Homeಮುಖಪುಟಗುಂಪು ಥಳಿತ/ಹತ್ಯೆಯ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆ. ಜಾರ್ಖಂಡ್ ಘಟನೆಗೆ ಖಂಡನೆ

ಗುಂಪು ಥಳಿತ/ಹತ್ಯೆಯ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆ. ಜಾರ್ಖಂಡ್ ಘಟನೆಗೆ ಖಂಡನೆ

- Advertisement -
- Advertisement -

ವಾರದ ಹಿಂದೆ ಜಾರ್ಖಂಡ್ ರಾಜ್ಯದಲ್ಲಿ ಮುಸ್ಲಿಂ ಯುವಕನನ್ನು, ಜೈ ಶ್ರೀರಾಮ್ ಕೂಗುವಂತೆ ಒತ್ತಾಯಿಸಿ, ಕ್ರೂರವಾಗಿ ಥಳಿಸಿ ಹತ್ಯೆಗೈದಿದ್ದನ್ನು ವಿರೋಧಿಸಿ ಇಂದು ಸಂಜೆ ನೂರಾರು ಜನರು, ಪುರುಷರು ಮತ್ತು ಮಹಿಳೆಯರು ಭಾರತದ ರಾಷ್ಟ್ರ ರಾಜಧಾನಿಯಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು. ಅದಕ್ಕೂ ಮೊದಲು ಮೇಣದ ದೀಪ ಮೆರವಣಿಯ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಹಸು, ಗೋಮಾಂಸ ಅಥವಾ ಕಳ್ಳತನದ ಹೆಸರಿನಲ್ಲಿ ಹಲ್ಲೆ ಮಾಡುವ ಪ್ರವೃತ್ತಿಯ ವಿರುದ್ಧ ಘೋಷಣೆಗಳನ್ನು ಎತ್ತಿದ ಪ್ರತಿಭಟನಾಕಾರರು, ಈ ಭೀತಿಯ ಬಗ್ಗೆ ಶೀಘ್ರವಾಗಿ ಪರಿಶೀಲನೆ ನಡೆಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು. ದೆಹಲಿಯ ಸಂಸತ್ ಭವನದ ಬಳಿಯ ಜಂತರ್ ಮಂತರ್‌ನಲ್ಲಿ ಬುಧವಾರ ನಡೆದ ಪ್ರತಿಭಟನೆ ಮತ್ತು ಕ್ಯಾಂಡಲ್ ಮೆರವಣಿಗೆಯಲ್ಲಿ ಹಲವಾರು ಪ್ರಖ್ಯಾತ ಜನರು ಭಾಗವಹಿಸಿದ್ದರು.

ದೆಹಲಿ ವಿಶ್ವವಿದ್ಯಾಲಯದ ಪ್ರೊ.ಅಪೂರ್ವಾನಂದ ರವರು ಮಾತನಾಡಿ “ಇದು  ಗುಂಪು ಹತ್ಯೆಯ ಪ್ರಶ್ನೆಯಷ್ಟೇ ಅಲ್ಲ. ಮುಸ್ಲಿಮರ ವಿರುದ್ಧ ದ್ವೇಷವನ್ನು ಯೋಜಿತ ರೀತಿಯಲ್ಲಿ ಪ್ರಚಾರ ಮಾಡಲಾಗುತ್ತಿದೆ. ಇಂದು ಅಧಿಕಾರದಲ್ಲಿ ಕುಳಿತವರು ಇದನ್ನು ಪ್ರಚೋದಿಸುತ್ತಿದ್ದಾರೆ… ಮುಸ್ಲಿಂ ಸಂಸದರು ಪ್ರಮಾಣ ವಚನ ಸ್ವೀಕರಿಸುವಾಗ ಸಂಸತ್ತಿನಲ್ಲಿ ‘ಜೈ ಶ್ರೀ ರಾಮ್’ ಘೋಷಣೆ ಎದ್ದ ರೀತಿ, ಆ ದೃಶ್ಯವು ಗುಂಪು ಹತ್ಯೆಗಿಂತ ಕಡಿಮೆಯಿಲ್ಲ. ಈ ಸ್ಥಳವು ಸಂಸತ್ತಾಗಿರುವುದು ಅದೃಷ್ಟ, ಇಲ್ಲದಿದ್ದರೆ ಮುಸ್ಲಿಂ ಸಂಸದರ ಮೇಲೆ ‘ಜೈ ಶ್ರೀ ರಾಮ್’ ಅಂತ ಹೇಳಿ ಹಲ್ಲೆ ಮಾಡುವುದನ್ನು ನೀವು ಹೇಗೆ ತಡೆಯುತ್ತೀರಿ?” ಎಲ್ಲಾ ಜನರು, ವಿಶೇಷವಾಗಿ ಹಿಂದೂಗಳು ಇದರ ವಿರುದ್ಧ ಹೊರಬರಬೇಕು ಎಂದು ಅವರು ಹೇಳಿದರು.

