Homeಮುಖಪುಟಗುಂಪು ಥಳಿತ/ಹತ್ಯೆಯ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆ. ಜಾರ್ಖಂಡ್ ಘಟನೆಗೆ ಖಂಡನೆ

ಗುಂಪು ಥಳಿತ/ಹತ್ಯೆಯ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆ. ಜಾರ್ಖಂಡ್ ಘಟನೆಗೆ ಖಂಡನೆ

- Advertisement -
- Advertisement -

ವಾರದ ಹಿಂದೆ ಜಾರ್ಖಂಡ್ ರಾಜ್ಯದಲ್ಲಿ ಮುಸ್ಲಿಂ ಯುವಕನನ್ನು, ಜೈ ಶ್ರೀರಾಮ್ ಕೂಗುವಂತೆ ಒತ್ತಾಯಿಸಿ, ಕ್ರೂರವಾಗಿ ಥಳಿಸಿ ಹತ್ಯೆಗೈದಿದ್ದನ್ನು ವಿರೋಧಿಸಿ ಇಂದು ಸಂಜೆ ನೂರಾರು ಜನರು, ಪುರುಷರು ಮತ್ತು ಮಹಿಳೆಯರು ಭಾರತದ ರಾಷ್ಟ್ರ ರಾಜಧಾನಿಯಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು. ಅದಕ್ಕೂ ಮೊದಲು ಮೇಣದ ದೀಪ ಮೆರವಣಿಯ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಹಸು, ಗೋಮಾಂಸ ಅಥವಾ ಕಳ್ಳತನದ ಹೆಸರಿನಲ್ಲಿ ಹಲ್ಲೆ ಮಾಡುವ ಪ್ರವೃತ್ತಿಯ ವಿರುದ್ಧ ಘೋಷಣೆಗಳನ್ನು ಎತ್ತಿದ ಪ್ರತಿಭಟನಾಕಾರರು, ಈ ಭೀತಿಯ ಬಗ್ಗೆ ಶೀಘ್ರವಾಗಿ ಪರಿಶೀಲನೆ ನಡೆಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು. ದೆಹಲಿಯ ಸಂಸತ್ ಭವನದ ಬಳಿಯ ಜಂತರ್ ಮಂತರ್‌ನಲ್ಲಿ ಬುಧವಾರ ನಡೆದ ಪ್ರತಿಭಟನೆ ಮತ್ತು ಕ್ಯಾಂಡಲ್ ಮೆರವಣಿಗೆಯಲ್ಲಿ ಹಲವಾರು ಪ್ರಖ್ಯಾತ ಜನರು ಭಾಗವಹಿಸಿದ್ದರು.

ದೆಹಲಿ ವಿಶ್ವವಿದ್ಯಾಲಯದ ಪ್ರೊ.ಅಪೂರ್ವಾನಂದ ರವರು ಮಾತನಾಡಿ “ಇದು  ಗುಂಪು ಹತ್ಯೆಯ ಪ್ರಶ್ನೆಯಷ್ಟೇ ಅಲ್ಲ. ಮುಸ್ಲಿಮರ ವಿರುದ್ಧ ದ್ವೇಷವನ್ನು ಯೋಜಿತ ರೀತಿಯಲ್ಲಿ ಪ್ರಚಾರ ಮಾಡಲಾಗುತ್ತಿದೆ. ಇಂದು ಅಧಿಕಾರದಲ್ಲಿ ಕುಳಿತವರು ಇದನ್ನು ಪ್ರಚೋದಿಸುತ್ತಿದ್ದಾರೆ… ಮುಸ್ಲಿಂ ಸಂಸದರು ಪ್ರಮಾಣ ವಚನ ಸ್ವೀಕರಿಸುವಾಗ ಸಂಸತ್ತಿನಲ್ಲಿ ‘ಜೈ ಶ್ರೀ ರಾಮ್’ ಘೋಷಣೆ ಎದ್ದ ರೀತಿ, ಆ ದೃಶ್ಯವು ಗುಂಪು ಹತ್ಯೆಗಿಂತ ಕಡಿಮೆಯಿಲ್ಲ. ಈ ಸ್ಥಳವು ಸಂಸತ್ತಾಗಿರುವುದು ಅದೃಷ್ಟ, ಇಲ್ಲದಿದ್ದರೆ ಮುಸ್ಲಿಂ ಸಂಸದರ ಮೇಲೆ ‘ಜೈ ಶ್ರೀ ರಾಮ್’ ಅಂತ ಹೇಳಿ ಹಲ್ಲೆ ಮಾಡುವುದನ್ನು ನೀವು ಹೇಗೆ ತಡೆಯುತ್ತೀರಿ?” ಎಲ್ಲಾ ಜನರು, ವಿಶೇಷವಾಗಿ ಹಿಂದೂಗಳು ಇದರ ವಿರುದ್ಧ ಹೊರಬರಬೇಕು ಎಂದು ಅವರು ಹೇಳಿದರು.

