Homeಮುಖಪುಟಗುಂಪು ಥಳಿತ/ಹತ್ಯೆಯ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆ. ಜಾರ್ಖಂಡ್ ಘಟನೆಗೆ ಖಂಡನೆ

ಗುಂಪು ಥಳಿತ/ಹತ್ಯೆಯ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆ. ಜಾರ್ಖಂಡ್ ಘಟನೆಗೆ ಖಂಡನೆ

- Advertisement -
- Advertisement -

ವಾರದ ಹಿಂದೆ ಜಾರ್ಖಂಡ್ ರಾಜ್ಯದಲ್ಲಿ ಮುಸ್ಲಿಂ ಯುವಕನನ್ನು, ಜೈ ಶ್ರೀರಾಮ್ ಕೂಗುವಂತೆ ಒತ್ತಾಯಿಸಿ, ಕ್ರೂರವಾಗಿ ಥಳಿಸಿ ಹತ್ಯೆಗೈದಿದ್ದನ್ನು ವಿರೋಧಿಸಿ ಇಂದು ಸಂಜೆ ನೂರಾರು ಜನರು, ಪುರುಷರು ಮತ್ತು ಮಹಿಳೆಯರು ಭಾರತದ ರಾಷ್ಟ್ರ ರಾಜಧಾನಿಯಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು. ಅದಕ್ಕೂ ಮೊದಲು ಮೇಣದ ದೀಪ ಮೆರವಣಿಯ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಹಸು, ಗೋಮಾಂಸ ಅಥವಾ ಕಳ್ಳತನದ ಹೆಸರಿನಲ್ಲಿ ಹಲ್ಲೆ ಮಾಡುವ ಪ್ರವೃತ್ತಿಯ ವಿರುದ್ಧ ಘೋಷಣೆಗಳನ್ನು ಎತ್ತಿದ ಪ್ರತಿಭಟನಾಕಾರರು, ಈ ಭೀತಿಯ ಬಗ್ಗೆ ಶೀಘ್ರವಾಗಿ ಪರಿಶೀಲನೆ ನಡೆಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು. ದೆಹಲಿಯ ಸಂಸತ್ ಭವನದ ಬಳಿಯ ಜಂತರ್ ಮಂತರ್‌ನಲ್ಲಿ ಬುಧವಾರ ನಡೆದ ಪ್ರತಿಭಟನೆ ಮತ್ತು ಕ್ಯಾಂಡಲ್ ಮೆರವಣಿಗೆಯಲ್ಲಿ ಹಲವಾರು ಪ್ರಖ್ಯಾತ ಜನರು ಭಾಗವಹಿಸಿದ್ದರು.

ದೆಹಲಿ ವಿಶ್ವವಿದ್ಯಾಲಯದ ಪ್ರೊ.ಅಪೂರ್ವಾನಂದ ರವರು ಮಾತನಾಡಿ “ಇದು  ಗುಂಪು ಹತ್ಯೆಯ ಪ್ರಶ್ನೆಯಷ್ಟೇ ಅಲ್ಲ. ಮುಸ್ಲಿಮರ ವಿರುದ್ಧ ದ್ವೇಷವನ್ನು ಯೋಜಿತ ರೀತಿಯಲ್ಲಿ ಪ್ರಚಾರ ಮಾಡಲಾಗುತ್ತಿದೆ. ಇಂದು ಅಧಿಕಾರದಲ್ಲಿ ಕುಳಿತವರು ಇದನ್ನು ಪ್ರಚೋದಿಸುತ್ತಿದ್ದಾರೆ… ಮುಸ್ಲಿಂ ಸಂಸದರು ಪ್ರಮಾಣ ವಚನ ಸ್ವೀಕರಿಸುವಾಗ ಸಂಸತ್ತಿನಲ್ಲಿ ‘ಜೈ ಶ್ರೀ ರಾಮ್’ ಘೋಷಣೆ ಎದ್ದ ರೀತಿ, ಆ ದೃಶ್ಯವು ಗುಂಪು ಹತ್ಯೆಗಿಂತ ಕಡಿಮೆಯಿಲ್ಲ. ಈ ಸ್ಥಳವು ಸಂಸತ್ತಾಗಿರುವುದು ಅದೃಷ್ಟ, ಇಲ್ಲದಿದ್ದರೆ ಮುಸ್ಲಿಂ ಸಂಸದರ ಮೇಲೆ ‘ಜೈ ಶ್ರೀ ರಾಮ್’ ಅಂತ ಹೇಳಿ ಹಲ್ಲೆ ಮಾಡುವುದನ್ನು ನೀವು ಹೇಗೆ ತಡೆಯುತ್ತೀರಿ?” ಎಲ್ಲಾ ಜನರು, ವಿಶೇಷವಾಗಿ ಹಿಂದೂಗಳು ಇದರ ವಿರುದ್ಧ ಹೊರಬರಬೇಕು ಎಂದು ಅವರು ಹೇಳಿದರು.

