಬಿಜೆಪಿಯದ್ದು ಕೊಳಕು ರಾಜಕೀಯ’-ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧನಕ್ಕೆ ದೇಶದಾದ್ಯಂತ ಆಕ್ರೋಶ

’ಬಿಜೆಪಿಯದ್ದು ಕೊಳಕು ರಾಜಕೀಯ’-ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧನಕ್ಕೆ ದೇಶದಾದ್ಯಂತ ಆಕ್ರೋಶ

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ 83 ವರ್ಷದ ಸ್ಟ್ಯಾನ್ ಸ್ವಾಮಿಯನ್ನು NIA ಬಂಧಿಸಿದೆ.

- Advertisement -
- Advertisement -

ಐದು ದಶಕದಿಂದ ಬುಡಕಟ್ಟು ಹಕ್ಕುಗಳಿಗಾಗಿ ಹೋರಾಡುತ್ತಿರುವ ಫಾದರ್‌ ಸ್ಟ್ಯಾನ್ ಸ್ವಾಮಿಯ ಬಂಧನಕ್ಕೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು ಸಮಾಜಿಕ ಹೋರಾಟಗಾರರು, ಸಾಹಿತಿಗಳು ಸೇರಿದಂತೆ ಹಲವಾರು ಗಣ್ಯರು ಬಂಧನದ ವಿರುದ್ದ ಹೇಳಿಕೆ ನೀಡಿದ್ದಾರೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ 83 ವರ್ಷದ ಸ್ಟ್ಯಾನ್ ಸ್ವಾಮಿಯನ್ನು NIA ಬಂಧಿಸಿದೆ. ಬುಡಕಟ್ಟು ಜನರ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವ ಸ್ಟ್ಯಾನ್ ಸ್ವಾಮಿಯ ಮೇಲೆ ಭಯೋತ್ಪಾದನೆ ತಡೆ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಕಠಿಣ ವಿಭಾಗಗಳ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗಿದೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್: 83 ವರ್ಷದ ಹಿರಿಯ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧಿಸಿದ NIA

ಸ್ಟ್ಯಾನ್ ಅವರನ್ನು NIA ಯಾವುದೇ ವಾರಂಟ್ ಇಲ್ಲದೆ ಬಂಧಿಸಲಾಗಿದೆ ಎಂದು ಅವರ ಆಪ್ತ ಸಿರಾಜ್ ದತ್ತಾ ಆರೋಪಿಸಿದ್ದಾಗಿ ಬಿಬಿಸಿ ವರದಿ ಮಾಡಿದೆ. ಸ್ಟಾನ್ ಸ್ವಾಮಿ ಅಕ್ಟೋಬರ್ 6 ರಂದು ವೀಡಿಯೊವೊಂದನ್ನು ಬಿಡುಗಡೆ ಮಾಡಿ, NAI ಜುಲೈನಲ್ಲಿ 15 ಗಂಟೆ ತನ್ನನ್ನು ವಿಚಾರಣೆ ನಡೆಸಿದ್ದು, ಹೆಚ್ಚಿನ ವಿಚಾರಣೆಗೆ ಮುಂಬೈಗೆ ಬರಲು ಹೇಳಿದ್ದಾರೆ ಎಂದು ಹೇಳಿದ್ದರು.

