Homeಮುಖಪುಟಗುಂಪು ಥಳಿತ/ಹತ್ಯೆಯ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆ. ಜಾರ್ಖಂಡ್ ಘಟನೆಗೆ ಖಂಡನೆ

ಗುಂಪು ಥಳಿತ/ಹತ್ಯೆಯ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆ. ಜಾರ್ಖಂಡ್ ಘಟನೆಗೆ ಖಂಡನೆ

- Advertisement -
- Advertisement -

ವಾರದ ಹಿಂದೆ ಜಾರ್ಖಂಡ್ ರಾಜ್ಯದಲ್ಲಿ ಮುಸ್ಲಿಂ ಯುವಕನನ್ನು, ಜೈ ಶ್ರೀರಾಮ್ ಕೂಗುವಂತೆ ಒತ್ತಾಯಿಸಿ, ಕ್ರೂರವಾಗಿ ಥಳಿಸಿ ಹತ್ಯೆಗೈದಿದ್ದನ್ನು ವಿರೋಧಿಸಿ ಇಂದು ಸಂಜೆ ನೂರಾರು ಜನರು, ಪುರುಷರು ಮತ್ತು ಮಹಿಳೆಯರು ಭಾರತದ ರಾಷ್ಟ್ರ ರಾಜಧಾನಿಯಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು. ಅದಕ್ಕೂ ಮೊದಲು ಮೇಣದ ದೀಪ ಮೆರವಣಿಯ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಹಸು, ಗೋಮಾಂಸ ಅಥವಾ ಕಳ್ಳತನದ ಹೆಸರಿನಲ್ಲಿ ಹಲ್ಲೆ ಮಾಡುವ ಪ್ರವೃತ್ತಿಯ ವಿರುದ್ಧ ಘೋಷಣೆಗಳನ್ನು ಎತ್ತಿದ ಪ್ರತಿಭಟನಾಕಾರರು, ಈ ಭೀತಿಯ ಬಗ್ಗೆ ಶೀಘ್ರವಾಗಿ ಪರಿಶೀಲನೆ ನಡೆಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು. ದೆಹಲಿಯ ಸಂಸತ್ ಭವನದ ಬಳಿಯ ಜಂತರ್ ಮಂತರ್‌ನಲ್ಲಿ ಬುಧವಾರ ನಡೆದ ಪ್ರತಿಭಟನೆ ಮತ್ತು ಕ್ಯಾಂಡಲ್ ಮೆರವಣಿಗೆಯಲ್ಲಿ ಹಲವಾರು ಪ್ರಖ್ಯಾತ ಜನರು ಭಾಗವಹಿಸಿದ್ದರು.

ದೆಹಲಿ ವಿಶ್ವವಿದ್ಯಾಲಯದ ಪ್ರೊ.ಅಪೂರ್ವಾನಂದ ರವರು ಮಾತನಾಡಿ “ಇದು  ಗುಂಪು ಹತ್ಯೆಯ ಪ್ರಶ್ನೆಯಷ್ಟೇ ಅಲ್ಲ. ಮುಸ್ಲಿಮರ ವಿರುದ್ಧ ದ್ವೇಷವನ್ನು ಯೋಜಿತ ರೀತಿಯಲ್ಲಿ ಪ್ರಚಾರ ಮಾಡಲಾಗುತ್ತಿದೆ. ಇಂದು ಅಧಿಕಾರದಲ್ಲಿ ಕುಳಿತವರು ಇದನ್ನು ಪ್ರಚೋದಿಸುತ್ತಿದ್ದಾರೆ… ಮುಸ್ಲಿಂ ಸಂಸದರು ಪ್ರಮಾಣ ವಚನ ಸ್ವೀಕರಿಸುವಾಗ ಸಂಸತ್ತಿನಲ್ಲಿ ‘ಜೈ ಶ್ರೀ ರಾಮ್’ ಘೋಷಣೆ ಎದ್ದ ರೀತಿ, ಆ ದೃಶ್ಯವು ಗುಂಪು ಹತ್ಯೆಗಿಂತ ಕಡಿಮೆಯಿಲ್ಲ. ಈ ಸ್ಥಳವು ಸಂಸತ್ತಾಗಿರುವುದು ಅದೃಷ್ಟ, ಇಲ್ಲದಿದ್ದರೆ ಮುಸ್ಲಿಂ ಸಂಸದರ ಮೇಲೆ ‘ಜೈ ಶ್ರೀ ರಾಮ್’ ಅಂತ ಹೇಳಿ ಹಲ್ಲೆ ಮಾಡುವುದನ್ನು ನೀವು ಹೇಗೆ ತಡೆಯುತ್ತೀರಿ?” ಎಲ್ಲಾ ಜನರು, ವಿಶೇಷವಾಗಿ ಹಿಂದೂಗಳು ಇದರ ವಿರುದ್ಧ ಹೊರಬರಬೇಕು ಎಂದು ಅವರು ಹೇಳಿದರು.