“ಜೈ ಶ್ರೀ ರಾಮ್” ಎಂಬ ಘೋಷಣೆ ಮುಸ್ಲಿಮರ ಮೇಲೆ ಆಕ್ರಮಣ ಮಾಡಲು ಹೊಸ ಅಸ್ತ್ರವಾಗಿದೆ ಎಂಬುದು ಸ್ಪಷ್ಟವಾಗಿದೆ. ಮತ್ತು ಇದನ್ನು ಸರ್ಕಾರ ಮತ್ತು ದೇಶದ ಆಡಳಿತಗಾರರು ಪ್ರಚೋದಿಸುತ್ತಿದ್ದಾರೆ. ದೇಶದ ಜನರು ವಿಶೇಷವಾಗಿ ಹಿಂದೂಗಳು ಇದನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಅವರು ಅದರ ವಿರುದ್ಧ ಬಹಿರಂಗವಾಗಿ ಮಾತನಾಡಬೇಕು, ಇಲ್ಲದಿದ್ದರೆ ಭಾರತವು ತೀವ್ರ ಹಿಂಸಾಚಾರದ ಸುಳಿಯಲ್ಲಿ ಸಿಲುಕಲಿದ್ದು ಅದರಿಂದ ಹೊರಬುರವ ದಾರಿ ಕಾಣುತ್ತಿಲ್ಲ ಎಂದಿದ್ದಾರೆ”

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆಡಳಿತದ ಕಳೆದ ಐದು ವರ್ಷಗಳಲ್ಲಿ ನಡೆದ ಗುಂಪು ಹತ್ಯೆ ಘಟನೆಗಳ ಬಗ್ಗೆ ಮಾತನಾಡಿದ್ದು ಕಡಿಮೆ. ಇಂದು ಸಹ ಜಾರ್ಖಂಡ್ ಲಿಂಚಿಂಗ್ ಪ್ರಕರಣದ ಕುರಿತು ರಾಜ್ಯಸಭೆಯಲ್ಲಿ ಮಾತನಾಡುವಾಗ, ಈ ಘಟನೆ ಎಲ್ಲರಿಗೂ ನೋವಿನ ಸಂಗತಿಯಾಗಿದೆ . ಆದರೆ ಅದಕ್ಕಾಗಿ ಇಡೀ ಜಾರ್ಖಂಡ್ ರಾಜ್ಯದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಪ್ರತಿಪಕ್ಷಗಳನ್ನು ಗುರಿಯಾಗಿಸಿ ಮಾತನಾಡಿದ್ದಾರೆ.

“ಜಾರ್ಖಂಡ್ ನಲ್ಲಿನ ಲಿಂಚಿಂಗ್ ನನಗೆ ನೋವುಂಟು ಮಾಡಿದೆ. ಇದು ಇತರರಿಗೂ ದುಃಖ ತಂದಿದೆ. ಆದರೆ, ರಾಜ್ಯಸಭೆಯಲ್ಲಿ ಕೆಲವರು ಜಾರ್ಖಂಡ್ ಅನ್ನು ಹಲ್ಲೆ ಮಾಡುವ ರಾಜ್ಯವೆಂದು ಕರೆಯುತ್ತಿದ್ದಾರೆ. ಇದು ನ್ಯಾಯೋಚಿತವೇ? ಅವರು ರಾಜ್ಯವನ್ನು ಏಕೆ ಅವಮಾನಿಸುತ್ತಿದ್ದಾರೆ? ಜಾರ್ಖಂಡ್ ರಾಜ್ಯವನ್ನು ಅವಮಾನಿಸುವ ಹಕ್ಕು ನಮ್ಮಲ್ಲಿ ಯಾರಿಗೂ ಇಲ್ಲ ”ಎಂದು ಪ್ರಧಾನಿ ಕೇಳಿದ್ದಾರೆ.

