Homeಮುಖಪುಟಗುಂಪು ಥಳಿತ/ಹತ್ಯೆಯ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆ. ಜಾರ್ಖಂಡ್ ಘಟನೆಗೆ ಖಂಡನೆ

ಗುಂಪು ಥಳಿತ/ಹತ್ಯೆಯ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆ. ಜಾರ್ಖಂಡ್ ಘಟನೆಗೆ ಖಂಡನೆ

- Advertisement -
- Advertisement -

ವಾರದ ಹಿಂದೆ ಜಾರ್ಖಂಡ್ ರಾಜ್ಯದಲ್ಲಿ ಮುಸ್ಲಿಂ ಯುವಕನನ್ನು, ಜೈ ಶ್ರೀರಾಮ್ ಕೂಗುವಂತೆ ಒತ್ತಾಯಿಸಿ, ಕ್ರೂರವಾಗಿ ಥಳಿಸಿ ಹತ್ಯೆಗೈದಿದ್ದನ್ನು ವಿರೋಧಿಸಿ ಇಂದು ಸಂಜೆ ನೂರಾರು ಜನರು, ಪುರುಷರು ಮತ್ತು ಮಹಿಳೆಯರು ಭಾರತದ ರಾಷ್ಟ್ರ ರಾಜಧಾನಿಯಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು. ಅದಕ್ಕೂ ಮೊದಲು ಮೇಣದ ದೀಪ ಮೆರವಣಿಯ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಹಸು, ಗೋಮಾಂಸ ಅಥವಾ ಕಳ್ಳತನದ ಹೆಸರಿನಲ್ಲಿ ಹಲ್ಲೆ ಮಾಡುವ ಪ್ರವೃತ್ತಿಯ ವಿರುದ್ಧ ಘೋಷಣೆಗಳನ್ನು ಎತ್ತಿದ ಪ್ರತಿಭಟನಾಕಾರರು, ಈ ಭೀತಿಯ ಬಗ್ಗೆ ಶೀಘ್ರವಾಗಿ ಪರಿಶೀಲನೆ ನಡೆಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು. ದೆಹಲಿಯ ಸಂಸತ್ ಭವನದ ಬಳಿಯ ಜಂತರ್ ಮಂತರ್‌ನಲ್ಲಿ ಬುಧವಾರ ನಡೆದ ಪ್ರತಿಭಟನೆ ಮತ್ತು ಕ್ಯಾಂಡಲ್ ಮೆರವಣಿಗೆಯಲ್ಲಿ ಹಲವಾರು ಪ್ರಖ್ಯಾತ ಜನರು ಭಾಗವಹಿಸಿದ್ದರು.

ದೆಹಲಿ ವಿಶ್ವವಿದ್ಯಾಲಯದ ಪ್ರೊ.ಅಪೂರ್ವಾನಂದ ರವರು ಮಾತನಾಡಿ “ಇದು  ಗುಂಪು ಹತ್ಯೆಯ ಪ್ರಶ್ನೆಯಷ್ಟೇ ಅಲ್ಲ. ಮುಸ್ಲಿಮರ ವಿರುದ್ಧ ದ್ವೇಷವನ್ನು ಯೋಜಿತ ರೀತಿಯಲ್ಲಿ ಪ್ರಚಾರ ಮಾಡಲಾಗುತ್ತಿದೆ. ಇಂದು ಅಧಿಕಾರದಲ್ಲಿ ಕುಳಿತವರು ಇದನ್ನು ಪ್ರಚೋದಿಸುತ್ತಿದ್ದಾರೆ… ಮುಸ್ಲಿಂ ಸಂಸದರು ಪ್ರಮಾಣ ವಚನ ಸ್ವೀಕರಿಸುವಾಗ ಸಂಸತ್ತಿನಲ್ಲಿ ‘ಜೈ ಶ್ರೀ ರಾಮ್’ ಘೋಷಣೆ ಎದ್ದ ರೀತಿ, ಆ ದೃಶ್ಯವು ಗುಂಪು ಹತ್ಯೆಗಿಂತ ಕಡಿಮೆಯಿಲ್ಲ. ಈ ಸ್ಥಳವು ಸಂಸತ್ತಾಗಿರುವುದು ಅದೃಷ್ಟ, ಇಲ್ಲದಿದ್ದರೆ ಮುಸ್ಲಿಂ ಸಂಸದರ ಮೇಲೆ ‘ಜೈ ಶ್ರೀ ರಾಮ್’ ಅಂತ ಹೇಳಿ ಹಲ್ಲೆ ಮಾಡುವುದನ್ನು ನೀವು ಹೇಗೆ ತಡೆಯುತ್ತೀರಿ?” ಎಲ್ಲಾ ಜನರು, ವಿಶೇಷವಾಗಿ ಹಿಂದೂಗಳು ಇದರ ವಿರುದ್ಧ ಹೊರಬರಬೇಕು ಎಂದು ಅವರು ಹೇಳಿದರು.