“ಜೈ ಶ್ರೀ ರಾಮ್” ಎಂಬ ಘೋಷಣೆ ಮುಸ್ಲಿಮರ ಮೇಲೆ ಆಕ್ರಮಣ ಮಾಡಲು ಹೊಸ ಅಸ್ತ್ರವಾಗಿದೆ ಎಂಬುದು ಸ್ಪಷ್ಟವಾಗಿದೆ. ಮತ್ತು ಇದನ್ನು ಸರ್ಕಾರ ಮತ್ತು ದೇಶದ ಆಡಳಿತಗಾರರು ಪ್ರಚೋದಿಸುತ್ತಿದ್ದಾರೆ. ದೇಶದ ಜನರು ವಿಶೇಷವಾಗಿ ಹಿಂದೂಗಳು ಇದನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಅವರು ಅದರ ವಿರುದ್ಧ ಬಹಿರಂಗವಾಗಿ ಮಾತನಾಡಬೇಕು, ಇಲ್ಲದಿದ್ದರೆ ಭಾರತವು ತೀವ್ರ ಹಿಂಸಾಚಾರದ ಸುಳಿಯಲ್ಲಿ ಸಿಲುಕಲಿದ್ದು ಅದರಿಂದ ಹೊರಬುರವ ದಾರಿ ಕಾಣುತ್ತಿಲ್ಲ ಎಂದಿದ್ದಾರೆ”

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆಡಳಿತದ ಕಳೆದ ಐದು ವರ್ಷಗಳಲ್ಲಿ ನಡೆದ ಗುಂಪು ಹತ್ಯೆ ಘಟನೆಗಳ ಬಗ್ಗೆ ಮಾತನಾಡಿದ್ದು ಕಡಿಮೆ. ಇಂದು ಸಹ ಜಾರ್ಖಂಡ್ ಲಿಂಚಿಂಗ್ ಪ್ರಕರಣದ ಕುರಿತು ರಾಜ್ಯಸಭೆಯಲ್ಲಿ ಮಾತನಾಡುವಾಗ, ಈ ಘಟನೆ ಎಲ್ಲರಿಗೂ ನೋವಿನ ಸಂಗತಿಯಾಗಿದೆ . ಆದರೆ ಅದಕ್ಕಾಗಿ ಇಡೀ ಜಾರ್ಖಂಡ್ ರಾಜ್ಯದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಪ್ರತಿಪಕ್ಷಗಳನ್ನು ಗುರಿಯಾಗಿಸಿ ಮಾತನಾಡಿದ್ದಾರೆ.

“ಜಾರ್ಖಂಡ್ ನಲ್ಲಿನ ಲಿಂಚಿಂಗ್ ನನಗೆ ನೋವುಂಟು ಮಾಡಿದೆ. ಇದು ಇತರರಿಗೂ ದುಃಖ ತಂದಿದೆ. ಆದರೆ, ರಾಜ್ಯಸಭೆಯಲ್ಲಿ ಕೆಲವರು ಜಾರ್ಖಂಡ್ ಅನ್ನು ಹಲ್ಲೆ ಮಾಡುವ ರಾಜ್ಯವೆಂದು ಕರೆಯುತ್ತಿದ್ದಾರೆ. ಇದು ನ್ಯಾಯೋಚಿತವೇ? ಅವರು ರಾಜ್ಯವನ್ನು ಏಕೆ ಅವಮಾನಿಸುತ್ತಿದ್ದಾರೆ? ಜಾರ್ಖಂಡ್ ರಾಜ್ಯವನ್ನು ಅವಮಾನಿಸುವ ಹಕ್ಕು ನಮ್ಮಲ್ಲಿ ಯಾರಿಗೂ ಇಲ್ಲ ”ಎಂದು ಪ್ರಧಾನಿ ಕೇಳಿದ್ದಾರೆ.

