Homeಮುಖಪುಟಗುಂಪು ಥಳಿತ/ಹತ್ಯೆಯ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆ. ಜಾರ್ಖಂಡ್ ಘಟನೆಗೆ ಖಂಡನೆ

ಗುಂಪು ಥಳಿತ/ಹತ್ಯೆಯ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆ. ಜಾರ್ಖಂಡ್ ಘಟನೆಗೆ ಖಂಡನೆ

- Advertisement -
- Advertisement -

ವಾರದ ಹಿಂದೆ ಜಾರ್ಖಂಡ್ ರಾಜ್ಯದಲ್ಲಿ ಮುಸ್ಲಿಂ ಯುವಕನನ್ನು, ಜೈ ಶ್ರೀರಾಮ್ ಕೂಗುವಂತೆ ಒತ್ತಾಯಿಸಿ, ಕ್ರೂರವಾಗಿ ಥಳಿಸಿ ಹತ್ಯೆಗೈದಿದ್ದನ್ನು ವಿರೋಧಿಸಿ ಇಂದು ಸಂಜೆ ನೂರಾರು ಜನರು, ಪುರುಷರು ಮತ್ತು ಮಹಿಳೆಯರು ಭಾರತದ ರಾಷ್ಟ್ರ ರಾಜಧಾನಿಯಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು. ಅದಕ್ಕೂ ಮೊದಲು ಮೇಣದ ದೀಪ ಮೆರವಣಿಯ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಹಸು, ಗೋಮಾಂಸ ಅಥವಾ ಕಳ್ಳತನದ ಹೆಸರಿನಲ್ಲಿ ಹಲ್ಲೆ ಮಾಡುವ ಪ್ರವೃತ್ತಿಯ ವಿರುದ್ಧ ಘೋಷಣೆಗಳನ್ನು ಎತ್ತಿದ ಪ್ರತಿಭಟನಾಕಾರರು, ಈ ಭೀತಿಯ ಬಗ್ಗೆ ಶೀಘ್ರವಾಗಿ ಪರಿಶೀಲನೆ ನಡೆಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು. ದೆಹಲಿಯ ಸಂಸತ್ ಭವನದ ಬಳಿಯ ಜಂತರ್ ಮಂತರ್‌ನಲ್ಲಿ ಬುಧವಾರ ನಡೆದ ಪ್ರತಿಭಟನೆ ಮತ್ತು ಕ್ಯಾಂಡಲ್ ಮೆರವಣಿಗೆಯಲ್ಲಿ ಹಲವಾರು ಪ್ರಖ್ಯಾತ ಜನರು ಭಾಗವಹಿಸಿದ್ದರು.

ದೆಹಲಿ ವಿಶ್ವವಿದ್ಯಾಲಯದ ಪ್ರೊ.ಅಪೂರ್ವಾನಂದ ರವರು ಮಾತನಾಡಿ “ಇದು  ಗುಂಪು ಹತ್ಯೆಯ ಪ್ರಶ್ನೆಯಷ್ಟೇ ಅಲ್ಲ. ಮುಸ್ಲಿಮರ ವಿರುದ್ಧ ದ್ವೇಷವನ್ನು ಯೋಜಿತ ರೀತಿಯಲ್ಲಿ ಪ್ರಚಾರ ಮಾಡಲಾಗುತ್ತಿದೆ. ಇಂದು ಅಧಿಕಾರದಲ್ಲಿ ಕುಳಿತವರು ಇದನ್ನು ಪ್ರಚೋದಿಸುತ್ತಿದ್ದಾರೆ… ಮುಸ್ಲಿಂ ಸಂಸದರು ಪ್ರಮಾಣ ವಚನ ಸ್ವೀಕರಿಸುವಾಗ ಸಂಸತ್ತಿನಲ್ಲಿ ‘ಜೈ ಶ್ರೀ ರಾಮ್’ ಘೋಷಣೆ ಎದ್ದ ರೀತಿ, ಆ ದೃಶ್ಯವು ಗುಂಪು ಹತ್ಯೆಗಿಂತ ಕಡಿಮೆಯಿಲ್ಲ. ಈ ಸ್ಥಳವು ಸಂಸತ್ತಾಗಿರುವುದು ಅದೃಷ್ಟ, ಇಲ್ಲದಿದ್ದರೆ ಮುಸ್ಲಿಂ ಸಂಸದರ ಮೇಲೆ ‘ಜೈ ಶ್ರೀ ರಾಮ್’ ಅಂತ ಹೇಳಿ ಹಲ್ಲೆ ಮಾಡುವುದನ್ನು ನೀವು ಹೇಗೆ ತಡೆಯುತ್ತೀರಿ?” ಎಲ್ಲಾ ಜನರು, ವಿಶೇಷವಾಗಿ ಹಿಂದೂಗಳು ಇದರ ವಿರುದ್ಧ ಹೊರಬರಬೇಕು ಎಂದು ಅವರು ಹೇಳಿದರು.