“ಜೈ ಶ್ರೀ ರಾಮ್” ಎಂಬ ಘೋಷಣೆ ಮುಸ್ಲಿಮರ ಮೇಲೆ ಆಕ್ರಮಣ ಮಾಡಲು ಹೊಸ ಅಸ್ತ್ರವಾಗಿದೆ ಎಂಬುದು ಸ್ಪಷ್ಟವಾಗಿದೆ. ಮತ್ತು ಇದನ್ನು ಸರ್ಕಾರ ಮತ್ತು ದೇಶದ ಆಡಳಿತಗಾರರು ಪ್ರಚೋದಿಸುತ್ತಿದ್ದಾರೆ. ದೇಶದ ಜನರು ವಿಶೇಷವಾಗಿ ಹಿಂದೂಗಳು ಇದನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಅವರು ಅದರ ವಿರುದ್ಧ ಬಹಿರಂಗವಾಗಿ ಮಾತನಾಡಬೇಕು, ಇಲ್ಲದಿದ್ದರೆ ಭಾರತವು ತೀವ್ರ ಹಿಂಸಾಚಾರದ ಸುಳಿಯಲ್ಲಿ ಸಿಲುಕಲಿದ್ದು ಅದರಿಂದ ಹೊರಬುರವ ದಾರಿ ಕಾಣುತ್ತಿಲ್ಲ ಎಂದಿದ್ದಾರೆ”

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆಡಳಿತದ ಕಳೆದ ಐದು ವರ್ಷಗಳಲ್ಲಿ ನಡೆದ ಗುಂಪು ಹತ್ಯೆ ಘಟನೆಗಳ ಬಗ್ಗೆ ಮಾತನಾಡಿದ್ದು ಕಡಿಮೆ. ಇಂದು ಸಹ ಜಾರ್ಖಂಡ್ ಲಿಂಚಿಂಗ್ ಪ್ರಕರಣದ ಕುರಿತು ರಾಜ್ಯಸಭೆಯಲ್ಲಿ ಮಾತನಾಡುವಾಗ, ಈ ಘಟನೆ ಎಲ್ಲರಿಗೂ ನೋವಿನ ಸಂಗತಿಯಾಗಿದೆ . ಆದರೆ ಅದಕ್ಕಾಗಿ ಇಡೀ ಜಾರ್ಖಂಡ್ ರಾಜ್ಯದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಪ್ರತಿಪಕ್ಷಗಳನ್ನು ಗುರಿಯಾಗಿಸಿ ಮಾತನಾಡಿದ್ದಾರೆ.

“ಜಾರ್ಖಂಡ್ ನಲ್ಲಿನ ಲಿಂಚಿಂಗ್ ನನಗೆ ನೋವುಂಟು ಮಾಡಿದೆ. ಇದು ಇತರರಿಗೂ ದುಃಖ ತಂದಿದೆ. ಆದರೆ, ರಾಜ್ಯಸಭೆಯಲ್ಲಿ ಕೆಲವರು ಜಾರ್ಖಂಡ್ ಅನ್ನು ಹಲ್ಲೆ ಮಾಡುವ ರಾಜ್ಯವೆಂದು ಕರೆಯುತ್ತಿದ್ದಾರೆ. ಇದು ನ್ಯಾಯೋಚಿತವೇ? ಅವರು ರಾಜ್ಯವನ್ನು ಏಕೆ ಅವಮಾನಿಸುತ್ತಿದ್ದಾರೆ? ಜಾರ್ಖಂಡ್ ರಾಜ್ಯವನ್ನು ಅವಮಾನಿಸುವ ಹಕ್ಕು ನಮ್ಮಲ್ಲಿ ಯಾರಿಗೂ ಇಲ್ಲ ”ಎಂದು ಪ್ರಧಾನಿ ಕೇಳಿದ್ದಾರೆ.