“ಜೈ ಶ್ರೀ ರಾಮ್” ಎಂಬ ಘೋಷಣೆ ಮುಸ್ಲಿಮರ ಮೇಲೆ ಆಕ್ರಮಣ ಮಾಡಲು ಹೊಸ ಅಸ್ತ್ರವಾಗಿದೆ ಎಂಬುದು ಸ್ಪಷ್ಟವಾಗಿದೆ. ಮತ್ತು ಇದನ್ನು ಸರ್ಕಾರ ಮತ್ತು ದೇಶದ ಆಡಳಿತಗಾರರು ಪ್ರಚೋದಿಸುತ್ತಿದ್ದಾರೆ. ದೇಶದ ಜನರು ವಿಶೇಷವಾಗಿ ಹಿಂದೂಗಳು ಇದನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಅವರು ಅದರ ವಿರುದ್ಧ ಬಹಿರಂಗವಾಗಿ ಮಾತನಾಡಬೇಕು, ಇಲ್ಲದಿದ್ದರೆ ಭಾರತವು ತೀವ್ರ ಹಿಂಸಾಚಾರದ ಸುಳಿಯಲ್ಲಿ ಸಿಲುಕಲಿದ್ದು ಅದರಿಂದ ಹೊರಬುರವ ದಾರಿ ಕಾಣುತ್ತಿಲ್ಲ ಎಂದಿದ್ದಾರೆ”

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆಡಳಿತದ ಕಳೆದ ಐದು ವರ್ಷಗಳಲ್ಲಿ ನಡೆದ ಗುಂಪು ಹತ್ಯೆ ಘಟನೆಗಳ ಬಗ್ಗೆ ಮಾತನಾಡಿದ್ದು ಕಡಿಮೆ. ಇಂದು ಸಹ ಜಾರ್ಖಂಡ್ ಲಿಂಚಿಂಗ್ ಪ್ರಕರಣದ ಕುರಿತು ರಾಜ್ಯಸಭೆಯಲ್ಲಿ ಮಾತನಾಡುವಾಗ, ಈ ಘಟನೆ ಎಲ್ಲರಿಗೂ ನೋವಿನ ಸಂಗತಿಯಾಗಿದೆ . ಆದರೆ ಅದಕ್ಕಾಗಿ ಇಡೀ ಜಾರ್ಖಂಡ್ ರಾಜ್ಯದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಪ್ರತಿಪಕ್ಷಗಳನ್ನು ಗುರಿಯಾಗಿಸಿ ಮಾತನಾಡಿದ್ದಾರೆ.

“ಜಾರ್ಖಂಡ್ ನಲ್ಲಿನ ಲಿಂಚಿಂಗ್ ನನಗೆ ನೋವುಂಟು ಮಾಡಿದೆ. ಇದು ಇತರರಿಗೂ ದುಃಖ ತಂದಿದೆ. ಆದರೆ, ರಾಜ್ಯಸಭೆಯಲ್ಲಿ ಕೆಲವರು ಜಾರ್ಖಂಡ್ ಅನ್ನು ಹಲ್ಲೆ ಮಾಡುವ ರಾಜ್ಯವೆಂದು ಕರೆಯುತ್ತಿದ್ದಾರೆ. ಇದು ನ್ಯಾಯೋಚಿತವೇ? ಅವರು ರಾಜ್ಯವನ್ನು ಏಕೆ ಅವಮಾನಿಸುತ್ತಿದ್ದಾರೆ? ಜಾರ್ಖಂಡ್ ರಾಜ್ಯವನ್ನು ಅವಮಾನಿಸುವ ಹಕ್ಕು ನಮ್ಮಲ್ಲಿ ಯಾರಿಗೂ ಇಲ್ಲ ”ಎಂದು ಪ್ರಧಾನಿ ಕೇಳಿದ್ದಾರೆ.