“ಜೈ ಶ್ರೀ ರಾಮ್” ಎಂಬ ಘೋಷಣೆ ಮುಸ್ಲಿಮರ ಮೇಲೆ ಆಕ್ರಮಣ ಮಾಡಲು ಹೊಸ ಅಸ್ತ್ರವಾಗಿದೆ ಎಂಬುದು ಸ್ಪಷ್ಟವಾಗಿದೆ. ಮತ್ತು ಇದನ್ನು ಸರ್ಕಾರ ಮತ್ತು ದೇಶದ ಆಡಳಿತಗಾರರು ಪ್ರಚೋದಿಸುತ್ತಿದ್ದಾರೆ. ದೇಶದ ಜನರು ವಿಶೇಷವಾಗಿ ಹಿಂದೂಗಳು ಇದನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಅವರು ಅದರ ವಿರುದ್ಧ ಬಹಿರಂಗವಾಗಿ ಮಾತನಾಡಬೇಕು, ಇಲ್ಲದಿದ್ದರೆ ಭಾರತವು ತೀವ್ರ ಹಿಂಸಾಚಾರದ ಸುಳಿಯಲ್ಲಿ ಸಿಲುಕಲಿದ್ದು ಅದರಿಂದ ಹೊರಬುರವ ದಾರಿ ಕಾಣುತ್ತಿಲ್ಲ ಎಂದಿದ್ದಾರೆ”

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆಡಳಿತದ ಕಳೆದ ಐದು ವರ್ಷಗಳಲ್ಲಿ ನಡೆದ ಗುಂಪು ಹತ್ಯೆ ಘಟನೆಗಳ ಬಗ್ಗೆ ಮಾತನಾಡಿದ್ದು ಕಡಿಮೆ. ಇಂದು ಸಹ ಜಾರ್ಖಂಡ್ ಲಿಂಚಿಂಗ್ ಪ್ರಕರಣದ ಕುರಿತು ರಾಜ್ಯಸಭೆಯಲ್ಲಿ ಮಾತನಾಡುವಾಗ, ಈ ಘಟನೆ ಎಲ್ಲರಿಗೂ ನೋವಿನ ಸಂಗತಿಯಾಗಿದೆ . ಆದರೆ ಅದಕ್ಕಾಗಿ ಇಡೀ ಜಾರ್ಖಂಡ್ ರಾಜ್ಯದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಪ್ರತಿಪಕ್ಷಗಳನ್ನು ಗುರಿಯಾಗಿಸಿ ಮಾತನಾಡಿದ್ದಾರೆ.

“ಜಾರ್ಖಂಡ್ ನಲ್ಲಿನ ಲಿಂಚಿಂಗ್ ನನಗೆ ನೋವುಂಟು ಮಾಡಿದೆ. ಇದು ಇತರರಿಗೂ ದುಃಖ ತಂದಿದೆ. ಆದರೆ, ರಾಜ್ಯಸಭೆಯಲ್ಲಿ ಕೆಲವರು ಜಾರ್ಖಂಡ್ ಅನ್ನು ಹಲ್ಲೆ ಮಾಡುವ ರಾಜ್ಯವೆಂದು ಕರೆಯುತ್ತಿದ್ದಾರೆ. ಇದು ನ್ಯಾಯೋಚಿತವೇ? ಅವರು ರಾಜ್ಯವನ್ನು ಏಕೆ ಅವಮಾನಿಸುತ್ತಿದ್ದಾರೆ? ಜಾರ್ಖಂಡ್ ರಾಜ್ಯವನ್ನು ಅವಮಾನಿಸುವ ಹಕ್ಕು ನಮ್ಮಲ್ಲಿ ಯಾರಿಗೂ ಇಲ್ಲ ”ಎಂದು ಪ್ರಧಾನಿ ಕೇಳಿದ್ದಾರೆ.