ಆದಾಗ್ಯೂ, ಜಾರ್ಖಂಡ್‌ನಲ್ಲಿ ಕಳೆದ ಐದು ವರ್ಷಗಳಲ್ಲಿ ಕೇವಲ ಹತ್ತಕ್ಕೂ ಹೆಚ್ಚು ಜನರು ಗುಂಪು ಹತ್ಯೆ ಘಟನೆಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ಸತ್ಯಗಳು ತೋರಿಸುತ್ತವೆ ಮತ್ತು ಸದ್ಯದಲ್ಲಿಯೇ ಜಾರ್ಖಂಡ್ ನಲ್ಲಿ ಚುನಾವಣೆ ನಡೆಯಲಿದ್ದು ಅದನ್ನು ಗುರಿಯಾಗಿಸಿ ಪ್ರಧಾನಿ ಮಾತನಾಡುತ್ತಿದ್ದಾರೆ, ಅವರಿಗೆ ಜನರ ಸಾವಿಗಿಂತ ಚುನಾವಣೆಯ ದೃಷ್ಟಿಯೇ  ಮುಖ್ಯವಾಗಿರುವುದು ದುರಂತ ಎಂದು ಪ್ರತಿಭಟನಕಾರರು ಆರೋಪಿಸಿದ್ದಾರೆ.

ಜಾರ್ಖಂಡ್ ನಲ್ಲಿ  ಈ ಯುವಕನನ್ನು ಕ್ರೂರವಾಗಿ ಥಳಿಸಿ ಹತ್ಯೆ ಮಾಡಿರುವುದು ಮಾನವೀಯತೆಗೆ ದೊಡ್ಡ ಕಳಂಕವಾಗಿದೆ. ಸಾಯುತ್ತಿರುವ ಈ ಹುಡುಗನನ್ನು 4 ದಿನಗಳ ಕಾಲ ಬಂಧನದಲ್ಲಿರಿಸಿದ್ದ ಪೊಲೀಸರ ಕ್ರೌರ್ಯ ಆಘಾತಕಾರಿ, ಬಿಜೆಪಿ ಆಡಳಿತದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಪ್ರಬಲ ಧ್ವನಿಗಳು ಮೌನವಾಗಿವೆ ”ಎಂದು ರಾಹುಲ್ ಗಾಂಧಿ #IndiaAgainstLynchTerror ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

ದೆಹಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ ಯುವ ಸಾಮಾಜಿಕ ಕಾರ್ಯಕರ್ತ ವಾಲಿ ರಹಮನಿ “ನಾಗರಿಕ ಸಮಾಜವು ಸಮಾಜದ ಸಮತೋಲನ ಅಂಶವಾಗಿದೆ. ಸಮಾಜದಲ್ಲಿ ಏನಾದರೂ ತಪ್ಪು ನಡೆಯುತ್ತಿದ್ದರೆ, ನಾಗರಿಕ ಸಮಾಜ ಹೊರಬಂದು ಅದರ ವಿರುದ್ಧ ಮಾತನಾಡಬೇಕು. ಅವರು ಜನಸಮೂಹ ಹತ್ಯೆ ವಿರುದ್ಧ ಮಾತನಾಡಬೇಕು ಮತ್ತು ಹಿಂದೂಸ್ತಾನ್ ಅನ್ನು ಲಿಂಚಿಸ್ತಾನ್ ಆಗಿ ಪರಿವರ್ತಿಸದಂತೆ ತಡೆಯಬೇಕು. ”

ಕನ್ಹಯ್ಯ ಕುಮಾರ್, ಉಮರ್ ಖಾಲಿದ್ ಮತ್ತು ನದೀಮ್ ಖಾನ್ ಸೇರಿದಂತೆ ಹಲವಾರು ಯುವ ಮುಖಂಡರು ಮತ್ತು ಯುವ ಸಾಮಾಜಿಕ ಕಾರ್ಯಕರ್ತರು ಪ್ರತಿಭಟನಾ ಪ್ರದರ್ಶನದಲ್ಲಿ ಮಾತನಾಡಿದರು. ದೇಶಾದ್ಯಂತ ನಡೆದ ಪ್ರತಿಭಟನೆಯ ಕೆಲವು ಫೋಟೋಗಳು ಇಲ್ಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...