ಆದಾಗ್ಯೂ, ಜಾರ್ಖಂಡ್‌ನಲ್ಲಿ ಕಳೆದ ಐದು ವರ್ಷಗಳಲ್ಲಿ ಕೇವಲ ಹತ್ತಕ್ಕೂ ಹೆಚ್ಚು ಜನರು ಗುಂಪು ಹತ್ಯೆ ಘಟನೆಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ಸತ್ಯಗಳು ತೋರಿಸುತ್ತವೆ ಮತ್ತು ಸದ್ಯದಲ್ಲಿಯೇ ಜಾರ್ಖಂಡ್ ನಲ್ಲಿ ಚುನಾವಣೆ ನಡೆಯಲಿದ್ದು ಅದನ್ನು ಗುರಿಯಾಗಿಸಿ ಪ್ರಧಾನಿ ಮಾತನಾಡುತ್ತಿದ್ದಾರೆ, ಅವರಿಗೆ ಜನರ ಸಾವಿಗಿಂತ ಚುನಾವಣೆಯ ದೃಷ್ಟಿಯೇ  ಮುಖ್ಯವಾಗಿರುವುದು ದುರಂತ ಎಂದು ಪ್ರತಿಭಟನಕಾರರು ಆರೋಪಿಸಿದ್ದಾರೆ.

ಜಾರ್ಖಂಡ್ ನಲ್ಲಿ  ಈ ಯುವಕನನ್ನು ಕ್ರೂರವಾಗಿ ಥಳಿಸಿ ಹತ್ಯೆ ಮಾಡಿರುವುದು ಮಾನವೀಯತೆಗೆ ದೊಡ್ಡ ಕಳಂಕವಾಗಿದೆ. ಸಾಯುತ್ತಿರುವ ಈ ಹುಡುಗನನ್ನು 4 ದಿನಗಳ ಕಾಲ ಬಂಧನದಲ್ಲಿರಿಸಿದ್ದ ಪೊಲೀಸರ ಕ್ರೌರ್ಯ ಆಘಾತಕಾರಿ, ಬಿಜೆಪಿ ಆಡಳಿತದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಪ್ರಬಲ ಧ್ವನಿಗಳು ಮೌನವಾಗಿವೆ ”ಎಂದು ರಾಹುಲ್ ಗಾಂಧಿ #IndiaAgainstLynchTerror ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

ದೆಹಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ ಯುವ ಸಾಮಾಜಿಕ ಕಾರ್ಯಕರ್ತ ವಾಲಿ ರಹಮನಿ “ನಾಗರಿಕ ಸಮಾಜವು ಸಮಾಜದ ಸಮತೋಲನ ಅಂಶವಾಗಿದೆ. ಸಮಾಜದಲ್ಲಿ ಏನಾದರೂ ತಪ್ಪು ನಡೆಯುತ್ತಿದ್ದರೆ, ನಾಗರಿಕ ಸಮಾಜ ಹೊರಬಂದು ಅದರ ವಿರುದ್ಧ ಮಾತನಾಡಬೇಕು. ಅವರು ಜನಸಮೂಹ ಹತ್ಯೆ ವಿರುದ್ಧ ಮಾತನಾಡಬೇಕು ಮತ್ತು ಹಿಂದೂಸ್ತಾನ್ ಅನ್ನು ಲಿಂಚಿಸ್ತಾನ್ ಆಗಿ ಪರಿವರ್ತಿಸದಂತೆ ತಡೆಯಬೇಕು. ”

ಕನ್ಹಯ್ಯ ಕುಮಾರ್, ಉಮರ್ ಖಾಲಿದ್ ಮತ್ತು ನದೀಮ್ ಖಾನ್ ಸೇರಿದಂತೆ ಹಲವಾರು ಯುವ ಮುಖಂಡರು ಮತ್ತು ಯುವ ಸಾಮಾಜಿಕ ಕಾರ್ಯಕರ್ತರು ಪ್ರತಿಭಟನಾ ಪ್ರದರ್ಶನದಲ್ಲಿ ಮಾತನಾಡಿದರು. ದೇಶಾದ್ಯಂತ ನಡೆದ ಪ್ರತಿಭಟನೆಯ ಕೆಲವು ಫೋಟೋಗಳು ಇಲ್ಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...