ಆದಾಗ್ಯೂ, ಜಾರ್ಖಂಡ್‌ನಲ್ಲಿ ಕಳೆದ ಐದು ವರ್ಷಗಳಲ್ಲಿ ಕೇವಲ ಹತ್ತಕ್ಕೂ ಹೆಚ್ಚು ಜನರು ಗುಂಪು ಹತ್ಯೆ ಘಟನೆಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ಸತ್ಯಗಳು ತೋರಿಸುತ್ತವೆ ಮತ್ತು ಸದ್ಯದಲ್ಲಿಯೇ ಜಾರ್ಖಂಡ್ ನಲ್ಲಿ ಚುನಾವಣೆ ನಡೆಯಲಿದ್ದು ಅದನ್ನು ಗುರಿಯಾಗಿಸಿ ಪ್ರಧಾನಿ ಮಾತನಾಡುತ್ತಿದ್ದಾರೆ, ಅವರಿಗೆ ಜನರ ಸಾವಿಗಿಂತ ಚುನಾವಣೆಯ ದೃಷ್ಟಿಯೇ  ಮುಖ್ಯವಾಗಿರುವುದು ದುರಂತ ಎಂದು ಪ್ರತಿಭಟನಕಾರರು ಆರೋಪಿಸಿದ್ದಾರೆ.

ಜಾರ್ಖಂಡ್ ನಲ್ಲಿ  ಈ ಯುವಕನನ್ನು ಕ್ರೂರವಾಗಿ ಥಳಿಸಿ ಹತ್ಯೆ ಮಾಡಿರುವುದು ಮಾನವೀಯತೆಗೆ ದೊಡ್ಡ ಕಳಂಕವಾಗಿದೆ. ಸಾಯುತ್ತಿರುವ ಈ ಹುಡುಗನನ್ನು 4 ದಿನಗಳ ಕಾಲ ಬಂಧನದಲ್ಲಿರಿಸಿದ್ದ ಪೊಲೀಸರ ಕ್ರೌರ್ಯ ಆಘಾತಕಾರಿ, ಬಿಜೆಪಿ ಆಡಳಿತದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಪ್ರಬಲ ಧ್ವನಿಗಳು ಮೌನವಾಗಿವೆ ”ಎಂದು ರಾಹುಲ್ ಗಾಂಧಿ #IndiaAgainstLynchTerror ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

ದೆಹಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ ಯುವ ಸಾಮಾಜಿಕ ಕಾರ್ಯಕರ್ತ ವಾಲಿ ರಹಮನಿ “ನಾಗರಿಕ ಸಮಾಜವು ಸಮಾಜದ ಸಮತೋಲನ ಅಂಶವಾಗಿದೆ. ಸಮಾಜದಲ್ಲಿ ಏನಾದರೂ ತಪ್ಪು ನಡೆಯುತ್ತಿದ್ದರೆ, ನಾಗರಿಕ ಸಮಾಜ ಹೊರಬಂದು ಅದರ ವಿರುದ್ಧ ಮಾತನಾಡಬೇಕು. ಅವರು ಜನಸಮೂಹ ಹತ್ಯೆ ವಿರುದ್ಧ ಮಾತನಾಡಬೇಕು ಮತ್ತು ಹಿಂದೂಸ್ತಾನ್ ಅನ್ನು ಲಿಂಚಿಸ್ತಾನ್ ಆಗಿ ಪರಿವರ್ತಿಸದಂತೆ ತಡೆಯಬೇಕು. ”

ಕನ್ಹಯ್ಯ ಕುಮಾರ್, ಉಮರ್ ಖಾಲಿದ್ ಮತ್ತು ನದೀಮ್ ಖಾನ್ ಸೇರಿದಂತೆ ಹಲವಾರು ಯುವ ಮುಖಂಡರು ಮತ್ತು ಯುವ ಸಾಮಾಜಿಕ ಕಾರ್ಯಕರ್ತರು ಪ್ರತಿಭಟನಾ ಪ್ರದರ್ಶನದಲ್ಲಿ ಮಾತನಾಡಿದರು. ದೇಶಾದ್ಯಂತ ನಡೆದ ಪ್ರತಿಭಟನೆಯ ಕೆಲವು ಫೋಟೋಗಳು ಇಲ್ಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...