“ಜೈ ಶ್ರೀ ರಾಮ್” ಎಂಬ ಘೋಷಣೆ ಮುಸ್ಲಿಮರ ಮೇಲೆ ಆಕ್ರಮಣ ಮಾಡಲು ಹೊಸ ಅಸ್ತ್ರವಾಗಿದೆ ಎಂಬುದು ಸ್ಪಷ್ಟವಾಗಿದೆ. ಮತ್ತು ಇದನ್ನು ಸರ್ಕಾರ ಮತ್ತು ದೇಶದ ಆಡಳಿತಗಾರರು ಪ್ರಚೋದಿಸುತ್ತಿದ್ದಾರೆ. ದೇಶದ ಜನರು ವಿಶೇಷವಾಗಿ ಹಿಂದೂಗಳು ಇದನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಅವರು ಅದರ ವಿರುದ್ಧ ಬಹಿರಂಗವಾಗಿ ಮಾತನಾಡಬೇಕು, ಇಲ್ಲದಿದ್ದರೆ ಭಾರತವು ತೀವ್ರ ಹಿಂಸಾಚಾರದ ಸುಳಿಯಲ್ಲಿ ಸಿಲುಕಲಿದ್ದು ಅದರಿಂದ ಹೊರಬುರವ ದಾರಿ ಕಾಣುತ್ತಿಲ್ಲ ಎಂದಿದ್ದಾರೆ”

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆಡಳಿತದ ಕಳೆದ ಐದು ವರ್ಷಗಳಲ್ಲಿ ನಡೆದ ಗುಂಪು ಹತ್ಯೆ ಘಟನೆಗಳ ಬಗ್ಗೆ ಮಾತನಾಡಿದ್ದು ಕಡಿಮೆ. ಇಂದು ಸಹ ಜಾರ್ಖಂಡ್ ಲಿಂಚಿಂಗ್ ಪ್ರಕರಣದ ಕುರಿತು ರಾಜ್ಯಸಭೆಯಲ್ಲಿ ಮಾತನಾಡುವಾಗ, ಈ ಘಟನೆ ಎಲ್ಲರಿಗೂ ನೋವಿನ ಸಂಗತಿಯಾಗಿದೆ . ಆದರೆ ಅದಕ್ಕಾಗಿ ಇಡೀ ಜಾರ್ಖಂಡ್ ರಾಜ್ಯದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಪ್ರತಿಪಕ್ಷಗಳನ್ನು ಗುರಿಯಾಗಿಸಿ ಮಾತನಾಡಿದ್ದಾರೆ.

“ಜಾರ್ಖಂಡ್ ನಲ್ಲಿನ ಲಿಂಚಿಂಗ್ ನನಗೆ ನೋವುಂಟು ಮಾಡಿದೆ. ಇದು ಇತರರಿಗೂ ದುಃಖ ತಂದಿದೆ. ಆದರೆ, ರಾಜ್ಯಸಭೆಯಲ್ಲಿ ಕೆಲವರು ಜಾರ್ಖಂಡ್ ಅನ್ನು ಹಲ್ಲೆ ಮಾಡುವ ರಾಜ್ಯವೆಂದು ಕರೆಯುತ್ತಿದ್ದಾರೆ. ಇದು ನ್ಯಾಯೋಚಿತವೇ? ಅವರು ರಾಜ್ಯವನ್ನು ಏಕೆ ಅವಮಾನಿಸುತ್ತಿದ್ದಾರೆ? ಜಾರ್ಖಂಡ್ ರಾಜ್ಯವನ್ನು ಅವಮಾನಿಸುವ ಹಕ್ಕು ನಮ್ಮಲ್ಲಿ ಯಾರಿಗೂ ಇಲ್ಲ ”ಎಂದು ಪ್ರಧಾನಿ ಕೇಳಿದ್ದಾರೆ.