ಆದಾಗ್ಯೂ, ಜಾರ್ಖಂಡ್‌ನಲ್ಲಿ ಕಳೆದ ಐದು ವರ್ಷಗಳಲ್ಲಿ ಕೇವಲ ಹತ್ತಕ್ಕೂ ಹೆಚ್ಚು ಜನರು ಗುಂಪು ಹತ್ಯೆ ಘಟನೆಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ಸತ್ಯಗಳು ತೋರಿಸುತ್ತವೆ ಮತ್ತು ಸದ್ಯದಲ್ಲಿಯೇ ಜಾರ್ಖಂಡ್ ನಲ್ಲಿ ಚುನಾವಣೆ ನಡೆಯಲಿದ್ದು ಅದನ್ನು ಗುರಿಯಾಗಿಸಿ ಪ್ರಧಾನಿ ಮಾತನಾಡುತ್ತಿದ್ದಾರೆ, ಅವರಿಗೆ ಜನರ ಸಾವಿಗಿಂತ ಚುನಾವಣೆಯ ದೃಷ್ಟಿಯೇ  ಮುಖ್ಯವಾಗಿರುವುದು ದುರಂತ ಎಂದು ಪ್ರತಿಭಟನಕಾರರು ಆರೋಪಿಸಿದ್ದಾರೆ.

ಜಾರ್ಖಂಡ್ ನಲ್ಲಿ  ಈ ಯುವಕನನ್ನು ಕ್ರೂರವಾಗಿ ಥಳಿಸಿ ಹತ್ಯೆ ಮಾಡಿರುವುದು ಮಾನವೀಯತೆಗೆ ದೊಡ್ಡ ಕಳಂಕವಾಗಿದೆ. ಸಾಯುತ್ತಿರುವ ಈ ಹುಡುಗನನ್ನು 4 ದಿನಗಳ ಕಾಲ ಬಂಧನದಲ್ಲಿರಿಸಿದ್ದ ಪೊಲೀಸರ ಕ್ರೌರ್ಯ ಆಘಾತಕಾರಿ, ಬಿಜೆಪಿ ಆಡಳಿತದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಪ್ರಬಲ ಧ್ವನಿಗಳು ಮೌನವಾಗಿವೆ ”ಎಂದು ರಾಹುಲ್ ಗಾಂಧಿ #IndiaAgainstLynchTerror ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

ದೆಹಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ ಯುವ ಸಾಮಾಜಿಕ ಕಾರ್ಯಕರ್ತ ವಾಲಿ ರಹಮನಿ “ನಾಗರಿಕ ಸಮಾಜವು ಸಮಾಜದ ಸಮತೋಲನ ಅಂಶವಾಗಿದೆ. ಸಮಾಜದಲ್ಲಿ ಏನಾದರೂ ತಪ್ಪು ನಡೆಯುತ್ತಿದ್ದರೆ, ನಾಗರಿಕ ಸಮಾಜ ಹೊರಬಂದು ಅದರ ವಿರುದ್ಧ ಮಾತನಾಡಬೇಕು. ಅವರು ಜನಸಮೂಹ ಹತ್ಯೆ ವಿರುದ್ಧ ಮಾತನಾಡಬೇಕು ಮತ್ತು ಹಿಂದೂಸ್ತಾನ್ ಅನ್ನು ಲಿಂಚಿಸ್ತಾನ್ ಆಗಿ ಪರಿವರ್ತಿಸದಂತೆ ತಡೆಯಬೇಕು. ”

ಕನ್ಹಯ್ಯ ಕುಮಾರ್, ಉಮರ್ ಖಾಲಿದ್ ಮತ್ತು ನದೀಮ್ ಖಾನ್ ಸೇರಿದಂತೆ ಹಲವಾರು ಯುವ ಮುಖಂಡರು ಮತ್ತು ಯುವ ಸಾಮಾಜಿಕ ಕಾರ್ಯಕರ್ತರು ಪ್ರತಿಭಟನಾ ಪ್ರದರ್ಶನದಲ್ಲಿ ಮಾತನಾಡಿದರು. ದೇಶಾದ್ಯಂತ ನಡೆದ ಪ್ರತಿಭಟನೆಯ ಕೆಲವು ಫೋಟೋಗಳು ಇಲ್ಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...