ಆದಾಗ್ಯೂ, ಜಾರ್ಖಂಡ್‌ನಲ್ಲಿ ಕಳೆದ ಐದು ವರ್ಷಗಳಲ್ಲಿ ಕೇವಲ ಹತ್ತಕ್ಕೂ ಹೆಚ್ಚು ಜನರು ಗುಂಪು ಹತ್ಯೆ ಘಟನೆಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ಸತ್ಯಗಳು ತೋರಿಸುತ್ತವೆ ಮತ್ತು ಸದ್ಯದಲ್ಲಿಯೇ ಜಾರ್ಖಂಡ್ ನಲ್ಲಿ ಚುನಾವಣೆ ನಡೆಯಲಿದ್ದು ಅದನ್ನು ಗುರಿಯಾಗಿಸಿ ಪ್ರಧಾನಿ ಮಾತನಾಡುತ್ತಿದ್ದಾರೆ, ಅವರಿಗೆ ಜನರ ಸಾವಿಗಿಂತ ಚುನಾವಣೆಯ ದೃಷ್ಟಿಯೇ  ಮುಖ್ಯವಾಗಿರುವುದು ದುರಂತ ಎಂದು ಪ್ರತಿಭಟನಕಾರರು ಆರೋಪಿಸಿದ್ದಾರೆ.

ಜಾರ್ಖಂಡ್ ನಲ್ಲಿ  ಈ ಯುವಕನನ್ನು ಕ್ರೂರವಾಗಿ ಥಳಿಸಿ ಹತ್ಯೆ ಮಾಡಿರುವುದು ಮಾನವೀಯತೆಗೆ ದೊಡ್ಡ ಕಳಂಕವಾಗಿದೆ. ಸಾಯುತ್ತಿರುವ ಈ ಹುಡುಗನನ್ನು 4 ದಿನಗಳ ಕಾಲ ಬಂಧನದಲ್ಲಿರಿಸಿದ್ದ ಪೊಲೀಸರ ಕ್ರೌರ್ಯ ಆಘಾತಕಾರಿ, ಬಿಜೆಪಿ ಆಡಳಿತದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಪ್ರಬಲ ಧ್ವನಿಗಳು ಮೌನವಾಗಿವೆ ”ಎಂದು ರಾಹುಲ್ ಗಾಂಧಿ #IndiaAgainstLynchTerror ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

ದೆಹಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ ಯುವ ಸಾಮಾಜಿಕ ಕಾರ್ಯಕರ್ತ ವಾಲಿ ರಹಮನಿ “ನಾಗರಿಕ ಸಮಾಜವು ಸಮಾಜದ ಸಮತೋಲನ ಅಂಶವಾಗಿದೆ. ಸಮಾಜದಲ್ಲಿ ಏನಾದರೂ ತಪ್ಪು ನಡೆಯುತ್ತಿದ್ದರೆ, ನಾಗರಿಕ ಸಮಾಜ ಹೊರಬಂದು ಅದರ ವಿರುದ್ಧ ಮಾತನಾಡಬೇಕು. ಅವರು ಜನಸಮೂಹ ಹತ್ಯೆ ವಿರುದ್ಧ ಮಾತನಾಡಬೇಕು ಮತ್ತು ಹಿಂದೂಸ್ತಾನ್ ಅನ್ನು ಲಿಂಚಿಸ್ತಾನ್ ಆಗಿ ಪರಿವರ್ತಿಸದಂತೆ ತಡೆಯಬೇಕು. ”

ಕನ್ಹಯ್ಯ ಕುಮಾರ್, ಉಮರ್ ಖಾಲಿದ್ ಮತ್ತು ನದೀಮ್ ಖಾನ್ ಸೇರಿದಂತೆ ಹಲವಾರು ಯುವ ಮುಖಂಡರು ಮತ್ತು ಯುವ ಸಾಮಾಜಿಕ ಕಾರ್ಯಕರ್ತರು ಪ್ರತಿಭಟನಾ ಪ್ರದರ್ಶನದಲ್ಲಿ ಮಾತನಾಡಿದರು. ದೇಶಾದ್ಯಂತ ನಡೆದ ಪ್ರತಿಭಟನೆಯ ಕೆಲವು ಫೋಟೋಗಳು ಇಲ್ಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...