ಇವರ ಬಂಧನಕ್ಕೆ ದೇಶದಾದ್ಯಂತ ವಿರೋಧ ಎದ್ದಿದ್ದು ಬಿಜೆಪಿ ತಮ್ಮ ವಿರುದ್ದದ ಎಲ್ಲಾ ಧ್ವನಿಗಳನ್ನು ಹತ್ತಿಕ್ಕುವ ಕೊಳಕು ರಾಜಕೀಯ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತಿಹಾಸಕಾರ ರಾಮಚಂದ್ರ ಗುಹ, “ಹೋರಾಟಗಾರ್ತಿ ಸುಧಾ ಭಾರದ್ವಾಜ್ ಅವರಂತೆಯೇ, ಸ್ಟ್ಯಾನ್ ಸ್ವಾಮಿ ಕೂಡಾ ಆದಿವಾಸಿಗಳ ಹಕ್ಕುಗಳಿಗಾಗಿ ಜೀವಮಾನವಿಡೀ ಹೋರಾಡಿದ್ದಾರೆ. ಅದಕ್ಕಾಗಿಯೇ ಮೋದಿ ಆಡಳಿತವು ಅವರನ್ನು ನಿಗ್ರಹಿಸಲು ಹಾಗೂ ಅವರ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತದೆ; ಯಾಕೆಂದರೆ ಈ ಆಡಳಿತವು ಆದಿವಾಸಿಗಳ ಜೀವನ ಮತ್ತು ಜೀವನೋಪಾಯಗಳಿಗಿಂತ ಗಣಿಗಾರಿಕಾ ಕಂಪನಿಗಳ ಲಾಭಗಳಿಗೆ ಆದ್ಯತೆ ನೀಡುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್; ಪ್ರಾಧ್ಯಾಪಕರ ಮೇಲಿನ NIA ಕಿರುಕುಳಕ್ಕೆ ವಿದ್ಯಾರ್ಥಿಗಳ ಖಂಡನೆ

ಸ್ವೀಡನ್ ಉಪ್ಸಲಾ ವಿಶ್ವವಿದ್ಯಾಲಯ ಪ್ರೊಫೆಸರ್‌ ಅಶೋಕ್, “ಮೋದಿಯ ಪೊಲೀಸರು 83 ವರ್ಷ ಹಿರಿಯ ಪಾದ್ರಿ ಸ್ಟ್ಯಾನ್ ಸ್ವಾಮಿಯನ್ನು ಬಂಧಿಸಿದ್ದಾರೆ. ಅವರು ಮಾಡಿರುವ ಏಕೈಕ ತಪ್ಪೆಂದರೆ ಅವರು ತನ್ನ ಜೀವನದುದ್ದಕ್ಕೂ ಬುಡಕಟ್ಟು ಜನಾಂಗದವರಿಗಾಗಿ ಕೆಲಸ ಮಾಡಿದ್ದು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್‌ ಸೊರೆನ್ ಬಂಧನವನ್ನು ಖಂಡಿಸಿದ್ದು, ತಮ್ಮ ವಿರುದ್ದದ ಎಲ್ಲಾ ಧ್ವನಿಯನ್ನು ಹತ್ತಿಕ್ಕುತ್ತಾ ಬಿಜೆಪಿ ಕೊಳಕು ರಾಜಕೀಯ ಮಾಡುತ್ತಿದೆ ಎಂದು ಕಿಡಿ ಕಾರಿದ್ದಾರೆ.

ಸ್ವರಾಜ್ ಅಭಿಯಾನದ ಯೋಗೇಂದ್ರ ಯಾದವ್, “ತನ್ನ ಜೀವನವನ್ನೆಲ್ಲಾ ಬಡವರ ಸೇವೆಗಾಗಿ ಕಳೆದ 83 ವರ್ಷದ ಪಾದ್ರಿಯ ಮೇಲಿನ ದಾಳಿ ಆಘಾತಕಾರಿ ಮತ್ತು ಖಂಡನೀಯ” ಎಂದು ಹೇಳಿದ್ದಾರೆ.

ಸಾಹಿತಿ ಸಂಜಯ್ ರಾಯ್, “84 ವರ್ಷ ವಯಸ್ಸಿನಲ್ಲಿ ಸ್ಟ್ಯಾನ್‌ಸ್ವಾಮಿಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ಯುವುದು ಕಾನೂನಿನ ಹೊರತಾಗಿ ಕೆಲಸ ಮಾಡುವ ಸರ್ಕಾರಗಳಿಗೆ ಮತ್ತೊಂದು ಉದಾಹರಣೆಯಾಗಿದೆ!” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್- ಕೇಂದ್ರದ ಹಸ್ತಕ್ಷೇಪ ದುರುದ್ದೇಶಪೂರಿತ

 

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ: ಸಾಕ್ಷ್ಯ ಸಂಗ್ರಹಿಸಲು ಹೆಣಗುತ್ತಿರುವ NIA!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...