ಆದಾಗ್ಯೂ, ಜಾರ್ಖಂಡ್‌ನಲ್ಲಿ ಕಳೆದ ಐದು ವರ್ಷಗಳಲ್ಲಿ ಕೇವಲ ಹತ್ತಕ್ಕೂ ಹೆಚ್ಚು ಜನರು ಗುಂಪು ಹತ್ಯೆ ಘಟನೆಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ಸತ್ಯಗಳು ತೋರಿಸುತ್ತವೆ ಮತ್ತು ಸದ್ಯದಲ್ಲಿಯೇ ಜಾರ್ಖಂಡ್ ನಲ್ಲಿ ಚುನಾವಣೆ ನಡೆಯಲಿದ್ದು ಅದನ್ನು ಗುರಿಯಾಗಿಸಿ ಪ್ರಧಾನಿ ಮಾತನಾಡುತ್ತಿದ್ದಾರೆ, ಅವರಿಗೆ ಜನರ ಸಾವಿಗಿಂತ ಚುನಾವಣೆಯ ದೃಷ್ಟಿಯೇ  ಮುಖ್ಯವಾಗಿರುವುದು ದುರಂತ ಎಂದು ಪ್ರತಿಭಟನಕಾರರು ಆರೋಪಿಸಿದ್ದಾರೆ.

ಜಾರ್ಖಂಡ್ ನಲ್ಲಿ  ಈ ಯುವಕನನ್ನು ಕ್ರೂರವಾಗಿ ಥಳಿಸಿ ಹತ್ಯೆ ಮಾಡಿರುವುದು ಮಾನವೀಯತೆಗೆ ದೊಡ್ಡ ಕಳಂಕವಾಗಿದೆ. ಸಾಯುತ್ತಿರುವ ಈ ಹುಡುಗನನ್ನು 4 ದಿನಗಳ ಕಾಲ ಬಂಧನದಲ್ಲಿರಿಸಿದ್ದ ಪೊಲೀಸರ ಕ್ರೌರ್ಯ ಆಘಾತಕಾರಿ, ಬಿಜೆಪಿ ಆಡಳಿತದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಪ್ರಬಲ ಧ್ವನಿಗಳು ಮೌನವಾಗಿವೆ ”ಎಂದು ರಾಹುಲ್ ಗಾಂಧಿ #IndiaAgainstLynchTerror ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

ದೆಹಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ ಯುವ ಸಾಮಾಜಿಕ ಕಾರ್ಯಕರ್ತ ವಾಲಿ ರಹಮನಿ “ನಾಗರಿಕ ಸಮಾಜವು ಸಮಾಜದ ಸಮತೋಲನ ಅಂಶವಾಗಿದೆ. ಸಮಾಜದಲ್ಲಿ ಏನಾದರೂ ತಪ್ಪು ನಡೆಯುತ್ತಿದ್ದರೆ, ನಾಗರಿಕ ಸಮಾಜ ಹೊರಬಂದು ಅದರ ವಿರುದ್ಧ ಮಾತನಾಡಬೇಕು. ಅವರು ಜನಸಮೂಹ ಹತ್ಯೆ ವಿರುದ್ಧ ಮಾತನಾಡಬೇಕು ಮತ್ತು ಹಿಂದೂಸ್ತಾನ್ ಅನ್ನು ಲಿಂಚಿಸ್ತಾನ್ ಆಗಿ ಪರಿವರ್ತಿಸದಂತೆ ತಡೆಯಬೇಕು. ”

ಕನ್ಹಯ್ಯ ಕುಮಾರ್, ಉಮರ್ ಖಾಲಿದ್ ಮತ್ತು ನದೀಮ್ ಖಾನ್ ಸೇರಿದಂತೆ ಹಲವಾರು ಯುವ ಮುಖಂಡರು ಮತ್ತು ಯುವ ಸಾಮಾಜಿಕ ಕಾರ್ಯಕರ್ತರು ಪ್ರತಿಭಟನಾ ಪ್ರದರ್ಶನದಲ್ಲಿ ಮಾತನಾಡಿದರು. ದೇಶಾದ್ಯಂತ ನಡೆದ ಪ್ರತಿಭಟನೆಯ ಕೆಲವು ಫೋಟೋಗಳು ಇಲ್ಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...